AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2024: ರಿಲ್ಯಾಕ್ಸ್ ಮೂಡ್​ನಲ್ಲಿರುವ ಮೈಸೂರು ದಸರಾ ಗಜಪಡೆ

ಮೈಸೂರು, ಆಗಸ್ಟ್​ 22: ವಿಶ್ವ ವಿಖ್ಯಾತ ಐತಿಹಾಸಿಕ ಮೈಸೂರು ದಸರಾಕ್ಕೆ ಸಿದ್ಧತೆ ಆರಂಭವಾಗಿದೆ. ಬುಧವಾರವಷ್ಟೇ ವೀರನಹೊಸಹಳ್ಳಿಯಲ್ಲಿ ಗಜಪಡೆಗೆ ಪುಷ್ಪಾರ್ಚನೆ ನೆರವೇರಿಸಲಾಗಿತ್ತು. ನಂತರ ಆರಂಭವಾದ ಗಜಪಯಣ ಮೈಸೂರಿಗೆ ತಲುಪಿದೆ. ಸದ್ಯ ಮೈಸೂರಿನ ಅರಣ್ಯ ಭವನದಲ್ಲಿರುವ ಅಭಿಮನ್ಯು ನೇತೃತ್ವದ 9 ಆನೆಗಳು ರಿಲ್ಯಾಕ್ಸ್​ ಮೂಡ್​​ನಲ್ಲಿವೆ.

ರಾಮ್​, ಮೈಸೂರು
| Updated By: Ganapathi Sharma

Updated on:Aug 22, 2024 | 3:06 PM

ಮೈಸೂರಿನ ಅಶೋಕಪುರಂ ಅರಣ್ಯ ಭವನದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳ ಹಾಗೂ ಅವುಗಳ ಮಾವುತರ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಆನೆಗಳಿಗೆ ಅರಣ್ಯ ಭವನದಲ್ಲೇ ಆಹಾರ, ವಾಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ.

ಮೈಸೂರಿನ ಅಶೋಕಪುರಂ ಅರಣ್ಯ ಭವನದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳ ಹಾಗೂ ಅವುಗಳ ಮಾವುತರ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಆನೆಗಳಿಗೆ ಅರಣ್ಯ ಭವನದಲ್ಲೇ ಆಹಾರ, ವಾಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ.

1 / 5
ಶುಕ್ರವಾರ ಗಜಪಡೆ ಅರಣ್ಯ ಭವನದಿಂದ ಅರಮನೆಗೆ ತೆರಳಲಿದೆ. ಅರಣ್ಯ ಭವನದಿಂದ ನಡಿಗೆ ಮೂಲಕ ಅರಮನೆಗೆ ಆನೆಗಳ ತಂಡ ತೆರಳಲಿದೆ. ನಂತರ ಆನೆಗಳ ತರಬೇತಿ ಪ್ರಕ್ರಿಯೆ ಆರಂಭವಾಗಲಿದೆ. ಸದ್ಯ 9 ಆನೆಗಳ ತಂಡ ಇದ್ದು, ಎರಡನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ.

ಶುಕ್ರವಾರ ಗಜಪಡೆ ಅರಣ್ಯ ಭವನದಿಂದ ಅರಮನೆಗೆ ತೆರಳಲಿದೆ. ಅರಣ್ಯ ಭವನದಿಂದ ನಡಿಗೆ ಮೂಲಕ ಅರಮನೆಗೆ ಆನೆಗಳ ತಂಡ ತೆರಳಲಿದೆ. ನಂತರ ಆನೆಗಳ ತರಬೇತಿ ಪ್ರಕ್ರಿಯೆ ಆರಂಭವಾಗಲಿದೆ. ಸದ್ಯ 9 ಆನೆಗಳ ತಂಡ ಇದ್ದು, ಎರಡನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ.

2 / 5
ಬುಧವಾರ ವೀರನಹೊಸಹಳ್ಳಿ ಗೇಟ್‌ನಲ್ಲಿ ಜಿಲ್ಲಾ ಸಚಿವ ಡಾ. ಎಚ್​​ಸಿ ಮಹದೇವಪ್ಪ, ಅರಣ್ಯ ಸಚಿವ ಈಶ್ವರ ಖಂಡ್ರೆ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಪುಷ್ಪಾರ್ಚನೆ ಸಲ್ಲಿಸಿ ಗಜಪಯಣಕ್ಕೆ ಚಾಲನೆ ನೀಡಿದ್ದರು. ನಂತರ ಗಜಪಡೆ ಅಶೋಕಪುರಂ ಅರಣ್ಯ ಭವನಕ್ಕೆ ತೆರಳಿತ್ತು.

