Bakrid 2023: ಕೊರೊನಾ ಮಾಯ, ಈ ಬಾರಿ ಬಕ್ರೀದ್ ಬಲು ಜೋರು, ಮೇಕೆಗಳು ಲಕ್ಷ ಲಕ್ಷಕ್ಕೆ ಮಾರಾಟ, ಈ ಐದಾರು ಜಿಲ್ಲೆಗಳಲ್ಲಿ ಸಂಭ್ರಮವೋ ಸಂಭ್ರಮ!

Edited By: ಸಾಧು ಶ್ರೀನಾಥ್​

Updated on: Jun 26, 2023 | 8:19 AM

ಕೊರೊನಾ ಆತಂಕ ಮಾಯ, ಈ ಬಾರಿ ಬಕ್ರೀದ್ ಆಚರಣೆ ಬಲು ಜೋರು, ಕೆಲವು ಮೇಕೆಗಳು ಲಕ್ಷ ಲಕ್ಷಕ್ಕೆ ಮಾರಾಟ, ಈ ಐದಾರು ಜಿಲ್ಲೆಗಳಲ್ಲಿ ಸಂಭ್ರಮವೋ ಸಂಭ್ರಮ ಮನೆ ಮಾಡಿದೆ.

1 / 9
ತ್ಯಾಗ ಬಲಿದಾನ ಹಾಗೂ ದಾನದ ಸಂಕೇತವೇ ಮುಸ್ಲಿಂ ಬಾಂಧವರು ಆಚರಣೆ ಮಾಡುವ ಬಕ್ರೀದ್. ಇದೇ ಜೂನ್ 29 ರಂದು ಎಲ್ಲೆಡೆ ಬಕ್ರೀದ್ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಣೆ ಮಾಡುತ್ತಾರೆ. ವಿಜಯಪುರ ಜಿಲ್ಲೆಯಲ್ಲಿಯೂ ಬಕ್ರೀದ್ ಹಬ್ಬ ಜೋರಾಗಿ ನಡೆಯುತ್ತದೆ. ಹಬ್ಬದ ಪ್ರಯುಕ್ತ  ಮೇಕೆ ಆಡು ಕುರಿಗಳನ್ನು ಬಲಿ ನೀಡುವುದು ಹಬ್ಬದ ವಾಡಿಕೆ. ಕಾರಣ ಬಕ್ರೀದ್ ಹಬ್ಬದ ಬಲಿಗಾಗಿ ಮೇಕೆ ಆಡುಗಳು ಹಾಗೂ ಕುರಿಗಳಿಗೆ ಭಾರೀ ಬೇಡಿಕೆ ಬಂದಿದ್ದು, ಹೆಚ್ಚಿದ ದರಕ್ಕೆ ಮಾರಾಟವಾಗುತ್ತಿವೆ. ಈ ಕುರಿತಾದ ಸ್ಟೋರಿ ಇಲ್ಲಿದೆ ನೋಡಿ...

ತ್ಯಾಗ ಬಲಿದಾನ ಹಾಗೂ ದಾನದ ಸಂಕೇತವೇ ಮುಸ್ಲಿಂ ಬಾಂಧವರು ಆಚರಣೆ ಮಾಡುವ ಬಕ್ರೀದ್. ಇದೇ ಜೂನ್ 29 ರಂದು ಎಲ್ಲೆಡೆ ಬಕ್ರೀದ್ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಣೆ ಮಾಡುತ್ತಾರೆ. ವಿಜಯಪುರ ಜಿಲ್ಲೆಯಲ್ಲಿಯೂ ಬಕ್ರೀದ್ ಹಬ್ಬ ಜೋರಾಗಿ ನಡೆಯುತ್ತದೆ. ಹಬ್ಬದ ಪ್ರಯುಕ್ತ ಮೇಕೆ ಆಡು ಕುರಿಗಳನ್ನು ಬಲಿ ನೀಡುವುದು ಹಬ್ಬದ ವಾಡಿಕೆ. ಕಾರಣ ಬಕ್ರೀದ್ ಹಬ್ಬದ ಬಲಿಗಾಗಿ ಮೇಕೆ ಆಡುಗಳು ಹಾಗೂ ಕುರಿಗಳಿಗೆ ಭಾರೀ ಬೇಡಿಕೆ ಬಂದಿದ್ದು, ಹೆಚ್ಚಿದ ದರಕ್ಕೆ ಮಾರಾಟವಾಗುತ್ತಿವೆ. ಈ ಕುರಿತಾದ ಸ್ಟೋರಿ ಇಲ್ಲಿದೆ ನೋಡಿ...

2 / 9
ಇದೇ ವಾರಾಂತ್ಯದಲ್ಲಿ ಜೂನ್ 29 ರಂದು (ಗುರುವಾರ) ಬಕ್ರೀದ್ ಹಬ್ಬವಿದೆ... ಹಬ್ಬಕ್ಕಾಗಿ ಮೇಕೆ ಆಡು ಕುರಿಗಳ ಮಾರಾಟ ಜೋರಾಗುತ್ತಿದೆ... ವಿಜಯಪುರ ಜಿಲ್ಲೆಯ ಜಾನುವಾರು ಮಾರುಕಟ್ಟೆಗಳು ಭರ್ಜರಿನ ತುಂಬಿತುಳುಕುತ್ತಿವೆ... ಒಂದೊಂದು ಮೇಕೆ  ಲಕ್ಷ- ಒಂದೂವರೆ ಲಕ್ಷ ರೂಪಾಯಿಗೂ ಮಾರಾಟವಾಗುತ್ತಿದೆ... ಹಣೆ ಮೇಲೆ ಚಂದ್ರ ಹಾಗೂ ನಕ್ಷತ್ರವಿದ್ದ ಮೇಕೆ ದರ ಲಕ್ಷಕ್ಕೂ ಆಧಿಕವಾಗಿದೆ... ಎಲ್ಲೆಡೆ ಬಕ್ರೀದ್ ಹಬ್ಬಕ್ಕೆ ತಯಾರಿ ನಡೆದಿದೆ.

ಇದೇ ವಾರಾಂತ್ಯದಲ್ಲಿ ಜೂನ್ 29 ರಂದು (ಗುರುವಾರ) ಬಕ್ರೀದ್ ಹಬ್ಬವಿದೆ... ಹಬ್ಬಕ್ಕಾಗಿ ಮೇಕೆ ಆಡು ಕುರಿಗಳ ಮಾರಾಟ ಜೋರಾಗುತ್ತಿದೆ... ವಿಜಯಪುರ ಜಿಲ್ಲೆಯ ಜಾನುವಾರು ಮಾರುಕಟ್ಟೆಗಳು ಭರ್ಜರಿನ ತುಂಬಿತುಳುಕುತ್ತಿವೆ... ಒಂದೊಂದು ಮೇಕೆ ಲಕ್ಷ- ಒಂದೂವರೆ ಲಕ್ಷ ರೂಪಾಯಿಗೂ ಮಾರಾಟವಾಗುತ್ತಿದೆ... ಹಣೆ ಮೇಲೆ ಚಂದ್ರ ಹಾಗೂ ನಕ್ಷತ್ರವಿದ್ದ ಮೇಕೆ ದರ ಲಕ್ಷಕ್ಕೂ ಆಧಿಕವಾಗಿದೆ... ಎಲ್ಲೆಡೆ ಬಕ್ರೀದ್ ಹಬ್ಬಕ್ಕೆ ತಯಾರಿ ನಡೆದಿದೆ.

