ಸಿಎಂ ಭೇಟಿ ಮಾಡಿದ ವಾಣಿಜ್ಯ ಮಂಡಳಿ ಪದಾಧಿಕಾರಿಗಳು: ಮಾಡಿದ ಮನವಿಗಳೇನು?
Siddaramaiah: ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಇಟ್ಟ ಬೇಡಿಕೆಗಳೇನು?
Updated on: Jul 11, 2023 | 10:58 PM
Share

ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಭೇಟಿಯಾದರು.

ಚಿತ್ರಮಂದಿರಗಳ ಟಿಕೆಟ್ ದರ ಇಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಿಎಂ ಮುಂದೆ ಪದಾಧಿಕಾರಿಗಳು ಇರಿಸಿದ್ದಾರೆ.

ಡಿಜಿಟಲ್ ಪ್ರೊಜೆಕ್ಟರ್ಗಳನ್ನು ಖರೀದಿಸಲು ಚಿತ್ರಮಂದಿರ ಮಾಲೀಕರಿಗೆ 15 ಲಕ್ಷ ಸಹಾಯ ಧನ ನೀಡುವಂತೆ ಬೇಡಿಕೆ ಇರಿಸಿದ್ದಾರೆ.

ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿನ ಚಿತ್ರಮಂದಿರವನ್ನು ಉನ್ನತೀಕರಿಸುವಂತೆಯೂ ಬೇಡಿಕೆ ಇರಿಸಲಾಗಿದೆ.

ತಾತ್ಕಾಲಿಕ ಹಾಗೂ ಅರೆ ತಾತ್ಕಾಲಿಕ ಚಿತ್ರಮಂದಿರಗಳ ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಲಾಗಿದೆ.

ಮಲ್ಟಿಪ್ಲೆಕ್ಸ್ಗಳ ಟಿಕೆಟ್ ದರ 250, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಟಿಕೆಟ್ ದರ 150ಕ್ಕೆ ನಿಗದಿಪಡಿಸುವಂತೆ ಮನವಿ.

ಮನವಿ ಸ್ವೀಕರಿಸಿರುವ ಸಿಎಂ ಸಿದ್ದರಾಮಯ್ಯ, ಪರಿಶೀಲಿಸುವುದಾಗಿ ತಿಳಿಸಿದ್ದಾರೆ.
Related Photo Gallery
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾರ್ಥಿಗಳು




