ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಒಂದೇ ದಿನ 8 ಲಕ್ಷ ಜನ ಸಂಚಾರ! ದಾಖಲೆ

ಬೆಂಗಳೂರು ಟ್ರಾಫಿಕ್​ ಸಮಸ್ಯೆ ನಿಯಂತ್ರಿಸಲು ಮೆಟ್ರೋ ಅನುಕೂಲಕಾರಿಯಾಗಿದೆ. ನಮ್ಮ ಮೆಟ್ರೋದಲ್ಲಿ ಪ್ರತಿದಿನ ಲಕ್ಷಾಂತರ ಜನರು ಸಂಚರಿಸುತ್ತಿದ್ದಾರೆ. ನಮ್ಮ ಮೆಟ್ರೋದಲ್ಲಿ ಇಲ್ಲಿಯವರೆಗೆ ಒಂದು ದಿನಕ್ಕೆ 6 ರಿಂದ 7 ಲಕ್ಷ ಜನರು ಸಂಚರಿಸುತ್ತಿದ್ದರು. ಆದರೆ ಹೊಸದೊಂದು ದಾಖಲೆ ನಿರ್ಮಾಣವಾಗಿದೆ.

| Updated By: ವಿವೇಕ ಬಿರಾದಾರ

Updated on: Aug 02, 2024 | 1:20 PM

Namma Metro: 8 Lakh passengers travelled in Namma Metro in single day

ಟ್ರಾಫಿಕ್​ ಕಿರಿಕಿರಿಯಿಂದ ತಪ್ಪಿಸಿಕೊಂಡು ಬೆಂಗಳೂರು ನಗರದಲ್ಲಿ ವೇಗವಾಗಿ ಮತ್ತು ಸುರಕ್ಷಿತವಾಗಿ ಸಂಚರಿಸಲು ನಮ್ಮ ಮೆಟ್ರೋ ತುಂಬಾ ಅನುಕೂಲಕಾರಿಯಾಗಿದೆ. ಬೆಂಗಳೂರು ಟ್ರಾಫಿಕ್​ ಸಮಸ್ಯೆ ನಿಯಂತ್ರಿಸಲು ಮೆಟ್ರೋ ಅನುಕೂಲಕಾರಿಯಾಗಿದ್ದು, ನಗರದ ನಾಲ್ಕೂ ದಿಕ್ಕುನಲ್ಲೂ ಮೆಟ್ರೋ ಓಡುವಂತೆ ಮಾರ್ಗ ವಿಸ್ತರಣೆ ಮಾಡಲಾಗುತ್ತಿದೆ.

1 / 6
Namma Metro: 8 Lakh passengers travelled in Namma Metro in single day

ನಮ್ಮ ಮೆಟ್ರೋದಲ್ಲಿ ಪ್ರತಿದಿನ ಲಕ್ಷಾಂತರ ಜನರು ಸಂಚರಿಸುತ್ತಿದ್ದಾರೆ. ಅತಿ ಕಡಿಮೆ ಸಮಯದಲ್ಲಿ ತಾವು ತಲುಪಬೇಕಾದ ಸ್ಥಳಗಳಿಗೆ ಮುಟ್ಟುತ್ತಾರೆ. ಆಫಿಸ್​, ಶಾಲೆ ಮತ್ತು ಕಾಲೇಜುಗಳಿಗೆ ತೆರಳುವವರು ಹೆಚ್ಚಾಗಿ ನಮ್ಮ ಮೆಟ್ರೋ ಅನ್ನೇ ಅವಲಂಬಿಸಿದ್ದಾರೆ. ನಮ್ಮ ಮೆಟ್ರೋದಲ್ಲಿ ಇಲ್ಲಿಯವರೆಗೆ ಒಂದು ದಿನಕ್ಕೆ 6 ರಿಂದ 7 ಲಕ್ಷ ಜನರು ಸಂಚರಿಸುತ್ತಿದ್ದರು. ಆದರೆ ಹೊಸದೊಂದು ದಾಖಲೆ ನಿರ್ಮಾಣವಾಗಿದೆ.

