AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಹಲ್ಗಾಮ್ ಪ್ರವಾಸಿಗರಿಗೆ ಈಗ ‘QR’ ಕವಚ: ಸುರಕ್ಷತೆಗಾಗಿ ಜಮ್ಮು-ಕಾಶ್ಮೀರ ಸರ್ಕಾರದ ಹೈಟೆಕ್ ಹೆಜ್ಜೆ

ಸರಿಯಾಗಿ ಒಂದು ವರ್ಷದ ಹಿಂದೆ ಬೈಸರನ್ ಹುಲ್ಲುಗಾವಲು ಪ್ರವಾಸಿಗರ ರಕ್ತದಿಂದ ಕೆಂಪಾಗಿತ್ತು. ಆ ದುರಂತದ ನಂತರ ಪ್ರವಾಸಿಗರಲ್ಲಿ ಮೂಡಿದ್ದ ಆತಂಕವನ್ನು ಹೋಗಲಾಡಿಸುವುದು ಅಧಿಕಾರಿಗಳಿಗೆ ದೊಡ್ಡ ಸವಾಲಾಗಿತ್ತು. ಕೇವಲ ಭದ್ರತಾ ಪಡೆಗಳನ್ನು ನಿಯೋಜಿಸುವುದು ಸಾಲದು, ಪ್ರತಿಯೊಬ್ಬ ಪ್ರವಾಸಿಗನಿಗೂ ತಾನು ಸುರಕ್ಷಿತ ವ್ಯಕ್ತಿಗಳ ನಡುವೆ ಇದ್ದೇನೆ ಎಂಬ ವಿಶ್ವಾಸ ಮೂಡಿಸಬೇಕಿತ್ತು. ಆ ವಿಶ್ವಾಸದ ಫಲವೇ ಈ QR ಕೋಡ್ ಆಧಾರಿತ ಗುರುತಿನ ಚೀಟಿ ವ್ಯವಸ್ಥೆ ಕಲ್ಪಿಸಲಾಗಿದೆ.

ನಯನಾ ರಾಜೀವ್
|

Updated on: Apr 21, 2026 | 10:04 AM

Share
ತಂತ್ರಜ್ಞಾನ ಮತ್ತು ಭದ್ರತೆಯ ಸಮ್ಮಿಲನ: ಪ್ರತಿಯೊಬ್ಬರ ಕೊರಳಲ್ಲಿ ರಾರಾಜಿಸುತ್ತಿರುವ ಈ QR ಕೋಡ್ ಆಧಾರಿತ ಐಡಿ ಕಾರ್ಡ್‌ಗಳು, ಪ್ರವಾಸಿಗರಿಗೆ ನೀಡಲಿವೆ 'ತ್ವರಿತ ಗುರುತಿಸುವಿಕೆ'ಯ ಭರವಸೆ. ಪಹಲ್ಗಾಮ್‌ನ ಅತ್ಯಂತ ಸುಂದರ ತಾಣವಾದ ಬೈಸರನ್ ಹುಲ್ಲುಗಾವಲಿನಲ್ಲಿ ಇನ್ನು ಮುಂದೆ ಯಾರೂ ಅನಾಮಧೇಯರಾಗಿ ಓಡಾಡುವಂತಿಲ್ಲ. ಕುದುರೆ ಸವಾರರು, ಗೈಡ್‌ಗಳು ಅಥವಾ ಸಣ್ಣ ವ್ಯಾಪಾರಿಗಳಾಗಲಿ - ಪ್ರತಿಯೊಬ್ಬರ ಕೊರಳಲ್ಲೂ ಈಗ ಒಂದು ವಿಶಿಷ್ಟ ಕ್ಯೂ ಆರ್ ಕೋಡ್ ಇರಲಿದೆ.

