AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಫಲ್ಗುಣಿ ನದಿ ಅಬ್ಬರ; ರಸ್ತೆ, ಮನೆ, ವಜ್ರದೇಹಿ ಮಠ ಜಲಾವೃತ, ದುರ್ಗಾಪರಮೇಶ್ವರಿ ದೇವಸ್ಥಾನದ ಮೇಲೆ ಗುಡ್ಡ ಕುಸಿತ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫಲ್ಗುಣಿಯ ಅಬ್ಬರಕ್ಕೆ ಮಠ, ಗೋಶಾಲೆ, ದೇವಸ್ಥಾನಗಳೆಲ್ಲ ಮುಳುಗಿವೆ. ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಮೇಲೆ ಗುಡ್ಡ ಕುಸಿದು ಹಾನಿಯಾಗಿದೆ. ದೇವಸ್ಥಾನದ ಗರ್ಭಗುಡಿ ಮತ್ತು‌ ಸುತ್ತು ಪೌಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ.

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Aug 01, 2024 | 12:20 PM

Share
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಮಳೆಗೆ ಫಲ್ಗುಣಿ ನದಿ ಉಕ್ಕಿ ಹರಿಯುತ್ತಿದ್ದು ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮ ದ್ವೀಪದಂತಾಗಿದೆ. ಹಲವು‌ ಮನೆಗಳಿಗೆ ನದಿ ನೀರು ನುಗ್ಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಮಳೆಗೆ ಫಲ್ಗುಣಿ ನದಿ ಉಕ್ಕಿ ಹರಿಯುತ್ತಿದ್ದು ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮ ದ್ವೀಪದಂತಾಗಿದೆ. ಹಲವು‌ ಮನೆಗಳಿಗೆ ನದಿ ನೀರು ನುಗ್ಗಿದೆ.

1 / 7
ಫಲ್ಗುಣಿ ನದಿಯಲ್ಲಿ ಏಕಾಏಕಿ‌ ನೀರು ಏರಿಕೆಯಾಗಿ ಅಮ್ಮುಂಜೆಯ ಸೋಮನಾಥೇಶ್ವರ ದೇಗುಲವು ಜಲಾವೃತಗೊಂಡಿದೆ. ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಮುಳುಗಿದ್ದು ನದಿಯಂತಾಗಿವೆ. ಪ್ರವಾಹ ಪೀಡಿತ ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.

ಫಲ್ಗುಣಿ ನದಿಯಲ್ಲಿ ಏಕಾಏಕಿ‌ ನೀರು ಏರಿಕೆಯಾಗಿ ಅಮ್ಮುಂಜೆಯ ಸೋಮನಾಥೇಶ್ವರ ದೇಗುಲವು ಜಲಾವೃತಗೊಂಡಿದೆ. ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಮುಳುಗಿದ್ದು ನದಿಯಂತಾಗಿವೆ. ಪ್ರವಾಹ ಪೀಡಿತ ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.

2 / 7
ಇನ್ನು ಮತ್ತೊಂದೆಡೆ ಫಲ್ಗುಣಿ ನದಿಯ ನೆರೆಗೆ ವಜ್ರದೇಹಿ ಮಠ ಕೂಡ ಮುಳುಗಿದೆ. ಮಂಗಳೂರಿನ ಪ್ರಸಿದ್ಧ ಗುರುಪುರ ವಜ್ರದೇಹಿ ಮಠ ಮುಳುಗಿದೆ. 50 ವರ್ಷಗಳ ಬಳಿಕ ಗುರುಪುರದಲ್ಲಿ ರಣ ಭೀಕರ ನೆರೆ ಬಂದಿದೆ.

ಇನ್ನು ಮತ್ತೊಂದೆಡೆ ಫಲ್ಗುಣಿ ನದಿಯ ನೆರೆಗೆ ವಜ್ರದೇಹಿ ಮಠ ಕೂಡ ಮುಳುಗಿದೆ. ಮಂಗಳೂರಿನ ಪ್ರಸಿದ್ಧ ಗುರುಪುರ ವಜ್ರದೇಹಿ ಮಠ ಮುಳುಗಿದೆ. 50 ವರ್ಷಗಳ ಬಳಿಕ ಗುರುಪುರದಲ್ಲಿ ರಣ ಭೀಕರ ನೆರೆ ಬಂದಿದೆ.

3 / 7
ಫಲ್ಗುಣಿಯ ಅಬ್ಬರಕ್ಕೆ ಮಠ, ಗೋಶಾಲೆ, ದೇವಸ್ಥಾನಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಇನ್ನು ವಜ್ರದೇಹಿ ಮಠದಲ್ಲಿದ್ದ ಗೋವುಗಳನ್ನ ಮಠದ ಆಡಳಿತ ಸಿಬ್ಬಂದಿ ಮಠದ ಮೇಲ್ಭಾಗದಲ್ಲಿರುವ ಜಾಗದಲ್ಲಿ ಕಟ್ಟಿ ಹಾಕಿದ್ದಾರೆ.

