ಬಣ್ಣ ಬಣ್ಣ ಚಿತ್ತಾರಗಳಿಂದ ಶೃಂಗಾರಗೊಂಡಿರುವ ಮೈಸೂರು ದಸರಾ ಆನೆಗಳು

ನವರಾತ್ರಿ ಬಳಿಕ ಬರುವುದು ವಿಜಯದಶಮಿ. ಈ ದಿನ ಮೈಸೂರಿನಲ್ಲಿ ಜಂಬೂಸವಾರಿ ನಡೆಯಲಿದೆ. 750ಕೆಜಿಯ ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ರಾಜಬೀದಿಗಳಲ್ಲಿ ರಾಜಗಾಂಭಿರ್ಯದಿಂದ ಸಾಗುತ್ತಾನೆ. ಜಂಬೂಸವಾರಿಯಲ್ಲಿ ಭಾಗಿಯಾಗುವ ಆನೆಗಳು ಬಣ್ಣ ಬಣ್ಣ ಚಿತ್ತಾರಗಳಿಂದ ಶೃಂಗಾರಗೊಂಡಿವೆ.

|

Updated on: Oct 12, 2024 | 2:07 PM

Mysore Dasara 2024: Dasara Elephants ready for Jambu Savari

ದಸರಾ ನಿಮಿತ್ತ ಮೈಸೂರಿನಲ್ಲಿ ಕೆಲವೇ ಗಂಟೆಗಳಲ್ಲಿ ಜಂಬೂಸವಾರಿ ಆರಂಭವಾಗಲಿದೆ. ಜಂಬೂಸವಾರಿಯಲ್ಲಿ ಪ್ರಮುಖ ಆಕರ್ಷಣೆ ಅಂಬಾರಿ ಮತ್ತು ಆನೆಗಳು. ಈ ವರ್ಷವೂ ಅಂಬಾರಿಯನ್ನು ಕ್ಯಾಪ್ಟನ್​ ಅಭಿಮನ್ಯು ಹೊರಲಿದ್ದಾನೆ. ಕ್ಯಾಪ್ಟನ್​ ಅಭಿಮನ್ಯು ಐದನೇ ಬಾರಿಗೆ ಅಂಬಾರಿ ಹೊರಲಿದ್ದಾನೆ.

1 / 6
Mysore Dasara 2024: Dasara Elephants ready for Jambu Savari

ಕ್ಯಾಪ್ಟನ್​ ಅಭಿಮನ್ಯುವಿಗೆ ಒಂಬತ್ತು ಆನೆಗಳು ಸಾತ್​ ನೀಡಲಿವೆ. ನಿಶಾನೆಯಾಗಿ ಧನಂಜಯ ಆಯ್ಕೆಯಾಗಿದ್ದಾನೆ. ಅಭಿಮನ್ಯು ಅಂಬಾರಿಯನ್ನು ಹೊತ್ತು ರಾಜಗಾಂಭಿರ್ಯದಿಂದ ರಾಜಬೀದಿಗಳಲ್ಲಿ ಹೋಗುತ್ತಿರುವುದನ್ನು ನೋಡುವುದೇ ಚಂದ. ಜಂಬೂಸವಾರಿ ಕಲವೇ ಗಂಟೆಗಳಲ್ಲಿ ಆರಂಭವಾಗಲಿದೆ.

2 / 6
Mysore Dasara 2024: Dasara Elephants ready for Jambu Savari

ಸಂಜೆ 4 ರಿಂದ 4:30ರ ಒಳಗಾಗಿ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ತಾಯಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಜಂಬೂಸವಾರಿಯಲ್ಲಿ ಭಾಗವಹಿಸುವ 9 ಆನೆಗಳಿಗೆ ಬಣ್ಣಗಳಿಂದ ಶೃಂಗರಿಸಲಾಗಿದೆ.

3 / 6
Mysore Dasara 2024: Dasara Elephants ready for Jambu Savari

ಮೈಸೂರು ದಸರಾಕ್ಕೆ ಆಗಮಿಸಿರುವ 14 ಆನೆಗಳ ಮೇಲೆ ಬಣ್ಣಗಳಿಂದ ಚಿತ್ರ ಬಿಡಿಸಲಾಗಿದೆ. ಆನೆಗಳ ಸೊಂಡಿಲಿಗೆ ಅರಮನೆ ಲಾಂಛನವಾದ ಗಂಡಭೇರುಂಡ ಬಿಡಸಲಾಗಿದೆ. ಕಿವಿಗಳಿಗೆ ಶಂಖಚಕ್ರ ಬಿಡಿಸಲಾಗಿದೆ. ಕಾಲು ಮತ್ತು ಬಾಲಕ್ಕೆ ಹೂವು ಮತ್ತು ಬಳ್ಳಿಗಳನ್ನು ಬಿಡಿಸಲಾಗಿದೆ.

4 / 6
Mysore Dasara 2024: Dasara Elephants ready for Jambu Savari

ಕಲಾವಿದ ನಾಗಲಿಂಗಪ್ಪ ಬಡಿಗೇರ ಅವರ ನೇತೃತ್ವದ 10 ಜನರ ಆನೆಗಳಿಗೆ ಚಿತ್ರ ಬಿಡಿಸಿದೆ. ಈಗಾಗಲೆ ಎಲ್ಲ ಆನೆಗಳಿಗೆ ಚಿತ್ರ ಬಿಡಿಸಲಾಗಿದೆ. ಜಂಬೂಸವಾರಿಗೆ ಅಂತಿಮ ಹಂತದ ತಯಾರಿ ನಡೆಯುತ್ತಿದೆ. ಬಣ್ಣಗಳಿಂದ ಶೃಂಗಾರಗೊಂಡ ಆನೆಗಳನ್ನು ಕಂಡು ಜನರು ಪುಳುಕಿತರಾಗಿದ್ದಾರೆ.