ತಂತ್ರಜ್ಞಾನ ಮತ್ತು ಭದ್ರತೆಯ ಸಮ್ಮಿಲನ: ಪ್ರತಿಯೊಬ್ಬರ ಕೊರಳಲ್ಲಿ ರಾರಾಜಿಸುತ್ತಿರುವ ಈ QR ಕೋಡ್ ಆಧಾರಿತ ಐಡಿ ಕಾರ್ಡ್‌ಗಳು, ಪ್ರವಾಸಿಗರಿಗೆ ನೀಡಲಿವೆ 'ತ್ವರಿತ ಗುರುತಿಸುವಿಕೆ'ಯ ಭರವಸೆ. ಪಹಲ್ಗಾಮ್‌ನ ಅತ್ಯಂತ ಸುಂದರ ತಾಣವಾದ ಬೈಸರನ್ ಹುಲ್ಲುಗಾವಲಿನಲ್ಲಿ ಇನ್ನು ಮುಂದೆ ಯಾರೂ ಅನಾಮಧೇಯರಾಗಿ ಓಡಾಡುವಂತಿಲ್ಲ. ಕುದುರೆ ಸವಾರರು, ಗೈಡ್‌ಗಳು ಅಥವಾ ಸಣ್ಣ ವ್ಯಾಪಾರಿಗಳಾಗಲಿ - ಪ್ರತಿಯೊಬ್ಬರ ಕೊರಳಲ್ಲೂ ಈಗ ಒಂದು ವಿಶಿಷ್ಟ ಕ್ಯೂ ಆರ್ ಕೋಡ್ ಇರಲಿದೆ.

1 / 7
ಏಪ್ರಿಲ್ 22ರ ದುರಂತದ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ, ಪಹಲ್ಗಾಮ್ ಅನ್ನು ಜಾಗತಿಕ ಮಟ್ಟದ ಸುರಕ್ಷಿತ ತಾಣವನ್ನಾಗಿ ಮಾಡುವ ಅಧಿಕಾರಿಗಳ ಮಹತ್ವದ ಹೆಜ್ಜೆ.

ಏಪ್ರಿಲ್ 22ರ ದುರಂತದ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ, ಪಹಲ್ಗಾಮ್ ಅನ್ನು ಜಾಗತಿಕ ಮಟ್ಟದ ಸುರಕ್ಷಿತ ತಾಣವನ್ನಾಗಿ ಮಾಡುವ ಅಧಿಕಾರಿಗಳ ಮಹತ್ವದ ಹೆಜ್ಜೆ.

2 / 7
ಸುರಕ್ಷಿತ ವಾತಾವರಣದಲ್ಲಿ ನಿರಾತಂಕವಾಗಿ ಪ್ರಕೃತಿಯ ಸೌಂದರ್ಯ ಸವಿಯುತ್ತಿರುವ ಪ್ರವಾಸಿಗರು. ನಾವು ಕುಗ್ಗುವುದಿಲ್ಲ, ನಾವು ಸುಧಾರಿಸುತ್ತೇವೆ. ತಂತ್ರಜ್ಞಾನದ ಈ ಡಿಜಿಟಲ್ ಕವಚವು ಬೈಸರನ್ ಕಣಿವೆಯನ್ನು ಮತ್ತೆ ಪ್ರವಾಸಿಗರ ಸ್ವರ್ಗವನ್ನಾಗಿ ಮಾಡುತ್ತಿದೆ.

ಸುರಕ್ಷಿತ ವಾತಾವರಣದಲ್ಲಿ ನಿರಾತಂಕವಾಗಿ ಪ್ರಕೃತಿಯ ಸೌಂದರ್ಯ ಸವಿಯುತ್ತಿರುವ ಪ್ರವಾಸಿಗರು. ನಾವು ಕುಗ್ಗುವುದಿಲ್ಲ, ನಾವು ಸುಧಾರಿಸುತ್ತೇವೆ. ತಂತ್ರಜ್ಞಾನದ ಈ ಡಿಜಿಟಲ್ ಕವಚವು ಬೈಸರನ್ ಕಣಿವೆಯನ್ನು ಮತ್ತೆ ಪ್ರವಾಸಿಗರ ಸ್ವರ್ಗವನ್ನಾಗಿ ಮಾಡುತ್ತಿದೆ.

3 / 7
ಸ್ಥಳೀಯರ ಬೆಂಬಲ: "ಇದು ನಮ್ಮ ಸುರಕ್ಷತೆಗೂ ಅಗತ್ಯ"; ಪ್ರವಾಸೋದ್ಯಮವನ್ನು ಬಲಪಡಿಸಲು ಸರ್ಕಾರದ ಈ ಹೈಟೆಕ್ ಕ್ರಮವನ್ನು ಮುಕ್ತ ಮನಸ್ಸಿನಿಂದ ಸ್ಥಳೀಯ ವ್ಯಾಪಾರಿಗಳು ಸ್ವಾಗತಿಸಿದ್ದಾರೆ . ಕಳೆದ ವರ್ಷ ನಾವು ನಮ್ಮವರನ್ನು ಕಳೆದುಕೊಂಡೆವು, ಪ್ರವಾಸಿಗರನ್ನು ಕಳೆದುಕೊಂಡೆವು. ಆದರೆ ಈ ಹೊಸ ವ್ಯವಸ್ಥೆ ನಮಗೆ ಗೌರವ ಮತ್ತು ಸುರಕ್ಷತೆ ಎರಡನ್ನೂ ನೀಡಿದೆ ಎನ್ನುತ್ತಾರೆ ಸ್ಥಳೀಯರು

ಸ್ಥಳೀಯರ ಬೆಂಬಲ: "ಇದು ನಮ್ಮ ಸುರಕ್ಷತೆಗೂ ಅಗತ್ಯ"; ಪ್ರವಾಸೋದ್ಯಮವನ್ನು ಬಲಪಡಿಸಲು ಸರ್ಕಾರದ ಈ ಹೈಟೆಕ್ ಕ್ರಮವನ್ನು ಮುಕ್ತ ಮನಸ್ಸಿನಿಂದ ಸ್ಥಳೀಯ ವ್ಯಾಪಾರಿಗಳು ಸ್ವಾಗತಿಸಿದ್ದಾರೆ . ಕಳೆದ ವರ್ಷ ನಾವು ನಮ್ಮವರನ್ನು ಕಳೆದುಕೊಂಡೆವು, ಪ್ರವಾಸಿಗರನ್ನು ಕಳೆದುಕೊಂಡೆವು. ಆದರೆ ಈ ಹೊಸ ವ್ಯವಸ್ಥೆ ನಮಗೆ ಗೌರವ ಮತ್ತು ಸುರಕ್ಷತೆ ಎರಡನ್ನೂ ನೀಡಿದೆ ಎನ್ನುತ್ತಾರೆ ಸ್ಥಳೀಯರು

4 / 7
ಇದು ಕೇವಲ ಸುರಕ್ಷತೆಯಲ್ಲ, ಪ್ರವಾಸಿಗರು ಅನಧಿಕೃತ ವ್ಯಕ್ತಿಗಳಿಂದ ವಂಚನೆಗೆ ಒಳಗಾಗುವುದನ್ನು ತಪ್ಪಿಸುವ ಒಂದು ಸ್ಮಾರ್ಟ್ ಫಿಲ್ಟರ್ ಕೂಡ ಹೌದು.

ಇದು ಕೇವಲ ಸುರಕ್ಷತೆಯಲ್ಲ, ಪ್ರವಾಸಿಗರು ಅನಧಿಕೃತ ವ್ಯಕ್ತಿಗಳಿಂದ ವಂಚನೆಗೆ ಒಳಗಾಗುವುದನ್ನು ತಪ್ಪಿಸುವ ಒಂದು ಸ್ಮಾರ್ಟ್ ಫಿಲ್ಟರ್ ಕೂಡ ಹೌದು.

5 / 7
ಪ್ರವಾಸಿಗರು ತಮ್ಮ ಮೊಬೈಲ್ ಮೂಲಕ ಈ ಕೋಡ್ ಸ್ಕ್ಯಾನ್ ಮಾಡಿದ ಕೂಡಲೇ, ಅವರ ಹೆಸರು, ಫೋಟೋ ಮತ್ತು ಪೊಲೀಸ್ ವೆರಿಫಿಕೇಶನ್ ಆಗಿರುವ ದಾಖಲೆಗಳು ಕಣ್ಣಮುಂದೆ ಬರುತ್ತವೆ.

ಪ್ರವಾಸಿಗರು ತಮ್ಮ ಮೊಬೈಲ್ ಮೂಲಕ ಈ ಕೋಡ್ ಸ್ಕ್ಯಾನ್ ಮಾಡಿದ ಕೂಡಲೇ, ಅವರ ಹೆಸರು, ಫೋಟೋ ಮತ್ತು ಪೊಲೀಸ್ ವೆರಿಫಿಕೇಶನ್ ಆಗಿರುವ ದಾಖಲೆಗಳು ಕಣ್ಣಮುಂದೆ ಬರುತ್ತವೆ.

