AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paris Olympics 2024: ಕ್ವಾರ್ಟರ್ ಫೈನಲ್‌ಗೆ ಲಗ್ಗೆ; ಇತಿಹಾಸ ಬರೆದ ಸಾತ್ವಿಕ್‌- ಚಿರಾಗ್ ಜೋಡಿ

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಜೋಡಿಯಾದ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರ ಪುರುಷರ ಡಬಲ್ಸ್‌ನ ಎರಡನೇ ಪಂದ್ಯ ರದ್ದಾಗಿದೆ. ಜರ್ಮನಿಯ ಮಾರ್ವಿನ್ ಸೀಡೆಲ್ ಮತ್ತು ಮಾರ್ಕ್ ಲ್ಯಾಮ್ಸ್ಫೂಸ್ ಗಾಯದ ಕಾರಣದಿಂದ ಕ್ರೀಡಾಕುಟದಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಭಾರತದ ಜೋಡಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಪೃಥ್ವಿಶಂಕರ
|

Updated on:Jul 29, 2024 | 8:40 PM

Share
ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಜೋಡಿಯಾದ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರ ಪುರುಷರ ಡಬಲ್ಸ್‌ನ ಎರಡನೇ ಪಂದ್ಯ ರದ್ದಾಗಿದೆ. ಜರ್ಮನಿಯ ಮಾರ್ವಿನ್ ಸೀಡೆಲ್ ಮತ್ತು ಮಾರ್ಕ್ ಲ್ಯಾಮ್ಸ್ಫೂಸ್ ಗಾಯದ ಕಾರಣದಿಂದ ಕ್ರೀಡಾಕುಟದಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಭಾರತದ ಜೋಡಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಜೋಡಿಯಾದ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರ ಪುರುಷರ ಡಬಲ್ಸ್‌ನ ಎರಡನೇ ಪಂದ್ಯ ರದ್ದಾಗಿದೆ. ಜರ್ಮನಿಯ ಮಾರ್ವಿನ್ ಸೀಡೆಲ್ ಮತ್ತು ಮಾರ್ಕ್ ಲ್ಯಾಮ್ಸ್ಫೂಸ್ ಗಾಯದ ಕಾರಣದಿಂದ ಕ್ರೀಡಾಕುಟದಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಭಾರತದ ಜೋಡಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

1 / 5
ವಾಸ್ತವವಾಗಿ, ಮೊದಲ ಪಂದ್ಯದಲ್ಲಿ, ಭಾರತದ ಸಾತ್ವಿಕ್ ಮತ್ತು ಚಿರಾಗ್ ಜೋಡಿಯು ಆತಿಥೇಯ ಫ್ರೆಂಚ್ ಜೋಡಿಯಾದ ಕೊರ್ವಿ ಲ್ಯೂಕಾಸ್ ಮತ್ತು ಲೇಬರ್ ರೊನಾನ್ ವಿರುದ್ಧ 21-17, 21-14 ರಲ್ಲಿ ಜಯಗಳಿಸಿತ್ತು. ಅದೇ ಸಮಯದಲ್ಲಿ, ಈಗ ಫ್ರಾನ್ಸ್‌ನ ಕೊರ್ವಿ ಲುಕಾಸ್ ಮತ್ತು ಲೇಬರ್ ರೊನಾನ್ ಜೋಡಿ ಇಂಡೋನೇಷ್ಯಾದ ಫಜರ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾನ್ ಅರ್ಡಿಯಾಂಟೊ ವಿರುದ್ಧ ಸೋತಿದೆ. ಹೀಗಾಗಿ ಸಾತ್ವಿಕ್ ಮತ್ತು ಚಿರಾಗ್ ಜೋಡಿ ತಮ್ಮ ಗುಂಪಿನಲ್ಲಿ ಟಾಪ್-2 ಸ್ಥಾನ ಪಡೆದುಕೊಂಡಿದೆ.

ವಾಸ್ತವವಾಗಿ, ಮೊದಲ ಪಂದ್ಯದಲ್ಲಿ, ಭಾರತದ ಸಾತ್ವಿಕ್ ಮತ್ತು ಚಿರಾಗ್ ಜೋಡಿಯು ಆತಿಥೇಯ ಫ್ರೆಂಚ್ ಜೋಡಿಯಾದ ಕೊರ್ವಿ ಲ್ಯೂಕಾಸ್ ಮತ್ತು ಲೇಬರ್ ರೊನಾನ್ ವಿರುದ್ಧ 21-17, 21-14 ರಲ್ಲಿ ಜಯಗಳಿಸಿತ್ತು. ಅದೇ ಸಮಯದಲ್ಲಿ, ಈಗ ಫ್ರಾನ್ಸ್‌ನ ಕೊರ್ವಿ ಲುಕಾಸ್ ಮತ್ತು ಲೇಬರ್ ರೊನಾನ್ ಜೋಡಿ ಇಂಡೋನೇಷ್ಯಾದ ಫಜರ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾನ್ ಅರ್ಡಿಯಾಂಟೊ ವಿರುದ್ಧ ಸೋತಿದೆ. ಹೀಗಾಗಿ ಸಾತ್ವಿಕ್ ಮತ್ತು ಚಿರಾಗ್ ಜೋಡಿ ತಮ್ಮ ಗುಂಪಿನಲ್ಲಿ ಟಾಪ್-2 ಸ್ಥಾನ ಪಡೆದುಕೊಂಡಿದೆ.

2 / 5
ಸಾತ್ವಿಕ್ ಮತ್ತು ಚಿರಾಗ್ ಜೋಡಿ ಟಾಪ್-2 ರೊಂದಿಗೆ ಗುಂಪು ಹಂತವನ್ನು ಕೊನೆಗೊಳಿಸಲಿದೆ. ಹೀಗಿರುವಾಗ ಈ ಜೋಡಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ಇದರೊಂದಿಗೆ ಸಾತ್ವಿಕ್ ಮತ್ತು ಚಿರಾಗ್ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ಭಾರತದ ಬ್ಯಾಡ್ಮಿಂಟನ್‌ನಲ್ಲಿ ದೊಡ್ಡ ಸಾಧನೆಯಾಗಿದೆ.

ಸಾತ್ವಿಕ್ ಮತ್ತು ಚಿರಾಗ್ ಜೋಡಿ ಟಾಪ್-2 ರೊಂದಿಗೆ ಗುಂಪು ಹಂತವನ್ನು ಕೊನೆಗೊಳಿಸಲಿದೆ. ಹೀಗಿರುವಾಗ ಈ ಜೋಡಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ಇದರೊಂದಿಗೆ ಸಾತ್ವಿಕ್ ಮತ್ತು ಚಿರಾಗ್ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ಭಾರತದ ಬ್ಯಾಡ್ಮಿಂಟನ್‌ನಲ್ಲಿ ದೊಡ್ಡ ಸಾಧನೆಯಾಗಿದೆ.

3 / 5
ಭಾರತದ ಸ್ಟಾರ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜುಲೈ 30 ರಂದು ಇಂಡೋನೇಷ್ಯಾದ ಫಜರ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾನ್ ಅರ್ಡಿಯಾಂಟೊ ಅವರನ್ನು ಎದುರಿಸಲಿದ್ದಾರೆ. ಈ ಪಂದ್ಯದಲ್ಲಿ ಇಂಡೋನೇಷ್ಯಾ ಜೋಡಿಯನ್ನು ಸೋಲಿಸಿದರೆ ಭಾರತದ ಜೋಡಿ ಗುಂಪು ಹಂತದಲ್ಲಿ ಅಗ್ರಸ್ಥಾನಕ್ಕೇರಲಿದೆ.

ಭಾರತದ ಸ್ಟಾರ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜುಲೈ 30 ರಂದು ಇಂಡೋನೇಷ್ಯಾದ ಫಜರ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾನ್ ಅರ್ಡಿಯಾಂಟೊ ಅವರನ್ನು ಎದುರಿಸಲಿದ್ದಾರೆ. ಈ ಪಂದ್ಯದಲ್ಲಿ ಇಂಡೋನೇಷ್ಯಾ ಜೋಡಿಯನ್ನು ಸೋಲಿಸಿದರೆ ಭಾರತದ ಜೋಡಿ ಗುಂಪು ಹಂತದಲ್ಲಿ ಅಗ್ರಸ್ಥಾನಕ್ಕೇರಲಿದೆ.

4 / 5
ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ನಡುವಿನ ಈ ಪಂದ್ಯ ಜುಲೈ 30 ರಂದು ಸಂಜೆ 05:30 ಕ್ಕೆ ನಡೆಯಲಿದೆ. ಗೆಲುವಿನೊಂದಿಗೆ ಕ್ವಾರ್ಟರ್‌ಫೈನಲ್‌ ತಲುಪುವತ್ತ ಅವರ ದೃಷ್ಟಿ ಇದೆ. ಈ ಜೋಡಿ ಒಲಿಂಪಿಕ್ಸ್ ಪದಕ ಗೆಲ್ಲುವ ದೊಡ್ಡ ಸ್ಪರ್ಧಿಯಾಗಿದ್ದು, ಭಾರತೀಯರು ಈ ಜೋಡಿಯ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ನಡುವಿನ ಈ ಪಂದ್ಯ ಜುಲೈ 30 ರಂದು ಸಂಜೆ 05:30 ಕ್ಕೆ ನಡೆಯಲಿದೆ. ಗೆಲುವಿನೊಂದಿಗೆ ಕ್ವಾರ್ಟರ್‌ಫೈನಲ್‌ ತಲುಪುವತ್ತ ಅವರ ದೃಷ್ಟಿ ಇದೆ. ಈ ಜೋಡಿ ಒಲಿಂಪಿಕ್ಸ್ ಪದಕ ಗೆಲ್ಲುವ ದೊಡ್ಡ ಸ್ಪರ್ಧಿಯಾಗಿದ್ದು, ಭಾರತೀಯರು ಈ ಜೋಡಿಯ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

5 / 5

Published On - 8:37 pm, Mon, 29 July 24

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