ಹಿಜಾಬ್ ವಿವಾದ: ಡಾ.ಎ.ಪಿ.ಜೆ ಅಬ್ದುಲ್ ಕಲಾಂರ ಸಂದೇಶದ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಮುಂದಾದ ಕಲಾವಿದ
ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹೆಚ್ಚಾಗಿದೆ. ವಿದ್ಯಾರ್ಥಿಗಳ ನಡುವೆ ದ್ವೇಷ ಹುಟ್ಟಿದೆ. ಸದ್ಯ ಹೈಕೋರ್ಟ್ ಹಿಜಾಬ್ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಕ್ಕೆ ಬಂದಿದೆ. ಹೈಕೋರ್ಟ್ ನಲ್ಲಿ ಇತ್ಯರ್ಥವಾಗುವವರೆಗೆ ಶಾಲೆ, ಕಾಲೇಜುಗಳಲ್ಲಿ ಕೇಸರಿ ಶಾಲು, ಹಿಜಾಬ್ ನಂತರ ಧಾರ್ಮಿಕ ಗುರುತುಗಳನ್ನು ಧರಿಸುವುದು ಸೂಕ್ತವಲ್ಲವೆಂದು ತಿಳಿಸಿದೆ. ಆದ್ರೆ ದೇಶದ ಉತ್ತಮ ಪ್ರಜೆಗಳಾಗಬೇಕಿದ್ದ ವಿದ್ಯಾರ್ಥಿಗಳು ಸಂಘರ್ಷಕ್ಕೆ ಇಳಿದಿದ್ದಾರೆ. ಹಿಜಾಬ್ ಹಾಗೂ ಕೇಸರಿ ಕಲಹ ವಿಚಾರಕ್ಕೆ ಸಂಬಂಧಿಸಿ ಮೈಸೂರು ಕಲಾವಿದ ರಾಹುಲ್ ಚಿತ್ರ ಬಿಡುಸುವ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದಾರೆ.

1 / 5

2 / 5

3 / 5

4 / 5

5 / 5
Published On - 3:19 pm, Fri, 11 February 22
Follow Us
