AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಲಯ ಪರ್ವತ ಹತ್ತಿದ ಮೈಸೂರಿನ ಪೌರ ಕಾರ್ಮಿಕರ ಮಕ್ಕಳು, ಮಾವುತರು: 24 ಜನರ ತಂಡದಿಂದ ಸಾಧನೆ

ಮೈಸೂರಿನ ಮಾವುತರು ಮತ್ತು ಪೌರಕಾರ್ಮಿಕರ ಮಕ್ಕಳು ಉತ್ತರಾಖಂಡದ 13,990 ಅಡಿ ಎತ್ತರದ ಮೌಂಟ್ ಕುವಾರಿ ಪಾಸ್ ಏರಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಟೈಗರ್ ಅಡ್ವೆಂಚರ್ ಫೌಂಡೇಷನ್ ನೆರವಿನೊಂದಿಗೆ 24 ಜನರ ತಂಡ ತ್ರಿವರ್ಣ ಧ್ವಜವನ್ನು ಹಿಮಾಲಯದ ಮೇಲೆ ಹಾರಿಸುವ ಮೂಲಕ ಯಶಸ್ಸು ಸಾಧಿಸಿದ್ದಾರೆ.

ರಾಮ್​, ಮೈಸೂರು
| Edited By: |

Updated on:May 15, 2025 | 7:53 AM

Share
ಸಾಂಸ್ಕೃತಿಕ ನಗರಿ ಮೈಸೂರಿನ ಪೌರಕಾರ್ಮಿಕರು ಹಾಗೂ ಮಾವುತರ ಮಕ್ಕಳು ಹಿಮಾಲಯದ ಪರ್ವತಾರೋಹಣ ಮಾಡಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಆ ಮೂಲಕ ಭಾರತದ ತ್ರಿವರ್ಣ ಧ್ವಜವನ್ನು ಹಿಮಾಲಯದ ಮೇಲೆ ಹಾರಿಸಿದ್ದಾರೆ. ಮೈಸೂರಿನ ಎಂಟು ಪೌರಕಾರ್ಮಿಕರ ಮಕ್ಕಳು, ಮಾವುತರು, ಅರಣ್ಯ ರಕ್ಷಕರು ಮತ್ತು ಇತರ ನಾಗರಿಕರು ಸೇರಿ ಒಟ್ಟು 24 ಜನರ ತಂಡದಿಂದ ಈ ಸಾಧನೆ ಮಾಡಲಾಗಿದ್ದು, ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

ಸಾಂಸ್ಕೃತಿಕ ನಗರಿ ಮೈಸೂರಿನ ಪೌರಕಾರ್ಮಿಕರು ಹಾಗೂ ಮಾವುತರ ಮಕ್ಕಳು ಹಿಮಾಲಯದ ಪರ್ವತಾರೋಹಣ ಮಾಡಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಆ ಮೂಲಕ ಭಾರತದ ತ್ರಿವರ್ಣ ಧ್ವಜವನ್ನು ಹಿಮಾಲಯದ ಮೇಲೆ ಹಾರಿಸಿದ್ದಾರೆ. ಮೈಸೂರಿನ ಎಂಟು ಪೌರಕಾರ್ಮಿಕರ ಮಕ್ಕಳು, ಮಾವುತರು, ಅರಣ್ಯ ರಕ್ಷಕರು ಮತ್ತು ಇತರ ನಾಗರಿಕರು ಸೇರಿ ಒಟ್ಟು 24 ಜನರ ತಂಡದಿಂದ ಈ ಸಾಧನೆ ಮಾಡಲಾಗಿದ್ದು, ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

1 / 6
ಮೈಸೂರು ನಗರದ ಟೈಗರ್‌ ಅಡ್ವೆಂಚರ್‌ ಫೌಂಡೇಷನ್‌ ಪೌರಕಾರ್ಮಿಕ ಮಕ್ಕಳು ಹಾಗೂ ಮಾವುತರ ಮಕ್ಕಳನ್ನು ಸಾಹಸಯಾತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಹಿಮಾಲಯದ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಯಶಸ್ವಿಯಾಗಿ ಯಾತ್ರೆ ಮುಗಿಸಿದ್ದಾರೆ.

