AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paris Olympics 2024: ಕ್ವಾರ್ಟರ್ ಫೈನಲ್‌ಗೆ ಲಗ್ಗೆ; ಇತಿಹಾಸ ಬರೆದ ಸಾತ್ವಿಕ್‌- ಚಿರಾಗ್ ಜೋಡಿ

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಜೋಡಿಯಾದ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರ ಪುರುಷರ ಡಬಲ್ಸ್‌ನ ಎರಡನೇ ಪಂದ್ಯ ರದ್ದಾಗಿದೆ. ಜರ್ಮನಿಯ ಮಾರ್ವಿನ್ ಸೀಡೆಲ್ ಮತ್ತು ಮಾರ್ಕ್ ಲ್ಯಾಮ್ಸ್ಫೂಸ್ ಗಾಯದ ಕಾರಣದಿಂದ ಕ್ರೀಡಾಕುಟದಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಭಾರತದ ಜೋಡಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಪೃಥ್ವಿಶಂಕರ
|

Updated on:Jul 29, 2024 | 8:40 PM

Share
ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಜೋಡಿಯಾದ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರ ಪುರುಷರ ಡಬಲ್ಸ್‌ನ ಎರಡನೇ ಪಂದ್ಯ ರದ್ದಾಗಿದೆ. ಜರ್ಮನಿಯ ಮಾರ್ವಿನ್ ಸೀಡೆಲ್ ಮತ್ತು ಮಾರ್ಕ್ ಲ್ಯಾಮ್ಸ್ಫೂಸ್ ಗಾಯದ ಕಾರಣದಿಂದ ಕ್ರೀಡಾಕುಟದಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಭಾರತದ ಜೋಡಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಜೋಡಿಯಾದ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರ ಪುರುಷರ ಡಬಲ್ಸ್‌ನ ಎರಡನೇ ಪಂದ್ಯ ರದ್ದಾಗಿದೆ. ಜರ್ಮನಿಯ ಮಾರ್ವಿನ್ ಸೀಡೆಲ್ ಮತ್ತು ಮಾರ್ಕ್ ಲ್ಯಾಮ್ಸ್ಫೂಸ್ ಗಾಯದ ಕಾರಣದಿಂದ ಕ್ರೀಡಾಕುಟದಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಭಾರತದ ಜೋಡಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

1 / 5
ವಾಸ್ತವವಾಗಿ, ಮೊದಲ ಪಂದ್ಯದಲ್ಲಿ, ಭಾರತದ ಸಾತ್ವಿಕ್ ಮತ್ತು ಚಿರಾಗ್ ಜೋಡಿಯು ಆತಿಥೇಯ ಫ್ರೆಂಚ್ ಜೋಡಿಯಾದ ಕೊರ್ವಿ ಲ್ಯೂಕಾಸ್ ಮತ್ತು ಲೇಬರ್ ರೊನಾನ್ ವಿರುದ್ಧ 21-17, 21-14 ರಲ್ಲಿ ಜಯಗಳಿಸಿತ್ತು. ಅದೇ ಸಮಯದಲ್ಲಿ, ಈಗ ಫ್ರಾನ್ಸ್‌ನ ಕೊರ್ವಿ ಲುಕಾಸ್ ಮತ್ತು ಲೇಬರ್ ರೊನಾನ್ ಜೋಡಿ ಇಂಡೋನೇಷ್ಯಾದ ಫಜರ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾನ್ ಅರ್ಡಿಯಾಂಟೊ ವಿರುದ್ಧ ಸೋತಿದೆ. ಹೀಗಾಗಿ ಸಾತ್ವಿಕ್ ಮತ್ತು ಚಿರಾಗ್ ಜೋಡಿ ತಮ್ಮ ಗುಂಪಿನಲ್ಲಿ ಟಾಪ್-2 ಸ್ಥಾನ ಪಡೆದುಕೊಂಡಿದೆ.

ವಾಸ್ತವವಾಗಿ, ಮೊದಲ ಪಂದ್ಯದಲ್ಲಿ, ಭಾರತದ ಸಾತ್ವಿಕ್ ಮತ್ತು ಚಿರಾಗ್ ಜೋಡಿಯು ಆತಿಥೇಯ ಫ್ರೆಂಚ್ ಜೋಡಿಯಾದ ಕೊರ್ವಿ ಲ್ಯೂಕಾಸ್ ಮತ್ತು ಲೇಬರ್ ರೊನಾನ್ ವಿರುದ್ಧ 21-17, 21-14 ರಲ್ಲಿ ಜಯಗಳಿಸಿತ್ತು. ಅದೇ ಸಮಯದಲ್ಲಿ, ಈಗ ಫ್ರಾನ್ಸ್‌ನ ಕೊರ್ವಿ ಲುಕಾಸ್ ಮತ್ತು ಲೇಬರ್ ರೊನಾನ್ ಜೋಡಿ ಇಂಡೋನೇಷ್ಯಾದ ಫಜರ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾನ್ ಅರ್ಡಿಯಾಂಟೊ ವಿರುದ್ಧ ಸೋತಿದೆ. ಹೀಗಾಗಿ ಸಾತ್ವಿಕ್ ಮತ್ತು ಚಿರಾಗ್ ಜೋಡಿ ತಮ್ಮ ಗುಂಪಿನಲ್ಲಿ ಟಾಪ್-2 ಸ್ಥಾನ ಪಡೆದುಕೊಂಡಿದೆ.

2 / 5
ಸಾತ್ವಿಕ್ ಮತ್ತು ಚಿರಾಗ್ ಜೋಡಿ ಟಾಪ್-2 ರೊಂದಿಗೆ ಗುಂಪು ಹಂತವನ್ನು ಕೊನೆಗೊಳಿಸಲಿದೆ. ಹೀಗಿರುವಾಗ ಈ ಜೋಡಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ಇದರೊಂದಿಗೆ ಸಾತ್ವಿಕ್ ಮತ್ತು ಚಿರಾಗ್ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ಭಾರತದ ಬ್ಯಾಡ್ಮಿಂಟನ್‌ನಲ್ಲಿ ದೊಡ್ಡ ಸಾಧನೆಯಾಗಿದೆ.

ಸಾತ್ವಿಕ್ ಮತ್ತು ಚಿರಾಗ್ ಜೋಡಿ ಟಾಪ್-2 ರೊಂದಿಗೆ ಗುಂಪು ಹಂತವನ್ನು ಕೊನೆಗೊಳಿಸಲಿದೆ. ಹೀಗಿರುವಾಗ ಈ ಜೋಡಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ಇದರೊಂದಿಗೆ ಸಾತ್ವಿಕ್ ಮತ್ತು ಚಿರಾಗ್ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ಭಾರತದ ಬ್ಯಾಡ್ಮಿಂಟನ್‌ನಲ್ಲಿ ದೊಡ್ಡ ಸಾಧನೆಯಾಗಿದೆ.

3 / 5
ಭಾರತದ ಸ್ಟಾರ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜುಲೈ 30 ರಂದು ಇಂಡೋನೇಷ್ಯಾದ ಫಜರ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾನ್ ಅರ್ಡಿಯಾಂಟೊ ಅವರನ್ನು ಎದುರಿಸಲಿದ್ದಾರೆ. ಈ ಪಂದ್ಯದಲ್ಲಿ ಇಂಡೋನೇಷ್ಯಾ ಜೋಡಿಯನ್ನು ಸೋಲಿಸಿದರೆ ಭಾರತದ ಜೋಡಿ ಗುಂಪು ಹಂತದಲ್ಲಿ ಅಗ್ರಸ್ಥಾನಕ್ಕೇರಲಿದೆ.

ಭಾರತದ ಸ್ಟಾರ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜುಲೈ 30 ರಂದು ಇಂಡೋನೇಷ್ಯಾದ ಫಜರ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾನ್ ಅರ್ಡಿಯಾಂಟೊ ಅವರನ್ನು ಎದುರಿಸಲಿದ್ದಾರೆ. ಈ ಪಂದ್ಯದಲ್ಲಿ ಇಂಡೋನೇಷ್ಯಾ ಜೋಡಿಯನ್ನು ಸೋಲಿಸಿದರೆ ಭಾರತದ ಜೋಡಿ ಗುಂಪು ಹಂತದಲ್ಲಿ ಅಗ್ರಸ್ಥಾನಕ್ಕೇರಲಿದೆ.

4 / 5
ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ನಡುವಿನ ಈ ಪಂದ್ಯ ಜುಲೈ 30 ರಂದು ಸಂಜೆ 05:30 ಕ್ಕೆ ನಡೆಯಲಿದೆ. ಗೆಲುವಿನೊಂದಿಗೆ ಕ್ವಾರ್ಟರ್‌ಫೈನಲ್‌ ತಲುಪುವತ್ತ ಅವರ ದೃಷ್ಟಿ ಇದೆ. ಈ ಜೋಡಿ ಒಲಿಂಪಿಕ್ಸ್ ಪದಕ ಗೆಲ್ಲುವ ದೊಡ್ಡ ಸ್ಪರ್ಧಿಯಾಗಿದ್ದು, ಭಾರತೀಯರು ಈ ಜೋಡಿಯ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ನಡುವಿನ ಈ ಪಂದ್ಯ ಜುಲೈ 30 ರಂದು ಸಂಜೆ 05:30 ಕ್ಕೆ ನಡೆಯಲಿದೆ. ಗೆಲುವಿನೊಂದಿಗೆ ಕ್ವಾರ್ಟರ್‌ಫೈನಲ್‌ ತಲುಪುವತ್ತ ಅವರ ದೃಷ್ಟಿ ಇದೆ. ಈ ಜೋಡಿ ಒಲಿಂಪಿಕ್ಸ್ ಪದಕ ಗೆಲ್ಲುವ ದೊಡ್ಡ ಸ್ಪರ್ಧಿಯಾಗಿದ್ದು, ಭಾರತೀಯರು ಈ ಜೋಡಿಯ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

5 / 5

Published On - 8:37 pm, Mon, 29 July 24

ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