- Kannada News Photo gallery Mysore Dasara 2024: Captain Abhimanyu will carry ambari for 5th time Mysore News in Kannada
ಮೈಸೂರು ದಸರಾ 2024: ಈ ಬಾರಿಯೂ ಅಂಬಾರಿ ಹೊರುವ ಜವಾಬ್ದಾರಿ ಅಭಿಮನ್ಯು ಹೆಗಲಿಗೆ
2024 ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮೂರು ತಿಂಗಳು ಬಾಕಿ ಉಳಿದಿದೆ. ದಸರಾ ಮಹೋತ್ಸವಕ್ಕೆ ಸಿದ್ದತೆ ಆರಂಭವಾಗಿದ್ದು, ದಸರಾ ಮಹೋತ್ಸವದ ಕೇಂದ್ರ ಬಿಂದು ಗಜಪಡೆ ಆಯ್ಕೆ ಪ್ರಕ್ರಿಯೆಯಲ್ಲಿ ಅರಣ್ಯ ಇಲಾಖೆ ನಿರತವಾಗಿದೆ. ಈ ಬಾರಿ ಒಟ್ಟು 18 ಆನೆಗಳು ಮೈಸೂರಿಗೆ ಬರುವ ಸಾಧ್ಯತೆ ಇದೆ.
Updated on:Aug 21, 2024 | 2:43 PM

ಮೈಸೂರು ದಸರಾ ಜಗತ್ಪ್ರಸಿದ್ಧಿ. ಮೈಸೂರು ದಸರಾವನ್ನು ವೀಕ್ಷಿಸಲು ದೇಶ-ವಿದೇಶಗಳಿಂದ ಜನರು ಬರುತ್ತದೆ. ದಸಾರಾ ಮಹೋತ್ಸವಕ್ಕಾಗಿ ಮೈಸೂರು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಅರಣ್ಯ ಇಲಾಖೆ ಸಕಲ ಸಿದ್ದತೆ ಮಾಡಿಕೊಳ್ಳುತ್ತದೆ.

2024 ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮೂರು ತಿಂಗಳು ಬಾಕಿ ಉಳಿದಿದೆ. ಈ ಬಾರಿಯೂ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದಾನೆ.

ದಸರಾ ಮಹೋತ್ಸವಕ್ಕೆ ಸಿದ್ದತೆ ಆರಂಭವಾಗಿದ್ದು, ದಸರಾ ಮಹೋತ್ಸವದ ಕೇಂದ್ರ ಬಿಂದು ಗಜಪಡೆ ಆಯ್ಕೆ ಪ್ರಕ್ರಿಯೆಯಲ್ಲಿ ಅರಣ್ಯ ಇಲಾಖೆ ನಿರತವಾಗಿದೆ. ಡಿಸಿಎಫ್ ಶರಣಬಸಪ್ಪ ನೇತೃತ್ವದಲ್ಲಿ ಗಜಪಡೆ ಆಯ್ಕೆ ಪ್ರಕ್ರಿಯೆ ನಡೆದಿದೆ.

ಅರಣ್ಯ ಇಲಾಖೆ ಸದ್ಯ 18 ಆನೆಗಳನ್ನು ಗುರುತಿಸಿದೆ. ಅರಣ್ಯ ಇಲಾಖೆ ಈ ಬಾರಿ ಹೆಚ್ಚುವರಿಯಾಗಿ ನಾಲ್ಕು ಆನೆಗಳನ್ನು ಗುರುತಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ದಸರಾ ಮಹೋತ್ಸವ ಎರಡು ತಿಂಗಳ ಮುಂಚಿತವಾಗಿ ಗಜಪಡೆ ಮೈಸೂರಿಗೆ ಆಗಮಿಸಲಿದೆ. ಆಗಸ್ಟ್ 9 ಅಥವಾ 11ಕ್ಕೆ ಗಜಪಯಣಕ್ಕೆ ಚಿಂತನೆ ನಡೆದಿದೆ. 14 ಆನೆಗಳ ಪೈಕಿ ಮೊದಲ ಹಂತದಲ್ಲಿ 9 ಆನೆಗಳ ಆಗಮಿಸಲಿವೆ. ಎರಡನೇ ಹಂತದಲ್ಲಿ 5 ಆನೆಗಳನ್ನ ಕರೆ ತರಲು ತಯಾರಿ ನಡೆಸಲಾಗುತ್ತಿದೆ.

ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು, ಭೀಮ, ಹೊಸ ಆನೆ ಏಕಲವ್ಯ, ವರಲಕ್ಷ್ಮಿ, ಧನಂಜಯ, ಗೋಪಿ, ರೋಹಿತ, ವರಲಕ್ಷ್ಮಿ, ಕಂಜನ್ ಆನೆಗಳು ಆಗಮಿಸಲಿವೆ.

ಎರಡನೇ ಹಂತದಲ್ಲಿ ಪ್ರಶಾಂತ, ಸುಗ್ರೀವ, ಮಹೇಂದ್ರ, ಲಕ್ಷ್ಮಿ, ಹಿರಣ್ಯ ಆನೆಗಳು ಬರಲಿವೆ.
Published On - 12:14 pm, Sat, 20 July 24



















