AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paris Olympics 2024: ಕಂಚು ಗೆದ್ದ ಸ್ವಪ್ನಿಲ್​ಗೆ 1 ಕೋಟಿ ರೂ. ಬಹುಮಾನ! ಉದ್ಯೋಗದಲ್ಲೂ ಮುಂಬಡ್ತಿ

Paris Olympics 2024: ಸ್ವಪ್ನಿಲ್ ಗೆಲುವಿನಿಂದ ಇಡೀ ದೇಶದಲ್ಲಿ ಸಂತಸದ ಅಲೆ ಎದ್ದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಪ್ನಿಲ್​ಗೆ ಕರೆ ಮಾಡಿ ಶುಭಾಷಯ ತಿಳಿಸಿದ್ದಾರೆ. ಇದೀಗ ಭಾರತಕ್ಕೆ ಮೂರನೇ ಒಲಿಂಪಿಕ್ಸ್ ಪದಕ ಗೆದ್ದುಕೊಟ್ಟ ಸ್ವಪ್ನಿಲ್​ಗೆ ಬರೋಬ್ಬರಿ 1 ಕೋಟಿ ರೂ. ಬಹುಮಾನ ಘೋಷಿಸಲಾಗಿದೆ. ಅಲ್ಲದೆ ಅವರು ಸೇವೆ ಸಲ್ಲಿಸುತ್ತಿರುವ ಸೆಂಟ್ರಲ್ ರೈಲ್ವೇಸ್ ಕೂಡ ಅವರಿಗೆ ಭರ್ಜರಿ ಗಿಫ್ಟ್ ನೀಡಿದೆ.

ಪೃಥ್ವಿಶಂಕರ
|

Updated on: Aug 01, 2024 | 8:43 PM

Share
2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಸ್ವಪ್ನಿಲ್ ಕುಸಾಲೆ ಇತಿಹಾಸ ನಿರ್ಮಿಸಿದ್ದಾರೆ. 50 ಮೀಟರ್ ರೈಫಲ್ ಈವೆಂಟ್​ನಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡುವ ಮೂಲಕ ಸ್ವಪ್ನಿಲ್, ಭಾರತದ ಪದಕಗಳ ಸಂಖ್ಯೆಯನ್ನು ಮೂರಕ್ಕೇರಿಸಿದ್ದಾರೆ.

2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಸ್ವಪ್ನಿಲ್ ಕುಸಾಲೆ ಇತಿಹಾಸ ನಿರ್ಮಿಸಿದ್ದಾರೆ. 50 ಮೀಟರ್ ರೈಫಲ್ ಈವೆಂಟ್​ನಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡುವ ಮೂಲಕ ಸ್ವಪ್ನಿಲ್, ಭಾರತದ ಪದಕಗಳ ಸಂಖ್ಯೆಯನ್ನು ಮೂರಕ್ಕೇರಿಸಿದ್ದಾರೆ.

1 / 5
ಇವರ ಗೆಲುವಿನಿಂದ ಇಡೀ ದೇಶದಲ್ಲಿ ಸಂತಸದ ಅಲೆ ಎದ್ದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಪ್ನಿಲ್​ಗೆ ಕರೆ ಮಾಡಿ ಶುಭಾಷಯ ತಿಳಿಸಿದ್ದಾರೆ. ಇದೀಗ ಭಾರತಕ್ಕೆ ಮೂರನೇ ಒಲಿಂಪಿಕ್ಸ್ ಪದಕ ಗೆದ್ದುಕೊಟ್ಟ ಸ್ವಪ್ನಿಲ್​ಗೆ ಬರೋಬ್ಬರಿ 1 ಕೋಟಿ ರೂ. ಬಹುಮಾನ ಘೋಷಿಸಲಾಗಿದೆ. ಅಲ್ಲದೆ ಅವರು ಸೇವೆ ಸಲ್ಲಿಸುತ್ತಿರುವ ಸೆಂಟ್ರಲ್ ರೈಲ್ವೇಸ್ ಕೂಡ ಅವರಿಗೆ ಭರ್ಜರಿ ಗಿಫ್ಟ್ ನೀಡಿದೆ.

ಇವರ ಗೆಲುವಿನಿಂದ ಇಡೀ ದೇಶದಲ್ಲಿ ಸಂತಸದ ಅಲೆ ಎದ್ದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಪ್ನಿಲ್​ಗೆ ಕರೆ ಮಾಡಿ ಶುಭಾಷಯ ತಿಳಿಸಿದ್ದಾರೆ. ಇದೀಗ ಭಾರತಕ್ಕೆ ಮೂರನೇ ಒಲಿಂಪಿಕ್ಸ್ ಪದಕ ಗೆದ್ದುಕೊಟ್ಟ ಸ್ವಪ್ನಿಲ್​ಗೆ ಬರೋಬ್ಬರಿ 1 ಕೋಟಿ ರೂ. ಬಹುಮಾನ ಘೋಷಿಸಲಾಗಿದೆ. ಅಲ್ಲದೆ ಅವರು ಸೇವೆ ಸಲ್ಲಿಸುತ್ತಿರುವ ಸೆಂಟ್ರಲ್ ರೈಲ್ವೇಸ್ ಕೂಡ ಅವರಿಗೆ ಭರ್ಜರಿ ಗಿಫ್ಟ್ ನೀಡಿದೆ.

2 / 5
ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿರುವ ಸ್ವಪ್ನಿಲ್ ಫೈನಲ್​ ಸುತ್ತಿನಲ್ಲಿ  451.4 ಕಲೆಹಾಕಿ ಕಂಚಿನ ಪದಕ ಗೆದ್ದರು. ಹೀಗಾಗಿ ದೇಶಕ್ಕೆ ಕೀರ್ತಿ ತಂದಿರುವ ಸ್ವಪ್ನಿಲ್​ಗೆ ಮುಂಬಡ್ತಿ ನೀಡುವುದಾಗಿ ಸೆಂಟ್ರಲ್ ರೈಲ್ವೇ ಜನರಲ್ ಮ್ಯಾನೇಜರ್ ರಾಮಕರನ್ ಯಾದವ್ ಘೋಷಿಸಿದ್ದಾರೆ. ದೇಶಕ್ಕೆ ಹಾಗೂ ರೈಲ್ವೇಗೆ ಕೀರ್ತಿ ತಂದ ಕಾರಣ ಟಿಸಿ ಹುದ್ದೆಯಿಂದ ಬಡ್ತಿ ನೀಡಿದ್ದು, ‘ಆಫೀಸರ್ ಆನ್ ಸ್ಪೆಷಲ್ ಡ್ಯೂಟಿ’ ಅಂದರೆ ಒಎಸ್​ಡಿ ಆಗಿ ನೇಮಿಸಲಾಗುವುದು ಎಂದಿದ್ದಾರೆ.

ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿರುವ ಸ್ವಪ್ನಿಲ್ ಫೈನಲ್​ ಸುತ್ತಿನಲ್ಲಿ 451.4 ಕಲೆಹಾಕಿ ಕಂಚಿನ ಪದಕ ಗೆದ್ದರು. ಹೀಗಾಗಿ ದೇಶಕ್ಕೆ ಕೀರ್ತಿ ತಂದಿರುವ ಸ್ವಪ್ನಿಲ್​ಗೆ ಮುಂಬಡ್ತಿ ನೀಡುವುದಾಗಿ ಸೆಂಟ್ರಲ್ ರೈಲ್ವೇ ಜನರಲ್ ಮ್ಯಾನೇಜರ್ ರಾಮಕರನ್ ಯಾದವ್ ಘೋಷಿಸಿದ್ದಾರೆ. ದೇಶಕ್ಕೆ ಹಾಗೂ ರೈಲ್ವೇಗೆ ಕೀರ್ತಿ ತಂದ ಕಾರಣ ಟಿಸಿ ಹುದ್ದೆಯಿಂದ ಬಡ್ತಿ ನೀಡಿದ್ದು, ‘ಆಫೀಸರ್ ಆನ್ ಸ್ಪೆಷಲ್ ಡ್ಯೂಟಿ’ ಅಂದರೆ ಒಎಸ್​ಡಿ ಆಗಿ ನೇಮಿಸಲಾಗುವುದು ಎಂದಿದ್ದಾರೆ.

