AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್ ಪೀಡಿತ ಮಕ್ಕಳ ಮುಖದಲ್ಲಿ ನಗು ಮೂಡಿಸಿದ ನಾಗ ಚೈತನ್ಯ-ಶೋಭಿತಾ

Naga Chaitanya-Sobhita Dhulipala: ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಇತ್ತೀಚೆಗಷ್ಟೆ ವಿವಾಹವಾದರು. ಇದೀಗ ಈ ಜೋಡಿ ಕೆಲ ಸಾಮಾಜಿಕ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದೆ. ಇತ್ತೀಚೆಗಷ್ಟೆ ಈ ನವ ದಂಪತಿ ಕ್ಯಾನ್ಸರ್ ಪೀಡಿತ ಮಕ್ಕಳೊಂದಿಗೆ ಸಮಯ ಕಳೆದರು. ಅವರ ಮುಖದಲ್ಲಿ ನಗು ಮೂಡುವಂತೆ ಮಾಡಿದರು.

ಮಂಜುನಾಥ ಸಿ.
|

Updated on: Feb 22, 2025 | 10:57 AM

Share
ನಟ ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ಇವರ ವಿವಾಹ ಹಲವು ಬೇರೆ ಬೇರೆ ಕಾರಣಗಳಿಗಾಗಿ ಭಾರಿ ಸುದ್ದಿಯಾಗಿತ್ತು. ಇದೀಗ ಈ ಜೋಡಿ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದೆ.

ನಟ ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ಇವರ ವಿವಾಹ ಹಲವು ಬೇರೆ ಬೇರೆ ಕಾರಣಗಳಿಗಾಗಿ ಭಾರಿ ಸುದ್ದಿಯಾಗಿತ್ತು. ಇದೀಗ ಈ ಜೋಡಿ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದೆ.

1 / 6
ಹೈದರಾಬಾದ್​ನಲ್ಲಿರುವ ಸೇಂಟ್ ಜೂಡ್ ಇಂಡಿಯಾ ಚಿಲ್ಡ್ರನ್ ಸೆಂಟರ್​ಗೆ ಭೇಟಿ ನೀಡಿದ್ದ ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ, ಅಲ್ಲಿ ಕ್ಯಾನ್ಸರ್ ಪೀಡಿತ ಮಕ್ಕಳೊಂದಿಗೆ ದಿನ ಕಳೆದರು.

ಹೈದರಾಬಾದ್​ನಲ್ಲಿರುವ ಸೇಂಟ್ ಜೂಡ್ ಇಂಡಿಯಾ ಚಿಲ್ಡ್ರನ್ ಸೆಂಟರ್​ಗೆ ಭೇಟಿ ನೀಡಿದ್ದ ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ, ಅಲ್ಲಿ ಕ್ಯಾನ್ಸರ್ ಪೀಡಿತ ಮಕ್ಕಳೊಂದಿಗೆ ದಿನ ಕಳೆದರು.

2 / 6
ಕ್ಯಾನ್ಸರ್ ಪೀಡಿತ ಮಕ್ಕಳೊಡನೆ ಬೆರೆತ ಈ ದಂಪತಿಗಳು ಅವರೊಡನೆ ಆಟವಾಡಿದ್ದಾರೆ. ನಾಗ ಚೈತನ್ಯ ಅಂತೂ ಡ್ಯಾನ್ಸ್ ಮಾಡಿ ಮಕ್ಕಳನ್ನು ರಂಜಿಸಿದ್ದಾರೆ. ಹಾಡುಗಳನ್ನು ಹಾಡಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಆಟ ಆಡಿ ಸಂಭ್ರಮಿಸಿದ್ದಾರೆ.

ಕ್ಯಾನ್ಸರ್ ಪೀಡಿತ ಮಕ್ಕಳೊಡನೆ ಬೆರೆತ ಈ ದಂಪತಿಗಳು ಅವರೊಡನೆ ಆಟವಾಡಿದ್ದಾರೆ. ನಾಗ ಚೈತನ್ಯ ಅಂತೂ ಡ್ಯಾನ್ಸ್ ಮಾಡಿ ಮಕ್ಕಳನ್ನು ರಂಜಿಸಿದ್ದಾರೆ. ಹಾಡುಗಳನ್ನು ಹಾಡಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಆಟ ಆಡಿ ಸಂಭ್ರಮಿಸಿದ್ದಾರೆ.

