AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಯೊಬ್ಬ ತಂದೆಯೂ ತನ್ನ ಮಕ್ಕಳಿಗೆ ಈ ವಿಷಯಗಳನ್ನು ಕಲಿಸಿಕೊಡಲೇಬೇಕು

ಮಕ್ಕಳ ಬೆಳವಣಿಗೆಯಲ್ಲಿ ತಾಯಿಯಷ್ಟೇ, ತಂದೆಯ ಪಾತ್ರವೂ ಇದೆ. ತಂದೆ-ತಾಯಿಯ ಪಾತ್ರ ಮಕ್ಕಳ ಮೇಲೆ ಪ್ರಭಾವವನ್ನು ಬೀರುತ್ತದೆ. ಮಕ್ಕಳಿಗೆ ತಮ್ಮ ತಂದೆಯೇ ರೋಲ್‌ ಮಾಡೆಲ್‌ ಆಗಿರುತ್ತಾರೆ. ಹೆಚ್ಚಿನ ಮಕ್ಕಳು ತಾಯಿಯ ಮಾತನ್ನು ಕೇಳದೇ ಇರಬಹುದು ಆದರೆ ತಂದೆಯ ಮಾತನ್ನು ಎಂದಿಗೂ ಮೀರುವುದಿಲ್ಲ. ಹೀಗಿರುವಾಗ ತಂದೆಯಾದವನು ತನ್ನ ಮಕ್ಕಳಿಗೆ ಸಮಾಜದಲ್ಲಿ ಹೇಗೆ ಬದುಕಬೇಕು, ಕಷ್ಟಗಳನ್ನು ಹೇಗೆ ಎದುರಿಸಬೇಕು ಹೀಗೆ ಒಂದಷ್ಟು ವಿಷಯಗಳ ಬಗ್ಗೆ ಕಲಿಸಿಕೊಡಬೇಕು. ಇದು ಪ್ರತಿಯೊಬ್ಬ ತಂದೆಯ ಜವಬ್ದಾರಿಯೂ ಹೌದು.

ಮಾಲಾಶ್ರೀ ಅಂಚನ್​
|

Updated on: May 03, 2025 | 4:43 PM

Share
ಗೌರವ: ಕೆಲ ಮಕ್ಕಳು ತಮಗಿಂತ ದೊಡ್ಡವರಿಗೆ ಗೌರವ ಕೊಟ್ಟು ಮಾತನಾಡುವುದಿಲ್ಲ. ಹೀಗಿರುವಾಗ ತಂದೆಯಾದವನು, ಇತರರಿಗೆ ಗೌರವ ಕೊಡುವುದು ಎಷ್ಟು ಮುಖ್ಯ, ಈ ನಮ್ಮ ಸಣ್ಣ ನಡೆ ಎಷ್ಟು ಪ್ರಭಾವವನ್ನು ಬೀರುತ್ತದೆ ಎಂಬುದನ್ನು ಕಲಿಸಿಕೊಡಬೇಕು.

ಗೌರವ: ಕೆಲ ಮಕ್ಕಳು ತಮಗಿಂತ ದೊಡ್ಡವರಿಗೆ ಗೌರವ ಕೊಟ್ಟು ಮಾತನಾಡುವುದಿಲ್ಲ. ಹೀಗಿರುವಾಗ ತಂದೆಯಾದವನು, ಇತರರಿಗೆ ಗೌರವ ಕೊಡುವುದು ಎಷ್ಟು ಮುಖ್ಯ, ಈ ನಮ್ಮ ಸಣ್ಣ ನಡೆ ಎಷ್ಟು ಪ್ರಭಾವವನ್ನು ಬೀರುತ್ತದೆ ಎಂಬುದನ್ನು ಕಲಿಸಿಕೊಡಬೇಕು.

