AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ: ಗಜಪಡೆ, ಅಶ್ವಾರೋಹಿ ಪಡೆಗೆ ಸಿಡಿಮದ್ದು ತಾಲೀಮು, ಹೇಗಿತ್ತು ನೋಡಿ

ಮೈಸೂರು, ಸೆಪ್ಟೆಂಬರ್ 30: ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗೆ ತಾಲೀಮು ಚುರುಕುಗೊಳಿಸಲಾಗಿದೆ. ಭಾನುವಾರ ಗಜಪಡೆ ಹಾಗೂ ಅಶ್ವಾರೋಹಿ ಪಡೆಗೆ ಎರಡನೇ ಬಾರಿ ಸಿಡಿಮದ್ದು ಸಿಡಿಸಿ ಅಭ್ಯಾಸ ನಡೆಸಲಾಯಿತು. ಕಾಡಿನಿಂದ ನಾಡಿಗೆ ಬಂದಿರುವ ಗಜಪಡೆ ಜಂಬೂಸವಾರಿಯಂದು ಸಿಡಿಮದ್ದು ಗದ್ದಲಕ್ಕೆ ವಿಚಲಿತಗೊಂಡು ರಂಪಾಟ ಮಾಡುವುದನ್ನು ತಡೆಯಲು ಹೀಗೆ ಸಿಡಿಮದ್ದು ಸಿಡಿಸಿ ತಾಲೀಮು ನಡೆಸಲಾಗುತ್ತದೆ.

ರಾಮ್​, ಮೈಸೂರು
| Edited By: |

Updated on: Sep 30, 2024 | 8:08 AM

Share
ವಿಶ್ವವಿಖ್ಯಾತ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೆ  ವಿಶೇಷ ಸಿಡಿಮದ್ದು ತಾಲೀಮು ನಡೆಸಲಾಯಿತು. ನಗರ ಸಶಸ್ತ್ರ ಮೀಸಲು ಪಡೆಯವರು ಫಿರಂಗಿಯಲ್ಲಿ ಸಿಡಿಮದ್ದುಗಳನ್ನು ಸಿಡಿಸಿ ಆನೆಗಳು ಭಾರೀ ಸದ್ದಿಗೆ ಹೊಂದಿಕೊಳ್ಳುವಂತೆ ತರಬೇತಿ ನೀಡಿದರು. ವಿಜಯದಶಮಿಯ ದಿನದಂದು ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವಾಗ ಮತ್ತು ರಾಷ್ಟ್ರಗೀತೆ ನುಡಿಸುವಾಗ ಗೌರವಾರ್ಥವಾಗಿ 3 ಸುತ್ತಿನಲ್ಲಿ 21 ಕುಶಾಲ ಬಾರಿ ಕುಶಲತೋಪುಗಳನ್ನು ಸಿಡಿಸುವುದು ಸಂಪ್ರದಾಯ.

ವಿಶ್ವವಿಖ್ಯಾತ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ವಿಶೇಷ ಸಿಡಿಮದ್ದು ತಾಲೀಮು ನಡೆಸಲಾಯಿತು. ನಗರ ಸಶಸ್ತ್ರ ಮೀಸಲು ಪಡೆಯವರು ಫಿರಂಗಿಯಲ್ಲಿ ಸಿಡಿಮದ್ದುಗಳನ್ನು ಸಿಡಿಸಿ ಆನೆಗಳು ಭಾರೀ ಸದ್ದಿಗೆ ಹೊಂದಿಕೊಳ್ಳುವಂತೆ ತರಬೇತಿ ನೀಡಿದರು. ವಿಜಯದಶಮಿಯ ದಿನದಂದು ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವಾಗ ಮತ್ತು ರಾಷ್ಟ್ರಗೀತೆ ನುಡಿಸುವಾಗ ಗೌರವಾರ್ಥವಾಗಿ 3 ಸುತ್ತಿನಲ್ಲಿ 21 ಕುಶಾಲ ಬಾರಿ ಕುಶಲತೋಪುಗಳನ್ನು ಸಿಡಿಸುವುದು ಸಂಪ್ರದಾಯ.

