AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಗಜಪಡೆ, ಅಶ್ವಾರೋಹಿ ಪಡೆಗೆ ಸಿಡಿಮದ್ದು ತಾಲೀಮು: ಬೆದರಿದ ಹೊಸ ಆನೆಗಳು, ಚದುರಿದ ಕುದುರೆಗಳು‌!

ಮೈಸೂರು, ಸೆಪ್ಟೆಂಬರ್ 27: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗೆ ತಾಲೀಮು ಚುರುಕುಗೊಳಿಸಲಾಗಿದೆ. ಹೊಸ ಗಜಪಡೆ ಹಾಗೂ ಅಶ್ವಾರೋಹಿ ಪಡೆಗೆ ಗುರುವಾರ ಸಿಡಿ ಮದ್ದು ಸಿಡಿಸಿ ಅಭ್ಯಾಸ ನಡೆಸಲಾಯಿತು. ಕಾಡಿನಿಂದ ನಾಡಿಗೆ ಬಂದಿರುವ ಗಜಪಡೆ ಜಂಬೂಸವಾರಿಯಂದು ಸಿಡಿ ಮದ್ದು ಗದ್ದಲಕ್ಕೆ ವಿಚಲಿತಗೊಂಡು ರಂಪಾಟ ಮಾಡುವುದನ್ನು ತಡೆಯಲು ಹೀಗೆ ಸಿಡಿಮದ್ದು ಸಿಡಿಸಿ ತಾಲೀಮು ನಡೆಸಲಾಯಿತು.

ರಾಮ್​, ಮೈಸೂರು
| Updated By: Ganapathi Sharma|

Updated on:Sep 27, 2024 | 7:35 AM

Share
ಬೆದರಿದ ಹೊಸ ದಸರಾ ಆನೆಗಳು, ಚದುರಿದ ಕುದುರೆಗಳು‌! ಇದು ಮೈಸೂರಿನಲ್ಲಿ ನಡೆದ ಸಿಡಿಮದ್ದು ತಾಲೀಮಿನ‌ಲ್ಲಿ ಕಂಡುಬಂದ ದೃಶ್ಯ. ವಿಶ್ವವಿಖ್ಯಾತ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಗುರುವಾರ ವಿಶೇಷ ತಾಲೀಮು ನಡೆಸಲಾಯಿತು. ನಗರ ಸಶಸ್ತ್ರ ಮೀಸಲು  ಪಡೆಯವರು ಫಿರಂಗಿಯಲ್ಲಿ ಸಿಡಿಮದ್ದುಗಳನ್ನು ಸಿಡಿಸಿ ಆನೆಗಳು ಭಾರೀ ಸದ್ದಿಗೆ ಹೊಂದಿಕೊಳ್ಳುವಂತೆ ತರಬೇತಿ ನೀಡಿದರು.

ಬೆದರಿದ ಹೊಸ ದಸರಾ ಆನೆಗಳು, ಚದುರಿದ ಕುದುರೆಗಳು‌! ಇದು ಮೈಸೂರಿನಲ್ಲಿ ನಡೆದ ಸಿಡಿಮದ್ದು ತಾಲೀಮಿನ‌ಲ್ಲಿ ಕಂಡುಬಂದ ದೃಶ್ಯ. ವಿಶ್ವವಿಖ್ಯಾತ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಗುರುವಾರ ವಿಶೇಷ ತಾಲೀಮು ನಡೆಸಲಾಯಿತು. ನಗರ ಸಶಸ್ತ್ರ ಮೀಸಲು ಪಡೆಯವರು ಫಿರಂಗಿಯಲ್ಲಿ ಸಿಡಿಮದ್ದುಗಳನ್ನು ಸಿಡಿಸಿ ಆನೆಗಳು ಭಾರೀ ಸದ್ದಿಗೆ ಹೊಂದಿಕೊಳ್ಳುವಂತೆ ತರಬೇತಿ ನೀಡಿದರು.