ಮೈಸೂರು ನಗರದ ಟೈಗರ್‌ ಅಡ್ವೆಂಚರ್‌ ಫೌಂಡೇಷನ್‌ ಪೌರಕಾರ್ಮಿಕ ಮಕ್ಕಳು ಹಾಗೂ ಮಾವುತರ ಮಕ್ಕಳನ್ನು ಸಾಹಸಯಾತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಹಿಮಾಲಯದ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಯಶಸ್ವಿಯಾಗಿ ಯಾತ್ರೆ ಮುಗಿಸಿದ್ದಾರೆ.

2 / 6
ಉತ್ತರಾಖಂಡದ 13,990 ಅಡಿ ಎತ್ತರದ ಮೌಂಟ್ ಕುವಾರಿ ಪಾಸ್ ಹತ್ತುವುದರ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಜೂನ್ 2025 ಹೆಸರಿನಲ್ಲಿ ಆರಂಭಿಸಿದ ಯಾತ್ರೆ ಯಶಸ್ವಿಯಾಗಿದೆ. ಹಿಮನದಿಗಳು ಮತ್ತು ಬಿರುಗಾಳಿಯ ಸವಾಲಿನ ಹಾದಿಯಲ್ಲಿ ಸಾಗಿ ಮೇ 1 ರಂದು ಹೊಸ ದಾಖಲೆ ಬರೆದಿದ್ದಾರೆ. ಭಾರತದ ಇತಿಹಾಸದಲ್ಲಿ ಪೌರಕಾರ್ಮಿಕರ ಮಕ್ಕಳು, ಅರಣ್ಯ ಕಾವಲುಗಾರರು ಮತ್ತು ಮಾವುತರ ಮೊದಲ ಪರ್ವತಾರೋಹಣ ಅನ್ನೋ ಹೆಗ್ಗಳಿಕೆಗೆ ಈ ಯಾತ್ರೆ ನಾಂದಿ ಆಗಿದೆ.

ಉತ್ತರಾಖಂಡದ 13,990 ಅಡಿ ಎತ್ತರದ ಮೌಂಟ್ ಕುವಾರಿ ಪಾಸ್ ಹತ್ತುವುದರ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಜೂನ್ 2025 ಹೆಸರಿನಲ್ಲಿ ಆರಂಭಿಸಿದ ಯಾತ್ರೆ ಯಶಸ್ವಿಯಾಗಿದೆ. ಹಿಮನದಿಗಳು ಮತ್ತು ಬಿರುಗಾಳಿಯ ಸವಾಲಿನ ಹಾದಿಯಲ್ಲಿ ಸಾಗಿ ಮೇ 1 ರಂದು ಹೊಸ ದಾಖಲೆ ಬರೆದಿದ್ದಾರೆ. ಭಾರತದ ಇತಿಹಾಸದಲ್ಲಿ ಪೌರಕಾರ್ಮಿಕರ ಮಕ್ಕಳು, ಅರಣ್ಯ ಕಾವಲುಗಾರರು ಮತ್ತು ಮಾವುತರ ಮೊದಲ ಪರ್ವತಾರೋಹಣ ಅನ್ನೋ ಹೆಗ್ಗಳಿಕೆಗೆ ಈ ಯಾತ್ರೆ ನಾಂದಿ ಆಗಿದೆ.

3 / 6
ಮರಿಮಲ್ಲಪ್ಪ ಪಿಯು ಕಾಲೇಜಿನ ಉಪನ್ಯಾಸಕ ಅನಿಲ್ ಕುಮಾರ್ ನೇತೃತ್ವದಲ್ಲಿ 24 ಜನರ ತಂಡದಲ್ಲಿ ಪೌರಕಾರ್ಮಿಕರ ಮಕ್ಕಳು, ಹುಣಸೂರು ಅರಣ್ಯ ವಿಭಾಗದ ಮಾವುತರು, ಅರಣ್ಯ ಬೀಟ್ ಗಾರ್ಡ್‌ಗಳು, ಗೃಹಿಣಿಯರು ಮತ್ತು ಶಾಶ್ವತ ಸೇವಾ ಸಮಾಜ ಶಾಲೆಯ ವಿದ್ಯಾರ್ಥಿಗಳು ಪರ್ವತಾರೋಹಣಕ್ಕೆ ತೆರಳಿದ್ದರು.

