AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Roadshow: ಬಿಜೆಪಿಯನ್ನು ಬೆಂಗಳೂರು ಬಯಸುತ್ತಿದೆ, ಸಾಕ್ಷಿ ಇಲ್ಲಿದೆ ನೋಡಿ; ಪ್ರಧಾನಿ ಮೋದಿ

ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದಕ್ಕೆ ಅವರು ಹರ್ಷ ವ್ಯಕ್ತಪಡಿಸಿದ್ದು, ಬೆಂಗಳೂರಿನ ಜನತೆಗೆ ಧನ್ಯವಾದ ಸಮರ್ಪಿಸಿದ್ದಾರೆ.

ಗಣಪತಿ ಶರ್ಮಾ
|

Updated on:May 06, 2023 | 3:34 PM

Share
PM Modi Happy after Roadshow  said It is clear Bengaluru wants BJP

ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಂಗಳೂರಿನಲ್ಲಿ ಮೆಗಾ ರೋಡ್​ ಶೋ ನಡೆಸಿದರು. ಸುಮಾರು ಎರಡೂವರೆ ಗಂಟೆ ಕಾಲ ನಡೆದ ರೋಡ್​​ ಶೋದಲ್ಲಿ ಮೋದಿ ಅವರು 13 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿದ್ದಾರೆ. ಮೊದಲ ದಿನದ ರೋಡ್​ ಶೋದಲ್ಲಿ ಮೋದಿ 26 ಕಿಲೋಮೀರ್​ಗೂ ಹೆಚ್ಚು ಸಂಚರಿಸಿದ್ದಾರೆ.

1 / 6
PM Modi Happy after Roadshow  said It is clear Bengaluru wants BJP

ಜೆಪಿ ನಗರದ ಬ್ರಿಗೇಡ್‌ ಮಿಲೇನಿಯಂನ ಬಳಿ ಆರಂಭವಾದ ರೋಡ್‌ ಶೋ ಮಲ್ಲೇಶ್ವರದ ಸರ್ಕಲ್‌ ಮಾರಮ್ಮ ದೇವಸ್ಥಾನದ ಬಳಿ ಅಂತ್ಯವಾಯಿತು. ರೋಡ್​ ಶೋ ಕೊನೆಯಲ್ಲಿ ಮೋದಿ ಅವರು ಕಾಡುಮಲ್ಲೇಶ್ವರ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದರು.

2 / 6
PM Modi Happy after Roadshow  said It is clear Bengaluru wants BJP

ಬೆಂಗಳೂರಿನ ರೋಡ್​ ಶೋಕ್ಕೆ ಜನರಿಂದ ವ್ಯಕ್ತವಾದ ಅಭೂತಪೂರ್ವ ಸ್ಪಂದನೆಗೆ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಸಂಭ್ರಮ ಹಂಚಿಕೊಂಡಿದ್ದಾರೆ. ಜತೆಗೆ, ರೋಡ್​ ಶೋದ ಸಂಭ್ರಮದ ಕ್ಷಣಗಳ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ.

3 / 6
PM Modi Happy after Roadshow  said It is clear Bengaluru wants BJP

ಬೆಂಗಳೂರು ಬಿಜೆಪಿಯನ್ನು ಬಯಸುತ್ತಿದೆ ಎಂಬುದು ಸ್ಪಷ್ಟ. ನಮ್ಮ ಪಕ್ಷವು ಉತ್ತಮ ಆಡಳಿತ ಮತ್ತು ಅಭಿವೃದ್ಧಿಯನ್ನು ನೀಡುವುದನ್ನು ಮುಂದುವರಿಸಲಿದೆ ಎಂಬ ಬಗ್ಗೆ ಈ ನಗರದ ಜನತೆಗೆ ನಂಬಿಕೆ ಇದೆ ಎಂದು ಮೋದಿ ಹೇಳಿದ್ದಾರೆ.

4 / 6
PM Modi Happy after Roadshow  said It is clear Bengaluru wants BJP

ನಾನು ಬೆಂಗಳೂರಿನಲ್ಲಿ ಕಂಡದ್ದನ್ನು ಕೇವಲ ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಈ ಅದ್ಭುತ ನಗರದ ಜನರು ನನ್ನ ಮೇಲೆ ಪ್ರೀತಿಯ ಮಳೆ ಸುರಿಸಿದ್ದಕ್ಕಾಗಿ ಜೀವಮಾನವಿಡೀ ನಾನು ಕೃತಜ್ಞನಾಗಿರಲಿದ್ದೇನೆ ಎಂದು ಮೋದಿ ಖುಷಿಯಿಂದ ಹೇಳಿಕೊಂಡಿದ್ದಾರೆ.

5 / 6
PM Modi Happy after Roadshow  said It is clear Bengaluru wants BJP

ಭಾನುವಾರವೂ ನಗರದಲ್ಲಿ ಪ್ರಧಾನಿ ಅವರ ರೋಡ್​ ಶೋ ನಡೆಯಲಿದೆ. ಭಾನುವಾರ (ಮೇ 7) ಬೆಳಗ್ಗೆ 9 ರಿಂದ ಬೆಳಗ್ಗೆ 11.30ರವರೆಗೆ ರೋಡ್ ಶೋ ನಡೆಯಲಿದೆ. ಭಾನುವಾರವೂ ಅಪಾರ ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ನಗರದಾದ್ಯಂತ ಬಿಗಿ ಭದ್ರತೆ ಒದಗಿಸಲಾಗಿದೆ.

6 / 6

Published On - 3:14 pm, Sat, 6 May 23

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