- TV9 Kannada Photo gallery Pavagada news Free Ksheera Bhagya milk powder given to Anganwadi sold in shops karnataka news
ಪಾವಗಡ: ಅಂಗನವಾಡಿಗಳಿಗೆ ನೀಡುವ ಉಚಿತ ಕ್ಷೀರಭಾಗ್ಯ ಹಾಲಿನ ಪೌಡರ್ ಅಂಗಡಿಗಳಲ್ಲಿ ಮಾರಾಟ
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈಎನ್ ಹೊಸಕೋಟೆಯ ಅಂಗಡಿಗಳಲ್ಲಿ ಅಂಗನವಾಡಿಯ ಹಾಲಿನ ಪುಡಿ ಪ್ಯಾಕೇಟ್ಗಳು ಪತ್ತೆಯಾಗಿವೆ. ಬಾಣಂತಿಯರಿಗೆ ಹಾಗೂ ಮಕ್ಕಳಿಗಾಗಿ ಸರ್ಕಾರ ನೀಡುತ್ತಿರುವ ಹಾಲಿನ ಪೌಡರನ್ನು ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದೆ.
Updated on: Jun 03, 2024 | 10:28 AM

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿ ದುರ್ಬಳಕೆಯಾಗುತ್ತಿದೆ. ಅಂಗನವಾಡಿಯಲ್ಲಿ ಇರಬೇಕಿದ್ದ ಕ್ಷೀರಭಾಗ್ಯದ ಹಾಲುಪುಡಿ ಅಂಗಡಿಯಲ್ಲಿ ಪತ್ತೆಯಾಗಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈಎನ್ ಹೊಸಕೋಟೆಯ ಅಂಗಡಿಗಳಲ್ಲಿ ಅಂಗನವಾಡಿಯ ಹಾಲಿನ ಪುಡಿ ಪ್ಯಾಕೇಟ್ಗಳು ಪತ್ತೆಯಾಗಿವೆ. ಬಾಣಂತಿಯರಿಗೆ ಹಾಗೂ ಮಕ್ಕಳಿಗಾಗಿ ಸರ್ಕಾರ ನೀಡುತ್ತಿರುವ ಹಾಲಿನ ಪೌಡರನ್ನು ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದೆ.

ಮಕ್ಕಳಲ್ಲಿನ ಅಪೌಷ್ಟಿಕತೆ ಹೋಗಲಾಡಿಸಲು ರಾಜ್ಯ ಸರ್ಕಾರ ಅಂಗನವಾಡಿಗಳಿಗೆ ಹಾಲಿನ ಪೌಡರ್ ಪೂರೈಸುತ್ತಿದೆ. ಆದರೆ ಅಕ್ರಮವಾಗಿ ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದ್ದು ಸರ್ಕಾರದ ಹಾಲಿನ ಪೌಡರ್ ಈಗ ಅಂಗಡಿಗಳಲ್ಲೂ ಮಾರಾಟ ಮಾಡಲಾಗುತ್ತಿದೆ. ಉಚಿತವಾಗಿಸುವುದನ್ನು ದುಡ್ಡಿಗೆ ಮಾರಾಟ ಮಾಡಿ ಹಣ ಮಾಡಲಾಗುತ್ತಿದೆ.

ವೈಎನ್ ಹೊಸಕೋಟೆಯ ಸುಮಾರು 8 ಅಂಗಡಿಗಳಲ್ಲಿ ಸರ್ಕಾರದ ಹಾಲಿನ ಪೌಡರ್ ಮಾರಾಟ ಮಾಡಲಾಗುತ್ತಿರುವುದು ಪತ್ತೆಯಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಂದಲೇ ಅಂಗಡಿಗಳಿಗೆ ಸರಬರಾಜು ಮಾಡಲಾಗುತ್ತಿದ್ದು ಮಹಿಳಾ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಅಕ್ರಮ ಪತ್ತೆ ಮಾಡಿದ್ದಾರೆ.

ಪಾವಗಡ ತಾಲೂಕಿನಲ್ಲೇ ಅತಿಹೆಚ್ಚು ಅಪೌಷ್ಟಿಕತೆ ಇರುವ ಮಕ್ಕಳಿದ್ದಾರೆ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಪಾವಗಡದತ್ತ ಗಮನ ಹರಿಸಬೇಕಿದೆ. ಮಕ್ಕಳಿಗೆ ಬಾಣಂತಿಯರಿಗೆ ನೀಡುವ ಹಾಲಿನ ಪೌಡರ್ ಮಾರಾಟವನ್ನು ತಪ್ಪಿಸಬೇಕಿದೆ.

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...



