AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇಟ್ಟ ಬಣ್ಣ ಬಣ್ಣದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳು ಹೇಗಿವೆ ನೋಡಿ!

ಬೆಂಗಳೂರಿನಲ್ಲಿ ಗಣೇಶ ಚತುರ್ಥಿಯ ಸಂಭ್ರಮ ಮನೆಮಾಡಿದ್ದು, ಮಾರುಕಟ್ಟೆಗೆ ವಿವಿಧ ವಿನ್ಯಾಸದ ಪರಿಸರ ಸ್ನೇಹಿ ಮಣ್ಣಿನ ಗಣಪತಿಗಳು ಲಗ್ಗೆ ಇಟ್ಟಿವೆ. ಇನ್ನೊಂದೆಡೆ ಜಲಮಾಲಿನ್ಯ ತಡೆಯಲು ಮಾಲಿನ್ಯ ನಿಯಂತ್ರಣ ಮಂಡಳಿಯು 1,200ಕ್ಕೂ ಹೆಚ್ಚು ಪಿಒಪಿ ಗಣೇಶ ಮೂರ್ತಿಗಳನ್ನು ಜಪ್ತಿ ಮಾಡಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಣ್ಣಿನ ಗಣಪತಿಯನ್ನೇ ಪೂಜಿಸುವಂತೆ ಸಚಿವ ರಾಮಲಿಂಗರೆಡ್ಡಿ ಕರೆ ನೀಡಿದ್ದಾರೆ.

ಅರುಣ್ ಕುಮಾರ್​ ಆರ್​.
| Edited By: |

Updated on: Sep 08, 2026 | 7:48 AM

Share
ಬೆಂಗಳೂರಿನಲ್ಲಿ ಗಣೇಶ ಚತುರ್ಥಿಗೆ ದಿನಗಣನೆ ಆರಂಭವಾಗಿದ್ದು, ಎಲ್ಲೆಡೆ ಹಬ್ಬದ ವಾತಾವರಣ ಮನೆಮಾಡಿದೆ. ಬಸವನಗುಡಿ, ಮಲ್ಲೇಶ್ವರಂ ಹಾಗೂ ಯಶವಂತಪುರ ಮಾರುಕಟ್ಟೆಗಳಿಗೆ ಆಕರ್ಷಕ ಮೂರ್ತಿಗಳು ಆಗಮಿಸಿವೆ. ಸಾರ್ವಜನಿಕರು ಪೂಜೆಗೆ ಅಗತ್ಯವಿರುವ ಮೂರ್ತಿಗಳನ್ನು ಖರೀದಿಸಲು ಉತ್ಸಾಹದಿಂದ ಧಾವಿಸುತ್ತಿದ್ದು, ವ್ಯಾಪಾರ ಚುರುಕುಗೊಂಡಿದೆ.

ಬೆಂಗಳೂರಿನಲ್ಲಿ ಗಣೇಶ ಚತುರ್ಥಿಗೆ ದಿನಗಣನೆ ಆರಂಭವಾಗಿದ್ದು, ಎಲ್ಲೆಡೆ ಹಬ್ಬದ ವಾತಾವರಣ ಮನೆಮಾಡಿದೆ. ಬಸವನಗುಡಿ, ಮಲ್ಲೇಶ್ವರಂ ಹಾಗೂ ಯಶವಂತಪುರ ಮಾರುಕಟ್ಟೆಗಳಿಗೆ ಆಕರ್ಷಕ ಮೂರ್ತಿಗಳು ಆಗಮಿಸಿವೆ. ಸಾರ್ವಜನಿಕರು ಪೂಜೆಗೆ ಅಗತ್ಯವಿರುವ ಮೂರ್ತಿಗಳನ್ನು ಖರೀದಿಸಲು ಉತ್ಸಾಹದಿಂದ ಧಾವಿಸುತ್ತಿದ್ದು, ವ್ಯಾಪಾರ ಚುರುಕುಗೊಂಡಿದೆ.