3 / 9
ಹಬ್ಬಕ್ಕೆ ಇನ್ನು ಮೂರೇ ದಿನ ಬಾಕಿಯಿದ್ದು, ಹಬ್ಬದ ಪ್ರಯಕ್ತ ಬಲಿದಾನ ಮಾಡಲು ಮೇಕೆ ಆಡು ಹಾಗೂ ಕುರಿಗಳಿಗೆ ಬೇಡಿಕೆ ಹೆಚ್ಚಿದೆ. ಹಬ್ಬಕ್ಕೆ ಕೆಲ ದಿನಗಳು ಮಾತ್ರ ಬಾಕಿಯಿರೋ ಕಾರಣ ಜಿಲ್ಲೆಯ ಜಾನುವಾರು ಮಾರುಕಟ್ಟೆಗಳಲ್ಲಿ ನಿನ್ನೆ ಭಾನುವಾರ ವ್ಯಾಪಾರ ವಹಿವಾಟು ಜೋರಿದೆ. ಅದರಲ್ಲೂ ಮೇಕೆಗಳು, ಆಡುಗಳು ಹಾಗೂ ಕುರಿಗಳು ಹೆಚ್ಚಿನ ದರಕ್ಕೆ ಮಾರಾಟ ಆಗುತ್ತಿವೆ.

ಹಬ್ಬಕ್ಕೆ ಇನ್ನು ಮೂರೇ ದಿನ ಬಾಕಿಯಿದ್ದು, ಹಬ್ಬದ ಪ್ರಯಕ್ತ ಬಲಿದಾನ ಮಾಡಲು ಮೇಕೆ ಆಡು ಹಾಗೂ ಕುರಿಗಳಿಗೆ ಬೇಡಿಕೆ ಹೆಚ್ಚಿದೆ. ಹಬ್ಬಕ್ಕೆ ಕೆಲ ದಿನಗಳು ಮಾತ್ರ ಬಾಕಿಯಿರೋ ಕಾರಣ ಜಿಲ್ಲೆಯ ಜಾನುವಾರು ಮಾರುಕಟ್ಟೆಗಳಲ್ಲಿ ನಿನ್ನೆ ಭಾನುವಾರ ವ್ಯಾಪಾರ ವಹಿವಾಟು ಜೋರಿದೆ. ಅದರಲ್ಲೂ ಮೇಕೆಗಳು, ಆಡುಗಳು ಹಾಗೂ ಕುರಿಗಳು ಹೆಚ್ಚಿನ ದರಕ್ಕೆ ಮಾರಾಟ ಆಗುತ್ತಿವೆ.

4 / 9
ವಿಜಯಪುರ ಜಿಲ್ಲೆಯಷ್ಟೇಯಲ್ಲಾ ನೆರೆಯ ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಬೆಳಗಾವಿ, ಮಹಾರಾಷ್ಟ್ರದ ಸೊಲ್ಲಾಪುರ ಸಾಂಗ್ಲಿ ಸೇರಿದಂತೆ ವಿವಿಧ ಭಾಗಗಳಿಂದ ಮೇಕೆ ಆಡು ಕುರಿಗಳನ್ನು ಮಾರಾಟ ಮಾಡಲು ಸಾಕಾಣಿಕೆದಾರರು ಆಗಮಿಸಿದ್ಧಾರೆ. ಉತ್ತಮ ದರಕ್ಕೆ ತಮ್ಮ ಮೇಕೆಗಳು ಮಾರಾಟ ಆಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ನಾಮದೇವ ರಾಠೋಡ್, ಧೂಳಖೇಡ ಗ್ರಾಮಸ್ಥ ಸಂತಸ ವ್ಯಕ್ತಪಡಿಸಿದ್ದಾರೆ.

