AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಮೊದಲ ಬಾರಿ ಶಾಸಕರಾಗಿದ್ದಾಗಲೇ ಬದಲಿ ನಿವೇಶನ ಪಡೆದಿದ್ದರೇ ಸಿದ್ದರಾಮಯ್ಯ? ಮನವಿ ಪತ್ರ ವೈರಲ್

ಮೈಸೂರು, ಆಗಸ್ಟ್ 13: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಒಂದಲ್ಲ ಒಂದು ಆರೋಪಗಳು ಕೇಳಿಬರುತ್ತಲೇ ಇವೆ. ಹಗರಣ ಸಂಬಂಧ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್​​ಗೆ ದೂರು ನೀಡಿದ್ದು, ಸಿಎಂ ವಿರುದ್ಧದ ಎರಡನೇ ದೂರು ಇದಾಗಿದೆ. ಇದರ ಬೆನ್ನಲ್ಲೇ ಇದೀಗ, ಮೊದಲ ಬಾರಿ ಶಾಸಕರಾಗಿದ್ದಾಗಲೇ ಸಿದ್ದರಾಮಯ್ಯ ಮುಡಾದಿಂದ ಬದಲಿ ನಿವೇಶನ ಪಡೆದಿದ್ದರು ಎಂಬ ಆರೋಪ ಕೇಳಿ ಬಂದಿದೆ.

ದಿಲೀಪ್​, ಚೌಡಹಳ್ಳಿ
| Edited By: |

Updated on: Aug 13, 2024 | 9:37 AM

Share
ಮೊದಲ ಬಾರಿ ಶಾಸಕರಾಗಿದ್ದಾಗಲೇ ಸಿಎಂ ಸಿದ್ದರಾಮಯ್ಯ ಬದಲಿ ನಿವೇಶನ ಪಡೆದಿದ್ದರು. ಅದಕ್ಕಾಗಿ ಮನವಿ ಮಾಡಿದ್ದರು ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬದಲಿ ನಿವೇಶನ ನೀಡುವಂತೆ ಮುಡಾಗೆ ಮನವಿ‌ ಪತ್ರ ಸಲ್ಲಿಸಿದ್ದರು ಎಂದು ಹೇಳಲಾದ ವೈರಲ್ ಆಗುತ್ತಿರುವ ಪತ್ರ ಇದಾಗಿದೆ.

ಮೊದಲ ಬಾರಿ ಶಾಸಕರಾಗಿದ್ದಾಗಲೇ ಸಿಎಂ ಸಿದ್ದರಾಮಯ್ಯ ಬದಲಿ ನಿವೇಶನ ಪಡೆದಿದ್ದರು. ಅದಕ್ಕಾಗಿ ಮನವಿ ಮಾಡಿದ್ದರು ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬದಲಿ ನಿವೇಶನ ನೀಡುವಂತೆ ಮುಡಾಗೆ ಮನವಿ‌ ಪತ್ರ ಸಲ್ಲಿಸಿದ್ದರು ಎಂದು ಹೇಳಲಾದ ವೈರಲ್ ಆಗುತ್ತಿರುವ ಪತ್ರ ಇದಾಗಿದೆ.

1 / 6
ಇಂಥದ್ದೇ ನಿವೇಶನ ಬೇಕೆಂದು ನಾನು ಯಾರಿಗೂ ಕೇಳಿಲ್ಲ ಎನ್ನುವ ಸಿದ್ದರಾಮಯ್ಯನವರು ಇಂಥದ್ದೇ ನಿವೇಶನ ಬೇಕೆಂದು ಲಿಖಿತವಾಗಿ ನೀಡಿರುವ ಮನವಿ ಪತ್ರ ಇದು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ನಾನು ಸಹಿ ಮಾಡಿಯೇ ಇಲ್ಲ ಎನ್ನುವ ಸಿದ್ದರಾಮಯ್ಯನವರ ಸಹಿಯುಳ್ಳ ಪತ್ರವಿದು ಎಂದು ಮತ್ತೊಬ್ಬರು ಪೋಸ್ಟ್ ಮಾಡಿದ್ದಾರೆ.

ಇಂಥದ್ದೇ ನಿವೇಶನ ಬೇಕೆಂದು ನಾನು ಯಾರಿಗೂ ಕೇಳಿಲ್ಲ ಎನ್ನುವ ಸಿದ್ದರಾಮಯ್ಯನವರು ಇಂಥದ್ದೇ ನಿವೇಶನ ಬೇಕೆಂದು ಲಿಖಿತವಾಗಿ ನೀಡಿರುವ ಮನವಿ ಪತ್ರ ಇದು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ನಾನು ಸಹಿ ಮಾಡಿಯೇ ಇಲ್ಲ ಎನ್ನುವ ಸಿದ್ದರಾಮಯ್ಯನವರ ಸಹಿಯುಳ್ಳ ಪತ್ರವಿದು ಎಂದು ಮತ್ತೊಬ್ಬರು ಪೋಸ್ಟ್ ಮಾಡಿದ್ದಾರೆ.

