Narendra Modi in Wayanad: ವಯನಾಡಿನಲ್ಲಿ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ

|

Updated on: Aug 10, 2024 | 2:13 PM

ವಯನಾಡಿನ ವಿಪತ್ತು ಪೀಡಿತ ಪ್ರದೇಶಗಳಲ್ಲಿ ಪ್ರದಾನಿ ನರೇಂದ್ರ ಮೋದಿ ಇಂದು (ಶನಿವಾರ) ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ವೈಮಾನಿಕ ಸಮೀಕ್ಷೆ ನಂತ ಅವರು ಕಲ್ಪಟ್ಟಾದಿಂದ ಚೂರಲ್‌ಮಲಗೆ ರಸ್ತೆ ಮೂಲಕ ಪ್ರಯಾಣಿಸಿದ್ದಾರೆ. ಕಣ್ಣೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಹೆಲಿಕಾಪ್ಟರ್ ಮೂಲಕ ವಯನಾಡ್ ತಲುಪಿದರು. ನಂತರ ಭೂಕುಸಿತ ಸಂಭವಿಸಿದ ಮುಂಡಕೈ- ಚೂರಲ್‌ಮಲ-ಪುಂಚಿರಿಮಟ್ಟಂ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಾಗಿದೆ.

1 / 8
ಭೂಕುಸಿತ ಪೀಡಿತ ವಯನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ. ಜುಲೈ 30 ರಂದು ಸಂಭವಿಸಿದ ಈ ದುರಂತವು ಕನಿಷ್ಠ 226 ಜೀವಗಳನ್ನು ಬಲಿ ತೆಗೆದುಕೊಂಡಿದೆ, ಇನ್ನೂ ಅನೇಕರು ನಾಪತ್ತೆಯಾಗಿದ್ದಾರೆ. ಕೇರಳದಲ್ಲಿ ಸಂಭವಿಸಿದ ಅತ್ಯಂತ ಭೀಕರ ನೈಸರ್ಗಿಕ ವಿಕೋಪಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗಿದೆ.

ಭೂಕುಸಿತ ಪೀಡಿತ ವಯನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ. ಜುಲೈ 30 ರಂದು ಸಂಭವಿಸಿದ ಈ ದುರಂತವು ಕನಿಷ್ಠ 226 ಜೀವಗಳನ್ನು ಬಲಿ ತೆಗೆದುಕೊಂಡಿದೆ, ಇನ್ನೂ ಅನೇಕರು ನಾಪತ್ತೆಯಾಗಿದ್ದಾರೆ. ಕೇರಳದಲ್ಲಿ ಸಂಭವಿಸಿದ ಅತ್ಯಂತ ಭೀಕರ ನೈಸರ್ಗಿಕ ವಿಕೋಪಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗಿದೆ.

2 / 8
ವಯನಾಡಿಗೆ ಭೇಟಿ ನೀಡಿರುವ ಮೋದಿ ಅವರನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಣ್ಣೂರ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದಾರೆ.

ವಯನಾಡಿಗೆ ಭೇಟಿ ನೀಡಿರುವ ಮೋದಿ ಅವರನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಣ್ಣೂರ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದಾರೆ.

3 / 8
ಪ್ರಧಾನಿ ನರೇಂದ್ರ ಮೋದಿ ಅವರು ವಯನಾಡ್‌ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಸಮೀಕ್ಷೆಯ ಸಮಯದಲ್ಲಿ, ಇರುವಝಿಂಜಿ ಪುಳದಲ್ಲಿ (ನದಿ) ಭೂಕುಸಿತದ ಮೂಲವನ್ನು ಅವರು ವೀಕ್ಷಿಸಿದರು. ಪುಂಚಿರಿಟ್ಟಂ, ಮುಂಡಕೈ ಮತ್ತು ಚೂರಲ್ಮಲ ಸೇರಿದಂತೆ ಹೆಚ್ಚು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ವಯನಾಡ್‌ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಸಮೀಕ್ಷೆಯ ಸಮಯದಲ್ಲಿ, ಇರುವಝಿಂಜಿ ಪುಳದಲ್ಲಿ (ನದಿ) ಭೂಕುಸಿತದ ಮೂಲವನ್ನು ಅವರು ವೀಕ್ಷಿಸಿದರು. ಪುಂಚಿರಿಟ್ಟಂ, ಮುಂಡಕೈ ಮತ್ತು ಚೂರಲ್ಮಲ ಸೇರಿದಂತೆ ಹೆಚ್ಚು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.

4 / 8
ಪ್ರಧಾನಿ ನರೇಂದ್ರ ಮೋದಿ ಅವರು ಗವರ್ನರ್ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕೇಂದ್ರ ಪೆಟ್ರೋಲಿಯಂ ರಾಜ್ಯ ಸಚಿವ ಸುರೇಶ್ ಗೋಪಿ ಅವರೊಂದಿಗೆ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ವಯನಾಡ್‌ಗೆ ತೆರಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಗವರ್ನರ್ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕೇಂದ್ರ ಪೆಟ್ರೋಲಿಯಂ ರಾಜ್ಯ ಸಚಿವ ಸುರೇಶ್ ಗೋಪಿ ಅವರೊಂದಿಗೆ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ವಯನಾಡ್‌ಗೆ ತೆರಳಿದ್ದಾರೆ.

5 / 8
 ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಸಿಎಂ ಪಿಣರಾಯಿ ವಿಜಯನ್ ಬರಮಾಡಿಕೊಂಡರು. ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳನ್ನು ಪರಿಶೀಲಿಸಲು ಪ್ರಧಾನಿ ಮೋದಿ ವಯನಾಡ್‌ಗೆ ಭೇಟಿ ನೀಡಿದ್ದಾರೆ.

ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಸಿಎಂ ಪಿಣರಾಯಿ ವಿಜಯನ್ ಬರಮಾಡಿಕೊಂಡರು. ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳನ್ನು ಪರಿಶೀಲಿಸಲು ಪ್ರಧಾನಿ ಮೋದಿ ವಯನಾಡ್‌ಗೆ ಭೇಟಿ ನೀಡಿದ್ದಾರೆ.

6 / 8
ರಾಜ್ಯದ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಕೇಂದ್ರ ಸರ್ಕಾರವು ಅಂತರ ಸಚಿವಾಲಯದ ಕೇಂದ್ರ ತಂಡವನ್ನು (IMCT) ರಚಿಸಿದೆ. ತಂಡವು ಆಗಸ್ಟ್ 8-10 ರವರೆಗೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದೆ. ಇಲ್ಲಿಯವರೆಗೆ, ಒಟ್ಟು 30 ಜನರನ್ನು ರಕ್ಷಿಸಲಾಗಿದೆ, 520 ಜನರನ್ನು ಸ್ಥಳಾಂತರಿಸಲಾಗಿದೆ ಮತ್ತು 112 ಮೃತ ದೇಹಗಳನ್ನು NDRF ರಕ್ಷಣಾ ತಂಡಗಳು ಹೊರತೆಗೆದಿವೆ.

ರಾಜ್ಯದ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಕೇಂದ್ರ ಸರ್ಕಾರವು ಅಂತರ ಸಚಿವಾಲಯದ ಕೇಂದ್ರ ತಂಡವನ್ನು (IMCT) ರಚಿಸಿದೆ. ತಂಡವು ಆಗಸ್ಟ್ 8-10 ರವರೆಗೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದೆ. ಇಲ್ಲಿಯವರೆಗೆ, ಒಟ್ಟು 30 ಜನರನ್ನು ರಕ್ಷಿಸಲಾಗಿದೆ, 520 ಜನರನ್ನು ಸ್ಥಳಾಂತರಿಸಲಾಗಿದೆ ಮತ್ತು 112 ಮೃತ ದೇಹಗಳನ್ನು NDRF ರಕ್ಷಣಾ ತಂಡಗಳು ಹೊರತೆಗೆದಿವೆ.

7 / 8
ಭೂಕುಸಿತದಿಂದ ನಿರ್ಗತಿಕರಾಗಿರುವ ಜನರಿಗೆ ಪುನರ್ವಸತಿ ಕಲ್ಪಿಸಲು ಮೋದಿಯವರ ಭೇಟಿ ನಿರ್ಣಾಯಕವಾಗಿದೆ. ಜುಲೈ 30 ರಂದು ಚೂರಲ್‌ಮಲ, ಮುಂಡಕೈ ಮತ್ತು ಅಟ್ಟಮಲ ಪ್ರದೇಶಗಳನ್ನು ನೆಲಸಮಗೊಳಿಸಿದ ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಆಡಳಿತರೂಢ LDF ಮತ್ತು ಪ್ರತಿಪಕ್ಷಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದವು.

ಭೂಕುಸಿತದಿಂದ ನಿರ್ಗತಿಕರಾಗಿರುವ ಜನರಿಗೆ ಪುನರ್ವಸತಿ ಕಲ್ಪಿಸಲು ಮೋದಿಯವರ ಭೇಟಿ ನಿರ್ಣಾಯಕವಾಗಿದೆ. ಜುಲೈ 30 ರಂದು ಚೂರಲ್‌ಮಲ, ಮುಂಡಕೈ ಮತ್ತು ಅಟ್ಟಮಲ ಪ್ರದೇಶಗಳನ್ನು ನೆಲಸಮಗೊಳಿಸಿದ ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಆಡಳಿತರೂಢ LDF ಮತ್ತು ಪ್ರತಿಪಕ್ಷಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದವು.

8 / 8
ಕೇರಳ ಸರ್ಕಾರವು ವಿಪತ್ತು ಪೀಡಿತ ಪ್ರದೇಶದಲ್ಲಿ ಪುನರ್ವಸತಿ ಮತ್ತು ಪರಿಹಾರ ಕಾರ್ಯಗಳಿಗಾಗಿ 2,000 ಕೋಟಿ ರೂಪಾಯಿಗಳ ಸಹಾಯವನ್ನು ಕೋರಿದೆ. ಜುಲೈ 30 ರಂದು ಈ ಪ್ರದೇಶದಲ್ಲಿ ಭೂಕುಸಿತಗಳು ಸಂಭವಿಸಿದ ನಂತರ ಕನಿಷ್ಠ 226 ಜನರು ಸಾವಿಗೀಡಾಗಿದ್ದಾರೆ. ದಕ್ಷಿಣದ ರಾಜ್ಯದ ಮೇಲೆ ಪ್ರಭಾವ ಬೀರಿದ ಅತಿದೊಡ್ಡ ನೈಸರ್ಗಿಕ ವಿಕೋಪಗಳಲ್ಲಿ ಇದೂ ಒಂದಾಗಿದೆ.

ಕೇರಳ ಸರ್ಕಾರವು ವಿಪತ್ತು ಪೀಡಿತ ಪ್ರದೇಶದಲ್ಲಿ ಪುನರ್ವಸತಿ ಮತ್ತು ಪರಿಹಾರ ಕಾರ್ಯಗಳಿಗಾಗಿ 2,000 ಕೋಟಿ ರೂಪಾಯಿಗಳ ಸಹಾಯವನ್ನು ಕೋರಿದೆ. ಜುಲೈ 30 ರಂದು ಈ ಪ್ರದೇಶದಲ್ಲಿ ಭೂಕುಸಿತಗಳು ಸಂಭವಿಸಿದ ನಂತರ ಕನಿಷ್ಠ 226 ಜನರು ಸಾವಿಗೀಡಾಗಿದ್ದಾರೆ. ದಕ್ಷಿಣದ ರಾಜ್ಯದ ಮೇಲೆ ಪ್ರಭಾವ ಬೀರಿದ ಅತಿದೊಡ್ಡ ನೈಸರ್ಗಿಕ ವಿಕೋಪಗಳಲ್ಲಿ ಇದೂ ಒಂದಾಗಿದೆ.

Published On - 2:12 pm, Sat, 10 August 24