AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ಸಿಕಂದರಾಬಾದ್ – ತಿರುಪತಿ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಹೈದರಾಬಾದ್: ತೆಲಂಗಾಣಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಸಿಕಂದರಾಬಾದ್ - ತಿರುಪತಿ ವಂದೇ ಭಾರತ್ ರೈಲಿಗೆ ಶನಿವಾರ ಚಾಲನೆ ನೀಡಿದರು.

Ganapathi Sharma
|

Updated on: Apr 08, 2023 | 12:54 PM

Share
PM Modi in Hyderabad flags off Secunderabad Tirupati Vande Bharat Express

ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೈದರಾಬಾದ್‌ಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಅವರು ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್​ಗೆ ಸಿಕಂದರಾಬಾದ್ ರೈಲು ನಿಲ್ದಾಣದಿಂದ ಚಾಲನೆ ನೀಡಿದ್ದಾರೆ.

1 / 6
PM Modi in Hyderabad flags off Secunderabad Tirupati Vande Bharat Express

ಈ ಭೇಟಿಯ ವೇಳೆ, ಮೋದಿ ಅವರು ಹೈದರಾಬಾದ್-ಸಿಕಂದರಾಬಾದ್ ಅವಳಿ ನಗರ ಪ್ರದೇಶದ ಉಪನಗರ ವಿಭಾಗದಲ್ಲಿ 13 ಹೊಸ ಎಂಎಂಟಿ ಎಎಸ್ ಸೇವೆಗಳಿಗೂ ಚಾಲನೆ ನೀಡಿದ್ದಾರೆ. ಬಹು-ಮಾದರಿ ಸಾರಿಗೆ ಸೇವೆಯು ಅವಳಿ ನಗರ ಪ್ರದೇಶದ ಪ್ರಯಾಣಿಕರಿಗೆ ವೇಗದ, ಸುರಕ್ಷಿತ ಮತ್ತು ಆರಾಮದಾಯಕ ಪ್ರಯಾಣ ಒದಗಿಸುತ್ತದೆ. ಈ ಹೊಸ ರೈಲು ಸೇವೆಗಳು ಅವಳಿ ನಗರದ ಜನರಿಗೆ ಕಡಿಮೆ ವೆಚ್ಚದಲ್ಲಿ ಸುರಕ್ಷಿತ ಮತ್ತು ಆರಾಮದಾಯಕ ಪ್ರಯಾಣ ಸೌಲಭ್ಯವನ್ನು ಒದಗಿಸುತ್ತವೆ.

2 / 6
PM Modi in Hyderabad flags off Secunderabad Tirupati Vande Bharat Express

ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ನಲ್ಗೊಂಡ, ಗುಂಟೂರು, ಓಂಗೋಲ್ ಮತ್ತು ನೆಲ್ಲೂರು ನಿಲ್ದಾಣಗಳಲ್ಲಿ ನಿಲುಗಡೆ ಇದೆ. ಈ ರೈಲು 10 ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

3 / 6
PM Modi in Hyderabad flags off Secunderabad Tirupati Vande Bharat Express

ಸಿಕಂದರಾಬಾದ್ - ತಿರುಪತಿ ವಂದೇ ಭಾರತ್ ರೈಲು (20701) ಸಿಕಂದರಾಬಾದ್ ರೈಲು ನಿಲ್ದಾಣದಿಂದ ಬೆಳಗ್ಗೆ 6 ಗಂಟೆಗೆ ಹೊರಟು ಮಧ್ಯಾಹ್ನ 2.30ಕ್ಕೆ ತಿರುಪತಿ ತಲುಪುತ್ತದೆ. ತಿರುಪತಿ - ಸಿಕಂದರಾಬಾದ್ ವಂದೇ ಭಾರತ್ ರೈಲು (20702) ತಿರುಪತಿ ರೈಲು ನಿಲ್ದಾಣದಿಂದ ಮಧ್ಯಾಹ್ನ 3.15 ಕ್ಕೆ ಹೊರಡುತ್ತದೆ. ರಾತ್ರಿ 11.45ಕ್ಕೆ ಸಿಕಂದರಾಬಾದ್ ತಲುಪುತ್ತದೆ.

4 / 6
PM Modi in Hyderabad flags off Secunderabad Tirupati Vande Bharat Express

ತೆಲಂಗಾಣದ ಸಿಕಂದರಾಬಾದ್ ರೈಲು ನಿಲ್ದಾಣವನ್ನು 720 ಕೋಟಿ ರೂಪಾಯಿ ವೆಚ್ಚದಲ್ಲಿ ಮರು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದ್ದು, ಏರ್​​ಪೋರ್ಟ್ ಮಾದರಿಯ ಭವ್ಯ ನಿಲ್ದಾಣ ಮುಂದಿನ ದಿನಗಳಲ್ಲಿ ತಲೆಯೆತ್ತಲಿದೆ. ನೂತನ ರೈಲು ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕು ಸ್ಥಾಪನೆ ನೆರವೇರಿಸಿದ್ದಾರೆ.

5 / 6
PM Modi in Hyderabad flags off Secunderabad Tirupati Vande Bharat Express

ಮರು ನಿರ್ಮಾಣ ಯೋಜನೆಯಡಿ ಅಸ್ತಿತ್ವದಲ್ಲಿರುವ ಪ್ಲಾಟ್​ಫಾರ್ಮ್​ಗಳನ್ನು ಹೊಸ ನಿಲ್ದಾಣದ ಆಧುನಿಕತೆಗೆ ತಕ್ಕುದಾಗಿ ನವೀಕರಿಸಲಾಗುತ್ತದೆ. 5000 ಕೆವಿಪಿ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರವನ್ನೂ ನಿಲ್ದಾಣ ಹೊಂದಿರಲಿದೆ.

6 / 6
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