- Kannada News Photo gallery PM Modi in Kedarnath Narendra Modi Offers Prayers in Kedarnath Temple in Chola Dora Attire
PM Modi in Kedarnath: ವಿಶೇಷ ಉಡುಗೆ ತೊಟ್ಟು ಕೇದಾರನಾಥದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮೋದಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೇದಾರನಾಥ ದೇವಾಲಯವನ್ನು ಹೂವಿನಿಂದ ಅಲಂಕರಿಸಲಾಗಿತ್ತು. ಈ ವರ್ಷ ಚಾರ್ಧಾಮ್ಗೆ ಭೇಟಿ ನೀಡಿದ ದಾಖಲೆಯ 41 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಸೇರಿದ್ದಾರೆ.
Updated on: Oct 21, 2022 | 9:44 AM

ಭಾರತದಾದ್ಯಂತ ದೀಪಾವಳಿಯ ಸಂಭ್ರಮ ಶುರುವಾಗಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಕೇದಾರನಾಥ- ಬದರಿನಾಥ ಪ್ರವಾಸ ಕೈಗೊಂಡಿದ್ದಾರೆ.

ಕೇದಾರನಾಥ ದೇವಸ್ಥಾನದ ಭೇಟಿಗೆ ಉತ್ತರಾಖಂಡಕ್ಕೆ ಬಂದಿಳಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಪ್ರವಾಸದಲ್ಲಿದ್ದು, ಶುಕ್ರವಾರ ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಇಂದು ಬೆಳಗ್ಗೆ ಕೇದಾರನಾಥಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರು ಕೇದಾರನಾಥ ಧಾಮದಲ್ಲಿ ಬೆಳಗಿನ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಉಡುಗೆ ಧರಿಸಿ ಗಮನ ಸೆಳೆದರು.

ಹಿಮಾಚಲ ಪ್ರದೇಶದ ಚಂಬಾ ಮಹಿಳೆಯರು ಕೈಯಿಂದ ಮಾಡುವ ಉಡುಗೆಯನ್ನು ಮೋದಿ ಧರಿಸಿದ್ದರು. ಇದನ್ನು ಚೋಳ ಡೋರಾ ಉಡುಗೆ ಎಂದು ಕರೆಯಲಾಗುತ್ತದೆ.

ಇತ್ತೀಚೆಗೆ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನಿಯವರಿಗೆ ಈ ಉಡುಪನ್ನು ಉಡುಗೊರೆಯಾಗಿ ನೀಡಲಾಗಿದ್ದು, ಉತ್ತಮವಾದ ಕುಸುರಿ ಕೆಲಸದಿಂದ ಇದನ್ನು ಸಿದ್ಧಪಡಿಸಲಾಗಿದೆ. ಚಂಬಾಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಯಾವುದಾದರೂ ತಂಪಾದ ಸ್ಥಳಕ್ಕೆ ಭೇಟಿ ನೀಡಿದಾಗ ಈ ಉಡುಗೆಯನ್ನು ಧರಿಸುವುದಾಗಿ ಚಂಬಾ ಮಹಿಳೆಯರಿಗೆ ಭರವಸೆ ನೀಡಿದ್ದರು. ಅದರಂತೆ ಇಂದು ಕೇದಾರನಾಥದಲ್ಲಿ ಮೋದಿ ಈ ಉಡುಗೆ ಧರಿಸಿದ್ದಾರೆ.

ಮೋದಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೇದಾರನಾಥ ದೇವಾಲಯವನ್ನು ಹೂವಿನಿಂದ ಅಲಂಕರಿಸಲಾಗಿತ್ತು.

ಈ ವರ್ಷ ಚಾರ್ಧಾಮ್ಗೆ ಭೇಟಿ ನೀಡಿದ ದಾಖಲೆಯ 41 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಸೇರಿದ್ದಾರೆ.

ಇಂದು ಕೇದಾರನಾಥಕ್ಕೆ ಸಂಪರ್ಕಿಸುವ 9.7 ಕಿಮೀ ಉದ್ದದ ಗೌರಿಕುಂಡ್ ರೋಪ್ವೇಗೆ ಶಂಕುಸ್ಥಾಪನೆ ನೆರವೇರಿದೆ. ಇದು ಎರಡು ಸ್ಥಳಗಳ ನಡುವಿನ ಪ್ರಯಾಣದ ಸಮಯವನ್ನು ಪ್ರಸ್ತುತ 6-7 ಗಂಟೆಗಳ ಸಮಯವನ್ನು 30 ನಿಮಿಷಗಳಿಗೆ ಕಡಿಮೆ ಮಾಡುತ್ತದೆ. ಕೇದಾರನಾಥದಲ್ಲಿ ರೋಪ್ವೇ ಸುಮಾರು 9.7 ಕಿಮೀ ಉದ್ದವಿರುತ್ತದೆ ಮತ್ತು ಗೌರಿಕುಂಡ್ ಅನ್ನು ಕೇದಾರನಾಥಕ್ಕೆ ಸಂಪರ್ಕಿಸುತ್ತದೆ.

ಇದಾದ ಬಳಿಕ ಬದರಿನಾಥ ದೇಗುಲದಲ್ಲಿ ಪ್ರಾರ್ಥನೆಯಲ್ಲಿ ಪಾಲ್ಗೊಂಡು ನದಿ ತೀರದ ಅಭಿವೃದ್ಧಿಯನ್ನು ಪರಿಶೀಲಿಸಲಿದ್ದಾರೆ. ನಂತರ ಮಾಣ ಗ್ರಾಮದಲ್ಲಿ ರಸ್ತೆ ಮತ್ತು ರೋಪ್ ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮತ್ತು ಜನಸಂದಣಿಯನ್ನು ನಿಯಂತ್ರಿಸಲು ಕೇದಾರನಾಥದಲ್ಲಿ ನಿರ್ಮಿಸಲಾದ ಹೊಸ ಮಂದಾಕಿನಿ ಆಸ್ತ ಪಥ ಮತ್ತು ಸರಸ್ವತಿ ಆಸ್ತ ಪಥವನ್ನು ಮೋದಿ ಪರಿಶೀಲಿಸಿದ್ದಾರೆ. ಬಳಿಕ ಈ ಯೋಜನೆಗಳನ್ನು ನಿರ್ಮಿಸಿದ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದಾರೆ.



