3 / 6
ಕ್ಯಾನ್ಸರ್ ಸೆಂಟರ್​ನ ಮಕ್ಕಳು ಸಹ ತಮ್ಮ ಪ್ರತಿಭೆಯನ್ನು ನಾಗ ಚೈತನ್ಯ ಮತ್ತು ಶೋಭಿತಾಗೆ ತೋರಿಸಿದ್ದಾರೆ. ನವ ದಂಪತಿ ಎದುರು ಡ್ಯಾನ್ಸ್ ಮಾಡಿದ್ದಾರೆ, ಹಾಡುಗಳನ್ನು ಹಾಡಿದ್ದಾರೆ. ಆಶುಭಾಷಣಗಳನ್ನು ಮಾಡಿದ್ದಾರೆ.

ಕ್ಯಾನ್ಸರ್ ಸೆಂಟರ್​ನ ಮಕ್ಕಳು ಸಹ ತಮ್ಮ ಪ್ರತಿಭೆಯನ್ನು ನಾಗ ಚೈತನ್ಯ ಮತ್ತು ಶೋಭಿತಾಗೆ ತೋರಿಸಿದ್ದಾರೆ. ನವ ದಂಪತಿ ಎದುರು ಡ್ಯಾನ್ಸ್ ಮಾಡಿದ್ದಾರೆ, ಹಾಡುಗಳನ್ನು ಹಾಡಿದ್ದಾರೆ. ಆಶುಭಾಷಣಗಳನ್ನು ಮಾಡಿದ್ದಾರೆ.

4 / 6
ಕ್ಯಾನ್ಸರ್ ಕೇಂದ್ರದ ಸಿಬ್ಬಂದಿ ನಾಗ ಚೈತನ್ಯ ಹಾಗೂ ಶೋಭಿತಾ ಧುಲಿಪಾಲ ಅವರನ್ನು ಪ್ರೀತಿಯಿಂದ ಸ್ವಾಗತಿಸಿ, ಅವರಿಗೆ ಕ್ಯಾನ್ಸರ್ ಪೀಡಿತ ಮಕ್ಕಳ ಕಷ್ಟಗಳ ಬಗ್ಗೆ ಮಾಹಿತಿ ನೀಡಿದರು. ಅವರ ಆರೈಕೆಯ ಬಗ್ಗೆ ಮಾಹಿತಿ ನೀಡಿದರು.

ಕ್ಯಾನ್ಸರ್ ಕೇಂದ್ರದ ಸಿಬ್ಬಂದಿ ನಾಗ ಚೈತನ್ಯ ಹಾಗೂ ಶೋಭಿತಾ ಧುಲಿಪಾಲ ಅವರನ್ನು ಪ್ರೀತಿಯಿಂದ ಸ್ವಾಗತಿಸಿ, ಅವರಿಗೆ ಕ್ಯಾನ್ಸರ್ ಪೀಡಿತ ಮಕ್ಕಳ ಕಷ್ಟಗಳ ಬಗ್ಗೆ ಮಾಹಿತಿ ನೀಡಿದರು. ಅವರ ಆರೈಕೆಯ ಬಗ್ಗೆ ಮಾಹಿತಿ ನೀಡಿದರು.

5 / 6
ಕ್ಯಾನ್ಸರ್ ಸೆಂಟರ್​ನ ಸಿಬ್ಬಂದಿಯೊಂದಿಗೂ ಮಾತುಕತೆ ನಡೆಸಿದ ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ. ಸೆಂಟರ್​ನ ಮಕ್ಕಳ ಬಗ್ಗೆ ಮಾಹಿತಿ ಪಡೆದಿದ್ದಲ್ಲದೆ, ಕ್ಯಾನ್ಸರ್ ಸೆಂಟರ್​ಗೆ ಹಣಕಾಸು ದೇಣಿಗೆಯನ್ನು ಸಹ ನಿಡಿದ್ದಾರೆ. ದಂಪತಿಯ ವಿಶಾಲ ಮನಸ್ಸನ್ನು ನೆಟ್ಟಿಗರು ಕೊಂಡಾಡುತ್ತಿದ್ದಾರೆ.

ಕ್ಯಾನ್ಸರ್ ಸೆಂಟರ್​ನ ಸಿಬ್ಬಂದಿಯೊಂದಿಗೂ ಮಾತುಕತೆ ನಡೆಸಿದ ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ. ಸೆಂಟರ್​ನ ಮಕ್ಕಳ ಬಗ್ಗೆ ಮಾಹಿತಿ ಪಡೆದಿದ್ದಲ್ಲದೆ, ಕ್ಯಾನ್ಸರ್ ಸೆಂಟರ್​ಗೆ ಹಣಕಾಸು ದೇಣಿಗೆಯನ್ನು ಸಹ ನಿಡಿದ್ದಾರೆ. ದಂಪತಿಯ ವಿಶಾಲ ಮನಸ್ಸನ್ನು ನೆಟ್ಟಿಗರು ಕೊಂಡಾಡುತ್ತಿದ್ದಾರೆ.

6 / 6
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!