AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2024: ಮೈಸೂರು ದಸರಾ ಗಜಪಯಣಕ್ಕೆ ಚಾಲನೆ, ಅಭಿಮನ್ಯು ನೇತೃತ್ವದ ಗಜಪಡೆಗೆ ಪುಷ್ಪಾರ್ಚನೆ

ಮೈಸೂರು, ಆಗಸ್ಟ್ 21: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಗಜ ಪಯಣಕ್ಕೆ ಹುಣಸೂರು ತಾಲೂಕಿನ, ನಾಗರಹೊಳೆ ಅಭಯಾರಣ್ಯದ ಅಂಚಿನಲ್ಲಿರುವ ವೀರನಹೊಸಹಳ್ಳಿಯಲ್ಲಿ ಬುಧವಾರ ಚಾಲನೆ ದೊರೆಯಿತು. ಶುಭಮುಹೂರ್ತದಲ್ಲಿ ಅಭಿಮನ್ಯು ನೇತೃತ್ವದ ಗಜಪಡೆಗೆ ಪುಷ್ಪಾರ್ಚನೆ ನೆರವೇರಿತು. ಬೆಳಗ್ಗೆ 10:20 ರಿಂದ 10:45ರೊಳಗಿನ ಶುಭ ಮುಹೂರ್ತದಲ್ಲಿ ಸಚಿವರಾದ ಮಹದೇವಪ್ಪ, ಈಶ್ವರ ಖಂಡ್ರೆ ಗಜಪಡೆಗೆ ಚಾಲನೆ ನೀಡಿದರು.

ರಾಮ್​, ಮೈಸೂರು
| Edited By: |

Updated on: Aug 21, 2024 | 2:25 PM

Share
ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಆಗಮಿಸಿವೆ. ಕ್ಯಾಪ್ಟನ್ ಅಭಿಮನ್ಯು, ಭೀಮ, ಗೋಪಿ, ಧನಂಜಯ, ಕಂಜನ್‌, ರೋಹಿತ್, ಲಕ್ಷ್ಮೀ, ವರಲಕ್ಷ್ಮೀ, ಏಕಲವ್ಯ ಆನೆಗಳು ಆಗಮಿಸಿವೆ.

ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಆಗಮಿಸಿವೆ. ಕ್ಯಾಪ್ಟನ್ ಅಭಿಮನ್ಯು, ಭೀಮ, ಗೋಪಿ, ಧನಂಜಯ, ಕಂಜನ್‌, ರೋಹಿತ್, ಲಕ್ಷ್ಮೀ, ವರಲಕ್ಷ್ಮೀ, ಏಕಲವ್ಯ ಆನೆಗಳು ಆಗಮಿಸಿವೆ.

1 / 5
ಸಂಸದ ಸುನಿಲ್‌ ಬೋಸ್, ಶಾಸಕರಾದ ಜಿಡಿ ಹರೀಶ್ ಗೌಡ, ಡಿ.ರವಿಶಂಕರ್, ಅನಿಲ್ ಚಿಕ್ಕಮಾದು, ಎಂಎಲ್​ಸಿ ವಿವೇಕಾನಂದ, ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಬಿಜೆಪಿ ಸಂಸದ ಯದುವೀರ್ ಒಡೆಯರ್ ಗೈರಾಗಿದ್ದರು.

ಸಂಸದ ಸುನಿಲ್‌ ಬೋಸ್, ಶಾಸಕರಾದ ಜಿಡಿ ಹರೀಶ್ ಗೌಡ, ಡಿ.ರವಿಶಂಕರ್, ಅನಿಲ್ ಚಿಕ್ಕಮಾದು, ಎಂಎಲ್​ಸಿ ವಿವೇಕಾನಂದ, ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಬಿಜೆಪಿ ಸಂಸದ ಯದುವೀರ್ ಒಡೆಯರ್ ಗೈರಾಗಿದ್ದರು.