1 / 7
ಕುಟುಂಬದ ಮೌಲ್ಯ: ತಮ್ಮದೇ ಸುಂದರ ಬದುಕು ಕಟ್ಟಿಕೊಂಡ ಬಳಿಕ ತಂದೆ-ತಾಯಿಯನ್ನು ನಡು ದಾರಿಯಲ್ಲಿ ಬಿಟ್ಟುಹೋದ ಅದೆಷ್ಟೋ ಮಕ್ಕಳಿದ್ದಾರೆ. ಹೀಗಿರುವಾಗ ಪ್ರತಿಯೊಬ್ಬ ತಂದೆಯೂ ಸಣ್ಣ ವಯಸ್ಸಿನಿಂದಲೇ ಮಕ್ಕಳಿಗೆ ತಂದೆ-ತಾಯಿ ಹಾಗೂ ಕುಟುಂಬದ ಮೌಲ್ಯಗಳ ಬಗ್ಗೆ ಮಕ್ಕಳಿಗೆ ಕಲಿಸಿಕೊಡಬೇಕು.

ಕುಟುಂಬದ ಮೌಲ್ಯ: ತಮ್ಮದೇ ಸುಂದರ ಬದುಕು ಕಟ್ಟಿಕೊಂಡ ಬಳಿಕ ತಂದೆ-ತಾಯಿಯನ್ನು ನಡು ದಾರಿಯಲ್ಲಿ ಬಿಟ್ಟುಹೋದ ಅದೆಷ್ಟೋ ಮಕ್ಕಳಿದ್ದಾರೆ. ಹೀಗಿರುವಾಗ ಪ್ರತಿಯೊಬ್ಬ ತಂದೆಯೂ ಸಣ್ಣ ವಯಸ್ಸಿನಿಂದಲೇ ಮಕ್ಕಳಿಗೆ ತಂದೆ-ತಾಯಿ ಹಾಗೂ ಕುಟುಂಬದ ಮೌಲ್ಯಗಳ ಬಗ್ಗೆ ಮಕ್ಕಳಿಗೆ ಕಲಿಸಿಕೊಡಬೇಕು.

2 / 7
ಯಶಸ್ಸಿಗೆ ಅಡ್ಡದಾರಿಯಿಲ್ಲ: ಪ್ರತಿಯೊಬ್ಬ ತಂದೆಯೂ ತನ್ನ ಮಕ್ಕಳಿಗೆ ಯಶಸ್ಸಿಗೆ ಯಾವುದೇ ಅಡ್ಡ ದಾರಿಗಳಿಲ್ಲ ಎಂಬುದನ್ನು ಕಲಿಸಬೇಕು. ಕಷ್ಟಪಟ್ಟರೆ ಮಾತ್ರ ಆ ಶ್ರಮಕ್ಕೆ ಪ್ರತಿಫಲ ಸಿಗುತ್ತೆ, ಯಶಸ್ಸು ಎಂಬುದು ಸಿಗುತ್ತದೆ ಎಂಬುದನ್ನು ಕಲಿಸಿಕೊಡಬೇಕು.

ಯಶಸ್ಸಿಗೆ ಅಡ್ಡದಾರಿಯಿಲ್ಲ: ಪ್ರತಿಯೊಬ್ಬ ತಂದೆಯೂ ತನ್ನ ಮಕ್ಕಳಿಗೆ ಯಶಸ್ಸಿಗೆ ಯಾವುದೇ ಅಡ್ಡ ದಾರಿಗಳಿಲ್ಲ ಎಂಬುದನ್ನು ಕಲಿಸಬೇಕು. ಕಷ್ಟಪಟ್ಟರೆ ಮಾತ್ರ ಆ ಶ್ರಮಕ್ಕೆ ಪ್ರತಿಫಲ ಸಿಗುತ್ತೆ, ಯಶಸ್ಸು ಎಂಬುದು ಸಿಗುತ್ತದೆ ಎಂಬುದನ್ನು ಕಲಿಸಿಕೊಡಬೇಕು.

3 / 7
ಆತ್ಮವಿಶ್ವಾಸ: ಪ್ರತಿಯೊಬ್ಬ ತಂದೆಯೂ ಭಯ, ಕಷ್ಟ, ಸವಾಲುಗಳನ್ನು ಹೇಗೆ ಎದುರಿಸಿ ನಿಲ್ಲುವುದು, ಧೈರ್ಯಶಾಲಿಯಾಗಿರುವುದು ಹೇಗೆ, ಆತ್ಮವಿಶ್ವಾಸವನ್ನು ಹೇಗೆ ಬೆಳೆಸಿಕೊಳ್ಳುವುದು ಇಂತಹ ವಿಷಯಗಳನ್ನು ಮಕ್ಕಳಿಗೆ ಕಲಿಸಿಕೊಡಬೇಕು.

ಆತ್ಮವಿಶ್ವಾಸ: ಪ್ರತಿಯೊಬ್ಬ ತಂದೆಯೂ ಭಯ, ಕಷ್ಟ, ಸವಾಲುಗಳನ್ನು ಹೇಗೆ ಎದುರಿಸಿ ನಿಲ್ಲುವುದು, ಧೈರ್ಯಶಾಲಿಯಾಗಿರುವುದು ಹೇಗೆ, ಆತ್ಮವಿಶ್ವಾಸವನ್ನು ಹೇಗೆ ಬೆಳೆಸಿಕೊಳ್ಳುವುದು ಇಂತಹ ವಿಷಯಗಳನ್ನು ಮಕ್ಕಳಿಗೆ ಕಲಿಸಿಕೊಡಬೇಕು.

4 / 7
ಜವಾಬ್ದಾರಿ: ತಂದೆಯಾದವನು ತನ್ನ ಮಕ್ಕಳಿಗೆ ಜವಾಬ್ದಾರಿಯ ಪಾಠವನ್ನು ಮಾಡಲೇಬೇಕು. ಹೌದು ಸಂಬಂಧವನ್ನು ನಿಭಾಯಿಸುವುದರಲ್ಲಿ ಆಗಿರಲಿ ಅಥವಾ ಕೆಲಸದಲ್ಲಿಯೇ ಆಗಿರಲಿ ಜವಾಬ್ದಾರಿ ಎಷ್ಟು ಮುಖ್ಯ, ಜವಾಬ್ದಾರಿಯುತ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಎಷ್ಟು ಮುಖ್ಯ ಎಂಬುದನ್ನು ಕಲಿಸಿಕೊಡಬೇಕು.

ಜವಾಬ್ದಾರಿ: ತಂದೆಯಾದವನು ತನ್ನ ಮಕ್ಕಳಿಗೆ ಜವಾಬ್ದಾರಿಯ ಪಾಠವನ್ನು ಮಾಡಲೇಬೇಕು. ಹೌದು ಸಂಬಂಧವನ್ನು ನಿಭಾಯಿಸುವುದರಲ್ಲಿ ಆಗಿರಲಿ ಅಥವಾ ಕೆಲಸದಲ್ಲಿಯೇ ಆಗಿರಲಿ ಜವಾಬ್ದಾರಿ ಎಷ್ಟು ಮುಖ್ಯ, ಜವಾಬ್ದಾರಿಯುತ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಎಷ್ಟು ಮುಖ್ಯ ಎಂಬುದನ್ನು ಕಲಿಸಿಕೊಡಬೇಕು.

5 / 7
ಮಹಿಳೆಯರಿಗೆ ಗೌರವ ಕೊಡುವುದು: ವಿಶೇಷವಾಗಿ ತಂದೆಯಾದವನು ತನ್ನ ಮಗನಿಗೆ ಮಹಿಳೆಯರಿಗೆ ಗೌರವ ಕೊಡುವುದರ ಬಗ್ಗೆ ಕಲಿಸಿಕೊಡಲೇಬೇಕು. ಹೌದು ಕೆಟ್ಟ ಭಾವನೆಯಿಂದ ಕಾಣಬಾರದು, ಆಕೆಗೆ ಗೌರವ ಕೊಡಬೇಕು ಎಂಬುದನ್ನು ಸಣ್ಣ ವಯಸ್ಸಿನಿಂದಲೇ ಹೇಳಬೇಕು.

