AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತು ಪುತ್ರನಿಗೆ ಹಿಂದು ಸಂಪ್ರದಾಯದಂತೆಯೇ ಮದುವೆ ಮಾಡಿಸಿದ ಮುಸ್ಲಿಂ ದಂಪತಿ! ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾದ ಬಸ್ತವಾಡ

ಬೆಳಗಾವಿ, ಫೆಬ್ರವರಿ 11: ಸುಮಾರು 20 ವರ್ಷಗಳ ಹಿಂದೆ ಆ ಮಕ್ಕಳ ತಂದೆ-ತಾಯಿ ತೀರಿಕೊಂಡಿದ್ದರು. ಕುಟುಂಬದವರೇ ಅವರನ್ನು ಸಾಕಲು ಹಿಂದೇಟು ಹಾಕಿದ್ದರು. ಹಿಂದೆ ಮುಂದೆ ನೋಡದೆ ಅವರಿಬ್ಬರನ್ನೂ ದತ್ತು ಸ್ವೀಕರಿಸಿದ್ದ ಮೆಹಬೂಬ್ ಹಾಗೂ ನೂರ್‌ಜಾನ್ ದಂಪತಿ ಹಿಂದು ಸಂಪ್ರದಯದಂತೆಯೇ ಆ ಮಕ್ಕಳನ್ನು ಬೆಳೆಸಿದ್ದಾರೆ. ಈಗ ದೊಡ್ಡವನಿಗೆ ಹಿಂದು ಸಂಪ್ರದಾಯದಂತೆಯೇ ಮದುವೆಯನ್ನೂ ಮಾಡಿಸಿ ಮಾದರಿಯಾಗಿದ್ದಾರೆ.

Sahadev Mane
| Edited By: |

Updated on: Feb 11, 2026 | 2:42 PM

Share
ಧರ್ಮ-ಜಾತಿ ಭೇದಗಳನ್ನು ಮೀರಿ ಮಾನವೀಯತೆ ಗೆಲುವು ಸಾಧಿಸಿದ ಈ ಅಪರೂಪದ ಘಟನೆಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮ ಸಾಕ್ಷಿಯಾಗಿದೆ. ಮುಸ್ಲಿಂ ದಂಪತಿಯಾದ ಮೆಹಬೂಬ್ ನಾಯಿಕವಾಡಿ ಹಾಗೂ ನೂರ್‌ಜಾನ್ ತಾವು ಸಾಕಿ ಸಲಹಿದ (ದತ್ತು ಪುತ್ರ) ಹಿಂದು ಯುವಕನಿಗೆ ಹಿಂದು ಸಂಪ್ರದಾಯದಂತೆ ಮದುವೆ ಮಾಡಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ದತ್ತುಪುತ್ರನಿಗೆ ಹಿಂದು ಸಂಪ್ರದಾಯದಂತೆ ಮುಸ್ಲಿಂ ದಂಪತಿ ಮದುವೆ ಮಾಡಿಸಿರುವುದು ಸದ್ಯ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ಧರ್ಮ-ಜಾತಿ ಭೇದಗಳನ್ನು ಮೀರಿ ಮಾನವೀಯತೆ ಗೆಲುವು ಸಾಧಿಸಿದ ಈ ಅಪರೂಪದ ಘಟನೆಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮ ಸಾಕ್ಷಿಯಾಗಿದೆ. ಮುಸ್ಲಿಂ ದಂಪತಿಯಾದ ಮೆಹಬೂಬ್ ನಾಯಿಕವಾಡಿ ಹಾಗೂ ನೂರ್‌ಜಾನ್ ತಾವು ಸಾಕಿ ಸಲಹಿದ (ದತ್ತು ಪುತ್ರ) ಹಿಂದು ಯುವಕನಿಗೆ ಹಿಂದು ಸಂಪ್ರದಾಯದಂತೆ ಮದುವೆ ಮಾಡಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ದತ್ತುಪುತ್ರನಿಗೆ ಹಿಂದು ಸಂಪ್ರದಾಯದಂತೆ ಮುಸ್ಲಿಂ ದಂಪತಿ ಮದುವೆ ಮಾಡಿಸಿರುವುದು ಸದ್ಯ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