2 / 5
ಇಂದು, ನಾಳೆ ಅಶೋಕಪುರಂ ಅರಣ್ಯ ಭವನ ಆವರಣದಲ್ಲಿ ಆನೆಗಳು ವಾಸ್ತವ್ಯ ಹೂಡಲಿವೆ. ಶುಕ್ರವಾರ ಗಜಪಡೆ ಮೈಸೂರು ಅರಮನೆ ಆವರಣ ಪ್ರವೇಶಿಸಲಿದೆ. ಆನೆಗಳು, ಮಾವುತರ ವಾಸ್ತವ್ಯಕ್ಕಾಗಿ ಅರಮನೆ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಇಂದು, ನಾಳೆ ಅಶೋಕಪುರಂ ಅರಣ್ಯ ಭವನ ಆವರಣದಲ್ಲಿ ಆನೆಗಳು ವಾಸ್ತವ್ಯ ಹೂಡಲಿವೆ. ಶುಕ್ರವಾರ ಗಜಪಡೆ ಮೈಸೂರು ಅರಮನೆ ಆವರಣ ಪ್ರವೇಶಿಸಲಿದೆ. ಆನೆಗಳು, ಮಾವುತರ ವಾಸ್ತವ್ಯಕ್ಕಾಗಿ ಅರಮನೆ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

3 / 5
ಎರಡನೇ ಹಂತದಲ್ಲಿ 5 ಆನೆಗಳು ಆಗಮಿಸಲಿವೆ. ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಗುರುತಿಸಲಾಗಿದೆ. ದಸರಾದಲ್ಲಿ ಪಾಲ್ಗೊಳ್ಳಲು ಒಟ್ಟು ಹದಿನಾಲ್ಕು ಆನೆಗಳು ಮಾತ್ರ ಮೈಸೂರಿಗೆ ಆಗಮಿಸುತ್ತಿವೆ. ಅಗತ್ಯ ಬಿದ್ದರೆ ಮಾತ್ರ ಮೀಸಲು ಆನೆಗಳನ್ನು ಕರೆತರಲು ತೀರ್ಮಾ‌ನ ಕೈಗೊಳ್ಳಲಾಗಿದೆ.

ಎರಡನೇ ಹಂತದಲ್ಲಿ 5 ಆನೆಗಳು ಆಗಮಿಸಲಿವೆ. ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಗುರುತಿಸಲಾಗಿದೆ. ದಸರಾದಲ್ಲಿ ಪಾಲ್ಗೊಳ್ಳಲು ಒಟ್ಟು ಹದಿನಾಲ್ಕು ಆನೆಗಳು ಮಾತ್ರ ಮೈಸೂರಿಗೆ ಆಗಮಿಸುತ್ತಿವೆ. ಅಗತ್ಯ ಬಿದ್ದರೆ ಮಾತ್ರ ಮೀಸಲು ಆನೆಗಳನ್ನು ಕರೆತರಲು ತೀರ್ಮಾ‌ನ ಕೈಗೊಳ್ಳಲಾಗಿದೆ.

4 / 5
ಈ ಮಧ್ಯೆ, ನಾಲ್ಕು ಮೀಸಲು ಆನೆಗಳು ಸೇರಿ ಒಟ್ಟು 18 ಆನೆಗಳಿಗೆ 87,50,000 ವಿಮೆ ಮಾಡಿಸಲಾಗಿದೆ. ಅರಣ್ಯಧಿಕಾರಿಗಳು, ಮಾವುತರು, ಕಾವಾಡಿಗಳಿಗೆ ತಲಾ 2 ಲಕ್ಷದಂತೆ 50 ಜನರಿಗೆ 1 ಕೋಟಿ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.

ಈ ಮಧ್ಯೆ, ನಾಲ್ಕು ಮೀಸಲು ಆನೆಗಳು ಸೇರಿ ಒಟ್ಟು 18 ಆನೆಗಳಿಗೆ 87,50,000 ವಿಮೆ ಮಾಡಿಸಲಾಗಿದೆ. ಅರಣ್ಯಧಿಕಾರಿಗಳು, ಮಾವುತರು, ಕಾವಾಡಿಗಳಿಗೆ ತಲಾ 2 ಲಕ್ಷದಂತೆ 50 ಜನರಿಗೆ 1 ಕೋಟಿ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.

5 / 5
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us