ಸಿಎಂ ಭೇಟಿ ಮಾಡಿದ ವಾಣಿಜ್ಯ ಮಂಡಳಿ ಪದಾಧಿಕಾರಿಗಳು: ಮಾಡಿದ ಮನವಿಗಳೇನು?
Siddaramaiah: ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಇಟ್ಟ ಬೇಡಿಕೆಗಳೇನು?
Updated on: Jul 11, 2023 | 10:58 PM

ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಭೇಟಿಯಾದರು.

ಚಿತ್ರಮಂದಿರಗಳ ಟಿಕೆಟ್ ದರ ಇಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಿಎಂ ಮುಂದೆ ಪದಾಧಿಕಾರಿಗಳು ಇರಿಸಿದ್ದಾರೆ.

ಡಿಜಿಟಲ್ ಪ್ರೊಜೆಕ್ಟರ್ಗಳನ್ನು ಖರೀದಿಸಲು ಚಿತ್ರಮಂದಿರ ಮಾಲೀಕರಿಗೆ 15 ಲಕ್ಷ ಸಹಾಯ ಧನ ನೀಡುವಂತೆ ಬೇಡಿಕೆ ಇರಿಸಿದ್ದಾರೆ.

ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿನ ಚಿತ್ರಮಂದಿರವನ್ನು ಉನ್ನತೀಕರಿಸುವಂತೆಯೂ ಬೇಡಿಕೆ ಇರಿಸಲಾಗಿದೆ.

ತಾತ್ಕಾಲಿಕ ಹಾಗೂ ಅರೆ ತಾತ್ಕಾಲಿಕ ಚಿತ್ರಮಂದಿರಗಳ ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಲಾಗಿದೆ.

ಮಲ್ಟಿಪ್ಲೆಕ್ಸ್ಗಳ ಟಿಕೆಟ್ ದರ 250, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಟಿಕೆಟ್ ದರ 150ಕ್ಕೆ ನಿಗದಿಪಡಿಸುವಂತೆ ಮನವಿ.

ಮನವಿ ಸ್ವೀಕರಿಸಿರುವ ಸಿಎಂ ಸಿದ್ದರಾಮಯ್ಯ, ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.
Read More



