AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2026: 9 ಬಜೆಟ್​ 9 ಬಣ್ಣದ ಸೀರೆಗಳು; ನಿರ್ಮಲಾ ಸೀತಾರಾಮನ್ ‘ಬಜೆಟ್‌ ಸೀರೆ’ಯ ವೈಶಿಷ್ಟ್ಯ ಇಲ್ಲಿದೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 8 ಬಜೆಟ್‌ಗಳನ್ನು ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ. ಈ ಬಾರಿಯದ್ದು (2026-27) 9ನೇ ಬಜೆಟ್. ಪ್ರತಿ ಬಜೆಟ್ ಅಧಿವೇಶನದಲ್ಲಿ ಅವರು ಉಡುವ ಸೀರೆಗಳು ವಿಶೇಷ ಗಮನ ಸೆಳೆಯುತ್ತವೆ. ಭಾರತದ ವೈವಿಧ್ಯಮಯ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಈ ಸೀರೆಗಳು, ರಾಜ್ಯಗಳ ಶ್ರೀಮಂತ ಜವಳಿ ಕಲೆ ಮತ್ತು ಕರಕುಶಲತೆಯನ್ನು ಅನಾವರಣಗೊಳಿಸುತ್ತವೆ. ಮಂಗಳಗಿರಿ, ಪೋಚಂಪಳ್ಳಿ, ಇಳಕಲ್‌ನಂತಹ ವಿಶಿಷ್ಟ ಸೀರೆಗಳ ಮೂಲಕ ಅವರು ದೇಶದ ಸಂಸ್ಕೃತಿಯನ್ನು ಹೆಮ್ಮೆಯಿಂದ ಪ್ರದರ್ಶಿಸಿದ್ದಾರೆ.

ಅಕ್ಷತಾ ವರ್ಕಾಡಿ
| Edited By: |

Updated on:Feb 01, 2026 | 2:24 PM

Share
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದೀಗಾ ಸತತ 9 ಬಜೆಟ್‌ಗಳನ್ನು ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಸತತ ಒಂಬತ್ತು ಬಾರಿ ಬಜೆಟ್ ಮಂಡನೆ ಮಾಡಿದ ಮೊಟ್ಟ ಮೊದಲ ಭಾರತೀಯ ವ್ಯಕ್ತಿ ಎಂಬ ಹೆಗ್ಗಳಿಗೆ ಅವರಿಗಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದೀಗಾ ಸತತ 9 ಬಜೆಟ್‌ಗಳನ್ನು ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಸತತ ಒಂಬತ್ತು ಬಾರಿ ಬಜೆಟ್ ಮಂಡನೆ ಮಾಡಿದ ಮೊತ್ತಮೊದಲ ಭಾರತೀಯ ವ್ಯಕ್ತಿ ಎಂಬ ಹೆಗ್ಗಳಿಗೆ ಅವರಿಗಿದೆ.

1 / 11
ಪ್ರತೀ ವರ್ಷ ಬಜೆಟ್ ಮಂಡನೆಯ ವೇಳೆ ಇವರು ಉಡುವ ಸೀರೆ ಸಾಕಷ್ಟು ಗಮನಸೆಳೆಯುತ್ತದೆ. ಪ್ರತೀ ಸೀರೆಯೂ ಕೂಡ ಒಂದೊಂದು ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ. ಆದ್ದರಿಂದ ಬಜೆಟ್ ಸಮಯದಲ್ಲಿ ನಿರ್ಮಲಾ ಸೀತಾರಾಮನ್ ಇಲ್ಲಿಯವರೆಗೆ ಉಟ್ಟ ಸೀರೆಗಳ ವಿಶೇಷತೆಯನ್ನು ಇಲ್ಲಿ ತಿಳಿದುಕೊಳ್ಳಿ.

ಪ್ರತೀ ವರ್ಷ ಬಜೆಟ್ ಮಂಡನೆಯ ವೇಳೆ ಇವರು ಉಡುವ ಸೀರೆ ಸಾಕಷ್ಟು ಗಮನಸೆಳೆಯುತ್ತದೆ. ಪ್ರತೀ ಸೀರೆಯೂ ಕೂಡ ಒಂದೊಂದು ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ. ಆದ್ದರಿಂದ ಬಜೆಟ್ ಸಮಯದಲ್ಲಿ ನಿರ್ಮಲಾ ಸೀತಾರಾಮನ್ ಇಲ್ಲಿಯವರೆಗೆ ಉಟ್ಟ ಸೀರೆಗಳ ವಿಶೇಷತೆಯನ್ನು ಇಲ್ಲಿ ತಿಳಿದುಕೊಳ್ಳಿ.

