AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2024: ರಿಲ್ಯಾಕ್ಸ್ ಮೂಡ್​ನಲ್ಲಿರುವ ಮೈಸೂರು ದಸರಾ ಗಜಪಡೆ

ಮೈಸೂರು, ಆಗಸ್ಟ್​ 22: ವಿಶ್ವ ವಿಖ್ಯಾತ ಐತಿಹಾಸಿಕ ಮೈಸೂರು ದಸರಾಕ್ಕೆ ಸಿದ್ಧತೆ ಆರಂಭವಾಗಿದೆ. ಬುಧವಾರವಷ್ಟೇ ವೀರನಹೊಸಹಳ್ಳಿಯಲ್ಲಿ ಗಜಪಡೆಗೆ ಪುಷ್ಪಾರ್ಚನೆ ನೆರವೇರಿಸಲಾಗಿತ್ತು. ನಂತರ ಆರಂಭವಾದ ಗಜಪಯಣ ಮೈಸೂರಿಗೆ ತಲುಪಿದೆ. ಸದ್ಯ ಮೈಸೂರಿನ ಅರಣ್ಯ ಭವನದಲ್ಲಿರುವ ಅಭಿಮನ್ಯು ನೇತೃತ್ವದ 9 ಆನೆಗಳು ರಿಲ್ಯಾಕ್ಸ್​ ಮೂಡ್​​ನಲ್ಲಿವೆ.

ರಾಮ್​, ಮೈಸೂರು
| Edited By: |

Updated on:Aug 22, 2024 | 3:06 PM

Share
ಮೈಸೂರಿನ ಅಶೋಕಪುರಂ ಅರಣ್ಯ ಭವನದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳ ಹಾಗೂ ಅವುಗಳ ಮಾವುತರ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಆನೆಗಳಿಗೆ ಅರಣ್ಯ ಭವನದಲ್ಲೇ ಆಹಾರ, ವಾಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ.

ಮೈಸೂರಿನ ಅಶೋಕಪುರಂ ಅರಣ್ಯ ಭವನದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳ ಹಾಗೂ ಅವುಗಳ ಮಾವುತರ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಆನೆಗಳಿಗೆ ಅರಣ್ಯ ಭವನದಲ್ಲೇ ಆಹಾರ, ವಾಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ.

1 / 5
ಶುಕ್ರವಾರ ಗಜಪಡೆ ಅರಣ್ಯ ಭವನದಿಂದ ಅರಮನೆಗೆ ತೆರಳಲಿದೆ. ಅರಣ್ಯ ಭವನದಿಂದ ನಡಿಗೆ ಮೂಲಕ ಅರಮನೆಗೆ ಆನೆಗಳ ತಂಡ ತೆರಳಲಿದೆ. ನಂತರ ಆನೆಗಳ ತರಬೇತಿ ಪ್ರಕ್ರಿಯೆ ಆರಂಭವಾಗಲಿದೆ. ಸದ್ಯ 9 ಆನೆಗಳ ತಂಡ ಇದ್ದು, ಎರಡನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ.

ಶುಕ್ರವಾರ ಗಜಪಡೆ ಅರಣ್ಯ ಭವನದಿಂದ ಅರಮನೆಗೆ ತೆರಳಲಿದೆ. ಅರಣ್ಯ ಭವನದಿಂದ ನಡಿಗೆ ಮೂಲಕ ಅರಮನೆಗೆ ಆನೆಗಳ ತಂಡ ತೆರಳಲಿದೆ. ನಂತರ ಆನೆಗಳ ತರಬೇತಿ ಪ್ರಕ್ರಿಯೆ ಆರಂಭವಾಗಲಿದೆ. ಸದ್ಯ 9 ಆನೆಗಳ ತಂಡ ಇದ್ದು, ಎರಡನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ.

2 / 5
ಬುಧವಾರ ವೀರನಹೊಸಹಳ್ಳಿ ಗೇಟ್‌ನಲ್ಲಿ ಜಿಲ್ಲಾ ಸಚಿವ ಡಾ. ಎಚ್​​ಸಿ ಮಹದೇವಪ್ಪ, ಅರಣ್ಯ ಸಚಿವ ಈಶ್ವರ ಖಂಡ್ರೆ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಪುಷ್ಪಾರ್ಚನೆ ಸಲ್ಲಿಸಿ ಗಜಪಯಣಕ್ಕೆ ಚಾಲನೆ ನೀಡಿದ್ದರು. ನಂತರ ಗಜಪಡೆ ಅಶೋಕಪುರಂ ಅರಣ್ಯ ಭವನಕ್ಕೆ ತೆರಳಿತ್ತು.

