AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Roadshow: ಬಿಜೆಪಿಯನ್ನು ಬೆಂಗಳೂರು ಬಯಸುತ್ತಿದೆ, ಸಾಕ್ಷಿ ಇಲ್ಲಿದೆ ನೋಡಿ; ಪ್ರಧಾನಿ ಮೋದಿ

ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದಕ್ಕೆ ಅವರು ಹರ್ಷ ವ್ಯಕ್ತಪಡಿಸಿದ್ದು, ಬೆಂಗಳೂರಿನ ಜನತೆಗೆ ಧನ್ಯವಾದ ಸಮರ್ಪಿಸಿದ್ದಾರೆ.

ಗಣಪತಿ ಶರ್ಮಾ
|

Updated on:May 06, 2023 | 3:34 PM

Share
PM Modi Happy after Roadshow  said It is clear Bengaluru wants BJP

ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಂಗಳೂರಿನಲ್ಲಿ ಮೆಗಾ ರೋಡ್​ ಶೋ ನಡೆಸಿದರು. ಸುಮಾರು ಎರಡೂವರೆ ಗಂಟೆ ಕಾಲ ನಡೆದ ರೋಡ್​​ ಶೋದಲ್ಲಿ ಮೋದಿ ಅವರು 13 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿದ್ದಾರೆ. ಮೊದಲ ದಿನದ ರೋಡ್​ ಶೋದಲ್ಲಿ ಮೋದಿ 26 ಕಿಲೋಮೀರ್​ಗೂ ಹೆಚ್ಚು ಸಂಚರಿಸಿದ್ದಾರೆ.

1 / 6
PM Modi Happy after Roadshow  said It is clear Bengaluru wants BJP

ಜೆಪಿ ನಗರದ ಬ್ರಿಗೇಡ್‌ ಮಿಲೇನಿಯಂನ ಬಳಿ ಆರಂಭವಾದ ರೋಡ್‌ ಶೋ ಮಲ್ಲೇಶ್ವರದ ಸರ್ಕಲ್‌ ಮಾರಮ್ಮ ದೇವಸ್ಥಾನದ ಬಳಿ ಅಂತ್ಯವಾಯಿತು. ರೋಡ್​ ಶೋ ಕೊನೆಯಲ್ಲಿ ಮೋದಿ ಅವರು ಕಾಡುಮಲ್ಲೇಶ್ವರ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದರು.

2 / 6
PM Modi Happy after Roadshow  said It is clear Bengaluru wants BJP

ಬೆಂಗಳೂರಿನ ರೋಡ್​ ಶೋಕ್ಕೆ ಜನರಿಂದ ವ್ಯಕ್ತವಾದ ಅಭೂತಪೂರ್ವ ಸ್ಪಂದನೆಗೆ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಸಂಭ್ರಮ ಹಂಚಿಕೊಂಡಿದ್ದಾರೆ. ಜತೆಗೆ, ರೋಡ್​ ಶೋದ ಸಂಭ್ರಮದ ಕ್ಷಣಗಳ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ.

3 / 6
PM Modi Happy after Roadshow  said It is clear Bengaluru wants BJP

ಬೆಂಗಳೂರು ಬಿಜೆಪಿಯನ್ನು ಬಯಸುತ್ತಿದೆ ಎಂಬುದು ಸ್ಪಷ್ಟ. ನಮ್ಮ ಪಕ್ಷವು ಉತ್ತಮ ಆಡಳಿತ ಮತ್ತು ಅಭಿವೃದ್ಧಿಯನ್ನು ನೀಡುವುದನ್ನು ಮುಂದುವರಿಸಲಿದೆ ಎಂಬ ಬಗ್ಗೆ ಈ ನಗರದ ಜನತೆಗೆ ನಂಬಿಕೆ ಇದೆ ಎಂದು ಮೋದಿ ಹೇಳಿದ್ದಾರೆ.

4 / 6
PM Modi Happy after Roadshow  said It is clear Bengaluru wants BJP

ನಾನು ಬೆಂಗಳೂರಿನಲ್ಲಿ ಕಂಡದ್ದನ್ನು ಕೇವಲ ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಈ ಅದ್ಭುತ ನಗರದ ಜನರು ನನ್ನ ಮೇಲೆ ಪ್ರೀತಿಯ ಮಳೆ ಸುರಿಸಿದ್ದಕ್ಕಾಗಿ ಜೀವಮಾನವಿಡೀ ನಾನು ಕೃತಜ್ಞನಾಗಿರಲಿದ್ದೇನೆ ಎಂದು ಮೋದಿ ಖುಷಿಯಿಂದ ಹೇಳಿಕೊಂಡಿದ್ದಾರೆ.

5 / 6
PM Modi Happy after Roadshow  said It is clear Bengaluru wants BJP

ಭಾನುವಾರವೂ ನಗರದಲ್ಲಿ ಪ್ರಧಾನಿ ಅವರ ರೋಡ್​ ಶೋ ನಡೆಯಲಿದೆ. ಭಾನುವಾರ (ಮೇ 7) ಬೆಳಗ್ಗೆ 9 ರಿಂದ ಬೆಳಗ್ಗೆ 11.30ರವರೆಗೆ ರೋಡ್ ಶೋ ನಡೆಯಲಿದೆ. ಭಾನುವಾರವೂ ಅಪಾರ ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ನಗರದಾದ್ಯಂತ ಬಿಗಿ ಭದ್ರತೆ ಒದಗಿಸಲಾಗಿದೆ.

6 / 6

Published On - 3:14 pm, Sat, 6 May 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