2 / 11
2026-27ರ ಬಜೆಟ್: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಂದು ಬಣ್ಣದ ಅಂಚು ಹೊಂದಿರುವ ಕೆನ್ನೇರಳೆ ಬಣ್ಣ ಸೀರೆ ಉಟ್ಟು ಸಂಸತ್ ಭವನದತ್ತ ತೆರಳಿದ್ದಾರೆ. ಈ ಬಾರಿಯೂ ಭಾರತದ ಸಾಂಪ್ರದಾಯಿಕ ಕೈಮಗ್ಗ ನೇಕಾರಿಕೆಯನ್ನು ಪ್ರೋತ್ಸಾಹಿಸಲು ಈ ಸೀರೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.

2026-27ರ ಬಜೆಟ್: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಂದು ಬಣ್ಣದ ಅಂಚು ಹೊಂದಿರುವ ಕೆನ್ನೇರಳೆ ಬಣ್ಣ ಸೀರೆ ಉಟ್ಟು ಸಂಸತ್ ಭವನದತ್ತ ತೆರಳಿದ್ದಾರೆ. ಈ ಬಾರಿಯೂ ಭಾರತದ ಸಾಂಪ್ರದಾಯಿಕ ಕೈಮಗ್ಗ ನೇಕಾರಿಕೆಯನ್ನು ಪ್ರೋತ್ಸಾಹಿಸಲು ಈ ಸೀರೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.

3 / 11
2019-20ರ ಬಜೆಟ್: ಮೋದಿ 3.0 ಸರ್ಕಾರದಲ್ಲಿ ಹಣಕಾಸು ಮಂತ್ರಿ ಹೊಣೆ ಪಡೆದ ನಿರ್ಮಲಾ ಸೀತಾರಾಮನ್ ಅವರಿಗೆ ಮೊದಲ ಬಜೆಟ್ ಮಂಡನೆ ಇದಾಗಿದೆ. ತನ್ನ ಮೊದಲ ಬಜೆಟ್‌ಗೆ ಸ್ಥಿರತೆ ಮತ್ತು ಗಂಭೀರತೆಯ ಸಂಕೇತವಾಗಿರುವ ಗುಲಾಬಿ ಬಣ್ಣದ ಸೀರೆ ಉಟ್ಟಿದ್ದರು. ಇದು ಆಂಧ್ರಪ್ರದೇಶದ ಮಂಗಳಗಿರಿ ಕಾಟನ್ ಮತ್ತು ರೇಷ್ಮೆ ಮಿಶ್ರಿತ ಗೋಲ್ಡನ್​ ಕಲರ್​ ಬಾರ್ಡರ್​​ ಅನ್ನು ಹೊಂದಿದೆ.

2019-20ರ ಬಜೆಟ್: ಮೋದಿ 3.0 ಸರ್ಕಾರದಲ್ಲಿ ಹಣಕಾಸು ಮಂತ್ರಿ ಹೊಣೆ ಪಡೆದ ನಿರ್ಮಲಾ ಸೀತಾರಾಮನ್ ಅವರಿಗೆ ಮೊದಲ ಬಜೆಟ್ ಮಂಡನೆ ಇದಾಗಿದೆ. ತನ್ನ ಮೊದಲ ಬಜೆಟ್‌ಗೆ ಸ್ಥಿರತೆ ಮತ್ತು ಗಂಭೀರತೆಯ ಸಂಕೇತವಾಗಿರುವ ಗುಲಾಬಿ ಬಣ್ಣದ ಸೀರೆ ಉಟ್ಟಿದ್ದರು. ಇದು ಆಂಧ್ರಪ್ರದೇಶದ ಮಂಗಳಗಿರಿ ಕಾಟನ್ ಮತ್ತು ರೇಷ್ಮೆ ಮಿಶ್ರಿತ ಗೋಲ್ಡನ್​ ಕಲರ್​ ಬಾರ್ಡರ್​​ ಅನ್ನು ಹೊಂದಿದೆ.

