AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ಗೊತ್ತಾ ಪಿಂಕ್​​ ಲೈನ್​​ನ ಚಾಲಕ ರಹಿತ ಮೊದಲ ಮೆಟ್ರೋ ರೈಲು?: ಇಲ್ಲಿವೆ ಚಿತ್ರಗಳು

ನಮ್ಮ ಮೆಟ್ರೋದ ಪಿಂಕ್ ಲೈನ್​​ಗಾಗಿ ಬಿಇಎಂಎಲ್ ಸಂಸ್ಥೆಯು ಮೊದಲ ಚಾಲಕರಹಿತ ರೈಲಿನ ಮಾದರಿಯನ್ನು ಬಿಡುಗಡೆ ಮಾಡಿದೆ. ಈ ರೈಲು ಡಿಸೆಂಬರ್ 15 ಅಥವಾ 16ಕ್ಕೆ ಕೊತ್ತನೂರು ಡಿಪೋ ತಲುಪಲಿದೆ. ಒಟ್ಟು 23 ಚಾಲಕರಹಿತ ರೈಲುಗಳಿಗೆ ಆರ್ಡರ್​ ನೀಡಲಾಗಿದ್ದು, 2026 ಮೇನಲ್ಲಿ ಕಾಳೇನ ಅಗ್ರಹಾರ ಟು ತಾವರೆಕೆರೆ ವರೆಗಿನ 6 ಎಲಿವೇಟೆಡ್ ಮೆಟ್ರೋ ಸ್ಟೇಷನ್ ಓಪನ್ ಮಾಡಲು BMRCL ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ.

Kiran Surya
| Edited By: |

Updated on:Dec 12, 2025 | 6:08 PM

Share
ನಮ್ಮ ಮೆಟ್ರೋದ ಬಹು ನಿರೀಕ್ಷಿತ ಯೋಜನೆಗಳಲ್ಲೊಂದಾದ ಪಿಂಕ್​​ ಲೈನ್​​ನಲ್ಲಿ ಸಂಚಾರ ಮಾಡಲಿರುವ ಚಾಲಕ ರಹಿತ ಮೊದಲ ರೈಲನ್ನು ಬಿಇಎಂಎಲ್ ಬಿಡುಗಡೆ ಮಾಡಿದೆ. ಡಿಸೆಂಬರ್ 15 ಅಥವಾ 16ಕ್ಕೆ ಬಿಎಂಆರ್ಸಿಎಲ್​​ನ ಕೊತ್ತನೂರು ಡಿಪೋವನ್ನು ಹೊಸ ರೈಲು ತಲುಪಲಿದೆ.

ನಮ್ಮ ಮೆಟ್ರೋದ ಬಹು ನಿರೀಕ್ಷಿತ ಯೋಜನೆಗಳಲ್ಲೊಂದಾದ ಪಿಂಕ್​​ ಲೈನ್​​ನಲ್ಲಿ ಸಂಚಾರ ಮಾಡಲಿರುವ ಚಾಲಕ ರಹಿತ ಮೊದಲ ರೈಲಿನ ಮಾದರಿಯನ್ನು ಬಿಇಎಂಎಲ್ ಬಿಡುಗಡೆ ಮಾಡಿದೆ. ಡಿಸೆಂಬರ್ 15 ಅಥವಾ 16ಕ್ಕೆ ಬಿಎಂಆರ್ಸಿಎಲ್​​ನನ ಕೊತ್ತನೂರು ಡಿಪೋವನ್ನು ಹೊಸ ರೈಲು ತಲುಪಲಿದೆ.

