AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ಸಿಕಂದರಾಬಾದ್ – ತಿರುಪತಿ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಹೈದರಾಬಾದ್: ತೆಲಂಗಾಣಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಸಿಕಂದರಾಬಾದ್ - ತಿರುಪತಿ ವಂದೇ ಭಾರತ್ ರೈಲಿಗೆ ಶನಿವಾರ ಚಾಲನೆ ನೀಡಿದರು.

ಗಣಪತಿ ಶರ್ಮಾ
|

Updated on: Apr 08, 2023 | 12:54 PM

Share
PM Modi in Hyderabad flags off Secunderabad Tirupati Vande Bharat Express

ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೈದರಾಬಾದ್‌ಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಅವರು ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್​ಗೆ ಸಿಕಂದರಾಬಾದ್ ರೈಲು ನಿಲ್ದಾಣದಿಂದ ಚಾಲನೆ ನೀಡಿದ್ದಾರೆ.

1 / 6
PM Modi in Hyderabad flags off Secunderabad Tirupati Vande Bharat Express

ಈ ಭೇಟಿಯ ವೇಳೆ, ಮೋದಿ ಅವರು ಹೈದರಾಬಾದ್-ಸಿಕಂದರಾಬಾದ್ ಅವಳಿ ನಗರ ಪ್ರದೇಶದ ಉಪನಗರ ವಿಭಾಗದಲ್ಲಿ 13 ಹೊಸ ಎಂಎಂಟಿ ಎಎಸ್ ಸೇವೆಗಳಿಗೂ ಚಾಲನೆ ನೀಡಿದ್ದಾರೆ. ಬಹು-ಮಾದರಿ ಸಾರಿಗೆ ಸೇವೆಯು ಅವಳಿ ನಗರ ಪ್ರದೇಶದ ಪ್ರಯಾಣಿಕರಿಗೆ ವೇಗದ, ಸುರಕ್ಷಿತ ಮತ್ತು ಆರಾಮದಾಯಕ ಪ್ರಯಾಣ ಒದಗಿಸುತ್ತದೆ. ಈ ಹೊಸ ರೈಲು ಸೇವೆಗಳು ಅವಳಿ ನಗರದ ಜನರಿಗೆ ಕಡಿಮೆ ವೆಚ್ಚದಲ್ಲಿ ಸುರಕ್ಷಿತ ಮತ್ತು ಆರಾಮದಾಯಕ ಪ್ರಯಾಣ ಸೌಲಭ್ಯವನ್ನು ಒದಗಿಸುತ್ತವೆ.

2 / 6
PM Modi in Hyderabad flags off Secunderabad Tirupati Vande Bharat Express

ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ನಲ್ಗೊಂಡ, ಗುಂಟೂರು, ಓಂಗೋಲ್ ಮತ್ತು ನೆಲ್ಲೂರು ನಿಲ್ದಾಣಗಳಲ್ಲಿ ನಿಲುಗಡೆ ಇದೆ. ಈ ರೈಲು 10 ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

3 / 6
PM Modi in Hyderabad flags off Secunderabad Tirupati Vande Bharat Express

ಸಿಕಂದರಾಬಾದ್ - ತಿರುಪತಿ ವಂದೇ ಭಾರತ್ ರೈಲು (20701) ಸಿಕಂದರಾಬಾದ್ ರೈಲು ನಿಲ್ದಾಣದಿಂದ ಬೆಳಗ್ಗೆ 6 ಗಂಟೆಗೆ ಹೊರಟು ಮಧ್ಯಾಹ್ನ 2.30ಕ್ಕೆ ತಿರುಪತಿ ತಲುಪುತ್ತದೆ. ತಿರುಪತಿ - ಸಿಕಂದರಾಬಾದ್ ವಂದೇ ಭಾರತ್ ರೈಲು (20702) ತಿರುಪತಿ ರೈಲು ನಿಲ್ದಾಣದಿಂದ ಮಧ್ಯಾಹ್ನ 3.15 ಕ್ಕೆ ಹೊರಡುತ್ತದೆ. ರಾತ್ರಿ 11.45ಕ್ಕೆ ಸಿಕಂದರಾಬಾದ್ ತಲುಪುತ್ತದೆ.

4 / 6
PM Modi in Hyderabad flags off Secunderabad Tirupati Vande Bharat Express

ತೆಲಂಗಾಣದ ಸಿಕಂದರಾಬಾದ್ ರೈಲು ನಿಲ್ದಾಣವನ್ನು 720 ಕೋಟಿ ರೂಪಾಯಿ ವೆಚ್ಚದಲ್ಲಿ ಮರು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದ್ದು, ಏರ್​​ಪೋರ್ಟ್ ಮಾದರಿಯ ಭವ್ಯ ನಿಲ್ದಾಣ ಮುಂದಿನ ದಿನಗಳಲ್ಲಿ ತಲೆಯೆತ್ತಲಿದೆ. ನೂತನ ರೈಲು ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕು ಸ್ಥಾಪನೆ ನೆರವೇರಿಸಿದ್ದಾರೆ.

5 / 6
PM Modi in Hyderabad flags off Secunderabad Tirupati Vande Bharat Express

ಮರು ನಿರ್ಮಾಣ ಯೋಜನೆಯಡಿ ಅಸ್ತಿತ್ವದಲ್ಲಿರುವ ಪ್ಲಾಟ್​ಫಾರ್ಮ್​ಗಳನ್ನು ಹೊಸ ನಿಲ್ದಾಣದ ಆಧುನಿಕತೆಗೆ ತಕ್ಕುದಾಗಿ ನವೀಕರಿಸಲಾಗುತ್ತದೆ. 5000 ಕೆವಿಪಿ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರವನ್ನೂ ನಿಲ್ದಾಣ ಹೊಂದಿರಲಿದೆ.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