5 / 6
Mysore Dasara 2024: Dasara Elephants ready for Jambu Savari

ಚಾಮುಂಡಿ ಬೆಟ್ಟದಿಂದ ಅರಮನೆಗೆ ಬಂದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಆನೆಗಳು ಸ್ವಾಗತಿಸಿದವು. ತಾಯಿ ಚಾಮುಂಡೇಶ್ವರಿ ಮೂರ್ತಿ ಬರುತ್ತಿದ್ದಂತೆ ಆನೆಗಳು ದೇವಿಗೆ ನಮಿಸಿದವು.

6 / 6
Follow us
ಮೈಸೂರಿನ ಬಲರಾಮ್ ಮತ್ತು ಬೆಂಗಳೂರಿನ ನಾರಾಯಣ್ ನಡುವೆ ವಜ್ರಮುಷ್ಠಿ ಕಾಳಗ
ಮೈಸೂರಿನ ಬಲರಾಮ್ ಮತ್ತು ಬೆಂಗಳೂರಿನ ನಾರಾಯಣ್ ನಡುವೆ ವಜ್ರಮುಷ್ಠಿ ಕಾಳಗ
ಪಾರ್ವತಿ ಸಿದ್ದರಾಮಯ್ಯ ಕಾರಲ್ಲಿ ಕುಳಿತೇ ಚಾಮುಂಡೇಶ್ವರಿಯ ದರ್ಶನ ಪಡೆದರು
ಪಾರ್ವತಿ ಸಿದ್ದರಾಮಯ್ಯ ಕಾರಲ್ಲಿ ಕುಳಿತೇ ಚಾಮುಂಡೇಶ್ವರಿಯ ದರ್ಶನ ಪಡೆದರು
ಮೈಸೂರು ದಸರಾ 2024: ಸಿಎಂ, ಡಿಸಿಎಂಗೆ ಪಂಚಲೋಹ ವಿಗ್ರಹ ಉಡುಗೊರೆ
ಮೈಸೂರು ದಸರಾ 2024: ಸಿಎಂ, ಡಿಸಿಎಂಗೆ ಪಂಚಲೋಹ ವಿಗ್ರಹ ಉಡುಗೊರೆ
ಹತ್ತನೇ ಚಾಮರಾಜ್ ಒಡೆಯರ್ ಕಾಲದಿಂದ ಅಂಬಾರಿ ಇತಿಹಾಸ ಆರಂಭ: ಡಾ ಅಯ್ಯಂಗಾರ್
ಹತ್ತನೇ ಚಾಮರಾಜ್ ಒಡೆಯರ್ ಕಾಲದಿಂದ ಅಂಬಾರಿ ಇತಿಹಾಸ ಆರಂಭ: ಡಾ ಅಯ್ಯಂಗಾರ್
ನಿಶ್ಚಲವಾಗಿ ನಿಂತಿದ್ದ ಗೂಡ್ಸ್ ಟ್ರೈನಿಗೆ ಢಿಕ್ಕಿ, ಹಳಿಬಿಟ್ಟ ಆರು ಬೋಗಿಗಳು
ನಿಶ್ಚಲವಾಗಿ ನಿಂತಿದ್ದ ಗೂಡ್ಸ್ ಟ್ರೈನಿಗೆ ಢಿಕ್ಕಿ, ಹಳಿಬಿಟ್ಟ ಆರು ಬೋಗಿಗಳು
ಮೈಸೂರು ದಸರಾ 2024: ಜಂಬೂಸವಾರಿಗೆ ಸಿದ್ದತೆಯನ್ನು ಲೈವ್ ಆಗಿ ನೋಡಿ​
ಮೈಸೂರು ದಸರಾ 2024: ಜಂಬೂಸವಾರಿಗೆ ಸಿದ್ದತೆಯನ್ನು ಲೈವ್ ಆಗಿ ನೋಡಿ​
ಬಿಗ್ ಬಾಸ್ ಲಾಂಚ್​ಗೆ ಭರ್ಜರಿ ಟಿಆರ್​ಪಿ; ಹೇಗಿತ್ತು ನೋಡಿ ಸೆಲೆಬ್ರೇಷನ್
ಬಿಗ್ ಬಾಸ್ ಲಾಂಚ್​ಗೆ ಭರ್ಜರಿ ಟಿಆರ್​ಪಿ; ಹೇಗಿತ್ತು ನೋಡಿ ಸೆಲೆಬ್ರೇಷನ್
ವಿಜಯದಶಮಿಯ ದಿನವಾದ ಇಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ವಿಜಯದಶಮಿಯ ದಿನವಾದ ಇಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
Daily Devotional: ವಿಜಯದಶಮಿ ಆಚರಣೆ ವಿಧಾನ ಹಾಗೂ ಮಹತ್ವ ತಿಳಿಯಿರಿ
Daily Devotional: ವಿಜಯದಶಮಿ ಆಚರಣೆ ವಿಧಾನ ಹಾಗೂ ಮಹತ್ವ ತಿಳಿಯಿರಿ
ಮೈಸೂರು-ದರ್ಭಾಂಗ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು
ಮೈಸೂರು-ದರ್ಭಾಂಗ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು