AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸದಿಂದ ರಸ, ನಿತಿನ್ ಗಡ್ಕರಿ ತಂತ್ರ; 50 ರೂಗೆ ತಗ್ಗಬಲ್ಲುದಾ ಪೆಟ್ರೋಲ್ ಬೆಲೆ?

ನಾಗಪುರ್, ಸೆ. 2: ಕೇಂದ್ರ ಸಚಿವ ನಿತಿನ್ ಗಡ್ಕರಿ ಕಸದಿಂದ ರಸ ತೆಗೆಯುವ ಮಾತುಗಳನ್ನಾಡಿದ್ದಾರೆ. ಕಸ ನಿರುಪಯುಕ್ತ ವಸ್ತುವಲ್ಲ, ಅದೂ ಕೂಡ ಬಹಳ ಮೌಲ್ಯಯುತವಾದುದು. ಅದನ್ನು ಸರಿಯಾಗಿ ಬಳಸಿ ಪೆಟ್ರೋಲಿಯಂ ಆಗಿ ಪರಿವರ್ತಿಸಬಹುದು. ಇದರಿಂದ ಪೆಟ್ರೋಲ್ ಬೆಲೆ 50 ರೂಗೆ ಇಳಿಸಬಹುದು ಎಂದಿದ್ದಾರೆ. ಅಖಿಲ ಭಾರತೀಯ ಸ್ಥಾನಿಕ್ ಸ್ವರಾಜ್ಯ ಸಂಸ್ಥಾ ಸಂಸ್ಥೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 02, 2024 | 1:21 PM

ಕೇಂದ್ರ ಸಚಿವ ನಿತಿನ್ ಗಡ್ಕರಿ ನಾಗಪುರದಲ್ಲಿ ನಿನ್ನೆ (2024ರ ಸೆ. 1) ಅಖಿಲ ಭಾರತೀಯರ ಸ್ಥಾನಿಕ್ ಸ್ವರಾಜ್ಯ ಸಂಸ್ಥಾ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಕಸವನ್ನು ಸದ್ಬಳಕೆ ಮಾಡಿಕೊಳ್ಳುವ ಮಾರ್ಗಗಳ ಬಗ್ಗೆ ಮಾಹಿತಿ ನೀಡಿದರು. ಕಸವನ್ನು ಸುರಕ್ಷಿತವಾಗಿ ವಿಲೇವಾರಿ ಮಾಡಿ ಅದರಿಂದ ವಿವಿಧ ರೀತಿಯಲ್ಲಿ ಲಾಭ ಮಾಡಿಕೊಳ್ಳುವ ಸಾಧ್ಯತೆಗಳ ಬಗ್ಗೆ ಮಾತನಾಡಿದರು. ಕಸ ಎಷ್ಟು ಅಮೂಲ್ಯವೆಂದರೆ ಜನರು ಆ ಕಸ ಗಿಟ್ಟಿಸಿಕೊಳ್ಳಲು ಪೈಪೋಟಿ ಮಾಡಬೇಕಾಗುತ್ತದೆ ಎಂದರು.

ಕೇಂದ್ರ ಸಚಿವ ನಿತಿನ್ ಗಡ್ಕರಿ ನಾಗಪುರದಲ್ಲಿ ನಿನ್ನೆ (2024ರ ಸೆ. 1) ಅಖಿಲ ಭಾರತೀಯರ ಸ್ಥಾನಿಕ್ ಸ್ವರಾಜ್ಯ ಸಂಸ್ಥಾ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಕಸವನ್ನು ಸದ್ಬಳಕೆ ಮಾಡಿಕೊಳ್ಳುವ ಮಾರ್ಗಗಳ ಬಗ್ಗೆ ಮಾಹಿತಿ ನೀಡಿದರು. ಕಸವನ್ನು ಸುರಕ್ಷಿತವಾಗಿ ವಿಲೇವಾರಿ ಮಾಡಿ ಅದರಿಂದ ವಿವಿಧ ರೀತಿಯಲ್ಲಿ ಲಾಭ ಮಾಡಿಕೊಳ್ಳುವ ಸಾಧ್ಯತೆಗಳ ಬಗ್ಗೆ ಮಾತನಾಡಿದರು. ಕಸ ಎಷ್ಟು ಅಮೂಲ್ಯವೆಂದರೆ ಜನರು ಆ ಕಸ ಗಿಟ್ಟಿಸಿಕೊಳ್ಳಲು ಪೈಪೋಟಿ ಮಾಡಬೇಕಾಗುತ್ತದೆ ಎಂದರು.