1 / 5
ಹೀಗೆ ಸಿಡಿಮದ್ದು ಸಿಡಿಸಿದಾಗ ಉಂಟಾಗುವ ಭಾರೀ ಶಬ್ದದಿಂದ ಆನೆಗಳು ಕುದುರೆಗಳು ಬೆದರುತ್ತವೆ, ವಿಚಲಿತಗೊಳ್ಳುತ್ತವೆ. ಹೀಗಾಗಿ ಆನೆಗಳು ಕುದುರೆಗಳು ಈ ಸಿಡಿಮದ್ದು ಶಬ್ದಕ್ಕೆ ಹೊಂದಿಕೊಳ್ಳಲು ಈ ತಾಲೀಮು ನಡೆಸಲಾಯಿತು.

ಹೀಗೆ ಸಿಡಿಮದ್ದು ಸಿಡಿಸಿದಾಗ ಉಂಟಾಗುವ ಭಾರೀ ಶಬ್ದದಿಂದ ಆನೆಗಳು ಕುದುರೆಗಳು ಬೆದರುತ್ತವೆ, ವಿಚಲಿತಗೊಳ್ಳುತ್ತವೆ. ಹೀಗಾಗಿ ಆನೆಗಳು ಕುದುರೆಗಳು ಈ ಸಿಡಿಮದ್ದು ಶಬ್ದಕ್ಕೆ ಹೊಂದಿಕೊಳ್ಳಲು ಈ ತಾಲೀಮು ನಡೆಸಲಾಯಿತು.

2 / 5
ಅರಮನೆಯ ಮುಂಭಾಗ ವಸ್ತು ಪ್ರದರ್ಶನ ಆವರಣದಲ್ಲಿ ಆನೆಗಳಿಗೆ ಈ ತರಬೇತಿ ನೀಡಲಾಯಿತು. ಮೊದಲ ಸಲ ಒಟ್ಟು 14 ಆನೆಗಳು, 43 ಕುದುರೆಗಳು ತಾಲೀಮಿನಲ್ಲಿ ಭಾಗವಹಿಸಿದ್ದವು. ಆದರೆ ಎರಡನೇ ಬಾರಿ ಕೇವಲ 9 ಆನೆಗಳು ಹಾಗೂ 28 ಕುದುರೆಗಳು ಮಾತ್ರ ಭಾಗಿಯಾಗಿದ್ದವು. ಮೊದಲ ಬಾರಿಯ ಸಿಡಿಮದ್ದಿನ ತಾಲೀಮಿನಲ್ಲಿ ವಿಚಲಿತವಾದ ಆನೆಗಳನ್ನು ಇಂದು ಕರೆ ತಂದಿರಲಿಲ್ಲ.

ಅರಮನೆಯ ಮುಂಭಾಗ ವಸ್ತು ಪ್ರದರ್ಶನ ಆವರಣದಲ್ಲಿ ಆನೆಗಳಿಗೆ ಈ ತರಬೇತಿ ನೀಡಲಾಯಿತು. ಮೊದಲ ಸಲ ಒಟ್ಟು 14 ಆನೆಗಳು, 43 ಕುದುರೆಗಳು ತಾಲೀಮಿನಲ್ಲಿ ಭಾಗವಹಿಸಿದ್ದವು. ಆದರೆ ಎರಡನೇ ಬಾರಿ ಕೇವಲ 9 ಆನೆಗಳು ಹಾಗೂ 28 ಕುದುರೆಗಳು ಮಾತ್ರ ಭಾಗಿಯಾಗಿದ್ದವು. ಮೊದಲ ಬಾರಿಯ ಸಿಡಿಮದ್ದಿನ ತಾಲೀಮಿನಲ್ಲಿ ವಿಚಲಿತವಾದ ಆನೆಗಳನ್ನು ಇಂದು ಕರೆ ತಂದಿರಲಿಲ್ಲ.