1 / 5
20 ವರ್ಷ ಹಿಂದೆ ತಂದೆ-ತಾಯಿ ಕಳಕೊಂಡು ಅನಾಥರಾಗಿದ್ದ ಮಕ್ಕಳು: ಅದು ಸುಮಾರು ಇಪ್ಪತ್ತು ವರ್ಷಗಳ ಹಿಂದಿನ ಘಟನೆ. ಸೋಮಶೇಖರ್ ಪೂಜಾರ್ ಮತ್ತು ವಸಂತ ಪೂಜಾರ್ ಎಂಬ ಇಬ್ಬರು ಸಹೋದರರು ಬಾಲ್ಯದಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದರು.  ಆಗ ಸೋಮಶೇಖರ್‌ಗೆ ನಾಲ್ಕು ವರ್ಷ, ವಸಂತಗೆ ಎರಡು ವರ್ಷ ವಯಸ್ಸಾಗಿತ್ತು. ತಂದೆ-ತಾಯಿ ಸಾವಿನ ಬಳಿಕ ಕುಟುಂಬಸ್ಥರು ಮಕ್ಕಳನ್ನು ನೋಡಿಕೊಳ್ಳದೆ ಬಿಟ್ಟಿದ್ದರಿಂದ ಸಂಕಷ್ಟ ಎದುರಾಗಿತ್ತು.

20 ವರ್ಷ ಹಿಂದೆ ತಂದೆ-ತಾಯಿ ಕಳಕೊಂಡು ಅನಾಥರಾಗಿದ್ದ ಮಕ್ಕಳು: ಅದು ಸುಮಾರು ಇಪ್ಪತ್ತು ವರ್ಷಗಳ ಹಿಂದಿನ ಘಟನೆ. ಸೋಮಶೇಖರ್ ಪೂಜಾರ್ ಮತ್ತು ವಸಂತ ಪೂಜಾರ್ ಎಂಬ ಇಬ್ಬರು ಸಹೋದರರು ಬಾಲ್ಯದಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದರು. ಆಗ ಸೋಮಶೇಖರ್‌ಗೆ ನಾಲ್ಕು ವರ್ಷ, ವಸಂತಗೆ ಎರಡು ವರ್ಷ ವಯಸ್ಸಾಗಿತ್ತು. ತಂದೆ-ತಾಯಿ ಸಾವಿನ ಬಳಿಕ ಕುಟುಂಬಸ್ಥರು ಮಕ್ಕಳನ್ನು ನೋಡಿಕೊಳ್ಳದೆ ಬಿಟ್ಟಿದ್ದರಿಂದ ಸಂಕಷ್ಟ ಎದುರಾಗಿತ್ತು.

2 / 5
ಹಿಂದು ಸಂಪ್ರದಾಯದಂತೆಯೇ ಮಕ್ಕಳ ಬೆಳೆಸಿದ್ದ ಮುಸ್ಲಿಂ ದಂಪತಿ: ಆ ಸಂದರ್ಭದಲ್ಲಿ ಮನೆ ಪಕ್ಕದಲ್ಲೇ ವಾಸಿಸುತ್ತಿದ್ದ ಮೆಹಬೂಬ್ ಮತ್ತು ನೂರ್‌ಜಾನ್ ದಂಪತಿ ಮುಂದೆ ಬಂದು ತಮ್ಮ ಐವರು ಮಕ್ಕಳ ಜೊತೆಗೆ ಈ ಇಬ್ಬರು ಮಕ್ಕಳನ್ನೂ ದತ್ತು ಪಡೆದಿದ್ದರು. ಧರ್ಮ ಬೇರೆ ಇದ್ದರೂ ಮಕ್ಕಳನ್ನು ಹಿಂದು ಸಂಪ್ರದಾಯದಂತೆ ಬೆಳೆಸಿದ ಅವರು, ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮಕ್ಕಳಿಗೆ ನೆರವಾಗಿದ್ದಾರೆ.