4 / 11
2020-21ರ ತಮ್ಮ ಎರಡನೇ ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಹಳದಿ ಮತ್ತು ನೀಲಿ ಬಣ್ಣದ ಅಂಚಿನ ರೇಷ್ಮೆ ಸೀರೆಯನ್ನುಂಟು ಗಮನ ಸೆಳೆದಿದ್ದಾರೆ. ಈ ಸಮಯದಲ್ಲಿ ಹೆಲ್ತ್​ಕೇರ್, ಸ್ವಚ್ಛ ಭಾರತ್ ಮಿಷನ್, ಮನೆಗಳಿಗೆ ಕೊಳವೆ ನೀರು ಇತ್ಯಾದಿ ಯೋಜನೆಗಳಿಗೆ ಹೇರಳ ಅನುದಾನ ಬಿಡುಗಡೆ ಮಾಡಿದರು.

2020-21ರ ತಮ್ಮ ಎರಡನೇ ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಹಳದಿ ಮತ್ತು ನೀಲಿ ಬಣ್ಣದ ಅಂಚಿನ ರೇಷ್ಮೆ ಸೀರೆಯನ್ನುಂಟು ಗಮನ ಸೆಳೆದಿದ್ದಾರೆ. ಈ ಸಮಯದಲ್ಲಿ ಹೆಲ್ತ್​ಕೇರ್, ಸ್ವಚ್ಛ ಭಾರತ್ ಮಿಷನ್, ಮನೆಗಳಿಗೆ ಕೊಳವೆ ನೀರು ಇತ್ಯಾದಿ ಯೋಜನೆಗಳಿಗೆ ಹೇರಳ ಅನುದಾನ ಬಿಡುಗಡೆ ಮಾಡಿದರು.

5 / 11
2021-22ರ ಬಜೆಟ್: ಕೋವಿಡ್​ನಿಂದ ಜರ್ಝರಿತಗೊಳ್ಳುತ್ತಿದ್ದ ಸಂದರ್ಭದಲ್ಲಿ ಮಂಡನೆಯಾದ ಮೂರನೇ ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಹೈದರಾಬಾದ್​  ಪೋಚಂಪಳ್ಳಿ ಗ್ರಾಮದ ಪೋಚಂಪಳ್ಳಿ ರೇಷ್ಮೆ ಸೀರೆಯಲ್ಲಿ ಕಂಗೊಳಿಸಿದ್ದರು. ಕೆಂಪು ಮತ್ತು ಬಿಳಿ ಬಣ್ಣದ ಈ ಸೀರೆ ಇಕ್ಕತ್ ಶೈಲಿಯನ್ನು ಹೊಂದಿತ್ತು.

2021-22ರ ಬಜೆಟ್: ಕೋವಿಡ್​ನಿಂದ ಜರ್ಝರಿತಗೊಳ್ಳುತ್ತಿದ್ದ ಸಂದರ್ಭದಲ್ಲಿ ಮಂಡನೆಯಾದ ಮೂರನೇ ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಹೈದರಾಬಾದ್​ ಪೋಚಂಪಳ್ಳಿ ಗ್ರಾಮದ ಪೋಚಂಪಳ್ಳಿ ರೇಷ್ಮೆ ಸೀರೆಯಲ್ಲಿ ಕಂಗೊಳಿಸಿದ್ದರು. ಕೆಂಪು ಮತ್ತು ಬಿಳಿ ಬಣ್ಣದ ಈ ಸೀರೆ ಇಕ್ಕತ್ ಶೈಲಿಯನ್ನು ಹೊಂದಿತ್ತು.

6 / 11
2022-23ರ ಬಜೆಟ್: ಕೋವಿಡ್​ನಿಂದ ಅಧಃಪತನಕ್ಕೆ ಇಳಿದಿದ್ದ ಆರ್ಥಿಕತೆಗೆ ಚೇತರಿಕೆ ತುಂಬ ಪ್ರಯತ್ನ ಈ ಬಜೆಟ್​ನಲ್ಲೂ ಮುಂದುವರಿಯಿತು. ಈ ಬಜೆಟ್​ ಮಂಡನೆ ವೇಳೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಕೈಮಗ್ಗದಲ್ಲಿ ನೇಯ್ದ ಬೊಮ್ಮೆ ಸೀರೆಯನ್ನು ನಿರ್ಮಲಾ ಸೀತಾರಾಮನ್ ತೊಟ್ಟಿದ್ದರು.

