AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು, ಪಟ್ಟಿ ಇಲ್ಲಿದೆ..

OTT Release this week: ಐಪಿಎಲ್ ದೆಸೆಯಿಂದಾಗಿ ಚಿತ್ರಮಂದಿರಗಳು ಬಣಗುಡುತ್ತಿವೆ. ಟಿವಿ ಧಾರಾವಾಹಿಗಳಲ್ಲಿ ಅದೇ ಹಳೆಯ ಕತೆಗಳೇ ಪ್ರಸಾರವಾಗುತ್ತಿವೆ. ಆದರೆ ಒಟಿಟಿಯಲ್ಲಿ ಮಾತ್ರ ಪ್ರತಿ ವಾರವೂ ಹೊಸ ಸಿನಿಮಾಗಳು ಬಿಡುಗಡೆ ಆಗುತ್ತಲೇ ಇವೆ. ಈ ವಾರವೂ ಸಹ ಕೆಲ ಒಳ್ಳೆಯ ಸಿನಿಮಾ ಮತ್ತು ವೆಬ್ ಸರಣಿಗಳು ವಿವಿಧ ಒಟಿಟಿಯಲ್ಲಿ ಬಿಡುಗಡೆ ಆಗುತ್ತಿವೆ. ಕನ್ನಡದ ಒಂದು ಸಿನಿಮಾ ಹಾಗೂ ಒಂದು ವೆಬ್ ಸರಣಿ ಈ ವಾರ ಒಟಿಟಿಗೆ ಬಂದಿದೆ. ಇಲ್ಲಿದೆ ನೋಡಿ ಪಟ್ಟಿ...

ಮಂಜುನಾಥ ಸಿ.
|

Updated on: Apr 26, 2025 | 12:06 PM

Share
ಕನ್ನಡದ ವೆಬ್ ಸರಣಿ ‘ಅಯ್ಯನ ಮನೆ’ ಈ ವಾರ ಒಟಿಟಿಗೆ ಬಂದಿದೆ. ಕನ್ನಡದಲ್ಲಿ ವೆಬ್ ಸರಣಿ ಅಪರೂಪದಲ್ಲಿ ಅಪರೂಪ. ಹೀಗಿರುವಾಗ ಒಂದೊಳ್ಳೆ ವೆಬ್ ಸರಣಿಯಾಗಿ ‘ಅಯ್ಯನ ಮನೆ’ ಬಂದಿದೆ. ‘ದಿಯಾ’ ಖುಷಿ ಈ ವೆಬ್ ಸರಣಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವೆಬ್ ಸರಣಿ ನೋಡಿದವರೆಲ್ಲ ಮೆಚ್ಚಿಕೊಂಡಿದ್ದಾರೆ. ಜೀ5ನಲ್ಲಿ ಈ ವೆಬ್ ಸರಣಿ ವೀಕ್ಷಣೆಗೆ ಲಭ್ಯ ಇದೆ.

ಕನ್ನಡದ ವೆಬ್ ಸರಣಿ ‘ಅಯ್ಯನ ಮನೆ’ ಈ ವಾರ ಒಟಿಟಿಗೆ ಬಂದಿದೆ. ಕನ್ನಡದಲ್ಲಿ ವೆಬ್ ಸರಣಿ ಅಪರೂಪದಲ್ಲಿ ಅಪರೂಪ. ಹೀಗಿರುವಾಗ ಒಂದೊಳ್ಳೆ ವೆಬ್ ಸರಣಿಯಾಗಿ ‘ಅಯ್ಯನ ಮನೆ’ ಬಂದಿದೆ. ‘ದಿಯಾ’ ಖುಷಿ ಈ ವೆಬ್ ಸರಣಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವೆಬ್ ಸರಣಿ ನೋಡಿದವರೆಲ್ಲ ಮೆಚ್ಚಿಕೊಂಡಿದ್ದಾರೆ. ಜೀ5ನಲ್ಲಿ ಈ ವೆಬ್ ಸರಣಿ ವೀಕ್ಷಣೆಗೆ ಲಭ್ಯ ಇದೆ.

1 / 6
ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಪ್ರಮೋದ್ ಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸಿರುವ ಕಾಮಿಡಿ ಥ್ರಿಲ್ಲರ್ ಸಿನಿಮಾ ‘ಲಾಫಿಂಗ್ ಬುದ್ಧ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಕಳೆದ ವರ್ಷ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಸಾಧಾರಣ ಯಶಸ್ಸು ಕಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಸನ್ ನೆಕ್ಸ್ಟ್​ನಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯ ಇದೆ.

ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಪ್ರಮೋದ್ ಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸಿರುವ ಕಾಮಿಡಿ ಥ್ರಿಲ್ಲರ್ ಸಿನಿಮಾ ‘ಲಾಫಿಂಗ್ ಬುದ್ಧ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಕಳೆದ ವರ್ಷ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಸಾಧಾರಣ ಯಶಸ್ಸು ಕಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಸನ್ ನೆಕ್ಸ್ಟ್​ನಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯ ಇದೆ.

2 / 6
ಕೆಲ ದಿನಗಳ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಕಂಡ ಚಿಯಾನ್ ವಿಕ್ರಂ ಅವರ ತಮಿಳು ಸಿನಿಮಾ ‘ವೀರ ಧೀರ ಸೂರನ್’ ಸಿನಿಮಾ ಒಟಿಟಿಗೆ ಬಂದಿದೆ. ಏಪ್ರಿಲ್ 25ಕ್ಕೆ ಈ ಸಿನಿಮಾ ಒಟಿಟಿಗೆ ಬಂದಿದ್ದು ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ. ಸಿನಿಮಾನಲ್ಲಿ ವಿಕ್ರಂ ಜೊತೆಗೆ ಎಸ್​ಜೆ ಸೂರ್ಯ ಸಹ ನಟಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಕಂಡ ಚಿಯಾನ್ ವಿಕ್ರಂ ಅವರ ತಮಿಳು ಸಿನಿಮಾ ‘ವೀರ ಧೀರ ಸೂರನ್’ ಸಿನಿಮಾ ಒಟಿಟಿಗೆ ಬಂದಿದೆ. ಏಪ್ರಿಲ್ 25ಕ್ಕೆ ಈ ಸಿನಿಮಾ ಒಟಿಟಿಗೆ ಬಂದಿದ್ದು ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ. ಸಿನಿಮಾನಲ್ಲಿ ವಿಕ್ರಂ ಜೊತೆಗೆ ಎಸ್​ಜೆ ಸೂರ್ಯ ಸಹ ನಟಿಸಿದ್ದಾರೆ.

3 / 6
ಕಾಮಿಡಿ ಥ್ರಿಲ್ಲರ್ ಸಿನಿಮಾ ‘ಮ್ಯಾಡ್’ನ ಎರಡನೇ ಭಾಗ ‘ಮ್ಯಾಡ್ ಸ್ಕೇರ್’ ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರದಲ್ಲಿ ಬಿಡುಗಡೆ ಆಯ್ತು. ಚಿತ್ರಮಂದಿರದಲ್ಲಿ ಉತ್ತಮ ಪ್ರದರ್ಶನವನ್ನೇ ಈ ಸಿನಿಮಾ ತೋರಿತು. ಸಿನಿಮಾದ ಹಾಸ್ಯ ಸನ್ನಿವೇಶಗಳು ಪ್ರೇಕ್ಷಕರಿಗೆ ಬಹಳ ಇಷ್ಟವಾದವು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ನೆಟ್​ಫ್ಲಿಕ್ಸ್​ನಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

ಕಾಮಿಡಿ ಥ್ರಿಲ್ಲರ್ ಸಿನಿಮಾ ‘ಮ್ಯಾಡ್’ನ ಎರಡನೇ ಭಾಗ ‘ಮ್ಯಾಡ್ ಸ್ಕೇರ್’ ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರದಲ್ಲಿ ಬಿಡುಗಡೆ ಆಯ್ತು. ಚಿತ್ರಮಂದಿರದಲ್ಲಿ ಉತ್ತಮ ಪ್ರದರ್ಶನವನ್ನೇ ಈ ಸಿನಿಮಾ ತೋರಿತು. ಸಿನಿಮಾದ ಹಾಸ್ಯ ಸನ್ನಿವೇಶಗಳು ಪ್ರೇಕ್ಷಕರಿಗೆ ಬಹಳ ಇಷ್ಟವಾದವು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ನೆಟ್​ಫ್ಲಿಕ್ಸ್​ನಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

4 / 6
ಮೋಹನ್​ಲಾಲ್ ನಟಿಸಿ ಪೃಥ್ವಿರಾಜ್ ಸುಕುಮಾರ್ ನಿರ್ದೇಶನ ಮಾಡಿರುವ ‘ಎಲ್​2: ಎಂಪುರಾನ್’ ಸಿನಿಮಾ ಇದೇ ವಾರ ಒಟಿಟಿಗೆ ಬಂದಿದೆ. ಕೆಲ ವಾರಗಳ ಹಿಂದೆ ಚಿತ್ರಂದಿರದಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಬ್ಲಾಕ್ ಬಸ್ಟರ್ ಎನಿಸಿಕೊಂಡಿತ್ತು. ಜೊತೆಗೆ ಕೆಲ ವಿವಾದಗಳ ಕಾರಣಕ್ಕೆ ಬಿಜೆಪಿಯ ಆಕ್ರೋಶಕ್ಕೂ ಕಾರಣವಾಗಿತ್ತು. ಇದೀಗ ಈ ಸಿನಿಮಾ ಜಿಯೋ ಹಾಟ್​ಸ್ಟಾರ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಮೋಹನ್​ಲಾಲ್ ನಟಿಸಿ ಪೃಥ್ವಿರಾಜ್ ಸುಕುಮಾರ್ ನಿರ್ದೇಶನ ಮಾಡಿರುವ ‘ಎಲ್​2: ಎಂಪುರಾನ್’ ಸಿನಿಮಾ ಇದೇ ವಾರ ಒಟಿಟಿಗೆ ಬಂದಿದೆ. ಕೆಲ ವಾರಗಳ ಹಿಂದೆ ಚಿತ್ರಂದಿರದಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಬ್ಲಾಕ್ ಬಸ್ಟರ್ ಎನಿಸಿಕೊಂಡಿತ್ತು. ಜೊತೆಗೆ ಕೆಲ ವಿವಾದಗಳ ಕಾರಣಕ್ಕೆ ಬಿಜೆಪಿಯ ಆಕ್ರೋಶಕ್ಕೂ ಕಾರಣವಾಗಿತ್ತು. ಇದೀಗ ಈ ಸಿನಿಮಾ ಜಿಯೋ ಹಾಟ್​ಸ್ಟಾರ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

5 / 6
ಸೈಫ್ ಅಲಿ ಖಾನ್, ಜೈದೀಪ್ ಅಹ್ಲಾವತ್ ಇನ್ನೂ ಕೆಲವರು ಮುಖ್ಯ ಪಾತ್ರದಲ್ಲಿ ನಟಿಸಿರುವ ಕ್ರೈಂ ಥ್ರಿಲ್ಲರ್ ಸಿನಿಮಾ ‘ದಿ ಜ್ಯುಯೆಲ್ ಥೀಫ್’ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ. ಈ ಸಿನಿಮಾ ನೇರವಾಗಿ ಒಟಿಟಿಯಲ್ಲಿ ಏಪ್ರಿಲ್ 25ಕ್ಕೆ ತೆರೆಗೆ ಬಂದಿದೆ. ಸಿನಿಮಾವು ಆಭರಣ ಕಳ್ಳರ ಗುಂಪಿನ ಕತೆಯನ್ನು ಒಳಗೊಂಡಿದೆ.

ಸೈಫ್ ಅಲಿ ಖಾನ್, ಜೈದೀಪ್ ಅಹ್ಲಾವತ್ ಇನ್ನೂ ಕೆಲವರು ಮುಖ್ಯ ಪಾತ್ರದಲ್ಲಿ ನಟಿಸಿರುವ ಕ್ರೈಂ ಥ್ರಿಲ್ಲರ್ ಸಿನಿಮಾ ‘ದಿ ಜ್ಯುಯೆಲ್ ಥೀಫ್’ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ. ಈ ಸಿನಿಮಾ ನೇರವಾಗಿ ಒಟಿಟಿಯಲ್ಲಿ ಏಪ್ರಿಲ್ 25ಕ್ಕೆ ತೆರೆಗೆ ಬಂದಿದೆ. ಸಿನಿಮಾವು ಆಭರಣ ಕಳ್ಳರ ಗುಂಪಿನ ಕತೆಯನ್ನು ಒಳಗೊಂಡಿದೆ.

6 / 6
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