- Kannada News Photo gallery Nishvika Naidu says siddaramaiah will win Varuna Constituency against Somanna in Karnataka Assembly Poll
Actress Nishvika Naidu: ಅಪ್ಪಾಜಿ ಗೆಲ್ಲೋದು ಪಕ್ಕಾ; ಸಿದ್ದರಾಮಯ್ಯ ಬಗ್ಗೆ ನಟಿ ನಿಶ್ವಿಕಾ ನಾಯ್ಡು ಹೇಳಿದ್ದಿಷ್ಟು
ಸಿದ್ದರಾಮಯ್ಯ ಅವರು ನನಗೆ ಅಪ್ಪಾಜಿ ಇದ್ದಂತೆ, ಆದ್ದರಿಂದ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಗೆದ್ದೇ ಗೆಲ್ಲುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿಕೊಂಡಿದ್ದಾರೆ.
Updated on:May 08, 2023 | 5:42 PM

ಮೈಸೂರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ನಟಿ ನಿಶ್ವಿಕಾ ನಾಯ್ಡು ಭೇಟಿ ನೀಡಿ ಆರ್ಶೀವಾದ ಪಡೆದುಕೊಂಡಿರುವ ಪೋಟೋಗಳನ್ನು ಹಂಚಿಕೊಂಡಿದ್ದಾರೆ.

ನಟಿ ನಿಶ್ವಿಕಾ ನಾಯ್ಡು ಚಾಮುಂಡೇಶ್ವರಿ ಅಮ್ಮನವರ ಆರ್ಶೀವಾದ ಪಡೆದುಕೊಂಡಿರುವ ಪೋಟೋಗಳು ಎಲ್ಲೆಡೆ ಹರಿದಾಡುತ್ತಿದೆ.

ಇತ್ತೀಚೆಗಷ್ಟೇ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿದಂತೆ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡರು.

ಸಿದ್ದರಾಮಯ್ಯ ಅವರು ನನಗೆ ಅಪ್ಪಾಜಿ ಇದ್ದಂತೆ, ಆದ್ದರಿಂದ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ ಹೇಳಿಕೊಂಡಿದ್ದರು. ಗೆದ್ದೇ ಗೆಲ್ಲುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿಕೊಂಡಿದ್ದಾರೆ.

ಇದೀಗಾ ಮತದಾನಕ್ಕೆ ಎರಡು ಮೂರು ದಿನ ಬಾಕಿ ಇರುವಾಗ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಮೈಸೂರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋಗಳನ್ನು ಸ್ವತಹ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ನಟಿ. ವರುಣ ಕ್ಷೇತ್ರದ ಜನರೇ, ನಿಮ್ಮ ಪ್ರೀತಿ ಮತ್ತು ದಯೆಗೆ ನಾನು ಆಭಾರಿಯಾಗಿದ್ದೇನೆ ಎಂದು ಪ್ರಚಾರದ ಸಮಯದಲ್ಲಿ ಪೋಸ್ಟ್ ಮಾಡಿದ್ದಾರೆ.
Published On - 5:38 pm, Mon, 8 May 23

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.
Read More