2 / 6
Namma Metro: 8 Lakh passengers travelled in Namma Metro in single day

ನಮ್ಮ ಮೆಟ್ರೋದಲ್ಲಿ ಜನರ ಸುಲಭ ಸಂಚಾರಕ್ಕಾಗಿ ಬಿಎಂಆರ್​ಸಿಎಲ್​ ಹಲವು ವಿಶೇಷ ವ್ಯವಸ್ಥೆಗಳನ್ನು ಜಾರಿಗೆ ತರುತ್ತಿದೆ. ಇದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ. ಬಿಎಂಆರ್​ಸಿಎಲ್​ಗೂ ಆದಾಯ ಹೆಚ್ಚಿದೆ. ನಮ್ಮ ಮೆಟ್ರೋದಲ್ಲಿ ಒಂದೇ ದಿನ 8 ಲಕ್ಷ ಜನರು ಪ್ರಯಾಣಿಸಿದ್ದಾರೆ.

3 / 6
Namma Metro: 8 Lakh passengers travelled in Namma Metro in single day

ಜೂನ್ ತಿಂಗಳಲ್ಲಿ 2.23 ಕೋಟಿ ಮಂದಿ ಪ್ರಯಾಣ ಮಾಡಿದ್ದಾರೆ. ಆದರೆ ಜೂನ್ 19ರಂದು ಒಂದೇ ದಿನ 8.08 ಲಕ್ಷ ಜನರು ಪ್ರಯಾಣಿಸಿದ್ದಾರೆ. ಇದರಿಂದ ಜೂನ್ ತಿಂಗಳಲ್ಲಿ ಬಿಎಂಆರ್​​ಸಿಎಲ್​ಗೆ 58.23 ಕೋಟಿ ರೂ. ಆದಾಯ ಹರಿದು ಬಂದಿದೆ.

4 / 6
Namma Metro: 8 Lakh passengers travelled in Namma Metro in single day

ಶೇಕಡಾ 50.06ರಷ್ಟು ಪ್ರಯಾಣಿಕರು ಸ್ಮಾರ್ಟ್ ಕಾರ್ಡ್ ಬಳಸುತ್ತಿದ್ದಾರೆ. ಶೇಕಡಾ 30.45 ರಷ್ಟು ಪ್ರಯಾಣಿಕರು ಟೋಕನ್ (ಫೈಬರ್​ನ ನಾಣ್ಯ ಆಕಾರದ​ ಟಿಕೆಟ್)​ ಉಪಯೋಗಿಸುತ್ತಾರೆ. ಶೇಕಡಾ 19.49ರಷ್ಟು ಮಂದಿ ಮೊಬೈಲ್​ನಲ್ಲಿ ಕ್ಯೂಆರ್ ಕೋಡ್ ಟಿಕೆಟ್ ಕೊಂಡು ಸಂಚರಿಸುತ್ತಿದ್ದಾರೆ.

5 / 6
Bengaluru Namma Metro records highest ridership of 8.26 lakh on August 6th Karnataka News In Kannada

ನೇರಳೆ ಮಾರ್ಗದಲ್ಲಿ ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ನಮ್ಮ ಮೆಟ್ರೋ ರೈಲುಗಳು ರಶ್​ ಆಗಿರುತ್ತವೆ. ದಟ್ಟಣೆಯ ಅವಧಿಯಲ್ಲಿ ಮೆಜೆಸ್ಟಿಕ್​ನಿಂದ ಹೆಚ್ಚುವರಿ ರೈಲು ಪ್ರಯಾಣಿಸಿದರೂ ಸಾಕಾಗುತ್ತಿಲ್ಲ. ಇನ್ನೂ ಹೆಚ್ಚಿನ ರೈಲು ಬಿಡಬೇಕೆಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.

6 / 6
Follow us
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