3 / 5
ಇದರ ಜೊತೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ ಸ್ವಪ್ನಿಲ್ ಕುಸಾಲೆ ಕುಟುಂಬಕ್ಕೆ ಕರೆ ಮಾಡಿ ಅಭಿನಂದಿಸಿದ್ದಾರೆ. ಭವಿಷ್ಯದಲ್ಲಿ ಕುಟುಂಬದವರ ಕನಸು ನನಸಾಗಿಸಲು ಸರ್ಕಾರದಿಂದ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲ, 1 ಕೋಟಿ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದಾರೆ.

ಇದರ ಜೊತೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ ಸ್ವಪ್ನಿಲ್ ಕುಸಾಲೆ ಕುಟುಂಬಕ್ಕೆ ಕರೆ ಮಾಡಿ ಅಭಿನಂದಿಸಿದ್ದಾರೆ. ಭವಿಷ್ಯದಲ್ಲಿ ಕುಟುಂಬದವರ ಕನಸು ನನಸಾಗಿಸಲು ಸರ್ಕಾರದಿಂದ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲ, 1 ಕೋಟಿ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದಾರೆ.

4 / 5
ಒಲಿಂಪಿಕ್ ಪದಕ ಗೆದ್ದಿರುವ ಸ್ವಪ್ನಿಲ್ ಕುಸಾಲೆ, ಧೋನಿಯ ಅಪ್ಪಟ ಅಭಿಮಾನಿ. ವಿಶೇಷ ಸಂಗತಿಯೆಂದರೆ ಧೋನಿಯಂತೆ ಸ್ವಪ್ನಿಲ್ ಕೂಡ ಟಿಕೆಟ್ ಕಲೆಕ್ಟರ್ ಕೆಲಸದಿಂದ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಧೋನಿ 7 ನೇ ನಂಬರ್ ಜೆರ್ಸಿ ತೊಟ್ಟು ಕಣಕ್ಕಿಳಿದರೆ, ಇತ್ತ ಸ್ವಪ್ನಿಲ್ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ 7 ನೇ ಭಾರತೀಯ ಶೂಟರ್ ಆಗಿದ್ದಾರೆ. ಹಾಗೆಯೇ ಅರ್ಹತಾ ಸುತ್ತಿನಲ್ಲಿ ಸ್ವಪ್ನಿಲ್ 7 ನೇ ಸ್ಥಾನ ಪಡೆದಿದ್ದರು ಎಂಬುದು ಇಲ್ಲಿ ಗಮನಾರ್ಹ.

ಒಲಿಂಪಿಕ್ ಪದಕ ಗೆದ್ದಿರುವ ಸ್ವಪ್ನಿಲ್ ಕುಸಾಲೆ, ಧೋನಿಯ ಅಪ್ಪಟ ಅಭಿಮಾನಿ. ವಿಶೇಷ ಸಂಗತಿಯೆಂದರೆ ಧೋನಿಯಂತೆ ಸ್ವಪ್ನಿಲ್ ಕೂಡ ಟಿಕೆಟ್ ಕಲೆಕ್ಟರ್ ಕೆಲಸದಿಂದ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಧೋನಿ 7 ನೇ ನಂಬರ್ ಜೆರ್ಸಿ ತೊಟ್ಟು ಕಣಕ್ಕಿಳಿದರೆ, ಇತ್ತ ಸ್ವಪ್ನಿಲ್ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ 7 ನೇ ಭಾರತೀಯ ಶೂಟರ್ ಆಗಿದ್ದಾರೆ. ಹಾಗೆಯೇ ಅರ್ಹತಾ ಸುತ್ತಿನಲ್ಲಿ ಸ್ವಪ್ನಿಲ್ 7 ನೇ ಸ್ಥಾನ ಪಡೆದಿದ್ದರು ಎಂಬುದು ಇಲ್ಲಿ ಗಮನಾರ್ಹ.

5 / 5
Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