1 / 5
ವಿಜಯದಶಮಿಯ ದಿನದಂದು ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವಾಗ ಮತ್ತು ರಾಷ್ಟ್ರಗೀತೆ ನುಡಿಸುವಾಗ ಗೌರವಾರ್ಥವಾಗಿ 3 ಸುತ್ತಿನಲ್ಲಿ 21 ಕುಶಾಲ ಬಾರಿ ಕುಶಲತೋಪುಗಳನ್ನು ಸಿಡಿಸುವುದು ಸಂಪ್ರದಾಯ. ಹೀಗೆ ಸಿಡಿಮದ್ದು ಸಿಡಿಸಿದಾಗ ಉಂಟಾಗುವ ಭಾರೀ ಶಬ್ದದಿಂದ ಆನೆಗಳು ಕುದುರೆಗಳು ಬೆದರುತ್ತವೆ, ವಿಚಲಿತಗೊಳ್ಳುತ್ತವೆ. ಹೀಗಾಗಿ ಆನೆಗಳು ಕುದುರೆಗಳು ಈ ಸಿಡಿಮದ್ದು ಶಬ್ದಕ್ಕೆ ಹೊಂದಿಕೊಳ್ಳಲು ಈ ತಾಲೀಮು ನಡೆಸಲಾಯಿತು.

ವಿಜಯದಶಮಿಯ ದಿನದಂದು ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವಾಗ ಮತ್ತು ರಾಷ್ಟ್ರಗೀತೆ ನುಡಿಸುವಾಗ ಗೌರವಾರ್ಥವಾಗಿ 3 ಸುತ್ತಿನಲ್ಲಿ 21 ಕುಶಾಲ ಬಾರಿ ಕುಶಲತೋಪುಗಳನ್ನು ಸಿಡಿಸುವುದು ಸಂಪ್ರದಾಯ. ಹೀಗೆ ಸಿಡಿಮದ್ದು ಸಿಡಿಸಿದಾಗ ಉಂಟಾಗುವ ಭಾರೀ ಶಬ್ದದಿಂದ ಆನೆಗಳು ಕುದುರೆಗಳು ಬೆದರುತ್ತವೆ, ವಿಚಲಿತಗೊಳ್ಳುತ್ತವೆ. ಹೀಗಾಗಿ ಆನೆಗಳು ಕುದುರೆಗಳು ಈ ಸಿಡಿಮದ್ದು ಶಬ್ದಕ್ಕೆ ಹೊಂದಿಕೊಳ್ಳಲು ಈ ತಾಲೀಮು ನಡೆಸಲಾಯಿತು.

2 / 5
ಅರಮನೆಯ ಮುಂಭಾಗ ವಸ್ತು ಪ್ರದರ್ಶನ ಆವರಣದಲ್ಲಿ ಆನೆಗಳಿಗೆ ಈ ತರಬೇತಿ ನೀಡಲಾಯಿತು. ಒಟ್ಟು 14 ಆನೆಗಳು, 43 ಕುದುರೆಗಳು ತಾಲೀಮಿನಲ್ಲಿ ಭಾಗವಹಿಸಿದ್ದವು.

ಅರಮನೆಯ ಮುಂಭಾಗ ವಸ್ತು ಪ್ರದರ್ಶನ ಆವರಣದಲ್ಲಿ ಆನೆಗಳಿಗೆ ಈ ತರಬೇತಿ ನೀಡಲಾಯಿತು. ಒಟ್ಟು 14 ಆನೆಗಳು, 43 ಕುದುರೆಗಳು ತಾಲೀಮಿನಲ್ಲಿ ಭಾಗವಹಿಸಿದ್ದವು.

3 / 5
ಸಿಡಿಮದ್ದು ಸಿಡಿಸಿದ ವೇಳೆ ಇದೆ ಮೊದಲ ಬಾರಿಗೆ ದಸರಾದಲ್ಲಿ ಪಾಲ್ಗೊಂಡಿದ್ದ  ಏಕಲವ್ಯ ಮತ್ತು ಈರಣ್ಯ ಆನೆಗಳು ಸ್ವಲ್ಪ ಮಟ್ಟಿಗೆ ವಿಚಲಿತಗೊಂಡವು. ಉಳಿದ ಆನೆಗಳು ಸದ್ದಿಗೆ ಬೆದರದೆ ಆರಾಮಗಿ ನಿಂತಿದ್ದವು. ಇನ್ನು ಸಿಡಿಮದ್ದು ಶಬ್ದಕ್ಕೆ ಕೆಲವು ಕುದುರೆಗಳು ಬೆಚ್ಚಿದರೆ ಬಹುತೇಕ ಕುದುರೆಗಳು ಬೆದರದೆ ಉತ್ತಮವಾಗಿ ಸ್ಪಂದಿಸಿದ್ವು. ಮೊದಲ ಭಾರೀ ಸದ್ದಿನ ತಾಲೀಮಿನಲ್ಲೇ ಯಾವುದೇ ತೊಂದರೆಯಾಗಲಿಲ್ಲ. ದಸರೆಯವರೆಗೂ ಇನ್ನು 2 ಬಾರಿ ಈ ರೀತಿ ತಾಲೀಮು ನೀಡಲಾಗುತ್ತದೆ.

