AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರವೂ ಒಟಿಟಿಗೆ ಬಂದಿವೆ ಹಿಟ್ ಸಿನಿಮಾಗಳು: ಪಟ್ಟಿ ಇಲ್ಲಿದೆ

OTT Release this week: ಕಳೆದ ವಾರ ಕೆಲ ಸೂಪರ್ ಹಿಟ್ ಸಿನಿಮಾಗಳು ಒಟಿಟಿಗೆ ಬಂದಿದ್ದವು. ಅದರಲ್ಲೂ ಈ ಸಂಕ್ರಾಂತಿಗೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆದ ಕೆಲವು ಸಿನಿಮಾಗಳು ಕಳೆದ ವಾರ ಒಟಿಟಿಗೆ ಲಗ್ಗೆ ಇಟ್ಟಿದ್ದವು. ಈ ವಾರವೂ ಸಹ ಕೆಲ ಒಳ್ಳೆಯ, ಬಾಕ್ಸ್ ಆಫೀಸ್​​ನಲ್ಲಿ ಸೂಪರ್ ಹಿಟ್ ಆಗಿರುವ ಸಿನಿಮಾಗಳು ಒಟಿಟಿಗೆ ಬಂದಿವೆ. ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ...

ಮಂಜುನಾಥ ಸಿ.
|

Updated on: Feb 14, 2026 | 4:54 PM

Share
ತೆಲುಗಿನ ಜನಪ್ರಿಯ ಹಾಸ್ಯ ನಟ ನವೀನ್ ಪೋಲಿಶೆಟ್ಟಿ ನಟಿಸಿರುವ ಹಾಸ್ಯಮಯ ಸಿನಿಮಾ ‘ಅನಗನಗ ಒಕ ರಾಜು’ ಇದೇ ವಾರ ಒಟಿಟಿಗೆ ಬಂದಿದೆ. ಅಸಲಿಗೆ ಈ ಸಿನಿಮಾ ಸಹ ಸಂಕ್ರಾಂತಿ ಹಬ್ಬಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ, ಒಳ್ಳೆಯ ಪ್ರದರ್ಶನ ಕಂಡಿತ್ತು. ಇದೀಗ ಈ ಸಿನಿಮಾವನ್ನು ಅಮೆಜಾನ್ ಪ್ರೈಂನಲ್ಲಿ ವೀಕ್ಷಿಸಬಹುದು.

ತೆಲುಗಿನ ಜನಪ್ರಿಯ ಹಾಸ್ಯ ನಟ ನವೀನ್ ಪೋಲಿಶೆಟ್ಟಿ ನಟಿಸಿರುವ ಹಾಸ್ಯಮಯ ಸಿನಿಮಾ ‘ಅನಗನಗ ಒಕ ರಾಜು’ ಇದೇ ವಾರ ಒಟಿಟಿಗೆ ಬಂದಿದೆ. ಅಸಲಿಗೆ ಈ ಸಿನಿಮಾ ಸಹ ಸಂಕ್ರಾಂತಿ ಹಬ್ಬಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ, ಒಳ್ಳೆಯ ಪ್ರದರ್ಶನ ಕಂಡಿತ್ತು. ಇದೀಗ ಈ ಸಿನಿಮಾವನ್ನು ಅಮೆಜಾನ್ ಪ್ರೈಂನಲ್ಲಿ ವೀಕ್ಷಿಸಬಹುದು.

1 / 5
ಕಮ್ ಬ್ಯಾಕ್ ಮಾಡಿರುವ ಮಲಯಾಳಂ ಸ್ಟಾರ್ ನಟ ನಿವಿನ್ ಪಾಲಿ ಅವರ ಹೊಸ ಸಿನಿಮಾ ‘ಬೇಬಿ ಗರ್ಲ್’ ಈ ವಾರ ಒಟಿಟಿಗೆ ಬಂದಿದೆ. ಜನವರಿಯಲ್ಲಿ ಬಿಡುಗಡೆ ಆಗಿದ್ದ ಈ ಮೆಡಿಕಲ್ ಥ್ರಿಲ್ಲರ್ ಸಿನಿಮಾ ಇದೀಗ ಒಟಿಟಿಗೆ ಬಂದಿದ್ದು, ಸೋನಿ ಲಿವ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಕಮ್ ಬ್ಯಾಕ್ ಮಾಡಿರುವ ಮಲಯಾಳಂ ಸ್ಟಾರ್ ನಟ ನಿವಿನ್ ಪಾಲಿ ಅವರ ಹೊಸ ಸಿನಿಮಾ ‘ಬೇಬಿ ಗರ್ಲ್’ ಈ ವಾರ ಒಟಿಟಿಗೆ ಬಂದಿದೆ. ಜನವರಿಯಲ್ಲಿ ಬಿಡುಗಡೆ ಆಗಿದ್ದ ಈ ಮೆಡಿಕಲ್ ಥ್ರಿಲ್ಲರ್ ಸಿನಿಮಾ ಇದೀಗ ಒಟಿಟಿಗೆ ಬಂದಿದ್ದು, ಸೋನಿ ಲಿವ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

2 / 5
‘ಕಾಂಜುರಿಂಗ್’ ಸಿನಿಮಾ ಸರಣಿ ವಿಶ್ವದ ಬಲು ಜನಪ್ರಿಯ ಹಾರರ್ ಸಿನಿಮಾ ಸರಣಿಗಳಲ್ಲಿ ಒಂದಾಗಿದೆ. ಇತ್ತೀಚೆಗಷ್ಟೆ ಕಾಂಜುರಿಂಗ್ ಸರಣಿಯ ಹೊಸ ಸಿನಿಮಾ ‘ದಿ ಕಾಂಜುರಿಂಗ್: ದಿ ಲಾಸ್ಟ್ ರೈಟ್ಸ್’ ಸಿನಿಮಾ ಬಿಡುಗಡೆ ಆಗಿತ್ತು. ಇದೀಗ ಈ ವಾರ ಈ ಸಿನಿಮಾ ಒಟಿಟಿಗೆ ಬಂದಿದ್ದು, ಜಿಯೋ ಹಾಟ್​​ಸ್ಟಾರ್​​ನಲ್ಲಿ ಸಿನಿಮಾವನ್ನು ವೀಕ್ಷಿಸಬಹುದಾಗಿದೆ.

‘ಕಾಂಜುರಿಂಗ್’ ಸಿನಿಮಾ ಸರಣಿ ವಿಶ್ವದ ಬಲು ಜನಪ್ರಿಯ ಹಾರರ್ ಸಿನಿಮಾ ಸರಣಿಗಳಲ್ಲಿ ಒಂದಾಗಿದೆ. ಇತ್ತೀಚೆಗಷ್ಟೆ ಕಾಂಜುರಿಂಗ್ ಸರಣಿಯ ಹೊಸ ಸಿನಿಮಾ ‘ದಿ ಕಾಂಜುರಿಂಗ್: ದಿ ಲಾಸ್ಟ್ ರೈಟ್ಸ್’ ಸಿನಿಮಾ ಬಿಡುಗಡೆ ಆಗಿತ್ತು. ಇದೀಗ ಈ ವಾರ ಈ ಸಿನಿಮಾ ಒಟಿಟಿಗೆ ಬಂದಿದ್ದು, ಜಿಯೋ ಹಾಟ್​​ಸ್ಟಾರ್​​ನಲ್ಲಿ ಸಿನಿಮಾವನ್ನು ವೀಕ್ಷಿಸಬಹುದಾಗಿದೆ.

3 / 5
ಸಂಕ್ರಾಂತಿಗೆ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆದ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಮೆಗಾಸ್ಟಾರ್ ಚಿರಂಜೀವಿಯನ್ನು ಸೋಲಿನ ಸುಳಿಯಿಂದ ಮೇಲಕ್ಕೆತ್ತಿದ ಈ ಸಿನಿಮಾ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಿದೆ. ನಟಿ ನಯನತಾರಾ ಸಿನಿಮಾದ ನಾಯಕಿ.

ಸಂಕ್ರಾಂತಿಗೆ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆದ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಮೆಗಾಸ್ಟಾರ್ ಚಿರಂಜೀವಿಯನ್ನು ಸೋಲಿನ ಸುಳಿಯಿಂದ ಮೇಲಕ್ಕೆತ್ತಿದ ಈ ಸಿನಿಮಾ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಿದೆ. ನಟಿ ನಯನತಾರಾ ಸಿನಿಮಾದ ನಾಯಕಿ.

4 / 5
ತಮಿಳಿನಲ್ಲಿ ಇತ್ತೀಚೆಗೆ ಬಿಡುಗಡೆ ಆಗಿ ಸಖತ್ ಸದ್ದು ಮಾಡುತ್ತಿರುವ ಸಿನಿಮಾ ‘ತಲೈವರ್ ತಂಬಿ ತಲೈಮಯಿಲ್’ ಸಿನಿಮಾ. ಸಣ್ಣ ಹಳ್ಳಿಯೊಂದರ ಪಂಚಾಯಿತಿ ಅಧ್ಯಕ್ಷನೊಬ್ಬನ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾ ನೆಟ್​ಫ್ಲಿಕ್ಸ್​​ನಲ್ಲಿ ಇದೇ ವಾರ ಬಿಡುಗಡೆ ಆಗಿದೆ.

ತಮಿಳಿನಲ್ಲಿ ಇತ್ತೀಚೆಗೆ ಬಿಡುಗಡೆ ಆಗಿ ಸಖತ್ ಸದ್ದು ಮಾಡುತ್ತಿರುವ ಸಿನಿಮಾ ‘ತಲೈವರ್ ತಂಬಿ ತಲೈಮಯಿಲ್’ ಸಿನಿಮಾ. ಸಣ್ಣ ಹಳ್ಳಿಯೊಂದರ ಪಂಚಾಯಿತಿ ಅಧ್ಯಕ್ಷನೊಬ್ಬನ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾ ನೆಟ್​ಫ್ಲಿಕ್ಸ್​​ನಲ್ಲಿ ಇದೇ ವಾರ ಬಿಡುಗಡೆ ಆಗಿದೆ.

5 / 5
Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್