3 / 5
ಸಿಡಿಮದ್ದಿನ ತಾಲೀಮಿನಲ್ಲಿ ಭಾಗಿಯಾಗಿದ್ದ ಆನೆಗಳು ಸದ್ದಿಗೆ ಬೆದರದೆ ಆರಾಮಗಿ ನಿಂತಿದ್ದವು. ಇನ್ನು ಸಿಡಿಮದ್ದು ಶಬ್ದಕ್ಕೆ ಕೆಲವು ಕುದುರೆಗಳು ಬೆಚ್ಚಿದರೆ, ಬಹುತೇಕ ಕುದುರೆಗಳು ಬೆದರದೆ ಉತ್ತಮವಾಗಿ ಸ್ಪಂದಿಸಿದವು. ಎರಡನೇ ಭಾರೀ ಸದ್ದಿನ ತಾಲೀಮಿನ್ನು ನೂರಾರು ಜನರು ಕಣ್ತುಂಬಿಕೊಂಡರು. ಅಂತಿಮ‌ ಹಂತದ ತಾಲೀಮು‌ ಬಾಕಿ ಇದ್ದು ದಸರಾ ಉದ್ಘಾಟನೆ ನಂತರ ನಡೆಯಲಿದೆ.

ಸಿಡಿಮದ್ದಿನ ತಾಲೀಮಿನಲ್ಲಿ ಭಾಗಿಯಾಗಿದ್ದ ಆನೆಗಳು ಸದ್ದಿಗೆ ಬೆದರದೆ ಆರಾಮಗಿ ನಿಂತಿದ್ದವು. ಇನ್ನು ಸಿಡಿಮದ್ದು ಶಬ್ದಕ್ಕೆ ಕೆಲವು ಕುದುರೆಗಳು ಬೆಚ್ಚಿದರೆ, ಬಹುತೇಕ ಕುದುರೆಗಳು ಬೆದರದೆ ಉತ್ತಮವಾಗಿ ಸ್ಪಂದಿಸಿದವು. ಎರಡನೇ ಭಾರೀ ಸದ್ದಿನ ತಾಲೀಮಿನ್ನು ನೂರಾರು ಜನರು ಕಣ್ತುಂಬಿಕೊಂಡರು. ಅಂತಿಮ‌ ಹಂತದ ತಾಲೀಮು‌ ಬಾಕಿ ಇದ್ದು ದಸರಾ ಉದ್ಘಾಟನೆ ನಂತರ ನಡೆಯಲಿದೆ.

4 / 5
ಇನ್ನು ಕೊನೆಯ ಹಾಗೂ ಮೂರನೇ ಬಾರಿಯ ಸಿಡಿಮದ್ದು ತಾಲೀಮಿನತ್ತ ಎಲ್ಲರ ಚಿತ್ತ ನೆಟ್ಟಿದ್ದು ಕೊನೆಯ ಸಿಡಿಮದ್ದು ತಾಲೀಮಿನಲ್ಲಿ ಎಲ್ಲಾ ಆನೆಗಳು ಭಾಗಿಯಾಗುವ ನಿರೀಕ್ಷೆ ಇದೆ. ಒಟ್ಟಾರೆ ನಾಡಹಬ್ಬ ದಸರಾ ಜಂಬೂಸವಾರಿಗೆ ಸಿದ್ದತೆ ಜೋರಾಗಿ ನಡೆದಿದ್ದು ಎಲ್ಲವೂ ಸುಸೂತ್ರವಾಗಿ ನಡೆಸಲು ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ.

ಇನ್ನು ಕೊನೆಯ ಹಾಗೂ ಮೂರನೇ ಬಾರಿಯ ಸಿಡಿಮದ್ದು ತಾಲೀಮಿನತ್ತ ಎಲ್ಲರ ಚಿತ್ತ ನೆಟ್ಟಿದ್ದು ಕೊನೆಯ ಸಿಡಿಮದ್ದು ತಾಲೀಮಿನಲ್ಲಿ ಎಲ್ಲಾ ಆನೆಗಳು ಭಾಗಿಯಾಗುವ ನಿರೀಕ್ಷೆ ಇದೆ. ಒಟ್ಟಾರೆ ನಾಡಹಬ್ಬ ದಸರಾ ಜಂಬೂಸವಾರಿಗೆ ಸಿದ್ದತೆ ಜೋರಾಗಿ ನಡೆದಿದ್ದು ಎಲ್ಲವೂ ಸುಸೂತ್ರವಾಗಿ ನಡೆಸಲು ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ.

5 / 5
Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು