- Kannada News Photo gallery PM Narendra Modi arrives in Kanniyakumari to embark on 45 hour dhyan at Vivekananda Rock Memorial
ಕನ್ಯಾಕುಮಾರಿ ತಲುಪಿದ ಪ್ರಧಾನಿ ಮೋದಿ; ವಿವೇಕಾನಂದ ಸ್ಮಾರಕದಲ್ಲಿ ಇಂದು ಸಂಜೆಯಿಂದ 45 ಗಂಟೆ ಧ್ಯಾನ
PM Modi in Kanniyakumari: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಚುನಾವಣಾ ಪ್ರಚಾರ ಮುಗಿಸಿ ತಮಿಳುನಾಡಿನ ಕನ್ಯಾಕುಮಾರಿಗೆ ತಲುಪಿದ್ದಾರೆ. ಸ್ವಾಮಿ ವಿವೇಕಾನಂದರು 'ಭಾರತ ಮಾತೆಯ' ಬಗ್ಗೆ ದೈವಿಕ ದರ್ಶನ ಪಡೆದಿದ್ದಾರೆಂದು ನಂಬಲಾದ ಧ್ಯಾನ ಮಂಟಪದಲ್ಲಿ ಇಂದು (ಗುರುವಾರ) ಸಂಜೆಯಿಂದ ಜೂನ್ 1ರ ಸಂಜೆಯವರೆಗೆ ಮೋದಿ ಧ್ಯಾನ ಮಾಡಲಿದ್ದಾರೆ.
Updated on:May 31, 2024 | 10:29 AM
![ಸ್ವಾಮಿ ವಿವೇಕಾನಂದರು 'ಭಾರತ ಮಾತೆಯ' ಬಗ್ಗೆ ದಿವ್ಯ ದರ್ಶನ ಪಡೆದಿದ್ದಾರೆಂದು ನಂಬಲಾದ ಧ್ಯಾನ ಮಂಟಪದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜೂನ್ 1ರ ಸಂಜೆಯವರೆಗೆ ಧ್ಯಾನ ಮಾಡಲಿದ್ದಾರೆ.](https://images.tv9kannada.com/wp-content/uploads/2024/05/pm-modi-in-kanyakumari-7.jpg?w=1280&enlarge=true)
ಸ್ವಾಮಿ ವಿವೇಕಾನಂದರು 'ಭಾರತ ಮಾತೆಯ' ಬಗ್ಗೆ ದಿವ್ಯ ದರ್ಶನ ಪಡೆದಿದ್ದಾರೆಂದು ನಂಬಲಾದ ಧ್ಯಾನ ಮಂಟಪದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜೂನ್ 1ರ ಸಂಜೆಯವರೆಗೆ ಧ್ಯಾನ ಮಾಡಲಿದ್ದಾರೆ.
![ಲೋಕಸಭೆ ಚುನಾವಣೆಯ ಕೊನೆಯ ಹಂತದ ಪ್ರಚಾರದ ಮುಕ್ತಾಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಕನ್ಯಾಕುಮಾರಿಗೆ ತೆರಳಿ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಜೂನ್ 1ರವರೆಗೆ ಧ್ಯಾನ ಮಾಡಲಿದ್ದಾರೆ.](https://images.tv9kannada.com/wp-content/uploads/2024/05/pm-modi-in-kanyakumari-6.jpg)
ಲೋಕಸಭೆ ಚುನಾವಣೆಯ ಕೊನೆಯ ಹಂತದ ಪ್ರಚಾರದ ಮುಕ್ತಾಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಕನ್ಯಾಕುಮಾರಿಗೆ ತೆರಳಿ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಜೂನ್ 1ರವರೆಗೆ ಧ್ಯಾನ ಮಾಡಲಿದ್ದಾರೆ.