ಮಹಿಳೆಯರಿಗೆ ಗೌರವ ಕೊಡುವುದು: ವಿಶೇಷವಾಗಿ ತಂದೆಯಾದವನು ತನ್ನ ಮಗನಿಗೆ ಮಹಿಳೆಯರಿಗೆ ಗೌರವ ಕೊಡುವುದರ ಬಗ್ಗೆ ಕಲಿಸಿಕೊಡಲೇಬೇಕು. ಹೌದು ಕೆಟ್ಟ ಭಾವನೆಯಿಂದ ಕಾಣಬಾರದು, ಆಕೆಗೆ ಗೌರವ ಕೊಡಬೇಕು ಎಂಬುದನ್ನು ಸಣ್ಣ ವಯಸ್ಸಿನಿಂದಲೇ ಹೇಳಬೇಕು.

6 / 7
ಪ್ರಾಮಾಣಿಕತೆ: ಪ್ರಾಮಾಣಿಕತೆಯ ವಿಷಯವನ್ನು ತಂದೆಯಾದವನು ಮಕ್ಕಳಿಗೆ ಕಲಿಸಿಕೊಡಬೇಕು. ಸ್ನೇಹ, ಪ್ರೀತಿ ಯಾವುದೇ ಸಂಬಂಧದಲ್ಲಿ ಅಥವಾ ಬದುಕಿನಲ್ಲಿ ಪ್ರಾಮಾಣಿಕತೆ ಎಷ್ಟು ಮುಖ್ಯ ಎಂಬುದರ ಬಗ್ಗೆ ಕಲಿಸಬೇಕು. ಇದಲ್ಲದೆ ಶಿಸ್ತು, ಹಣಕಾಸು ನಿರ್ವಹಣೆ, ಜೀವನ ಹೇಗೆ ಸಾಗಿಸಬೇಕು, ಸಮಾಜದಲ್ಲಿ ಹೇಗೆ ಬದುಕಬೇಕು ಎಂಬ ವಿಚಾರಗಳ ಬಗ್ಗೆ ಮಕ್ಕಳಿಗೆ ತಂದೆಯಾದವನು ಕಲಿಸಿಕೊಡಬೇಕು.

ಪ್ರಾಮಾಣಿಕತೆ: ಪ್ರಾಮಾಣಿಕತೆಯ ವಿಷಯವನ್ನು ತಂದೆಯಾದವನು ಮಕ್ಕಳಿಗೆ ಕಲಿಸಿಕೊಡಬೇಕು. ಸ್ನೇಹ, ಪ್ರೀತಿ ಯಾವುದೇ ಸಂಬಂಧದಲ್ಲಿ ಅಥವಾ ಬದುಕಿನಲ್ಲಿ ಪ್ರಾಮಾಣಿಕತೆ ಎಷ್ಟು ಮುಖ್ಯ ಎಂಬುದರ ಬಗ್ಗೆ ಕಲಿಸಬೇಕು. ಇದಲ್ಲದೆ ಶಿಸ್ತು, ಹಣಕಾಸು ನಿರ್ವಹಣೆ, ಜೀವನ ಹೇಗೆ ಸಾಗಿಸಬೇಕು, ಸಮಾಜದಲ್ಲಿ ಹೇಗೆ ಬದುಕಬೇಕು ಎಂಬ ವಿಚಾರಗಳ ಬಗ್ಗೆ ಮಕ್ಕಳಿಗೆ ತಂದೆಯಾದವನು ಕಲಿಸಿಕೊಡಬೇಕು.

7 / 7
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