Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಣ್ಣ ಬಣ್ಣ ಚಿತ್ತಾರಗಳಿಂದ ಶೃಂಗಾರಗೊಂಡಿರುವ ಮೈಸೂರು ದಸರಾ ಆನೆಗಳು

ನವರಾತ್ರಿ ಬಳಿಕ ಬರುವುದು ವಿಜಯದಶಮಿ. ಈ ದಿನ ಮೈಸೂರಿನಲ್ಲಿ ಜಂಬೂಸವಾರಿ ನಡೆಯಲಿದೆ. 750ಕೆಜಿಯ ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ರಾಜಬೀದಿಗಳಲ್ಲಿ ರಾಜಗಾಂಭಿರ್ಯದಿಂದ ಸಾಗುತ್ತಾನೆ. ಜಂಬೂಸವಾರಿಯಲ್ಲಿ ಭಾಗಿಯಾಗುವ ಆನೆಗಳು ಬಣ್ಣ ಬಣ್ಣ ಚಿತ್ತಾರಗಳಿಂದ ಶೃಂಗಾರಗೊಂಡಿವೆ.

ವಿವೇಕ ಬಿರಾದಾರ
|

Updated on: Oct 12, 2024 | 2:07 PM

Mysore Dasara 2024: Dasara Elephants ready for Jambu Savari

ದಸರಾ ನಿಮಿತ್ತ ಮೈಸೂರಿನಲ್ಲಿ ಕೆಲವೇ ಗಂಟೆಗಳಲ್ಲಿ ಜಂಬೂಸವಾರಿ ಆರಂಭವಾಗಲಿದೆ. ಜಂಬೂಸವಾರಿಯಲ್ಲಿ ಪ್ರಮುಖ ಆಕರ್ಷಣೆ ಅಂಬಾರಿ ಮತ್ತು ಆನೆಗಳು. ಈ ವರ್ಷವೂ ಅಂಬಾರಿಯನ್ನು ಕ್ಯಾಪ್ಟನ್​ ಅಭಿಮನ್ಯು ಹೊರಲಿದ್ದಾನೆ. ಕ್ಯಾಪ್ಟನ್​ ಅಭಿಮನ್ಯು ಐದನೇ ಬಾರಿಗೆ ಅಂಬಾರಿ ಹೊರಲಿದ್ದಾನೆ.

1 / 6
Mysore Dasara 2024: Dasara Elephants ready for Jambu Savari

ಕ್ಯಾಪ್ಟನ್​ ಅಭಿಮನ್ಯುವಿಗೆ ಒಂಬತ್ತು ಆನೆಗಳು ಸಾತ್​ ನೀಡಲಿವೆ. ನಿಶಾನೆಯಾಗಿ ಧನಂಜಯ ಆಯ್ಕೆಯಾಗಿದ್ದಾನೆ. ಅಭಿಮನ್ಯು ಅಂಬಾರಿಯನ್ನು ಹೊತ್ತು ರಾಜಗಾಂಭಿರ್ಯದಿಂದ ರಾಜಬೀದಿಗಳಲ್ಲಿ ಹೋಗುತ್ತಿರುವುದನ್ನು ನೋಡುವುದೇ ಚಂದ. ಜಂಬೂಸವಾರಿ ಕಲವೇ ಗಂಟೆಗಳಲ್ಲಿ ಆರಂಭವಾಗಲಿದೆ.

2 / 6
Mysore Dasara 2024: Dasara Elephants ready for Jambu Savari

ಸಂಜೆ 4 ರಿಂದ 4:30ರ ಒಳಗಾಗಿ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ತಾಯಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಜಂಬೂಸವಾರಿಯಲ್ಲಿ ಭಾಗವಹಿಸುವ 9 ಆನೆಗಳಿಗೆ ಬಣ್ಣಗಳಿಂದ ಶೃಂಗರಿಸಲಾಗಿದೆ.

3 / 6
Mysore Dasara 2024: Dasara Elephants ready for Jambu Savari

ಮೈಸೂರು ದಸರಾಕ್ಕೆ ಆಗಮಿಸಿರುವ 14 ಆನೆಗಳ ಮೇಲೆ ಬಣ್ಣಗಳಿಂದ ಚಿತ್ರ ಬಿಡಿಸಲಾಗಿದೆ. ಆನೆಗಳ ಸೊಂಡಿಲಿಗೆ ಅರಮನೆ ಲಾಂಛನವಾದ ಗಂಡಭೇರುಂಡ ಬಿಡಸಲಾಗಿದೆ. ಕಿವಿಗಳಿಗೆ ಶಂಖಚಕ್ರ ಬಿಡಿಸಲಾಗಿದೆ. ಕಾಲು ಮತ್ತು ಬಾಲಕ್ಕೆ ಹೂವು ಮತ್ತು ಬಳ್ಳಿಗಳನ್ನು ಬಿಡಿಸಲಾಗಿದೆ.

4 / 6
Mysore Dasara 2024: Dasara Elephants ready for Jambu Savari

ಕಲಾವಿದ ನಾಗಲಿಂಗಪ್ಪ ಬಡಿಗೇರ ಅವರ ನೇತೃತ್ವದ 10 ಜನರ ಆನೆಗಳಿಗೆ ಚಿತ್ರ ಬಿಡಿಸಿದೆ. ಈಗಾಗಲೆ ಎಲ್ಲ ಆನೆಗಳಿಗೆ ಚಿತ್ರ ಬಿಡಿಸಲಾಗಿದೆ. ಜಂಬೂಸವಾರಿಗೆ ಅಂತಿಮ ಹಂತದ ತಯಾರಿ ನಡೆಯುತ್ತಿದೆ. ಬಣ್ಣಗಳಿಂದ ಶೃಂಗಾರಗೊಂಡ ಆನೆಗಳನ್ನು ಕಂಡು ಜನರು ಪುಳುಕಿತರಾಗಿದ್ದಾರೆ.

5 / 6
Mysore Dasara 2024: Dasara Elephants ready for Jambu Savari

ಚಾಮುಂಡಿ ಬೆಟ್ಟದಿಂದ ಅರಮನೆಗೆ ಬಂದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಆನೆಗಳು ಸ್ವಾಗತಿಸಿದವು. ತಾಯಿ ಚಾಮುಂಡೇಶ್ವರಿ ಮೂರ್ತಿ ಬರುತ್ತಿದ್ದಂತೆ ಆನೆಗಳು ದೇವಿಗೆ ನಮಿಸಿದವು.

6 / 6
Follow us
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