ವಿಜಯಪುರ ಜಿಲ್ಲೆಯಷ್ಟೇಯಲ್ಲಾ ನೆರೆಯ ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಬೆಳಗಾವಿ, ಮಹಾರಾಷ್ಟ್ರದ ಸೊಲ್ಲಾಪುರ ಸಾಂಗ್ಲಿ ಸೇರಿದಂತೆ ವಿವಿಧ ಭಾಗಗಳಿಂದ ಮೇಕೆ ಆಡು ಕುರಿಗಳನ್ನು ಮಾರಾಟ ಮಾಡಲು ಸಾಕಾಣಿಕೆದಾರರು ಆಗಮಿಸಿದ್ಧಾರೆ. ಉತ್ತಮ ದರಕ್ಕೆ ತಮ್ಮ ಮೇಕೆಗಳು ಮಾರಾಟ ಆಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ನಾಮದೇವ ರಾಠೋಡ್, ಧೂಳಖೇಡ ಗ್ರಾಮಸ್ಥ ಸಂತಸ ವ್ಯಕ್ತಪಡಿಸಿದ್ದಾರೆ.

5 / 9
ಬಕ್ರೀದ್ ಹಬ್ಬ ಬಂದರೆ ಸಾಕು ಮೇಕೆ ಆಡುಗಳು ಹಾಗೂ ಕುರಿ ಸಾಕಾಣಿಕೆದಾರರಿಗೆ ಸುಗ್ಗಿಯ ಕಾಲ. ಬಕ್ರೀದ್ ಹಬ್ಬದಲ್ಲಿ ಮಾರಾಟ ಮಾಡಲೆಂದೇ ಕೆಲವರು ಮೇಕೆ ಆಡುಗಳನ್ನು ಸಾಕಾಣಿಕೆ ಮಾಡುತ್ತಾರೆ. ಇವರೆಲ್ಲಾ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿನ ಜಾರುವಾರು ಮಾರುಕಟ್ಟೆಯಲ್ಲಿ ಸಾಕು ಪ್ರಾಣಿಗಳನ್ನು  ಮಾರಾಟ ಮಾಡಲು ತರುತ್ತಾರೆ.

ಬಕ್ರೀದ್ ಹಬ್ಬ ಬಂದರೆ ಸಾಕು ಮೇಕೆ ಆಡುಗಳು ಹಾಗೂ ಕುರಿ ಸಾಕಾಣಿಕೆದಾರರಿಗೆ ಸುಗ್ಗಿಯ ಕಾಲ. ಬಕ್ರೀದ್ ಹಬ್ಬದಲ್ಲಿ ಮಾರಾಟ ಮಾಡಲೆಂದೇ ಕೆಲವರು ಮೇಕೆ ಆಡುಗಳನ್ನು ಸಾಕಾಣಿಕೆ ಮಾಡುತ್ತಾರೆ. ಇವರೆಲ್ಲಾ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿನ ಜಾರುವಾರು ಮಾರುಕಟ್ಟೆಯಲ್ಲಿ ಸಾಕು ಪ್ರಾಣಿಗಳನ್ನು ಮಾರಾಟ ಮಾಡಲು ತರುತ್ತಾರೆ.

6 / 9
ನಿನ್ನೆ ಭಾನುವಾರ ನಡೆದ ಮಾರುಕಟ್ಟೆಯಲ್ಲಿ ಒಂದು ಮೇಕೆ ಆಡು ಹಾಗೂ ಕುರಿಗೆ ಸರಾಸರಿ 30 ರಿಂದ 35 ಸಾವಿರ ರೂಪಾಯಿಗೆ ದರ ನಿಗದಿಯಾಗಿತ್ತು. ಕನಿಷ್ಟ 30 ಸಾವಿರದಿಂದ ಹಿಡಿದು 1.50 ಲಕ್ಷದವರೆಗೂ ಮೇಕೆ ಆಡುಗಳು ಮಾರಾಟವಾದವು. ಇನ್ನು ಮೇಕೆಯ ತಲೆ ಮೇಲೆ ಚಂದ್ರಾಕೃತಿ ನಕ್ಷತ್ರದ ಆಕೃತಿ ರೀತಿಯ ಗುರುತು ಇದ್ದರೆ ಅದಕ್ಕೆ ಹೆಚ್ಚಿನ ಬೇಡಿಕೆ ಹಾಗೂ ಬೆಲೆ ನಿಗದಿಯಾಗಿತ್ತು.

ನಿನ್ನೆ ಭಾನುವಾರ ನಡೆದ ಮಾರುಕಟ್ಟೆಯಲ್ಲಿ ಒಂದು ಮೇಕೆ ಆಡು ಹಾಗೂ ಕುರಿಗೆ ಸರಾಸರಿ 30 ರಿಂದ 35 ಸಾವಿರ ರೂಪಾಯಿಗೆ ದರ ನಿಗದಿಯಾಗಿತ್ತು. ಕನಿಷ್ಟ 30 ಸಾವಿರದಿಂದ ಹಿಡಿದು 1.50 ಲಕ್ಷದವರೆಗೂ ಮೇಕೆ ಆಡುಗಳು ಮಾರಾಟವಾದವು. ಇನ್ನು ಮೇಕೆಯ ತಲೆ ಮೇಲೆ ಚಂದ್ರಾಕೃತಿ ನಕ್ಷತ್ರದ ಆಕೃತಿ ರೀತಿಯ ಗುರುತು ಇದ್ದರೆ ಅದಕ್ಕೆ ಹೆಚ್ಚಿನ ಬೇಡಿಕೆ ಹಾಗೂ ಬೆಲೆ ನಿಗದಿಯಾಗಿತ್ತು.

7 / 9
ಇಂಥ ಮೇಕೆಗಳು 2 ಲಕ್ಷ ರೂಪಾಯಿವರೆಗೂ ಮಾರಾಟವಾದವು. ಕಳೆದ ಬಾರಿಗಿಂತ ಈ ವರ್ಷ ಮೇಕೆ ಆಡು ಕುರಿಗಳ ದರ ಏರಿಕೆಯಾಗಿದೆ. ಹೆಚ್ಚು ಜನರು ಖರೀದಿಗೆ ಬಂದಿದ್ದಾರೆ. ಕೊರೊನಾ ಕಾರಣದಿಂದ ಹಿಂದೆ ಎರಡು ಮೂರು ವರ್ಷ ಹಬ್ಬಗಳು ಸರಿಯಾಗಿ ಮಾಡಿರಲಿಲ್ಲ.

ಇಂಥ ಮೇಕೆಗಳು 2 ಲಕ್ಷ ರೂಪಾಯಿವರೆಗೂ ಮಾರಾಟವಾದವು. ಕಳೆದ ಬಾರಿಗಿಂತ ಈ ವರ್ಷ ಮೇಕೆ ಆಡು ಕುರಿಗಳ ದರ ಏರಿಕೆಯಾಗಿದೆ. ಹೆಚ್ಚು ಜನರು ಖರೀದಿಗೆ ಬಂದಿದ್ದಾರೆ. ಕೊರೊನಾ ಕಾರಣದಿಂದ ಹಿಂದೆ ಎರಡು ಮೂರು ವರ್ಷ ಹಬ್ಬಗಳು ಸರಿಯಾಗಿ ಮಾಡಿರಲಿಲ್ಲ.

