ಮೈಸೂರು: ಪಾರಂಪರಿಕ ದೇಗುಲದ ಆವರಣದಲ್ಲಿದ್ದ ಮರಗಳಿಗೆ ಕೊಡಲಿ ಪೆಟ್ಟು
ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿರುವ 800 ವರ್ಷ ಹಳೆಯ ಚೋಳರ ಕಾಲದ ಲಕ್ಷ್ಮಿಕಾಂತ ದೇಗುಲದ ಆವರಣದಲ್ಲಿರು ಮರಗಳನ್ನು ಕಡಿಯಲಾಗಿದೆ.
Updated on: Jan 14, 2024 | 11:56 AM

ಪಾರಂಪರಿಕ ದೇಗುಲದ ಆವರಣದಲ್ಲಿದ್ದ ಮರಗಳ ಮಾರಣ ಹೋಮ ನಡೆದಿದೆ.

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿರುವ 800 ವರ್ಷ ಹಳೆಯ ಚೋಳರ ಕಾಲದ ಲಕ್ಷ್ಮಿಕಾಂತ ದೇಗುಲದ ಆವರಣದಲ್ಲಿರು ಮರಗಳನ್ನು ಕಡಿಯಲಾಗಿದೆ.

ಕಾಮಗಾರಿಯ ನೆಪವೊಡ್ಡಿ 7-8 ಮರಗಳಿಗೆ ಕೊಡಲಿ ಪೆಟ್ಟು ಕೊಡಲಾಗಿದೆ.

ಭಾರತೀಯ ಸರ್ವೇಕ್ಷಣಾ ಇಲಾಖೆ ಅಧೀನದ ದೇಗುಲದಲ್ಲಿ ಅರಣ್ಯ ಇಲಾಖೆ ಅನುಮತಿ ಪಡೆಯದೆ ಮರಗಳನ್ನು ಕಡಿಯಲಾಗಿದೆ.

ಆರೋಪಿಗಳು ಕದ್ದುಮುಚ್ಚಿ ಮರ ಸಾಗಿಸಿದ್ದಾರೆ.

ದೇಗುಲದ ಸಿಬ್ಬಂದಿ ಗೋಪಾಲಸ್ವಾಮಿ ಅಲಿಯಾಸ್ ಅಯ್ಯಪ್ಪ, ನಾಗೇಶ್ ಮತ್ತು ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.

ಪ್ರಕರಣ ಸಂಬಂಧ ಪ್ರಾಚ್ಯವಸ್ತು ಇಲಾಖೆ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.
Read More



