PM Modi Ayodhya: ರಾಮನ ನಾಡಿಗೆ ನಮೋ, ಅಯೋಧ್ಯೆಯಲ್ಲಿ ಮೋದಿ ಮೇಗಾ ರೋಡ್ ಶೋ
ಇದೇ ವರ್ಷ ಜನವರಿ 22 ರಂದು ಧರ್ಮಭೂಮಿ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿತು. ಪ್ರಧಾನಿ ನರೇಂದ್ರ ಮೋದಿಯವರು ಮನೆ ಯಜಮಾನ ಹಾಗೆ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಶ್ರೀರಾಮನ ಪ್ರಾಣ ಪ್ರತಿಷ್ಠಪನೆ ನೆರವೇರಿಸಿದ ಬಳಿಕ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಮತ್ತೆ ಅಯೋಧ್ಯೆಗೆ ಭೇಟಿ ನೀಡಿದ್ದಾರೆ.
Updated on:May 06, 2024 | 12:03 AM

ಜನವರಿ 22 ರಂದು ಧರ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆ ನೆರವೇರಿತು. ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಇಂದು (ಮೇ 05) ಮೊದಲ ಬಾರಿಗೆ ಅಯೋಧ್ಯೆಗೆ ಭೇಟಿ ನೀಡಿದರು.

ಅಯೋಧ್ಯೆಗೆ ಬಂದಿಳಿದ ಪ್ರಧಾನಿ ಮೋದಿ ನೇರವಾಗಿ ಶ್ರೀರಾಮನ ದೇವಸ್ಥಾನಕ್ಕೆ ತೆರಳಿ ಬಾಲರಾಮನಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದರು. ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ರಾಮ ಮಂದಿರವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.

ಬಾಲರಾಮ ರಾಮನ ದರ್ಶನ ಪಡೆದುಕೊಂಡ ಬಳಿಕ ಪ್ರಧಾನಿ ಮೋದಿ ಶ್ರೀರಾಮನ ದೇವಸ್ಥಾನದ ದ್ವಾರದಿಂದ ಲತಾ ಮಂಗೇಶ್ಕರ್ ಚೌಕ್ ವರೆಗೆ ರೋಡ್ ಶೋ ನಡೆಸಿದರು.

ಎರಡು ಕಿಮೀ ಉದ್ದ ರೋಡ್ ಶೋನಲ್ಲಿ ಪ್ರಧಾನಿ ಮೋದಿಯವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅಯೋಧ್ಯೆ ಫೈಜಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಸಾಥ್ ನೀಡಿದರು.

ರೋಡ್ ಶೋ ಪ್ರಾರಂಭವಾಗುವ ಮತ್ತು ಕೊನೆಗೊಳ್ಳುವ ಸ್ಥಳಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಪ್ರಧಾನಿ ಮೋದಿ ಅವರನ್ನು ಅಯೋಧ್ಯೆಯ ಜನರು ಅದ್ಧೂರಿಯಾಗಿಯೇ ಸ್ವಾಗತಿಸಿದರು.

ಎರಡು ಕಿಮೀ ಉದ್ದದ ರೋಡ್ ಶೋನಲ್ಲಿ ಪ್ರಧಾನಿ ಮೋದಿಯವರು ಅಯೋಧ್ಯೆ ಫೈಜಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಪರ ಮತಯಾಚಿಸಿದರು.

ರೋಡ್ ಶೋ ವೇಳೆ ಪ್ರಧಾನಿ ಮೋದಿಯವರಿಗೆ ಮಹಿಳೆಯರು ಆರತಿ ಮಾಡಿ ಹರಸಿದರು.

ಪ್ರಧಾನಿ ಮೋದಿಯವರನ್ನು ನೋಡಲು ರಸ್ತೆ ಅಕ್ಕ-ಪಕ್ಕದಲ್ಲಿ ಸಾಕಷ್ಟು ಜನರು ಸೇರಿದ್ದರು.

ಅಯೋಧ್ಯೆಯ ಜನರ ಹೃದಯವು ಶ್ರೀರಾಮನಷ್ಟೇ ದೊಡ್ಡದು. ರೋಡ್ ಶೋನಲ್ಲಿ ಆಶೀರ್ವಾದ ನೀಡಲು ಆಗಮಿಸಿದ್ದ ಸಾರ್ವಜನಿಕರಿಗೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಧನ್ಯವಾದ ಹೇಳಿದರು.

ಮೇ 20 ರಂದು ಐದನೇ ಹಂತದಲ್ಲಿ ಅಯೋಧ್ಯೆಯಲ್ಲಿ ಮತದಾನ ನಡೆಯಲಿದೆ.
Published On - 12:01 am, Mon, 6 May 24




