AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೇಜಸ್​ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ ಮೋದಿ: ಫೋಟೋಗಳಲ್ಲಿ ನೋಡಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ (ನವೆಂಬರ್ 25) ಬೆಂಗಳೂರಿನಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ (HAL)ಗೆ ಭೇಟಿ ನೀಡಿ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.

ವಿವೇಕ ಬಿರಾದಾರ
|

Updated on:Nov 25, 2023 | 1:45 PM

Narendra Modi Bengaluru Visit: PM Modi visits Bengaluru HAL and fly in tejas fighter craft

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ (ನವೆಂಬರ್ 25) ಬೆಂಗಳೂರಿನಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ (HAL)ಗೆ ಭೇಟಿ ನೀಡಿ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.

1 / 9
Narendra Modi Bengaluru Visit: PM Modi visits Bengaluru HAL and fly in tejas fighter craft

ಈ ಸಂದರ್ಭದಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಪ್ರಧಾನಿ ಮೋದಿಯವರು ಸುಮಾರು 45 ನಿಮಿಷಗಳ ಕಾಲ ಹಾರಾಟ ನಡೆಸಿದರು.

2 / 9
Narendra Modi Bengaluru Visit: PM Modi visits Bengaluru HAL and fly in tejas fighter craft

ಪ್ರಧಾನಿ ಮೋದಿಯವರು ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಚಿತ್ರಗಳನ್ನು ಎಕ್ಸ್ (ಟ್ವಿಟರ್​)ನಲ್ಲಿ ಹಂಚಿಕೊಂಡಿದ್ದಾರೆ. "ತೇಜಸ್‌ನಲ್ಲಿನ ವಿಹಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ನಮ್ಮ ದೇಶದ ಸ್ಥಳೀಯ ಉತ್ಪಾದನಾ ಸಾಮರ್ಥ್ಯಗಳಲ್ಲಿನ ನನ್ನ ವಿಶ್ವಾಸ ದ್ವೀಗುಣಗೊಂಡಿದೆ. ನಮ್ಮ ರಾಷ್ಟ್ರದ ಸಾಮರ್ಥ್ಯದ ಬಗ್ಗೆ ನನಗೆ ಹೆಮ್ಮೆ ಅನಿಸುತ್ತಿದೆ" ಎಂದು ಪೋಸ್ಟ್ ಮಾಡಿದ್ದಾರೆ.

3 / 9
Narendra Modi Bengaluru Visit: PM Modi visits Bengaluru HAL and fly in tejas fighter craft

ಭಾರತೀಯ ವಾಯುಸೇನೆ, ಡಿಆರ್‌ಡಿಒ ಮತ್ತು ಎಚ್‌ಎಎಲ್‌ನ್ನು ಶ್ಲಾಘಿಸಿದ ಅವರು, ಸ್ವಾವಲಂಬನೆ ಕ್ಷೇತ್ರದಲ್ಲಿ ಭಾರತವು ಜಗತ್ತಿನ ಯಾವ ದೇಶಕ್ಕಿಂತ ಕಡಿಮೆಯಿಲ್ಲ ಎಂದು ಹೇಳಿದರು.

4 / 9
Narendra Modi Bengaluru Visit: PM Modi visits Bengaluru HAL and fly in tejas fighter craft

"ನಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವದಿಂದಾಗಿ ನಾವು ಸ್ವಾವಲಂಬನೆಯ ಕ್ಷೇತ್ರದಲ್ಲಿ ವಿಶ್ವದ ಯಾವ ದೇಶಕ್ಕಿಂತ ಕಡಿಮೆಯಿಲ್ಲ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ. ಭಾರತೀಯ ವಾಯುಪಡೆ, DRDO ಮತ್ತು HAL ಗೆ ಹೃತ್ಪೂರ್ವಕ ಅಭಿನಂದನೆ ತಿಳಿಸಿದರು.

5 / 9
Narendra Modi Bengaluru Visit: PM Modi visits Bengaluru HAL and fly in tejas fighter craft

ಹಲವಾರು ರಾಷ್ಟ್ರಗಳು ತೇಜಸ್ ಖರೀದಿಸಲು ತೀವ್ರ ಆಸಕ್ತಿ ವ್ಯಕ್ತಪಡಿಸಿವೆ. ಇದೇ ವರ್ಷ ಪ್ರಧಾನಿ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ GE ಏರೋಸ್ಪೇಸ್ ಮತ್ತು Mk-II ತೇಜಸ್ ಎಂಜಿನ್​ ಉತ್ಪಾದನೆಗೆ ಒಪ್ಪಂದ ಮಾಡಿಕೊಂಡಿದ್ದರು. ಇದನ್ನು ಭಾರತದಲ್ಲಿ ಉತ್ಪಾದಿಸಲು ಹಸಿರು ನಿಶಾನೆ ಸಿಕ್ಕಿದೆ.

6 / 9
Narendra Modi Bengaluru Visit: PM Modi visits Bengaluru HAL and fly in tejas fighter craft

ರಕ್ಷಣಾ ವಲಯದಲ್ಲಿ ಸ್ವದೇಶಿ ಉತ್ಪನ್ನಗಳಿಗೆ ಪ್ರಧಾನಿ ಮೋದಿ ಒತ್ತು ನೀಡುತ್ತಿದ್ದಾರೆ. ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಹೆಚ್​ಎಎಲ್ ಟ್ವೀನ್​ ಸೀಟರ್​ LCA ತೇಜಸ್​ಅನ್ನು ಭಾರತೀಯ ವಾಯುಪಡೆಗೆ ಹಸ್ತಾಂತರಿಸಿತು.

7 / 9
Narendra Modi Bengaluru Visit: PM Modi visits Bengaluru HAL and fly in tejas fighter craft

18 ಟ್ವೀನ್​ ಸೀಟರ್​ LCA ವಿಮಾನಗಳನ್ನು ಖರೀದಿಸಲು ಭಾರತೀಯ ವಾಯುಪಡೆ ಹೆಚ್​ಎಎಲ್​​ ಜೊತೆ ಒಪ್ಪಂದ ಮಾಡಿಕೊಂಡಿದೆ. ಹೆಚ್​ಎಎಲ್​​ ಮುಂದಿನ ವರ್ಷ ಎಂಟು ಯುದ್ಧ ವಿಮಾನಗಳನ್ನು ವಾಯುಪಡೆಗೆ ನೀಡಲಿದೆ. ಮತ್ತು ಉಳಿದವುಗಳನ್ನು 2026-27ರ ವೇಳೆಗೆ ನೀಡಲಿದೆ.

8 / 9
Narendra Modi Bengaluru Visit: PM Modi visits Bengaluru HAL and fly in tejas fighter craft

ವಿಧಾನಸಭೆ ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ಕರ್ನಾಟಕ್ಕೆ ಆಗಮಿಸಿದರು.

9 / 9

Published On - 1:41 pm, Sat, 25 November 23

Follow us
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