ಸಿಡಿಮದ್ದು ಸಿಡಿಸಿದ ವೇಳೆ ಇದೆ ಮೊದಲ ಬಾರಿಗೆ ದಸರಾದಲ್ಲಿ ಪಾಲ್ಗೊಂಡಿದ್ದ ಏಕಲವ್ಯ ಮತ್ತು ಈರಣ್ಯ ಆನೆಗಳು ಸ್ವಲ್ಪ ಮಟ್ಟಿಗೆ ವಿಚಲಿತಗೊಂಡವು. ಉಳಿದ ಆನೆಗಳು ಸದ್ದಿಗೆ ಬೆದರದೆ ಆರಾಮಗಿ ನಿಂತಿದ್ದವು. ಇನ್ನು ಸಿಡಿಮದ್ದು ಶಬ್ದಕ್ಕೆ ಕೆಲವು ಕುದುರೆಗಳು ಬೆಚ್ಚಿದರೆ ಬಹುತೇಕ ಕುದುರೆಗಳು ಬೆದರದೆ ಉತ್ತಮವಾಗಿ ಸ್ಪಂದಿಸಿದ್ವು. ಮೊದಲ ಭಾರೀ ಸದ್ದಿನ ತಾಲೀಮಿನಲ್ಲೇ ಯಾವುದೇ ತೊಂದರೆಯಾಗಲಿಲ್ಲ. ದಸರೆಯವರೆಗೂ ಇನ್ನು 2 ಬಾರಿ ಈ ರೀತಿ ತಾಲೀಮು ನೀಡಲಾಗುತ್ತದೆ.

4 / 5
ಸಿಡಿಮದ್ದು ತಾಲೀಮಿನಲ್ಲಿ ಇದೇ ಮೊದಲ ಬಾರಿಗೆ ದಸರಗೆ ಬಂದಿರುವ ಏಕಲವ್ಯ ಆನೆ ಬೆಚ್ಚುತ್ತದೆ ಎಂಬ ಆತಂಕ ಅಧಿಕಾರಿಗಳಲ್ಲಿ ಇತ್ತು. ಆದರೆ ಆ ಆನೆಗಳು ಸಹಾ ಎಲ್ಲಾ ಆನೆಗಳಂತೆ ಉತ್ಸಾಹದಿಂದಲೇ ತಾಲೀಮಿನಲ್ಲಿ ಪಾಲ್ಗೊಂಡವು. ಇದು ಅಧಿಕಾರಿಗಳಿಗೆ ಸಂತಸ ತಂದಿದೆ. ಇನ್ನೂ ಎರಡನೇ ಹಂತದ ಸಿಡಿಮದ್ದು ಸಿಡಿಸುವ ತಾಲೀಮು 29 ಹಾಗೂ 01 ರಂದು ನಡೆಯಲಿದ್ದು, ಈ ಬಾರಿ ಅದ್ದೂರಿ ದಸರೆ ಆಚರಣೆಗೆ ಭರ್ಜರಿ ಸಿದ್ದತೆ ನಡೆದಿದೆ.

ಸಿಡಿಮದ್ದು ತಾಲೀಮಿನಲ್ಲಿ ಇದೇ ಮೊದಲ ಬಾರಿಗೆ ದಸರಗೆ ಬಂದಿರುವ ಏಕಲವ್ಯ ಆನೆ ಬೆಚ್ಚುತ್ತದೆ ಎಂಬ ಆತಂಕ ಅಧಿಕಾರಿಗಳಲ್ಲಿ ಇತ್ತು. ಆದರೆ ಆ ಆನೆಗಳು ಸಹಾ ಎಲ್ಲಾ ಆನೆಗಳಂತೆ ಉತ್ಸಾಹದಿಂದಲೇ ತಾಲೀಮಿನಲ್ಲಿ ಪಾಲ್ಗೊಂಡವು. ಇದು ಅಧಿಕಾರಿಗಳಿಗೆ ಸಂತಸ ತಂದಿದೆ. ಇನ್ನೂ ಎರಡನೇ ಹಂತದ ಸಿಡಿಮದ್ದು ಸಿಡಿಸುವ ತಾಲೀಮು 29 ಹಾಗೂ 01 ರಂದು ನಡೆಯಲಿದ್ದು, ಈ ಬಾರಿ ಅದ್ದೂರಿ ದಸರೆ ಆಚರಣೆಗೆ ಭರ್ಜರಿ ಸಿದ್ದತೆ ನಡೆದಿದೆ.

5 / 5

Published On - 7:31 am, Fri, 27 September 24

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!