1 / 5
ಮೊದಲ ಹಂತದಲ್ಲಿ ಪಿಂಕ್ ಲೈನ್​​ಗೆ ಚಾಲಕ ರಹಿತ 6 ರೈಲುಗಳು ಬರಲಿದ್ದು, ಆ ಪೈಕಿ ಮೊದಲ ಪ್ರೋಟೋಟೈಪ್ ರೈಲನ್ನ ರೋಲ್ ಔಟ್ ಮಾಡಲಾಗಿದೆ. BMRCL ಎಂಡಿ  ಡಾ. ಜೆ. ರವಿಶಂಕರ್ ಅವರ ನೇತೃತ್ವದಲ್ಲಿ ಈ ಬಿಡುಗಡೆ ಕಾರ್ಯಕ್ರಮ ನಡೆದಿದ್ದು, BEML ಸಿಎಂಡಿ ಶಾಂತನು ರಾಯ್ ಸೇರಿ ಎರಡೂ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

ಮೊದಲ ಹಂತದಲ್ಲಿ ಪಿಂಕ್ ಲೈನ್​​ಗೆ ಚಾಲಕ ರಹಿತ 6 ರೈಲುಗಳು ಬರಲಿದ್ದು, ಆ ಪೈಕಿ ಮೊದಲ ಪ್ರೋಟೋಟೈಪ್ ರೈಲನ್ನ ರೋಲ್ ಔಟ್ ಮಾಡಲಾಗಿದೆ. BMRCL ಎಂಡಿ ಡಾ. ಜೆ. ರವಿಶಂಕರ್ ಅವರ ನೇತೃತ್ವದಲ್ಲಿ ಈ ಬಿಡುಗಡೆ ಕಾರ್ಯಕ್ರಮ ನಡೆದಿದ್ದು, BEML ಸಿಎಂಡಿ ಶಾಂತನು ರಾಯ್ ಸೇರಿ ಎರಡೂ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

2 / 5
ಒಪ್ಪಂದದ ಪ್ರಕಾರ ಬ್ಲ್ಯೂ ಲೈನ್​​ ಮತ್ತು ಪಿಂಕ್​​ ಲೈನ್​​ ಮೆಟ್ರೋಗಳಿಗಾಗಿ ಒಟ್ಟು 318 ಸ್ಟ್ಯಾಂಡರ್ಡ್ ಗೇಜ್ ಮೆಟ್ರೋ ಬೋಗಿಗಳನ್ನು BEML ಪೂರೈಸಲಿದೆ. ಮೆಟ್ರೋ ಟ್ರೇನ್‌ಸೆಟ್‌ಗಳನ್ನು ಸಂಪೂರ್ಣವಾಗಿ ಬೆಂಗಳೂರಿನ BEMLನಲ್ಲಿ ವಿನ್ಯಾಸಗೊಳಿಸಲಾಗಿದ್ದು, ಇಂಜಿನಿಯರಿಂಗ್​​ ಮತ್ತು ನಿರ್ಮಾಣ ಎಲ್ಲವೂ ಇಲ್ಲಿಯೇ ಆಗಿದೆ. ಜೊತೆಗೆ ಮುಂದಿನ 15 ವರ್ಷಗಳ ಕಾಲ ಸಮಗ್ರ ನಿರ್ವಹಣೆಯ ಬೆಂಬಲವನ್ನೂ BEML ನೀಡಲಿದೆ.

ಒಪ್ಪಂದದ ಪ್ರಕಾರ ಬ್ಲ್ಯೂ ಲೈನ್​​ ಮತ್ತು ಪಿಂಕ್​​ ಲೈನ್​​ ಮೆಟ್ರೋಗಳಿಗಾಗಿ ಒಟ್ಟು 318 ಸ್ಟ್ಯಾಂಡರ್ಡ್ ಗೇಜ್ ಮೆಟ್ರೋ ಬೋಗಿಗಳನ್ನು BEML ಪೂರೈಸಲಿದೆ. ಮೆಟ್ರೋ ಟ್ರೇನ್‌ಸೆಟ್‌ಗಳನ್ನು ಸಂಪೂರ್ಣವಾಗಿ ಬೆಂಗಳೂರಿನ BEMLನಲ್ಲಿ ವಿನ್ಯಾಸಗೊಳಿಸಲಾಗಿದ್ದು, ಇಂಜಿನಿಯರಿಂಗ್​​ ಮತ್ತು ನಿರ್ಮಾಣ ಎಲ್ಲವೂ ಇಲ್ಲಿಯೇ ಆಗಿದೆ. ಜೊತೆಗೆ ಮುಂದಿನ 15 ವರ್ಷಗಳ ಕಾಲ ಸಮಗ್ರ ನಿರ್ವಹಣೆಯ ಬೆಂಬಲವನ್ನೂ BEML ನೀಡಲಿದೆ.

3 / 5
ಪಿಂಕ್​​ ಲೈನ್​​ ಮೆಟ್ರೋ ಕಾಳೇನ ಅಗ್ರಹಾರದಿಂದ ನಾಗವಾರಕ್ಕೆ ಸಂಪರ್ಕ ಕಲ್ಪಿಸಲಿದ್ದು, 21 ಕಿಲೋ ಮೀಟರ್​​ ವಿಸ್ತೀರ್ಣ ಹೊಂದಿದೆ. 12 ಅಂಡರ್ ಗ್ರೌಂಡ್, 6 ಎಲಿವೇಟೆಡ್ ಮೆಟ್ರೋ ಸ್ಟೇಷನ್ ಸೇರಿ 18 ನಿಲ್ದಾಣಗಳು ಈ ಮಾರ್ಗದಲ್ಲಿವೆ.

ಪಿಂಕ್​​ ಲೈನ್​​ ಮೆಟ್ರೋ ಕಾಳೇನ ಅಗ್ರಹಾರದಿಂದ ನಾಗವಾರಕ್ಕೆ ಸಂಪರ್ಕ ಕಲ್ಪಿಸಲಿದ್ದು, 21 ಕಿಲೋ ಮೀಟರ್​​ ವಿಸ್ತೀರ್ಣ ಹೊಂದಿದೆ. 12 ಅಂಡರ್ ಗ್ರೌಂಡ್, 6 ಎಲಿವೇಟೆಡ್ ಮೆಟ್ರೋ ಸ್ಟೇಷನ್ ಸೇರಿ 18 ನಿಲ್ದಾಣಗಳು ಈ ಮಾರ್ಗದಲ್ಲಿವೆ.

4 / 5
2026 ಮೇನಲ್ಲಿ ಕಾಳೇನ ಅಗ್ರಹಾರ ಟು ತಾವರೆಕೆರೆ ವರೆಗಿನ 6 ಎಲಿವೇಟೆಡ್ ಮೆಟ್ರೋ ಸ್ಟೇಷನ್ ಓಪನ್ ಮಾಡಲು BMRCL ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ. ಬಿಇಎಂಎಲ್​​ನಿಂದ ಐದು ರೈಲುಗಳು ಆಗಮಿಸುತ್ತಿದ್ದಂತೆ, ವಾಣಿಜ್ಯ ಸಂಚಾರ ಆರಂಭವಾಗುವ ನಿರೀಕ್ಷೆ ಇದೆ. ಪಿಂಕ್‌ ಲೈನ್​​ಗಾಗಿ ಒಟ್ಟು  23 ಚಾಲಕರಹಿತ ರೈಲುಗಳನ್ನು ಬಿಇಎಂಎಲ್​​ಗೆ ಆರ್ಡರ್ ನೀಡಲಾಗಿದೆ.

2026 ಮೇನಲ್ಲಿ ಕಾಳೇನ ಅಗ್ರಹಾರ ಟು ತಾವರೆಕೆರೆ ವರೆಗಿನ 6 ಎಲಿವೇಟೆಡ್ ಮೆಟ್ರೋ ಸ್ಟೇಷನ್ ಓಪನ್ ಮಾಡಲು BMRCL ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ. ಬಿಇಎಂಎಲ್​​ನಿಂದ ಐದು ರೈಲುಗಳು ಆಗಮಿಸುತ್ತಿದ್ದಂತೆ, ವಾಣಿಜ್ಯ ಸಂಚಾರ ಆರಂಭವಾಗುವ ನಿರೀಕ್ಷೆ ಇದೆ. ಪಿಂಕ್‌ ಲೈನ್​​ಗಾಗಿ ಒಟ್ಟು 23 ಚಾಲಕರಹಿತ ರೈಲುಗಳನ್ನು ಬಿಇಎಂಎಲ್​​ಗೆ ಆರ್ಡರ್ ನೀಡಲಾಗಿದೆ.

5 / 5

Published On - 7:51 pm, Thu, 11 December 25

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