ಬುಧವಾರ ವೀರನಹೊಸಹಳ್ಳಿ ಗೇಟ್‌ನಲ್ಲಿ ಜಿಲ್ಲಾ ಸಚಿವ ಡಾ. ಎಚ್​​ಸಿ ಮಹದೇವಪ್ಪ, ಅರಣ್ಯ ಸಚಿವ ಈಶ್ವರ ಖಂಡ್ರೆ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಪುಷ್ಪಾರ್ಚನೆ ಸಲ್ಲಿಸಿ ಗಜಪಯಣಕ್ಕೆ ಚಾಲನೆ ನೀಡಿದ್ದರು. ನಂತರ ಗಜಪಡೆ ಅಶೋಕಪುರಂ ಅರಣ್ಯ ಭವನಕ್ಕೆ ತೆರಳಿತ್ತು.

3 / 5
ಗಜ ಪಯಣದ ವೇಳೆ ಡೋಲು ಬಾರಿಸುವಿಕೆ, ಮಂಗಳವಾದ್ಯಗಳೂ ಇದ್ದವು. ಇದರ ನಡುವೆ ವೀರಗಾಸೆ ಕುಣಿತ, ಮಹಿಳಾ ಕೋಲಾಟ, ಮಹಿಳಾ ವೀರಗಾಸೆ ಕುಣಿತ ಸೇರಿದಂತೆ ವಿವಿಧ ಪ್ರಕಾರಗಳನ್ನು ಪ್ರದರ್ಶಿಸುತ್ತಾ ಸಾಂಸ್ಕೃತಿಕ ತಂಡಗಳು ವೀರನಹೊಸಹಳ್ಳಿ ಗೇಟ್‌ನಿಂದ ನಾಗಾಪುರ ಗಿರಿಜನ ಆಶ್ರಮ ಶಾಲೆ ಆವರಣದವರೆಗೆ ಆನೆಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿದ್ದವು.

ಗಜ ಪಯಣದ ವೇಳೆ ಡೋಲು ಬಾರಿಸುವಿಕೆ, ಮಂಗಳವಾದ್ಯಗಳೂ ಇದ್ದವು. ಇದರ ನಡುವೆ ವೀರಗಾಸೆ ಕುಣಿತ, ಮಹಿಳಾ ಕೋಲಾಟ, ಮಹಿಳಾ ವೀರಗಾಸೆ ಕುಣಿತ ಸೇರಿದಂತೆ ವಿವಿಧ ಪ್ರಕಾರಗಳನ್ನು ಪ್ರದರ್ಶಿಸುತ್ತಾ ಸಾಂಸ್ಕೃತಿಕ ತಂಡಗಳು ವೀರನಹೊಸಹಳ್ಳಿ ಗೇಟ್‌ನಿಂದ ನಾಗಾಪುರ ಗಿರಿಜನ ಆಶ್ರಮ ಶಾಲೆ ಆವರಣದವರೆಗೆ ಆನೆಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿದ್ದವು.

4 / 5
ಸುತ್ತಮುತ್ತಲ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮೆರವಣಿಗೆಯ ದಾರಿಯ ಇಕ್ಕೆಲಗಳಲ್ಲಿ ವಿವಿಧ ಆಹಾರ ಪದಾರ್ಥಗಳು, ಅಕ್ಕಿ, ಹಣ್ಣಿನ ರಸ, ಕಬ್ಬಿನ ರಸ, ಹೂವುಗಳು ಮತ್ತು ಆಟಿಕೆಗಳನ್ನು ಮಾರಾಟ ಮಾಡುವ ಅಂಗಡಿಗಳೂ ಇದ್ದವು. ಸದ್ಯ ಅಶೋಕಪುರಂ ಅರಣ್ಯ ಭವನದಲ್ಲಿ ಆನೆಗಳು ರಿಲ್ಯಾಕ್ಸ್​ ಮೂಡ್​​ನಲ್ಲಿವೆ.

ಸುತ್ತಮುತ್ತಲ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮೆರವಣಿಗೆಯ ದಾರಿಯ ಇಕ್ಕೆಲಗಳಲ್ಲಿ ವಿವಿಧ ಆಹಾರ ಪದಾರ್ಥಗಳು, ಅಕ್ಕಿ, ಹಣ್ಣಿನ ರಸ, ಕಬ್ಬಿನ ರಸ, ಹೂವುಗಳು ಮತ್ತು ಆಟಿಕೆಗಳನ್ನು ಮಾರಾಟ ಮಾಡುವ ಅಂಗಡಿಗಳೂ ಇದ್ದವು. ಸದ್ಯ ಅಶೋಕಪುರಂ ಅರಣ್ಯ ಭವನದಲ್ಲಿ ಆನೆಗಳು ರಿಲ್ಯಾಕ್ಸ್​ ಮೂಡ್​​ನಲ್ಲಿವೆ.

5 / 5

Published On - 2:58 pm, Thu, 22 August 24

Follow us
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