2 / 6
ಜಯನಗರ ತೊಣಚಿಕೊಪ್ಪಲು 2 ನೇ ಹಂತ ಎಂ ಬ್ಲಾಕ್​​​​ನಲ್ಲಿ ನಿವೇಶ ಸಂಖ್ಯೆ 9 ರಲ್ಲಿ 50*80 ನಿವೇಶನ ಕೊಟ್ಟಿದ್ದಾರೆ. ಸದರಿ ನಿವೇಶನದ ಬದಲಾಗಿ ಜಯನಗರ ತೊಣಚಿಕೊಪ್ಪಲಿನ ‌ಜಿ ಮತ್ತು ಹೆಚ್ ಬ್ಲಾಕ್​​ನಲ್ಲಿ ಖಾಲಿ ಇರುವ ನಿವೇಶನ ಸಂಖ್ಯೆ 50*80 ಅಳತೆಯ ನಿವೇಶನ ಸಂಖ್ಯೆ 1245 ನ್ನು ನೀಡುವಂತೆ ಮನವಿ ಸಲ್ಲಿಸಲಾಗಿದೆ. ಇದು ಸಿದ್ದರಾಮಯ್ಯರವರು ಸಲ್ಲಿಸಿದ್ದ ಮನವಿ ಪತ್ರ ಎನ್ನಲಾಗುತ್ತಿದೆ.

ಜಯನಗರ ತೊಣಚಿಕೊಪ್ಪಲು 2 ನೇ ಹಂತ ಎಂ ಬ್ಲಾಕ್​​​​ನಲ್ಲಿ ನಿವೇಶ ಸಂಖ್ಯೆ 9 ರಲ್ಲಿ 50*80 ನಿವೇಶನ ಕೊಟ್ಟಿದ್ದಾರೆ. ಸದರಿ ನಿವೇಶನದ ಬದಲಾಗಿ ಜಯನಗರ ತೊಣಚಿಕೊಪ್ಪಲಿನ ‌ಜಿ ಮತ್ತು ಹೆಚ್ ಬ್ಲಾಕ್​​ನಲ್ಲಿ ಖಾಲಿ ಇರುವ ನಿವೇಶನ ಸಂಖ್ಯೆ 50*80 ಅಳತೆಯ ನಿವೇಶನ ಸಂಖ್ಯೆ 1245 ನ್ನು ನೀಡುವಂತೆ ಮನವಿ ಸಲ್ಲಿಸಲಾಗಿದೆ. ಇದು ಸಿದ್ದರಾಮಯ್ಯರವರು ಸಲ್ಲಿಸಿದ್ದ ಮನವಿ ಪತ್ರ ಎನ್ನಲಾಗುತ್ತಿದೆ.

3 / 6
ಇಂತಹ ಜಾಗದಲ್ಲಿ ಬದಲಿ ನಿವೇಶನ ಕೊಡಿ ಎಂದು ಕೇಳಿಯೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಹಲವು ಬಾರಿ ಈ ಬಗ್ಗೆ ಮಾತನಾಡಿದ್ದ ಅವರು, ಅನೇಕ ದಾಖಲೆಗಳನ್ನೂ ಪ್ರದರ್ಶಿಸಿದ್ದರು.

ಇಂತಹ ಜಾಗದಲ್ಲಿ ಬದಲಿ ನಿವೇಶನ ಕೊಡಿ ಎಂದು ಕೇಳಿಯೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಹಲವು ಬಾರಿ ಈ ಬಗ್ಗೆ ಮಾತನಾಡಿದ್ದ ಅವರು, ಅನೇಕ ದಾಖಲೆಗಳನ್ನೂ ಪ್ರದರ್ಶಿಸಿದ್ದರು.

4 / 6
ಮತ್ತೊಂದೆಡೆ, ಸ್ನೇಹಮಯಿ ಕೃಷ್ಣ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಖಾಸಗಿ ದೂರು ಸಲ್ಲಿಸಿದ್ದು ಸಾಲು ಸಾಲು ಆರೋಪ ಮಾಡಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಎಂಬ ಬಗ್ಗೆ ಇಂದು ತಮ್ಮ ಆದೇಶ ನೀಡಲಿದ್ದಾರೆ.

ಮತ್ತೊಂದೆಡೆ, ಸ್ನೇಹಮಯಿ ಕೃಷ್ಣ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಖಾಸಗಿ ದೂರು ಸಲ್ಲಿಸಿದ್ದು ಸಾಲು ಸಾಲು ಆರೋಪ ಮಾಡಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಎಂಬ ಬಗ್ಗೆ ಇಂದು ತಮ್ಮ ಆದೇಶ ನೀಡಲಿದ್ದಾರೆ.

5 / 6
ದೂರುದಾರರ ಪರ ವಾದ ಮಂಡಿಸಿದ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ಸಿಎಂ ಸಿದ್ದರಾಮಯ್ಯ ಡಿನೋಟಿಫಿಕೇಷನ್​ನ ಅಕ್ರಮ ಲಾಭ ಪಡೆದಿದ್ದಾರೆ. ಮಾಲೀಕರೇ ಅಲ್ಲದ ವ್ಯಕ್ತಿಯ ಮೂಲಕ ಆಸ್ತಿ ಪಡೆದು ಕೋಟ್ಯಾಂತರ ರೂಪಾಯಿ ಲಾಭ ಮಾಡಿಕೊಂಡಿದ್ದಾರೆಂದು ಆರೋಪಿಸಿದ್ದಾರೆ.

ದೂರುದಾರರ ಪರ ವಾದ ಮಂಡಿಸಿದ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ಸಿಎಂ ಸಿದ್ದರಾಮಯ್ಯ ಡಿನೋಟಿಫಿಕೇಷನ್​ನ ಅಕ್ರಮ ಲಾಭ ಪಡೆದಿದ್ದಾರೆ. ಮಾಲೀಕರೇ ಅಲ್ಲದ ವ್ಯಕ್ತಿಯ ಮೂಲಕ ಆಸ್ತಿ ಪಡೆದು ಕೋಟ್ಯಾಂತರ ರೂಪಾಯಿ ಲಾಭ ಮಾಡಿಕೊಂಡಿದ್ದಾರೆಂದು ಆರೋಪಿಸಿದ್ದಾರೆ.

6 / 6
Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?