Kannada News Photo gallery Kannada news | Nalin Kumar Kateel visits Puttur private hospital where BJP workers admitted after attack by Congress workers
ಮಾಣಿಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ; ಗಾಯಾಳುಗಳ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್
ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಬುಧವಾರ ನಡೆದಿದ್ದು, ಗಾಯಾಳುಗಳು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದವರ ಆರೋಗ್ಯ ವಿಚಾರಿಸಿದರು.
ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಬುಧವಾರ ನಡೆದಿದೆ. ಗಾಯಾಳುಗಳು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದವರ ಆರೋಗ್ಯ ವಿಚಾರಿಸಿದರು.
1 / 6
ಚುನಾವಣಾ ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರವಾಗಿ ಕಾಂಗ್ರೆಸ್ ಕಾರ್ಯಕರ್ತರಿಂದ ಈ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ. ದಾಳಿಯನ್ನು ಬಿಜೆಪಿ ನಾಯಕರು ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಆಗ್ರಹಿಸಿದ್ದಾರೆ. ನಳಿನ್ ಕುಮಾರ್ ಕಟೀಲ್ ಜತೆ ಬಂಟ್ವಾಳ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಇದ್ದರು.
2 / 6
ಮಾಣಿ ಜಂಕ್ಷನ್ ಬಳಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ಯುವಕರ ಮೇಲೆ ತಂಡವೊಂದು ದಾಳಿ ನಡೆಸಿತ್ತು. ಓಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್ಗೆ ಡಿಕ್ಕಿ ಹೊಡೆಸಿ ನಂತರ ಹಲ್ಲೆ ನಡೆಸಿತ್ತು. ಕಾರ್ಯಕರ್ತರಾದ ಮಹೇಂದ್ರ ಹಾಗೂ ಪ್ರಶಾಂತ್ ನಾಯ್ಕ್ ಅವರ ಕಾಲು ಮತ್ತು ತಲೆಯ ಭಾಗಕ್ಕೆ ಗಾಯವಾಗಿದೆ. ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
3 / 6
ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಹಾಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳಕ್ಕೆ ವಿಟ್ಲ ಪೋಲೀಸರ ತಂಡ ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿದೆ.
4 / 6
ಬಂಟ್ವಾಳದ ಮಾಣಿಯಲ್ಲಿ ನಡೆದ ದಾಳಿಯ ಬಗ್ಗೆ ದಕ್ಷಿಣಕನ್ನಡ ಎಸ್ಪಿ ವಿಕ್ರಂ ಅಮಾಟೆ ಮಾಹಿತಿ ನೀಡಿದ್ದು, ವಿಕೆಟ್ ಅಥವಾ ಅದನ್ನು ಹೋಲುವ ಮರದ ತುಂಡಿನಿಂದ ಹಲ್ಲೆ ನಡೆಸಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದಿದ್ದರು.
5 / 6
ಈ ಮಧ್ಯೆ, 2013-18 ರ ಕರಾಳ ದಿನಗಳು ಕರ್ನಾಟಕಕ್ಕೆ ಮರುಕಳಿಸಿರುವಂತೆ ತೋರುತ್ತಿದೆ. ಚುನಾವಣೆಯ ಫಲಿತಾಂಶ ಹೊರ ಬರುತ್ತಿದ್ದಂತೆ ಕಾಂಗ್ರೆಸ್ಸಿನ ಗೂಂಡಾಗಳು ತಮ್ಮ ಗೂಂಡಾಗಿರಿಯನ್ನು ಪ್ರಾರಂಭಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕ ಟ್ವೀಟ್ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ.