AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯುತ್ತಮ ನಟ-ನಟಿ ‘ರಾಷ್ಟ್ರ ಪ್ರಶಸ್ತಿ’ ಪಡೆದ ಕನ್ನಡದ ಪ್ರತಿಭಾವಂತ ಕಲಾವಿದರು ಇವರು..

ರಾಷ್ಟ್ರ ಪ್ರಶಸ್ತಿ ಪಡೆಯಬೇಕು ಎಂಬ ಆಸೆ ಬಹುತೇಕ ಎಲ್ಲ ಕಲಾವಿದರಿಗೆ ಇರುತ್ತದೆ. ಆದರೆ ಅಂಥ ಸಾಧನೆ ಸಾಧ್ಯವಾಗುವುದು ಕೆಲವರಿಗೆ ಮಾತ್ರ. ಪ್ರತಿ ವರ್ಷ ನ್ಯಾಷನಲ್​ ಅವಾರ್ಡ್​ ಘೋಷಣೆ ಆದಾಗ ಕನ್ನಡ ಚಿತ್ರರಂಗಕ್ಕೆ ಎಷ್ಟು ಪ್ರಶಸ್ತಿ ಬಂತು ಎಂಬುದನ್ನು ಕುತೂಹಲದಿಂದ ನೋಡುತ್ತಾರೆ ಕನ್ನಡಿಗರು. ಈವರೆಗೂ ಅತ್ಯುತ್ತಮ ನಟ-ನಟಿ ಪ್ರಶಸ್ತಿ ಪಡೆದ ಸ್ಯಾಂಡಲ್​ವುಡ್​ ಕಲಾವಿದರ ಬಗ್ಗೆ ಮಾಹಿತಿ ಇಲ್ಲಿದೆ..

ಮದನ್​ ಕುಮಾರ್​
|

Updated on: Aug 16, 2024 | 6:52 PM

Share
1973ರಲ್ಲಿ ಕನ್ನಡದ ನಟಿ ನಂದಿನಿ ಭಕ್ತವತ್ಸಲ ಅವರು ‘ಅತ್ಯುತ್ತಮ ನಟಿ’ ರಾಷ್ಟ್ರ ಪ್ರಶಸ್ತಿ ಪಡೆದರು. ‘ಕಾಡು’ ಸಿನಿಮಾದಲ್ಲಿನ ಅವರ ನಟನೆಗೆ ಈ ಅವಾರ್ಡ್​ ಲಭಿಸಿತು. ಶ್ರೀಕೃಷ್ಣ ಆಲನಹಳ್ಳಿ ಬರೆದ ‘ಕಾಡು’ ಕಾದಂಬರಿಯನ್ನು ಆಧರಿಸಿ ಸಿದ್ಧವಾದ ಆ ಸಿನಿಮಾಗೆ ಗಿರೀಶ್ ಕಾರ್ನಾಡ್​ ಅವರ ನಿರ್ದೇಶನವಿದೆ.

1973ರಲ್ಲಿ ಕನ್ನಡದ ನಟಿ ನಂದಿನಿ ಭಕ್ತವತ್ಸಲ ಅವರು ‘ಅತ್ಯುತ್ತಮ ನಟಿ’ ರಾಷ್ಟ್ರ ಪ್ರಶಸ್ತಿ ಪಡೆದರು. ‘ಕಾಡು’ ಸಿನಿಮಾದಲ್ಲಿನ ಅವರ ನಟನೆಗೆ ಈ ಅವಾರ್ಡ್​ ಲಭಿಸಿತು. ಶ್ರೀಕೃಷ್ಣ ಆಲನಹಳ್ಳಿ ಬರೆದ ‘ಕಾಡು’ ಕಾದಂಬರಿಯನ್ನು ಆಧರಿಸಿ ಸಿದ್ಧವಾದ ಆ ಸಿನಿಮಾಗೆ ಗಿರೀಶ್ ಕಾರ್ನಾಡ್​ ಅವರ ನಿರ್ದೇಶನವಿದೆ.

1 / 8
ಎಂ.ವಿ. ವಾಸುದೇವ ರಾವ್​ ಅವರು 1975ರಲ್ಲಿ ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದರು. ಬಿ.ವಿ. ಕಾರಂತ್​ ಅವರು ನಿರ್ದೇಶನ ಮಾಡಿದ ‘ಚೋಮನ ದುಡಿ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಎಂ.ವಿ. ವಾಸುದೇವ ರಾವ್​ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿತು. ಇದು ಶಿವರಾಮ ಕಾರಂತರ ಕಾದಂಬರಿ ಆಧಾರಿತ ಸಿನಿಮಾ.

ಎಂ.ವಿ. ವಾಸುದೇವ ರಾವ್​ ಅವರು 1975ರಲ್ಲಿ ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದರು. ಬಿ.ವಿ. ಕಾರಂತ್​ ಅವರು ನಿರ್ದೇಶನ ಮಾಡಿದ ‘ಚೋಮನ ದುಡಿ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಎಂ.ವಿ. ವಾಸುದೇವ ರಾವ್​ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿತು. ಇದು ಶಿವರಾಮ ಕಾರಂತರ ಕಾದಂಬರಿ ಆಧಾರಿತ ಸಿನಿಮಾ.

2 / 8
1986ರಲ್ಲಿ ನಟ ಚಾರುಹಾ​ಸನ್ ಅವರು ‘ತರಬನ ಕಥೆ’ ಸಿನಿಮಾದಲ್ಲಿನ ನಟನೆಗಾಗಿ ‘ಅತ್ಯುತ್ತಮ ನಟ’ ನ್ಯಾಷನಲ್​ ಅವಾರ್ಡ್​ ಪಡೆದುಕೊಂಡರು. ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು ಗಿರೀಶ್​ ಕಾಸರವಳ್ಳಿ. ಮೂಲತಃ ತಮಿಳು ಚಿತ್ರರಂಗದ ನಟರಾದ ಚಾರುಹಾಸನ್​​ ಅವರು ಕನ್ನಡ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

1986ರಲ್ಲಿ ನಟ ಚಾರುಹಾ​ಸನ್ ಅವರು ‘ತರಬನ ಕಥೆ’ ಸಿನಿಮಾದಲ್ಲಿನ ನಟನೆಗಾಗಿ ‘ಅತ್ಯುತ್ತಮ ನಟ’ ನ್ಯಾಷನಲ್​ ಅವಾರ್ಡ್​ ಪಡೆದುಕೊಂಡರು. ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು ಗಿರೀಶ್​ ಕಾಸರವಳ್ಳಿ. ಮೂಲತಃ ತಮಿಳು ಚಿತ್ರರಂಗದ ನಟರಾದ ಚಾರುಹಾಸನ್​​ ಅವರು ಕನ್ನಡ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

3 / 8
2004ರಲ್ಲಿ ನಟಿ ತಾರಾ ಅವರಿಗೆ ‘ಅತ್ಯುತ್ತಮ ನಟಿ’ ರಾಷ್ಟ್ರ ಪ್ರಶಸ್ತಿ ಲಭಿಸಿತು. ಗಿರೀಶ್​ ಕಾಸರವಳ್ಳಿ ಅವರು ನಿರ್ದೇಶನ ಮಾಡಿದ ‘ಹಸೀನಾ’ ಚಿತ್ರಕ್ಕಾಗಿ ತಾರಾ ಅವರು ಈ ಪ್ರಶಸ್ತಿ ಪಡೆದುಕೊಂಡರು. ಕನ್ನಡ ಚಿತ್ರರಂಗದಲ್ಲಿ ತಾರಾ ಅವರು ತಮ್ಮದೇ ಛಾಪು ಮೂಡಿಸಿ, ಬೇಡಿಕೆಯ ಕಲಾವಿದೆ ಆಗಿದ್ದಾರೆ.

2004ರಲ್ಲಿ ನಟಿ ತಾರಾ ಅವರಿಗೆ ‘ಅತ್ಯುತ್ತಮ ನಟಿ’ ರಾಷ್ಟ್ರ ಪ್ರಶಸ್ತಿ ಲಭಿಸಿತು. ಗಿರೀಶ್​ ಕಾಸರವಳ್ಳಿ ಅವರು ನಿರ್ದೇಶನ ಮಾಡಿದ ‘ಹಸೀನಾ’ ಚಿತ್ರಕ್ಕಾಗಿ ತಾರಾ ಅವರು ಈ ಪ್ರಶಸ್ತಿ ಪಡೆದುಕೊಂಡರು. ಕನ್ನಡ ಚಿತ್ರರಂಗದಲ್ಲಿ ತಾರಾ ಅವರು ತಮ್ಮದೇ ಛಾಪು ಮೂಡಿಸಿ, ಬೇಡಿಕೆಯ ಕಲಾವಿದೆ ಆಗಿದ್ದಾರೆ.

4 / 8
ಕನ್ನಡದ ಮತ್ತೋರ್ವ ಪ್ರತಿಭಾವಂತ ನಟಿ ಉಮಾಶ್ರೀ ಅವರು ಕೂಡ ‘ಅತ್ಯುತ್ತಮ ನಟಿ’ ನ್ಯಾಷನಲ್​ ಅವಾರ್ಡ್​​ ಪಡೆದಿದ್ದಾರೆ. ಗಿರೀಶ್​ ಕಾಸರವಳ್ಳಿ ಅವರು ನಿರ್ದೇಶನ ಮಾಡಿದ ‘ಗುಲಾಬಿ ಟಾಕೀಸ್​’ ಚಿತ್ರದಲ್ಲಿನ ಅಭಿನಯಕ್ಕಾಗಿ 2007ರಲ್ಲಿ ಉಮಾಶ್ರೀ ಅವರಿಗೆ ಈ ಪ್ರಶಸ್ತಿ ಸಿಕ್ಕಿತು.

ಕನ್ನಡದ ಮತ್ತೋರ್ವ ಪ್ರತಿಭಾವಂತ ನಟಿ ಉಮಾಶ್ರೀ ಅವರು ಕೂಡ ‘ಅತ್ಯುತ್ತಮ ನಟಿ’ ನ್ಯಾಷನಲ್​ ಅವಾರ್ಡ್​​ ಪಡೆದಿದ್ದಾರೆ. ಗಿರೀಶ್​ ಕಾಸರವಳ್ಳಿ ಅವರು ನಿರ್ದೇಶನ ಮಾಡಿದ ‘ಗುಲಾಬಿ ಟಾಕೀಸ್​’ ಚಿತ್ರದಲ್ಲಿನ ಅಭಿನಯಕ್ಕಾಗಿ 2007ರಲ್ಲಿ ಉಮಾಶ್ರೀ ಅವರಿಗೆ ಈ ಪ್ರಶಸ್ತಿ ಸಿಕ್ಕಿತು.

5 / 8
2014ರಲ್ಲಿ ನಟ ಸಂಚಾರಿ ವಿಜಯ್​ ಅವರು ‘ನಾನು ಅವನಲ್ಲ ಅವಳು’ ಸಿನಿಮಾದಲ್ಲಿನ ಅಭಿನಯಕ್ಕಾಗಿ ‘ಬೆಸ್ಟ್​ ಆ್ಯಕ್ಟರ್​’ ನ್ಯಾಷನಲ್ ಅವಾರ್ಡ್​ ಪಡೆದುಕೊಂಡರು. ತೃತೀಯ ಲಿಂಗಿಯ ಪಾತ್ರದಲ್ಲಿ ಅವರ ನಟನೆ ಎಲ್ಲರ ಮೆಚ್ಚುಗೆ ಪಡೆಯಿತು. ಬಿ.ಎಸ್​. ಲಿಂಗದೇವರು ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

2014ರಲ್ಲಿ ನಟ ಸಂಚಾರಿ ವಿಜಯ್​ ಅವರು ‘ನಾನು ಅವನಲ್ಲ ಅವಳು’ ಸಿನಿಮಾದಲ್ಲಿನ ಅಭಿನಯಕ್ಕಾಗಿ ‘ಬೆಸ್ಟ್​ ಆ್ಯಕ್ಟರ್​’ ನ್ಯಾಷನಲ್ ಅವಾರ್ಡ್​ ಪಡೆದುಕೊಂಡರು. ತೃತೀಯ ಲಿಂಗಿಯ ಪಾತ್ರದಲ್ಲಿ ಅವರ ನಟನೆ ಎಲ್ಲರ ಮೆಚ್ಚುಗೆ ಪಡೆಯಿತು. ಬಿ.ಎಸ್​. ಲಿಂಗದೇವರು ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

6 / 8
2022ರಲ್ಲಿ ಬಿಡುಗಡೆಯಾದ ‘ಕಾಂತಾರ’ ಚಿತ್ರದಲ್ಲಿನ ಅಭಿನಯಕ್ಕಾಗಿ ರಿಷಬ್​ ಶೆಟ್ಟಿ ಅವರಿಗೆ ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಒಲಿದಿದೆ. 2024ರ ಆಗಸ್ಟ್​ 16ರಂದು ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಈ ಚಿತ್ರಕ್ಕೆ ರಿಷಬ್​ ಶೆಟ್ಟಿ ಅವರೇ ನಿರ್ದೇಶನ ಮಾಡಿದ್ದಾರೆ.

2022ರಲ್ಲಿ ಬಿಡುಗಡೆಯಾದ ‘ಕಾಂತಾರ’ ಚಿತ್ರದಲ್ಲಿನ ಅಭಿನಯಕ್ಕಾಗಿ ರಿಷಬ್​ ಶೆಟ್ಟಿ ಅವರಿಗೆ ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಒಲಿದಿದೆ. 2024ರ ಆಗಸ್ಟ್​ 16ರಂದು ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಈ ಚಿತ್ರಕ್ಕೆ ರಿಷಬ್​ ಶೆಟ್ಟಿ ಅವರೇ ನಿರ್ದೇಶನ ಮಾಡಿದ್ದಾರೆ.

7 / 8
ಈ ಕಲಾವಿದರು ಮಾತ್ರವಲ್ಲದೇ ‘ಸ್ಪೆಷಲ್​ ಮೆನ್ಷನ್​ ಅವಾರ್ಡ್​​’, ‘ಸ್ಪೆಷಲ್​ ಜ್ಯೂರಿ ಅವಾರ್ಡ್​’ ವಿಭಾಗಗಳಲ್ಲಿ ಜಯಮಾಲಾ (1997), ಎಚ್​.ಜಿ. ದತ್ತಾತ್ರೆಯ (2003, 2012), ಶ್ರುತಿ ಹರಿಹರನ್​ (2018) ಅವರು ಕೂಡ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡು ಕನ್ನಡ ಚಿತ್ರರಂಗದ ಗರಿಮೆ ಹೆಚ್ಚಿಸಿದ್ದಾರೆ.

ಈ ಕಲಾವಿದರು ಮಾತ್ರವಲ್ಲದೇ ‘ಸ್ಪೆಷಲ್​ ಮೆನ್ಷನ್​ ಅವಾರ್ಡ್​​’, ‘ಸ್ಪೆಷಲ್​ ಜ್ಯೂರಿ ಅವಾರ್ಡ್​’ ವಿಭಾಗಗಳಲ್ಲಿ ಜಯಮಾಲಾ (1997), ಎಚ್​.ಜಿ. ದತ್ತಾತ್ರೆಯ (2003, 2012), ಶ್ರುತಿ ಹರಿಹರನ್​ (2018) ಅವರು ಕೂಡ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡು ಕನ್ನಡ ಚಿತ್ರರಂಗದ ಗರಿಮೆ ಹೆಚ್ಚಿಸಿದ್ದಾರೆ.

8 / 8
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