1 / 7
ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಈ ಬಾರಿ ಪರಿಸರ ಸ್ನೇಹಿ ಮಣ್ಣಿನ ಗಣಪತಿಗಳಿಗೆ ಭಾರಿ ಬೇಡಿಕೆ ವ್ಯಕ್ತವಾಗಿದೆ. ಬಾಲ ಗಣೇಶ, ಈಶ್ವರ ಗಣೇಶ, ಮಹಾರಾಜ ಗಣೇಶ ಹಾಗೂ ನವಿಲಿನ ಮೇಲೆ ಕುಳಿತಿರುವ ಭಿನ್ನ ಥೀಮ್‌ಗಳ ಮೂರ್ತಿಗಳು ಗಮನ ಸೆಳೆಯುತ್ತಿವೆ. ಸಾರ್ವಜನಿಕರು ಈ ವೈವಿಧ್ಯಮಯ ಮಣ್ಣಿನ ಗಣಪತಿಗಳನ್ನು ಆದರದಿಂದ ಖರೀದಿಸುತ್ತಿದ್ದಾರೆ.

ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಈ ಬಾರಿ ಪರಿಸರ ಸ್ನೇಹಿ ಮಣ್ಣಿನ ಗಣಪತಿಗಳಿಗೆ ಭಾರಿ ಬೇಡಿಕೆ ವ್ಯಕ್ತವಾಗಿದೆ. ಬಾಲ ಗಣೇಶ, ಈಶ್ವರ ಗಣೇಶ, ಮಹಾರಾಜ ಗಣೇಶ ಹಾಗೂ ನವಿಲಿನ ಮೇಲೆ ಕುಳಿತಿರುವ ಭಿನ್ನ ಥೀಮ್‌ಗಳ ಮೂರ್ತಿಗಳು ಗಮನ ಸೆಳೆಯುತ್ತಿವೆ. ಸಾರ್ವಜನಿಕರು ಈ ವೈವಿಧ್ಯಮಯ ಮಣ್ಣಿನ ಗಣಪತಿಗಳನ್ನು ಆದರದಿಂದ ಖರೀದಿಸುತ್ತಿದ್ದಾರೆ.

2 / 7
ಮಾರುಕಟ್ಟೆಗೆ ಆಗಮಿಸುತ್ತಿರುವ ವಿವಿಧ ನಮೂನೆಯ ಗಣಪತಿಗಳ ಬಗ್ಗೆ ಮಾರಾಟಗಾರ ಶ್ರೀನಿವಾಸ್ ವಿವರಣೆ ನೀಡಿದ್ದಾರೆ. ಸಾರ್ವಜನಿಕರ ಇಷ್ಟಕ್ಕೆ ತಕ್ಕಂತೆ ಸಾಂಪ್ರದಾಯಿಕ ಹಾಗೂ ಆಧುನಿಕ ಶೈಲಿಯ ಮಣ್ಣಿನ ಮೂರ್ತಿಗಳನ್ನು ಸಿದ್ಧಪಡಿಸಲಾಗಿದೆ. ಪರಿಸರಕ್ಕೆ ಹಾನಿಯಾಗದ ಈ ಸುಂದರ ಮೂರ್ತಿಗಳಿಗೆ ಗ್ರಾಹಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಮಾರುಕಟ್ಟೆಗೆ ಆಗಮಿಸುತ್ತಿರುವ ವಿವಿಧ ನಮೂನೆಯ ಗಣಪತಿಗಳ ಬಗ್ಗೆ ಮಾರಾಟಗಾರ ಶ್ರೀನಿವಾಸ್ ವಿವರಣೆ ನೀಡಿದ್ದಾರೆ. ಸಾರ್ವಜನಿಕರ ಇಷ್ಟಕ್ಕೆ ತಕ್ಕಂತೆ ಸಾಂಪ್ರದಾಯಿಕ ಹಾಗೂ ಆಧುನಿಕ ಶೈಲಿಯ ಮಣ್ಣಿನ ಮೂರ್ತಿಗಳನ್ನು ಸಿದ್ಧಪಡಿಸಲಾಗಿದೆ. ಪರಿಸರಕ್ಕೆ ಹಾನಿಯಾಗದ ಈ ಸುಂದರ ಮೂರ್ತಿಗಳಿಗೆ ಗ್ರಾಹಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