ಬುಧವಾರ ವೀರನಹೊಸಹಳ್ಳಿ ಗೇಟ್‌ನಲ್ಲಿ ಜಿಲ್ಲಾ ಸಚಿವ ಡಾ. ಎಚ್​​ಸಿ ಮಹದೇವಪ್ಪ, ಅರಣ್ಯ ಸಚಿವ ಈಶ್ವರ ಖಂಡ್ರೆ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಪುಷ್ಪಾರ್ಚನೆ ಸಲ್ಲಿಸಿ ಗಜಪಯಣಕ್ಕೆ ಚಾಲನೆ ನೀಡಿದ್ದರು. ನಂತರ ಗಜಪಡೆ ಅಶೋಕಪುರಂ ಅರಣ್ಯ ಭವನಕ್ಕೆ ತೆರಳಿತ್ತು.

3 / 5
ಗಜ ಪಯಣದ ವೇಳೆ ಡೋಲು ಬಾರಿಸುವಿಕೆ, ಮಂಗಳವಾದ್ಯಗಳೂ ಇದ್ದವು. ಇದರ ನಡುವೆ ವೀರಗಾಸೆ ಕುಣಿತ, ಮಹಿಳಾ ಕೋಲಾಟ, ಮಹಿಳಾ ವೀರಗಾಸೆ ಕುಣಿತ ಸೇರಿದಂತೆ ವಿವಿಧ ಪ್ರಕಾರಗಳನ್ನು ಪ್ರದರ್ಶಿಸುತ್ತಾ ಸಾಂಸ್ಕೃತಿಕ ತಂಡಗಳು ವೀರನಹೊಸಹಳ್ಳಿ ಗೇಟ್‌ನಿಂದ ನಾಗಾಪುರ ಗಿರಿಜನ ಆಶ್ರಮ ಶಾಲೆ ಆವರಣದವರೆಗೆ ಆನೆಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿದ್ದವು.

ಗಜ ಪಯಣದ ವೇಳೆ ಡೋಲು ಬಾರಿಸುವಿಕೆ, ಮಂಗಳವಾದ್ಯಗಳೂ ಇದ್ದವು. ಇದರ ನಡುವೆ ವೀರಗಾಸೆ ಕುಣಿತ, ಮಹಿಳಾ ಕೋಲಾಟ, ಮಹಿಳಾ ವೀರಗಾಸೆ ಕುಣಿತ ಸೇರಿದಂತೆ ವಿವಿಧ ಪ್ರಕಾರಗಳನ್ನು ಪ್ರದರ್ಶಿಸುತ್ತಾ ಸಾಂಸ್ಕೃತಿಕ ತಂಡಗಳು ವೀರನಹೊಸಹಳ್ಳಿ ಗೇಟ್‌ನಿಂದ ನಾಗಾಪುರ ಗಿರಿಜನ ಆಶ್ರಮ ಶಾಲೆ ಆವರಣದವರೆಗೆ ಆನೆಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿದ್ದವು.

4 / 5
ಸುತ್ತಮುತ್ತಲ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮೆರವಣಿಗೆಯ ದಾರಿಯ ಇಕ್ಕೆಲಗಳಲ್ಲಿ ವಿವಿಧ ಆಹಾರ ಪದಾರ್ಥಗಳು, ಅಕ್ಕಿ, ಹಣ್ಣಿನ ರಸ, ಕಬ್ಬಿನ ರಸ, ಹೂವುಗಳು ಮತ್ತು ಆಟಿಕೆಗಳನ್ನು ಮಾರಾಟ ಮಾಡುವ ಅಂಗಡಿಗಳೂ ಇದ್ದವು. ಸದ್ಯ ಅಶೋಕಪುರಂ ಅರಣ್ಯ ಭವನದಲ್ಲಿ ಆನೆಗಳು ರಿಲ್ಯಾಕ್ಸ್​ ಮೂಡ್​​ನಲ್ಲಿವೆ.

ಸುತ್ತಮುತ್ತಲ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮೆರವಣಿಗೆಯ ದಾರಿಯ ಇಕ್ಕೆಲಗಳಲ್ಲಿ ವಿವಿಧ ಆಹಾರ ಪದಾರ್ಥಗಳು, ಅಕ್ಕಿ, ಹಣ್ಣಿನ ರಸ, ಕಬ್ಬಿನ ರಸ, ಹೂವುಗಳು ಮತ್ತು ಆಟಿಕೆಗಳನ್ನು ಮಾರಾಟ ಮಾಡುವ ಅಂಗಡಿಗಳೂ ಇದ್ದವು. ಸದ್ಯ ಅಶೋಕಪುರಂ ಅರಣ್ಯ ಭವನದಲ್ಲಿ ಆನೆಗಳು ರಿಲ್ಯಾಕ್ಸ್​ ಮೂಡ್​​ನಲ್ಲಿವೆ.

5 / 5

Published On - 2:58 pm, Thu, 22 August 24

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್