ಫಲ್ಗುಣಿಯ ಅಬ್ಬರಕ್ಕೆ ಮಠ, ಗೋಶಾಲೆ, ದೇವಸ್ಥಾನಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಇನ್ನು ವಜ್ರದೇಹಿ ಮಠದಲ್ಲಿದ್ದ ಗೋವುಗಳನ್ನ ಮಠದ ಆಡಳಿತ ಸಿಬ್ಬಂದಿ ಮಠದ ಮೇಲ್ಭಾಗದಲ್ಲಿರುವ ಜಾಗದಲ್ಲಿ ಕಟ್ಟಿ ಹಾಕಿದ್ದಾರೆ.

4 / 7
ನೀರು ಏರಿಕೆಯಾಗುತ್ತಿದ್ದು ಮಠದ ಒಳ ಭಾಗಕ್ಕೂ ನೀರು ನುಗ್ಗುವ ಆತಂಕ ಎದುರಾಗಿದೆ. ಇಂಥದ್ದೊಂದು ನೆರೆಯನ್ನ ಹಲವು ವರ್ಷಗಳ ಬಳಿಕ ಈಗಲೇ ನೋಡಿದ್ದು ಎಂದು ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ತಿಳಿಸಿದ್ದಾರೆ.

ನೀರು ಏರಿಕೆಯಾಗುತ್ತಿದ್ದು ಮಠದ ಒಳ ಭಾಗಕ್ಕೂ ನೀರು ನುಗ್ಗುವ ಆತಂಕ ಎದುರಾಗಿದೆ. ಇಂಥದ್ದೊಂದು ನೆರೆಯನ್ನ ಹಲವು ವರ್ಷಗಳ ಬಳಿಕ ಈಗಲೇ ನೋಡಿದ್ದು ಎಂದು ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ತಿಳಿಸಿದ್ದಾರೆ.

5 / 7
ಮಂಗಳೂರು ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಪಕ್ಕದ ಎರಡು ಬದಿಯು ನೆರೆ ನೀರು ಆವರಿಸಿದೆ. ಮದುವೆ ಹಾಲ್, ದೇವಸ್ಥಾನ, ಮನೆಗಳು ಜಲಾವೃತಗೊಂಡಿವೆ. ನೂರಾರು ಎಕರೆ ಕೃಷಿ ಭೂಮಿಗೂ ನದಿ ನೀರು ನುಗ್ಗಿದೆ. ಅಪಾಯದಲ್ಲಿರುವವರನ್ನು ಎಸ್.ಡಿ.ಆರ್.ಎಫ್ ಪಡೆ ಸ್ಥಳಾಂತರಿಸಿದೆ.

ಮಂಗಳೂರು ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಪಕ್ಕದ ಎರಡು ಬದಿಯು ನೆರೆ ನೀರು ಆವರಿಸಿದೆ. ಮದುವೆ ಹಾಲ್, ದೇವಸ್ಥಾನ, ಮನೆಗಳು ಜಲಾವೃತಗೊಂಡಿವೆ. ನೂರಾರು ಎಕರೆ ಕೃಷಿ ಭೂಮಿಗೂ ನದಿ ನೀರು ನುಗ್ಗಿದೆ. ಅಪಾಯದಲ್ಲಿರುವವರನ್ನು ಎಸ್.ಡಿ.ಆರ್.ಎಫ್ ಪಡೆ ಸ್ಥಳಾಂತರಿಸಿದೆ.

6 / 7
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಮೇಲೆ ಗುಡ್ಡ ಕುಸಿದು ಹಾನಿಯಾಗಿದೆ. ದೇವಸ್ಥಾನದ ಗರ್ಭಗುಡಿ ಮತ್ತು‌ ಸುತ್ತು ಪೌಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ನೀರಿನ ಜೊತೆಗೆ ದೇವಸ್ಥಾನದ ಒಳಗೆ ಮಣ್ಣು ಕೂಡ ನುಗ್ಗಿದೆ. ಮಳೆ ಹೆಚ್ಚಾದರೆ ಮತ್ತಷ್ಟು ಗುಡ್ಡ ಕುಸಿಯುವ ಭೀತಿ ಎದುರಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಮೇಲೆ ಗುಡ್ಡ ಕುಸಿದು ಹಾನಿಯಾಗಿದೆ. ದೇವಸ್ಥಾನದ ಗರ್ಭಗುಡಿ ಮತ್ತು‌ ಸುತ್ತು ಪೌಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ನೀರಿನ ಜೊತೆಗೆ ದೇವಸ್ಥಾನದ ಒಳಗೆ ಮಣ್ಣು ಕೂಡ ನುಗ್ಗಿದೆ. ಮಳೆ ಹೆಚ್ಚಾದರೆ ಮತ್ತಷ್ಟು ಗುಡ್ಡ ಕುಸಿಯುವ ಭೀತಿ ಎದುರಾಗಿದೆ.

7 / 7
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