3 / 7
ಬೆಂಗಳೂರಿನಲ್ಲಿ ಅನಧಿಕೃತ ಪಿಒಪಿ ಗಣೇಶ ಮೂರ್ತಿಗಳ ಮಾರಾಟ ನಿಯಂತ್ರಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಿದೆ. ವಿವಿಧ ಪಿಒಪಿ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಎರಡೇ ದಿನಗಳಲ್ಲಿ 1,200ಕ್ಕೂ ಹೆಚ್ಚು ಪಿಒಪಿ ಮೂರ್ತಿಗಳನ್ನು ಜಪ್ತಿ ಮಾಡಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಅನಧಿಕೃತ ಪಿಒಪಿ ಗಣೇಶ ಮೂರ್ತಿಗಳ ಮಾರಾಟ ನಿಯಂತ್ರಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಿದೆ. ವಿವಿಧ ಪಿಒಪಿ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಎರಡೇ ದಿನಗಳಲ್ಲಿ 1,200ಕ್ಕೂ ಹೆಚ್ಚು ಪಿಒಪಿ ಮೂರ್ತಿಗಳನ್ನು ಜಪ್ತಿ ಮಾಡಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸುತ್ತಿದ್ದಾರೆ.

4 / 7
ಪಿಒಪಿ ಗಣಪತಿ ವಿಸರ್ಜನೆಯಿಂದ ನೀರು ಕಲುಷಿತಗೊಂಡು ಜಲಚರಗಳು ಸಾವನ್ನಪ್ಪುತ್ತಿವೆ ಎಂದು ಸಚಿವ ರಾಮಲಿಂಗರೆಡ್ಡಿ ಕಳವಳ ವ್ಯಕ್ತಪಡಿಸಿದ್ದಾರೆ. ಪರಿಸರ ಸಂರಕ್ಷಣೆಗಾಗಿ ಸರ್ಕಾರ ಶೂನ್ಯ ಸಹಿಷ್ಣುತೆ ನೀತಿ ತಳೆದಿದೆ. ಸಾರ್ವಜನಿಕರು ಜವಾಬ್ದಾರಿಯಿಂದ ನಡೆದುಕೊಂಡು ಕಡ್ಡಾಯವಾಗಿ ಮಣ್ಣಿನ ಗಣಪತಿಯನ್ನೇ ಪೂಜಿಸಬೇಕೆಂದು ಅವರು ಕರೆ ನೀಡಿದ್ದಾರೆ.

ಪಿಒಪಿ ಗಣಪತಿ ವಿಸರ್ಜನೆಯಿಂದ ನೀರು ಕಲುಷಿತಗೊಂಡು ಜಲಚರಗಳು ಸಾವನ್ನಪ್ಪುತ್ತಿವೆ ಎಂದು ಸಚಿವ ರಾಮಲಿಂಗರೆಡ್ಡಿ ಕಳವಳ ವ್ಯಕ್ತಪಡಿಸಿದ್ದಾರೆ. ಪರಿಸರ ಸಂರಕ್ಷಣೆಗಾಗಿ ಸರ್ಕಾರ ಶೂನ್ಯ ಸಹಿಷ್ಣುತೆ ನೀತಿ ತಳೆದಿದೆ. ಸಾರ್ವಜನಿಕರು ಜವಾಬ್ದಾರಿಯಿಂದ ನಡೆದುಕೊಂಡು ಕಡ್ಡಾಯವಾಗಿ ಮಣ್ಣಿನ ಗಣಪತಿಯನ್ನೇ ಪೂಜಿಸಬೇಕೆಂದು ಅವರು ಕರೆ ನೀಡಿದ್ದಾರೆ.