2022-23ರ ಬಜೆಟ್: ಕೋವಿಡ್​ನಿಂದ ಅಧಃಪತನಕ್ಕೆ ಇಳಿದಿದ್ದ ಆರ್ಥಿಕತೆಗೆ ಚೇತರಿಕೆ ತುಂಬ ಪ್ರಯತ್ನ ಈ ಬಜೆಟ್​ನಲ್ಲೂ ಮುಂದುವರಿಯಿತು. ಈ ಬಜೆಟ್​ ಮಂಡನೆ ವೇಳೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಕೈಮಗ್ಗದಲ್ಲಿ ನೇಯ್ದ ಬೊಮ್ಮೆ ಸೀರೆಯನ್ನು ನಿರ್ಮಲಾ ಸೀತಾರಾಮನ್ ತೊಟ್ಟಿದ್ದರು.

7 / 11
2023-24ರ ಬಜೆಟ್: ಕರ್ನಾಟಕದಿಂದ ರಾಜ್ಯಸಭಾ ಸಂಸದೆಯಾಗಿ ಹಣಕಾಸು ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್ ಅವರು ಈ ಬಾರಿಯ ಬಜೆಟ್​ನಲ್ಲಿ ಕರ್ನಾಟಕದ ಖ್ಯಾತ ಇಳಕಲ್ ಸೀರೆ ತೊಟ್ಟು ಬಜೆಟ್ ಮಂಡಿಸಿದ್ದು ವಿಶೇಷ.

2023-24ರ ಬಜೆಟ್: ಕರ್ನಾಟಕದಿಂದ ರಾಜ್ಯಸಭಾ ಸಂಸದೆಯಾಗಿ ಹಣಕಾಸು ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್ ಅವರು ಈ ಬಾರಿಯ ಬಜೆಟ್​ನಲ್ಲಿ ಕರ್ನಾಟಕದ ಖ್ಯಾತ ಇಳಕಲ್ ಸೀರೆ ತೊಟ್ಟು ಬಜೆಟ್ ಮಂಡಿಸಿದ್ದು ವಿಶೇಷ.

8 / 11
2024-25ರ ಮಧ್ಯಂತರ ಬಜೆಟ್: ಮೋದಿ 2.0 ಸರ್ಕಾರದ ಕೊನೆಯ ಬಜೆಟ್. ಚುನಾವಣೆ ಇದ್ದುದ್ದರಿಂದ 2024ರ ಫೆಬ್ರುವರಿ 1ರಂದು ಮಧ್ಯಂತರ ಬಜೆಟ್ ಮಂಡಿಸಲಾಯಿತು. ನಿರ್ಮಲಾ ಸೀತಾರಾಮನ್ ಅವರ ಮೊದಲ ಮಧ್ಯಂತರ ಬಜೆಟ್ ಕೂಡ ಇದು. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಕಾಂತ ಹೊಲಿಗೆಯಿಂದ ವಿನ್ಯಾಸಗೊಳಿಸಿದ ನೀಲಿ ಬಣ್ಣದ ಟಸ್ಸರ್ ರೇಷ್ಮೆ ಸೀರೆಯಲ್ಲಿ ಮಿಂಚಿದ್ದ ನಿರ್ಮಲಾ ಸೀತಾರಾಮನ್.

2024-25ರ ಮಧ್ಯಂತರ ಬಜೆಟ್: ಮೋದಿ 2.0 ಸರ್ಕಾರದ ಕೊನೆಯ ಬಜೆಟ್. ಚುನಾವಣೆ ಇದ್ದುದ್ದರಿಂದ 2024ರ ಫೆಬ್ರುವರಿ 1ರಂದು ಮಧ್ಯಂತರ ಬಜೆಟ್ ಮಂಡಿಸಲಾಯಿತು. ನಿರ್ಮಲಾ ಸೀತಾರಾಮನ್ ಅವರ ಮೊದಲ ಮಧ್ಯಂತರ ಬಜೆಟ್ ಕೂಡ ಇದು. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಕಾಂತ ಹೊಲಿಗೆಯಿಂದ ವಿನ್ಯಾಸಗೊಳಿಸಿದ ನೀಲಿ ಬಣ್ಣದ ಟಸ್ಸರ್ ರೇಷ್ಮೆ ಸೀರೆಯಲ್ಲಿ ಮಿಂಚಿದ್ದ ನಿರ್ಮಲಾ ಸೀತಾರಾಮನ್.