6 / 7
ಸೈನಿಕರ ಹದ್ದಿನ ಕಣ್ಣು: ಸ್ಥಳೀಯ ಪೊಲೀಸರು ಮತ್ತು ಭದ್ರತಾ ಪಡೆಗಳು ಕ್ಯೂಆರ್ ಕೋಡ್‌ಗಳನ್ನು ಸ್ಕ್ಯಾನ್ ಮಾಡುವ ಮೂಲಕ ಪ್ರತಿಯೊಬ್ಬ ವ್ಯಕ್ತಿಯ ಹಿನ್ನೆಲೆಯನ್ನು ಖಚಿತಪಡಿಸಿಕೊಳ್ಳುತ್ತಿರುವ ದೃಶ್ಯ. ಈ ವ್ಯವಸ್ಥೆಯು ಕೇವಲ ಪ್ರವಾಸಿಗರಿಗೆ ಮಾತ್ರವಲ್ಲ, ಭದ್ರತಾ ಪಡೆಗಳಿಗೂ ದೊಡ್ಡ ಬಲ ನೀಡಿದೆ. ಸ್ಥಳೀಯ ಪೊಲೀಸರು ನಿಯತಕಾಲಿಕವಾಗಿ ಈ ಕೋಡ್‌ಗಳನ್ನು ಸ್ಕ್ಯಾನ್ ಮಾಡುತ್ತಾರೆ. ಇದರಿಂದ ಆ ಪ್ರದೇಶದಲ್ಲಿ ಇರುವ ಪ್ರತಿಯೊಬ್ಬ ಸೇವಾ ಪೂರೈಕೆದಾರನು ಅಧಿಕೃತನೇ ಅಥವಾ ಯಾರಾದರೂ ಸುಳ್ಳು ಗುರುತು ನೀಡಿ ನುಸುಳಿದ್ದಾರೆಯೇ ಎಂಬುದು ಕ್ಷಣಾರ್ಧದಲ್ಲಿ ತಿಳಿಯುತ್ತದೆ. ನೆಲದ ಮೇಲಿನ ಮಾನವ ಬುದ್ಧಿವಂತಿಕೆಗೆ ಈಗ ಡಿಜಿಟಲ್ ಬಲ ಸಿಕ್ಕಿದೆ.

ಸೈನಿಕರ ಹದ್ದಿನ ಕಣ್ಣು: ಸ್ಥಳೀಯ ಪೊಲೀಸರು ಮತ್ತು ಭದ್ರತಾ ಪಡೆಗಳು ಕ್ಯೂಆರ್ ಕೋಡ್‌ಗಳನ್ನು ಸ್ಕ್ಯಾನ್ ಮಾಡುವ ಮೂಲಕ ಪ್ರತಿಯೊಬ್ಬ ವ್ಯಕ್ತಿಯ ಹಿನ್ನೆಲೆಯನ್ನು ಖಚಿತಪಡಿಸಿಕೊಳ್ಳುತ್ತಿರುವ ದೃಶ್ಯ. ಈ ವ್ಯವಸ್ಥೆಯು ಕೇವಲ ಪ್ರವಾಸಿಗರಿಗೆ ಮಾತ್ರವಲ್ಲ, ಭದ್ರತಾ ಪಡೆಗಳಿಗೂ ದೊಡ್ಡ ಬಲ ನೀಡಿದೆ. ಸ್ಥಳೀಯ ಪೊಲೀಸರು ನಿಯತಕಾಲಿಕವಾಗಿ ಈ ಕೋಡ್‌ಗಳನ್ನು ಸ್ಕ್ಯಾನ್ ಮಾಡುತ್ತಾರೆ. ಇದರಿಂದ ಆ ಪ್ರದೇಶದಲ್ಲಿ ಇರುವ ಪ್ರತಿಯೊಬ್ಬ ಸೇವಾ ಪೂರೈಕೆದಾರನು ಅಧಿಕೃತನೇ ಅಥವಾ ಯಾರಾದರೂ ಸುಳ್ಳು ಗುರುತು ನೀಡಿ ನುಸುಳಿದ್ದಾರೆಯೇ ಎಂಬುದು ಕ್ಷಣಾರ್ಧದಲ್ಲಿ ತಿಳಿಯುತ್ತದೆ. ನೆಲದ ಮೇಲಿನ ಮಾನವ ಬುದ್ಧಿವಂತಿಕೆಗೆ ಈಗ ಡಿಜಿಟಲ್ ಬಲ ಸಿಕ್ಕಿದೆ.

7 / 7
Follow Us
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