1 / 5
‘ಉತ್ತರ ಭಾರತದಲ್ಲಿ ಇತ್ತೀಚೆಗೆ ಹೆದ್ದಾರಿಗಳ ನಿರ್ಮಾಣಕ್ಕಾಗಿ 80 ಲಕ್ಷ ಟನ್​ಗಳಷ್ಟು ಕಸವನ್ನು ಬಳಸಿಕೊಳ್ಳಲಾಗಿದೆ. ಈ ಕಸದಿಂದ ರಸ್ತೆ ನಿರ್ಮಾಣಕ್ಕೆ ಸಹಾಯವಾಗಿದೆ. ಜೊತೆಗೆ ಕಸದ ಸಮಸ್ಯೆಯೂ ತಗ್ಗಿಸಲು ಸಾಧ್ಯವಾಗಿದೆ’ ಎಂದು ಸಚಿವ ನಿತಿನ್ ಗಡ್ಕರಿ ಒಂದು ಉದಾಹರಣೆ ಕೊಟ್ಟಿದ್ದಾರೆ.

‘ಉತ್ತರ ಭಾರತದಲ್ಲಿ ಇತ್ತೀಚೆಗೆ ಹೆದ್ದಾರಿಗಳ ನಿರ್ಮಾಣಕ್ಕಾಗಿ 80 ಲಕ್ಷ ಟನ್​ಗಳಷ್ಟು ಕಸವನ್ನು ಬಳಸಿಕೊಳ್ಳಲಾಗಿದೆ. ಈ ಕಸದಿಂದ ರಸ್ತೆ ನಿರ್ಮಾಣಕ್ಕೆ ಸಹಾಯವಾಗಿದೆ. ಜೊತೆಗೆ ಕಸದ ಸಮಸ್ಯೆಯೂ ತಗ್ಗಿಸಲು ಸಾಧ್ಯವಾಗಿದೆ’ ಎಂದು ಸಚಿವ ನಿತಿನ್ ಗಡ್ಕರಿ ಒಂದು ಉದಾಹರಣೆ ಕೊಟ್ಟಿದ್ದಾರೆ.

2 / 5
ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಪೆಟ್ರೋಲ್ ತಯಾರಿಕೆ ಮಾಡಬಹುದು ಎಂದಿದ್ದಾರೆ. ಪ್ಲಾಸ್ಟಿಕ್ ಅನ್ನು ಕಚ್ಛಾ ಪೆಟ್ರೋಲ್ ಆಗಿ ಪರಿವರ್ತಿಸಿ, ಅದನ್ನು ಡೀಸೆಲ್​ನಲ್ಲಿ ಅರ್ಧದಷ್ಟು ಪ್ರಮಾಣದಲ್ಲಿ ಮಿಶ್ರ ಮಾಡಬಹುದು. ಇದರಿಂದ ಡೀಸಲ್ ಬೆಲೆ ಲೀಟರ್​ಗೆ 50 ರೂಗೆ ಇಳಿಯಬಹುದು. ಟ್ರಾಕ್ಟರ್ ಇತ್ಯಾದಿ ವಾಹನಗಳ ಬಳಕೆಗೆ ಇದರಿಂದ ಬಹಳ ಅನುಕೂಲ ಆಗುತ್ತದೆ ಎಂದಿದ್ದಾರೆ ಗಡ್ಕರಿ.

ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಪೆಟ್ರೋಲ್ ತಯಾರಿಕೆ ಮಾಡಬಹುದು ಎಂದಿದ್ದಾರೆ. ಪ್ಲಾಸ್ಟಿಕ್ ಅನ್ನು ಕಚ್ಛಾ ಪೆಟ್ರೋಲ್ ಆಗಿ ಪರಿವರ್ತಿಸಿ, ಅದನ್ನು ಡೀಸೆಲ್​ನಲ್ಲಿ ಅರ್ಧದಷ್ಟು ಪ್ರಮಾಣದಲ್ಲಿ ಮಿಶ್ರ ಮಾಡಬಹುದು. ಇದರಿಂದ ಡೀಸಲ್ ಬೆಲೆ ಲೀಟರ್​ಗೆ 50 ರೂಗೆ ಇಳಿಯಬಹುದು. ಟ್ರಾಕ್ಟರ್ ಇತ್ಯಾದಿ ವಾಹನಗಳ ಬಳಕೆಗೆ ಇದರಿಂದ ಬಹಳ ಅನುಕೂಲ ಆಗುತ್ತದೆ ಎಂದಿದ್ದಾರೆ ಗಡ್ಕರಿ.

3 / 5
ಮಹಾರಾಷ್ಟ್ರದ ನಾಗಪುರದಲ್ಲಿ ಅಲ್ಲಿನ ಪೌರ ಸಂಸ್ಥೆಯು ಚರಂಡಿ ನೀರನ್ನು ಸಂಸ್ಕರಿಸಿ, ಸಮೀಪದ ಕೈಗಾರಿಕೆಗಳಿಗೆ ಸರಬರಾಜು ಮಾಡುವ ಮೂಲಕ ವರ್ಷಕ್ಕೆ 300 ಕೋಟಿ ರೂ ಆದಾಯ ಗಳಿಸುತ್ತಿದೆ ಎನ್ನುವ ಮಾಹಿತಿಯನ್ನು ಕೇಂದ್ರ ಸಚಿವರು ನೀಡಿದರು. ಹಸಿ ಕಸವನ್ನು ಹೇಗೆ ಬಳಸಿಕೊಳ್ಳಬಹುದು ಎನ್ನುವ ವಿವರ ನೀಡಿದ ಅವರು, ಬಯೋ ಡೈಜೆಸ್ಟರ್​ನಲ್ಲಿ ಸಂಸ್ಕರಿಸಿ ಮೀಥೇನ್ ತಯಾರಿಸಿ, ಆ ಮೂಲಕ ಜೈವಿಕ ಇಂಧನ ತಯಾರಿಸಬಹುದು ಎಂದರು.