8 / 9
ಈ ಬಾರಿ ಯಾವುದೇ ರೋಗ ಭಯ ಇಲ್ಲದಿರೋ ಕಾರಣ ಬಕ್ರೀದ್ ಹಬ್ಬವನ್ನು ಅದ್ದೂರಿಯಾಗಿ ಮಾಡುತ್ತೇವೆಂದಿದ್ಧಾರೆ. ಜೊತೆಗೆ ಜಾನುವಾರುಗಳ ದರ ಏರಿಕೆ ಬಿಸಿಯೂ ತಾಗಿದೆ ಎಂದಿದ್ದಾರೆ. ಎಪಿಎಂಸಿ ಆಧಿಕಾರಿಗಳ ಪ್ರಕಾರ ಇಂದು 5 ರಿಂದ 6 ಕೋಟಿ ರೂಪಾಯಿಗಳ ವ್ಯಾಪಾರ ವಹಿವಾಟು ಆಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಬಾರಿ ಯಾವುದೇ ರೋಗ ಭಯ ಇಲ್ಲದಿರೋ ಕಾರಣ ಬಕ್ರೀದ್ ಹಬ್ಬವನ್ನು ಅದ್ದೂರಿಯಾಗಿ ಮಾಡುತ್ತೇವೆಂದಿದ್ಧಾರೆ. ಜೊತೆಗೆ ಜಾನುವಾರುಗಳ ದರ ಏರಿಕೆ ಬಿಸಿಯೂ ತಾಗಿದೆ ಎಂದಿದ್ದಾರೆ. ಎಪಿಎಂಸಿ ಆಧಿಕಾರಿಗಳ ಪ್ರಕಾರ ಇಂದು 5 ರಿಂದ 6 ಕೋಟಿ ರೂಪಾಯಿಗಳ ವ್ಯಾಪಾರ ವಹಿವಾಟು ಆಗಿದೆ ಎಂದು ಮಾಹಿತಿ ನೀಡಿದ್ದಾರೆ.

9 / 9
ಒಟ್ಟಾರೆ ಬಕ್ರೀದ್ ಹಬ್ಬ ಮೇಕೆ ಆಡು ಕುರಿಗಳನ್ನು ಸಾಕಿದವರ ಪಾಲಿಗೆ ಖುಷಿ ನೀಡಿದರೆ ಅವುಗಳನ್ನು ಖರೀದಿ ಮಾಡಿದವರಿಗೆ ದರ ಏರಿಕೆ ಬಿಸಿ ತಾಗಿಸಿದೆ. ದರ ಏರಿಕೆಯ ಮಧ್ಯೆಯೂ ಉತ್ತಮ ವ್ಯಾಪಾರ ವಹಿವಾಟಾಗಿದೆ. ಕೊರೊನಾ ಬಳಿಕ ಜಿಲ್ಲೆಯ ಜನರು ಯಾವುದೇ ಭಯವಿಲ್ಲದೇ ಬಕ್ರೀದ್ ಆಚರಣೆಗೆ ಅಣಿಯಾಗುತ್ತಿದ್ದಾರೆ. ತಮ್ಮ ನೆಂಟರಿಷ್ಟರಿಗೆ ಬಂಧು ಬಳಗಕ್ಕೆ ಬಕ್ರೀದ್ ಔತಣ ಕೂಟಗಳು ಈ ಬಾರಿ ಭರ್ಜರಿಯಾಗೇ ನಡೆಯಲಿವೆ.

ಒಟ್ಟಾರೆ ಬಕ್ರೀದ್ ಹಬ್ಬ ಮೇಕೆ ಆಡು ಕುರಿಗಳನ್ನು ಸಾಕಿದವರ ಪಾಲಿಗೆ ಖುಷಿ ನೀಡಿದರೆ ಅವುಗಳನ್ನು ಖರೀದಿ ಮಾಡಿದವರಿಗೆ ದರ ಏರಿಕೆ ಬಿಸಿ ತಾಗಿಸಿದೆ. ದರ ಏರಿಕೆಯ ಮಧ್ಯೆಯೂ ಉತ್ತಮ ವ್ಯಾಪಾರ ವಹಿವಾಟಾಗಿದೆ. ಕೊರೊನಾ ಬಳಿಕ ಜಿಲ್ಲೆಯ ಜನರು ಯಾವುದೇ ಭಯವಿಲ್ಲದೇ ಬಕ್ರೀದ್ ಆಚರಣೆಗೆ ಅಣಿಯಾಗುತ್ತಿದ್ದಾರೆ. ತಮ್ಮ ನೆಂಟರಿಷ್ಟರಿಗೆ ಬಂಧು ಬಳಗಕ್ಕೆ ಬಕ್ರೀದ್ ಔತಣ ಕೂಟಗಳು ಈ ಬಾರಿ ಭರ್ಜರಿಯಾಗೇ ನಡೆಯಲಿವೆ.

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us