ಮರಿಮಲ್ಲಪ್ಪ ಪಿಯು ಕಾಲೇಜಿನ ಉಪನ್ಯಾಸಕ ಅನಿಲ್ ಕುಮಾರ್ ನೇತೃತ್ವದಲ್ಲಿ 24 ಜನರ ತಂಡದಲ್ಲಿ ಪೌರಕಾರ್ಮಿಕರ ಮಕ್ಕಳು, ಹುಣಸೂರು ಅರಣ್ಯ ವಿಭಾಗದ ಮಾವುತರು, ಅರಣ್ಯ ಬೀಟ್ ಗಾರ್ಡ್‌ಗಳು, ಗೃಹಿಣಿಯರು ಮತ್ತು ಶಾಶ್ವತ ಸೇವಾ ಸಮಾಜ ಶಾಲೆಯ ವಿದ್ಯಾರ್ಥಿಗಳು ಪರ್ವತಾರೋಹಣಕ್ಕೆ ತೆರಳಿದ್ದರು.

4 / 6
ಪಿಪಲ್ಕೋಟಿಯಲ್ಲಿ ಕಡ್ಡಾಯ ವೈದ್ಯಕೀಯ ತಪಾಸಣೆಯ ನಂತರ, ತಂಡವು ಏಪ್ರಿಲ್ 27 ರಂದು ತುಗಾಸಿ ಬೇಸ್ ಕ್ಯಾಂಪ್ ತಲುಪಿ ನಂತರ ಗುಲಿಂಗ್ ಮತ್ತು ಖುಲ್ಲರ್​​ ಏರಿದರು. ಮೊದಲ ದಿನ ಸಣ್ಣ ಪುಟ್ಟ ಆರೋಗ್ಯದ ತೊಂದರೆಗಳನ್ನು ಕೂಡ ಅನುಭವಿಸಿದ್ದಾರೆ.

ಪಿಪಲ್ಕೋಟಿಯಲ್ಲಿ ಕಡ್ಡಾಯ ವೈದ್ಯಕೀಯ ತಪಾಸಣೆಯ ನಂತರ, ತಂಡವು ಏಪ್ರಿಲ್ 27 ರಂದು ತುಗಾಸಿ ಬೇಸ್ ಕ್ಯಾಂಪ್ ತಲುಪಿ ನಂತರ ಗುಲಿಂಗ್ ಮತ್ತು ಖುಲ್ಲರ್​​ ಏರಿದರು. ಮೊದಲ ದಿನ ಸಣ್ಣ ಪುಟ್ಟ ಆರೋಗ್ಯದ ತೊಂದರೆಗಳನ್ನು ಕೂಡ ಅನುಭವಿಸಿದ್ದಾರೆ.

5 / 6
ತದನಂತರ ಚೇತರಿಸಿಕೊಂಡ ಎಲ್ಲರೂ ತಮ್ಮ ಗುರಿಯನ್ನು ತಲುಪಿದ್ದಾರೆ. ಗುರಿ ತಲುಪಿದ ತಂಡ ಮೊದಲು ಮಾಡಿದ ಕೆಲಸವೆಂದರೆ ಭಾರತಾಂಬೆಯ ಧ್ವಜ ಹಾರಿಸಿದ್ದು. ಈ ಮೂಲಕ ಸಾಂಸ್ಕೃತಿಕ ನಗರಿ ಮೈಸೂರಿನ ಮಕ್ಕಳು ಹೊಸ ಸಾಧನೆ ಮಾಡಿ ರಾಜ್ಯದ ಹಿರಿಮೆಗೆ ಮತ್ತಷ್ಟು ಗರಿ ಮೂಡಿಸಿದ್ದಾರೆ.

ತದನಂತರ ಚೇತರಿಸಿಕೊಂಡ ಎಲ್ಲರೂ ತಮ್ಮ ಗುರಿಯನ್ನು ತಲುಪಿದ್ದಾರೆ. ಗುರಿ ತಲುಪಿದ ತಂಡ ಮೊದಲು ಮಾಡಿದ ಕೆಲಸವೆಂದರೆ ಭಾರತಾಂಬೆಯ ಧ್ವಜ ಹಾರಿಸಿದ್ದು. ಈ ಮೂಲಕ ಸಾಂಸ್ಕೃತಿಕ ನಗರಿ ಮೈಸೂರಿನ ಮಕ್ಕಳು ಹೊಸ ಸಾಧನೆ ಮಾಡಿ ರಾಜ್ಯದ ಹಿರಿಮೆಗೆ ಮತ್ತಷ್ಟು ಗರಿ ಮೂಡಿಸಿದ್ದಾರೆ.

6 / 6

Published On - 7:52 am, Thu, 15 May 25

Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!