ಮಹಾರಾಷ್ಟ್ರದ ನಾಗಪುರದಲ್ಲಿ ಅಲ್ಲಿನ ಪೌರ ಸಂಸ್ಥೆಯು ಚರಂಡಿ ನೀರನ್ನು ಸಂಸ್ಕರಿಸಿ, ಸಮೀಪದ ಕೈಗಾರಿಕೆಗಳಿಗೆ ಸರಬರಾಜು ಮಾಡುವ ಮೂಲಕ ವರ್ಷಕ್ಕೆ 300 ಕೋಟಿ ರೂ ಆದಾಯ ಗಳಿಸುತ್ತಿದೆ ಎನ್ನುವ ಮಾಹಿತಿಯನ್ನು ಕೇಂದ್ರ ಸಚಿವರು ನೀಡಿದರು. ಹಸಿ ಕಸವನ್ನು ಹೇಗೆ ಬಳಸಿಕೊಳ್ಳಬಹುದು ಎನ್ನುವ ವಿವರ ನೀಡಿದ ಅವರು, ಬಯೋ ಡೈಜೆಸ್ಟರ್​ನಲ್ಲಿ ಸಂಸ್ಕರಿಸಿ ಮೀಥೇನ್ ತಯಾರಿಸಿ, ಆ ಮೂಲಕ ಜೈವಿಕ ಇಂಧನ ತಯಾರಿಸಬಹುದು ಎಂದರು.

4 / 5
ಸಂಪತ್ತು ಸೃಷ್ಟಿಸಲು ಅಗತ್ಯ ಇರುವ ಸಂಪನ್ಮೂಲಗಳನ್ನು ಕಾಣುವುದರ ದೃಷ್ಟಿಕೋನ ಬದಲಾಗಬೇಕು. ತ್ಯಾಜ್ಯದ ಮೌಲ್ಯ ಅರಿವಾಗಬೇಕು. ಅದೆಷ್ಟು ಮೌಲ್ಯಯುತ ಎಂದರೆ ಅದನ್ನು ಗಳಿಸು ಹಕ್ಕಿಗೆ ಜನರು ತಾ ಮುಂದು, ನೀ ಮುಂದು ಎಂದು ಪೈಪೋಟಿ ಮಾಡಬೇಕು. ಯಾವುದನ್ನು ಸಮಸ್ಯೆ ಎಂದು ಪರಿಗಣಿಲಾಗುತ್ತಿದೆಯೋ ಅದನ್ನೇ ಲಾಭದಾಯಕ ಪರಿಹಾರವನ್ನಾಗಿ ಪರಿವರ್ತಿಸಬಹುದು. ಎಲ್ಲಾ ನಗರಾಡಳಿತ ಸಂಸ್ಥೆಗಳು ಈ ಬಗ್ಗೆ ಮುತುವರ್ಜಿ ತೋರಬೇಕು ಎಂದು ನಿತಿನ್ ಗಡ್ಕರಿ ಕರೆ ನೀಡಿದರು.

ಸಂಪತ್ತು ಸೃಷ್ಟಿಸಲು ಅಗತ್ಯ ಇರುವ ಸಂಪನ್ಮೂಲಗಳನ್ನು ಕಾಣುವುದರ ದೃಷ್ಟಿಕೋನ ಬದಲಾಗಬೇಕು. ತ್ಯಾಜ್ಯದ ಮೌಲ್ಯ ಅರಿವಾಗಬೇಕು. ಅದೆಷ್ಟು ಮೌಲ್ಯಯುತ ಎಂದರೆ ಅದನ್ನು ಗಳಿಸು ಹಕ್ಕಿಗೆ ಜನರು ತಾ ಮುಂದು, ನೀ ಮುಂದು ಎಂದು ಪೈಪೋಟಿ ಮಾಡಬೇಕು. ಯಾವುದನ್ನು ಸಮಸ್ಯೆ ಎಂದು ಪರಿಗಣಿಲಾಗುತ್ತಿದೆಯೋ ಅದನ್ನೇ ಲಾಭದಾಯಕ ಪರಿಹಾರವನ್ನಾಗಿ ಪರಿವರ್ತಿಸಬಹುದು. ಎಲ್ಲಾ ನಗರಾಡಳಿತ ಸಂಸ್ಥೆಗಳು ಈ ಬಗ್ಗೆ ಮುತುವರ್ಜಿ ತೋರಬೇಕು ಎಂದು ನಿತಿನ್ ಗಡ್ಕರಿ ಕರೆ ನೀಡಿದರು.

5 / 5
Follow us
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