![ಪಾರ್ವತಿ ದೇವಿಯು ಸಹ ಅದೇ ಸ್ಥಳದಲ್ಲಿ ಭಗವಾನ್ ಶಿವನಿಗಾಗಿ ಕಾಯುತ್ತಾ ಒಂದೇ ಕಾಲಿನಲ್ಲಿ ನಿಂತು ಧ್ಯಾನ ಮಾಡಿದ್ದಳು ಎಂಬ ನಂಬಿಕೆಯಿದೆ. ಕನ್ಯಾಕುಮಾರಿ ಭಾರತದ ದಕ್ಷಿಣದ ತುದಿಯಾಗಿದೆ. ಇದಲ್ಲದೆ, ಇದು ಭಾರತದ ಪೂರ್ವ ಮತ್ತು ಪಶ್ಚಿಮ ಕರಾವಳಿಗಳು ಸಂಧಿಸುವ ಸ್ಥಳವಾಗಿದೆ. ಇದು ಹಿಂದೂ ಮಹಾಸಾಗರ, ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮ ಸ್ಥಳವಾಗಿದೆ. ಪ್ರಧಾನಿ ಮೋದಿಯವರು ಕನ್ಯಾಕುಮಾರಿಗೆ ಹೋಗುವ ಮೂಲಕ ರಾಷ್ಟ್ರೀಯ ಏಕತೆಯ ಸಂಕೇತವನ್ನು ನೀಡುತ್ತಿದ್ದಾರೆ.](https://images.tv9kannada.com/wp-content/uploads/2024/05/pm-modi-in-kanyakumari.jpg)
ಪಾರ್ವತಿ ದೇವಿಯು ಸಹ ಅದೇ ಸ್ಥಳದಲ್ಲಿ ಭಗವಾನ್ ಶಿವನಿಗಾಗಿ ಕಾಯುತ್ತಾ ಒಂದೇ ಕಾಲಿನಲ್ಲಿ ನಿಂತು ಧ್ಯಾನ ಮಾಡಿದ್ದಳು ಎಂಬ ನಂಬಿಕೆಯಿದೆ. ಕನ್ಯಾಕುಮಾರಿ ಭಾರತದ ದಕ್ಷಿಣದ ತುದಿಯಾಗಿದೆ. ಇದಲ್ಲದೆ, ಇದು ಭಾರತದ ಪೂರ್ವ ಮತ್ತು ಪಶ್ಚಿಮ ಕರಾವಳಿಗಳು ಸಂಧಿಸುವ ಸ್ಥಳವಾಗಿದೆ. ಇದು ಹಿಂದೂ ಮಹಾಸಾಗರ, ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮ ಸ್ಥಳವಾಗಿದೆ. ಪ್ರಧಾನಿ ಮೋದಿಯವರು ಕನ್ಯಾಕುಮಾರಿಗೆ ಹೋಗುವ ಮೂಲಕ ರಾಷ್ಟ್ರೀಯ ಏಕತೆಯ ಸಂಕೇತವನ್ನು ನೀಡುತ್ತಿದ್ದಾರೆ.
![ಕನ್ಯಾಕುಮಾರಿಗೆ ಪ್ರಧಾನಿ ಮೋದಿ ಆಗಮಿಸಿದ ನಂತರ ಅವರು ವಿವೇಕಾನಂದ ರಾಕ್ ಸ್ಮಾರಕಕ್ಕೆ ತೆರಳುವ ಮೊದಲು ನಗರದ ಭಗವತಿ ಅಮ್ಮನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.](https://images.tv9kannada.com/wp-content/uploads/2024/05/pm-modi-in-kanyakumari-6-1.jpg)
ಕನ್ಯಾಕುಮಾರಿಗೆ ಪ್ರಧಾನಿ ಮೋದಿ ಆಗಮಿಸಿದ ನಂತರ ಅವರು ವಿವೇಕಾನಂದ ರಾಕ್ ಸ್ಮಾರಕಕ್ಕೆ ತೆರಳುವ ಮೊದಲು ನಗರದ ಭಗವತಿ ಅಮ್ಮನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
![ಮೋದಿ ಅವರ ಭೇಟಿಗೆ ಮುಂಚಿತವಾಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ. 2000 ಪೊಲೀಸ್ ಸಿಬ್ಬಂದಿಗಳು ಅವರ ವಾಸ್ತವ್ಯದ ಸಮಯದಲ್ಲಿ ಕಾವಲು ಕಾಯಲಿದ್ದಾರೆ.](https://images.tv9kannada.com/wp-content/uploads/2024/05/pm-modi-in-kanyakumari-5.jpg)
ಮೋದಿ ಅವರ ಭೇಟಿಗೆ ಮುಂಚಿತವಾಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ. 2000 ಪೊಲೀಸ್ ಸಿಬ್ಬಂದಿಗಳು ಅವರ ವಾಸ್ತವ್ಯದ ಸಮಯದಲ್ಲಿ ಕಾವಲು ಕಾಯಲಿದ್ದಾರೆ.
![ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಭಾರತೀಯ ನೌಕಾಪಡೆ ಕೂಡ ಬಿಗಿಯಾದ ಕಟ್ಟೆಚ್ಚರವನ್ನು ನಿರ್ವಹಿಸಲಿದೆ. ಇಂದಿನಿಂದ ಶನಿವಾರದವರೆಗೆ ಪ್ರವಾಸಿಗರಿಗೆ ಕನ್ಯಾಕುಮಾರಿಯ ಕಡಲತೀರಕ್ಕೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಖಾಸಗಿ ದೋಣಿಗಳಿಗೆ ದೋಣಿ ನಡೆಸಲು ಅನುಮತಿಸಲಾಗುವುದಿಲ್ಲ ಎಂದು ಪಿಟಿಐ ತಿಳಿಸಿದೆ.](https://images.tv9kannada.com/wp-content/uploads/2024/05/pm-modi-in-kanyakumari-4.jpg)
ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಭಾರತೀಯ ನೌಕಾಪಡೆ ಕೂಡ ಬಿಗಿಯಾದ ಕಟ್ಟೆಚ್ಚರವನ್ನು ನಿರ್ವಹಿಸಲಿದೆ. ಇಂದಿನಿಂದ ಶನಿವಾರದವರೆಗೆ ಪ್ರವಾಸಿಗರಿಗೆ ಕನ್ಯಾಕುಮಾರಿಯ ಕಡಲತೀರಕ್ಕೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಖಾಸಗಿ ದೋಣಿಗಳಿಗೆ ದೋಣಿ ನಡೆಸಲು ಅನುಮತಿಸಲಾಗುವುದಿಲ್ಲ ಎಂದು ಪಿಟಿಐ ತಿಳಿಸಿದೆ.
![ಮೋದಿಯವರು 2014ರಲ್ಲಿ ಚುನಾವಣಾ ಪ್ರಚಾರದ ಕೊನೆಯಲ್ಲಿ ಶಿವಾಜಿ ನೇತೃತ್ವದ ಮರಾಠಾ ಪಡೆಗಳು ಮತ್ತು ಜನರಲ್ ಅಫ್ಜಲ್ ಖಾನ್ ನೇತೃತ್ವದ ಬಿಜಾಪುರ ಪಡೆಗಳ ನಡುವೆ ಯುದ್ಧ ನಡೆದ ಪ್ರತಾಪಗಢಕ್ಕೆ ಭೇಟಿ ನೀಡಿದ್ದರು. 2019ರಲ್ಲಿ ಲೋಕಸಭೆ ಚುನಾವಣೆ ಮುಗಿದ ಬಳಿಕ ಪ್ರಧಾನಿ ಮೋದಿ ಕೇದಾರನಾಥದ ವಿಶೇಷ ಗುಹೆಯಲ್ಲಿ ಧ್ಯಾನ ಮಾಡಿದ್ದರು.](https://images.tv9kannada.com/wp-content/uploads/2024/05/pm-modi-in-kanyakumari-3.jpg)
ಮೋದಿಯವರು 2014ರಲ್ಲಿ ಚುನಾವಣಾ ಪ್ರಚಾರದ ಕೊನೆಯಲ್ಲಿ ಶಿವಾಜಿ ನೇತೃತ್ವದ ಮರಾಠಾ ಪಡೆಗಳು ಮತ್ತು ಜನರಲ್ ಅಫ್ಜಲ್ ಖಾನ್ ನೇತೃತ್ವದ ಬಿಜಾಪುರ ಪಡೆಗಳ ನಡುವೆ ಯುದ್ಧ ನಡೆದ ಪ್ರತಾಪಗಢಕ್ಕೆ ಭೇಟಿ ನೀಡಿದ್ದರು. 2019ರಲ್ಲಿ ಲೋಕಸಭೆ ಚುನಾವಣೆ ಮುಗಿದ ಬಳಿಕ ಪ್ರಧಾನಿ ಮೋದಿ ಕೇದಾರನಾಥದ ವಿಶೇಷ ಗುಹೆಯಲ್ಲಿ ಧ್ಯಾನ ಮಾಡಿದ್ದರು.
![ವಿವೇಕಾನಂದ ರಾಕ್ ಸ್ಮಾರಕಕ್ಕೆ ಪ್ರಧಾನಿ ಮೋದಿ ಭೇಟಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಕನ್ಯಾಕುಮಾರಿಯಲ್ಲಿ ತಮ್ಮ 48 ಗಂಟೆಗಳ ಧ್ಯಾನ ಪ್ರವಾಸದ ಮೂಲಕ ಮೋದಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತಿದ್ದಾರೆ. ಹೀಗಾಗಿ, ಇದು ಮಾಧ್ಯಮಗಳಲ್ಲಿ ಪ್ರಸಾರವಾಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.](https://images.tv9kannada.com/wp-content/uploads/2024/05/pm-modi-in-kanyakumari-2.jpg)
ವಿವೇಕಾನಂದ ರಾಕ್ ಸ್ಮಾರಕಕ್ಕೆ ಪ್ರಧಾನಿ ಮೋದಿ ಭೇಟಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಕನ್ಯಾಕುಮಾರಿಯಲ್ಲಿ ತಮ್ಮ 48 ಗಂಟೆಗಳ ಧ್ಯಾನ ಪ್ರವಾಸದ ಮೂಲಕ ಮೋದಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತಿದ್ದಾರೆ. ಹೀಗಾಗಿ, ಇದು ಮಾಧ್ಯಮಗಳಲ್ಲಿ ಪ್ರಸಾರವಾಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.
![ಜೂನ್ 1ರಂದು 7 ರಾಜ್ಯಗಳು ಮತ್ತು ಚಂಡೀಗಢ ಕೇಂದ್ರಾಡಳಿತ ಪ್ರದೇಶದ 57 ಸ್ಥಾನಗಳಲ್ಲಿ 7ನೇ ಮತ್ತು ಅಂತಿಮ ಹಂತದ ಲೋಕಸಭೆ ಚುನಾವಣೆಯ ಪ್ರಚಾರ ಇಂದು ಸಂಜೆ ಕೊನೆಗೊಂಡಿತು.](https://images.tv9kannada.com/wp-content/uploads/2024/05/pm-modi-in-kanyakumari-1.jpg)
ಜೂನ್ 1ರಂದು 7 ರಾಜ್ಯಗಳು ಮತ್ತು ಚಂಡೀಗಢ ಕೇಂದ್ರಾಡಳಿತ ಪ್ರದೇಶದ 57 ಸ್ಥಾನಗಳಲ್ಲಿ 7ನೇ ಮತ್ತು ಅಂತಿಮ ಹಂತದ ಲೋಕಸಭೆ ಚುನಾವಣೆಯ ಪ್ರಚಾರ ಇಂದು ಸಂಜೆ ಕೊನೆಗೊಂಡಿತು.
Published On - 9:20 pm, Thu, 30 May 24
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)