ಹಿಂದು ಸಂಪ್ರದಾಯದಂತೆಯೇ ಮಕ್ಕಳ ಬೆಳೆಸಿದ್ದ ಮುಸ್ಲಿಂ ದಂಪತಿ: ಆ ಸಂದರ್ಭದಲ್ಲಿ ಮನೆ ಪಕ್ಕದಲ್ಲೇ ವಾಸಿಸುತ್ತಿದ್ದ ಮೆಹಬೂಬ್ ಮತ್ತು ನೂರ್‌ಜಾನ್ ದಂಪತಿ ಮುಂದೆ ಬಂದು ತಮ್ಮ ಐವರು ಮಕ್ಕಳ ಜೊತೆಗೆ ಈ ಇಬ್ಬರು ಮಕ್ಕಳನ್ನೂ ದತ್ತು ಪಡೆದಿದ್ದರು. ಧರ್ಮ ಬೇರೆ ಇದ್ದರೂ ಮಕ್ಕಳನ್ನು ಹಿಂದು ಸಂಪ್ರದಾಯದಂತೆ ಬೆಳೆಸಿದ ಅವರು, ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮಕ್ಕಳಿಗೆ ನೆರವಾಗಿದ್ದಾರೆ.

3 / 5
ಈಗ ದೊಡ್ಡವನಾದ ಸೋಮಶೇಖರ್ ಪೂಜಾರ್‌ಗೆ ಹಿಂದು ಸಂಪ್ರದಾಯದಂತೆ ಮದುವೆ ನೆರವೇರಿಸಲಾಗಿದೆ. ಮದುವೆ ಸಂದರ್ಭದಲ್ಲಿ ಮೆಹಬೂಬ್ ದಂಪತಿ ತಾವೇ ತಂದೆ-ತಾಯಿ ಸ್ಥಾನದಲ್ಲಿ ನಿಂತು ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು.

ಈಗ ದೊಡ್ಡವನಾದ ಸೋಮಶೇಖರ್ ಪೂಜಾರ್‌ಗೆ ಹಿಂದು ಸಂಪ್ರದಾಯದಂತೆ ಮದುವೆ ನೆರವೇರಿಸಲಾಗಿದೆ. ಮದುವೆ ಸಂದರ್ಭದಲ್ಲಿ ಮೆಹಬೂಬ್ ದಂಪತಿ ತಾವೇ ತಂದೆ-ತಾಯಿ ಸ್ಥಾನದಲ್ಲಿ ನಿಂತು ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು.

4 / 5
ಜಾತಿ-ಧರ್ಮದ ಹೆಸರಿನಲ್ಲಿ ಗಲಾಟೆಗಳು ನಡೆಯುತ್ತಿರುವ ಪ್ರಸಕ್ತ ಸನ್ನಿವೇಶ ಹಾಗೂ ಸಮಾಜದಲ್ಲಿ, ಈ ಮುಸ್ಲಿಂ ದಂಪತಿ ತೋರಿದ ಮಾನವೀಯತೆ ಮತ್ತು ಭಾವೈಕ್ಯತೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಬಸ್ತವಾಡ ಗ್ರಾಮದಲ್ಲಿ ನಡೆದ ಈ ವಿದ್ಯಮಾನ ಸಾಮಾಜಿಕ ಸೌಹಾರ್ದತೆಗೆ ಮಾದರಿಯಾಗಿದೆ.

ಜಾತಿ-ಧರ್ಮದ ಹೆಸರಿನಲ್ಲಿ ಗಲಾಟೆಗಳು ನಡೆಯುತ್ತಿರುವ ಪ್ರಸಕ್ತ ಸನ್ನಿವೇಶ ಹಾಗೂ ಸಮಾಜದಲ್ಲಿ, ಈ ಮುಸ್ಲಿಂ ದಂಪತಿ ತೋರಿದ ಮಾನವೀಯತೆ ಮತ್ತು ಭಾವೈಕ್ಯತೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಬಸ್ತವಾಡ ಗ್ರಾಮದಲ್ಲಿ ನಡೆದ ಈ ವಿದ್ಯಮಾನ ಸಾಮಾಜಿಕ ಸೌಹಾರ್ದತೆಗೆ ಮಾದರಿಯಾಗಿದೆ.

5 / 5
Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್