9 / 11
2024-25ರ ಬಜೆಟ್: ಮೋದಿ 3.0 ಸರ್ಕಾರದ ಮೊದಲ ಪೂರ್ಣ ಬಜೆಟ್ ಮಂಡನೆ ಮಾಡಿದ ನಿರ್ಮಲಾ ಸೀತಾರಾಮನ್ ಮಜೆಂಟಾ ಬಾರ್ಡರ್ ಹೊಂದಿದ್ದ ಮಂಗಳಗಿರಿ ಕಾಟನ್ ಸೀರೆಯಲ್ಲಿ ಗಮನಸೆಳೆದಿದ್ದರು. ಈ ಸಮಯದಲ್ಲಿ ಅವರು ಮೊಬೈಲ್ ಫೋನ್, ಚಿನ್ನ, ಬೆಳ್ಳಿ ಮೇಲೆ ಆಮದು ಸುಂಕ ಕಡಿಮೆ ಮಾಡಿದ್ದರು.

9. 2024-25ರ ಬಜೆಟ್: ಮೋದಿ 3.0 ಸರ್ಕಾರದ ಮೊದಲ ಪೂರ್ಣ ಬಜೆಟ್ ಮಂಡನೆ ಮಾಡಿದ ನಿರ್ಮಲಾ ಸೀತಾರಾಮನ್ ಮಜೆಂಟಾ ಬಾರ್ಡರ್ ಹೊಂದಿದ್ದ ಮಂಗಳಗಿರಿ ಕಾಟನ್ ಸೀರೆಯಲ್ಲಿ ಗಮನಸೆಳೆದಿದ್ದರು. ಈ ಸಮಯದಲ್ಲಿ ಅವರು ಮೊಬೈಲ್ ಫೋನ್, ಚಿನ್ನ, ಬೆಳ್ಳಿ ಮೇಲೆ ಆಮದು ಸುಂಕ ಕಡಿಮೆ ಮಾಡಿದ್ದರು.

10 / 11
2025-26ರ ಬಜೆಟ್: ನಿರ್ಮಲಾ ಸೀತಾರಾಮನ್ ಅವರಿಗೆ ಇದು 8ನೇ ಬಜೆಟ್. ಈ ಸಮಯದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಬಿಹಾರದ ಖ್ಯಾತ ಮಿಥಿಲಾ ಕಲಾವಿದೆ ದುಲಾರಿ ದೇವಿ ಅವರಿಂದ ಕೊಡುಗೆಯಾಗಿ ಸಿಕ್ಕಿದ್ದ ಸೀರೆಯನ್ನುಟ್ಟಿದ್ದರು. ಮಿಥಿಲಾ ಆರ್ಟ್ ಇನ್‌ಸ್ಟಿಟ್ಯೂಟ್‌ನಲ್ಲಿ ಕ್ರೆಡಿಟ್ ಔಟ್‌ರೀಚ್ ಕಾರ್ಯಕ್ರಮಕ್ಕಾಗಿ ಮಧುಬನಿಗೆ ಭೇಟಿ ನೀಡಿದಾಗ ಸಿಕ್ಕಿದ್ದ ಸೀರೆಯಿದು.

2025-26ರ ಬಜೆಟ್: ನಿರ್ಮಲಾ ಸೀತಾರಾಮನ್ ಅವರಿಗೆ ಇದು 8ನೇ ಬಜೆಟ್. ಈ ಸಮಯದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಬಿಹಾರದ ಖ್ಯಾತ ಮಿಥಿಲಾ ಕಲಾವಿದೆ ದುಲಾರಿ ದೇವಿ ಅವರಿಂದ ಕೊಡುಗೆಯಾಗಿ ಸಿಕ್ಕಿದ್ದ ಸೀರೆಯನ್ನುಟ್ಟಿದ್ದರು. ಮಿಥಿಲಾ ಆರ್ಟ್ ಇನ್‌ಸ್ಟಿಟ್ಯೂಟ್‌ನಲ್ಲಿ ಕ್ರೆಡಿಟ್ ಔಟ್‌ರೀಚ್ ಕಾರ್ಯಕ್ರಮಕ್ಕಾಗಿ ಮಧುಬನಿಗೆ ಭೇಟಿ ನೀಡಿದಾಗ ಸಿಕ್ಕಿದ್ದ ಸೀರೆಯಿದು.

11 / 11

Published On - 10:07 am, Sun, 1 February 26

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