5 / 7
ಸರ್ಕಾರಿ ಆದೇಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಸ್ಪಷ್ಟಪಡಿಸಿರುವ ಸಚಿವರು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದಿದ್ದಾರೆ. ಜಲಮೂಲಗಳನ್ನು ರಕ್ಷಿಸಲು ಪಿಒಪಿ ಮೂರ್ತಿಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಿಯಮ ಮೀರಿ ಪಿಒಪಿ ಮೂರ್ತಿ ತಯಾರಿಸುವ ಹಾಗೂ ಮಾರಾಟ ಮಾಡುವವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಸರ್ಕಾರಿ ಆದೇಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಸ್ಪಷ್ಟಪಡಿಸಿರುವ ಸಚಿವರು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದಿದ್ದಾರೆ. ಜಲಮೂಲಗಳನ್ನು ರಕ್ಷಿಸಲು ಪಿಒಪಿ ಮೂರ್ತಿಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಿಯಮ ಮೀರಿ ಪಿಒಪಿ ಮೂರ್ತಿ ತಯಾರಿಸುವ ಹಾಗೂ ಮಾರಾಟ ಮಾಡುವವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು.

6 / 7
ಪರಿಸರ ಮಾಲಿನ್ಯ ತಡೆಯಲು ಪ್ರತಿಯೊಬ್ಬ ನಾಗರಿಕನೂ ಜವಾಬ್ದಾರಿಯಿಂದ ವರ್ತಿಸುವುದು ಅತ್ಯಗತ್ಯ. ಜಲಮೂಲಗಳಿಗೆ ಹಾನಿ ಮಾಡುವ ಪಿಒಪಿ ಗಣಪತಿಗಳನ್ನು ಸಂಪೂರ್ಣವಾಗಿ ಬದಿಗೊತ್ತಬೇಕಿದೆ. ಈ ಹಬ್ಬದ ಸಂದರ್ಭದಲ್ಲಿ ಕೇವಲ ಪರಿಸರ ಸ್ನೇಹಿ ಮಣ್ಣಿನ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜಿಸುವ ಮೂಲಕ ನಮ್ಮ ನಾಡಿನ ಪರಿಸರವನ್ನು ಮುಂದಿನ ಪೀಳಿಗೆಗಾಗಿ ರಕ್ಷಿಸಬೇಕಾಗಿದೆ.

ಪರಿಸರ ಮಾಲಿನ್ಯ ತಡೆಯಲು ಪ್ರತಿಯೊಬ್ಬ ನಾಗರಿಕನೂ ಜವಾಬ್ದಾರಿಯಿಂದ ವರ್ತಿಸುವುದು ಅತ್ಯಗತ್ಯ. ಜಲಮೂಲಗಳಿಗೆ ಹಾನಿ ಮಾಡುವ ಪಿಒಪಿ ಗಣಪತಿಗಳನ್ನು ಸಂಪೂರ್ಣವಾಗಿ ಬದಿಗೊತ್ತಬೇಕಿದೆ. ಈ ಹಬ್ಬದ ಸಂದರ್ಭದಲ್ಲಿ ಕೇವಲ ಪರಿಸರ ಸ್ನೇಹಿ ಮಣ್ಣಿನ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜಿಸುವ ಮೂಲಕ ನಮ್ಮ ನಾಡಿನ ಪರಿಸರವನ್ನು ಮುಂದಿನ ಪೀಳಿಗೆಗಾಗಿ ರಕ್ಷಿಸಬೇಕಾಗಿದೆ.

7 / 7
Follow Us