AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಪುರದಲ್ಲಿ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್-ನರೇಂದ್ರ ಮೋದಿ ರೋಡ್ ಶೋ

ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜನವರಿ 25 ರಂದು ಜಂತರ್ ಮಂತರ್‌ನಲ್ಲಿ ತಮ್ಮ ರೋಡ್‌ಶೋಗೆ ಮುಂಚಿತವಾಗಿ ಭೇಟಿಯಾದರು. ಮ್ಯಾಕ್ರನ್ ಅವರು ಅಂಬರ್ ಕೋಟೆಗೆ ಭೇಟಿ ನೀಡಿದ ನಂತರ ಮೋದಿ ಅಲ್ಲಿಗೆ ಬಂದಿದ್ದು ಉಭಯ ನಾಯಕರು ಅಲ್ಲಿ ಭೇಟಿಯಾಗಿ ಪರಸ್ಪರ ಆಲಿಂಗನ ಮಾಡಿದರು.ನಂತರ ಅವರು ವೀಕ್ಷಣಾಲಯಕ್ಕೆ ಭೇಟಿ ನೀಡಿದರು. ಮೋದಿ ಮತ್ತು ಮ್ಯಾಕ್ರನ್ ಭೇಟಿಯ ಚಿತ್ರಗಳು ಇಲ್ಲಿವೆ

ರಶ್ಮಿ ಕಲ್ಲಕಟ್ಟ
|

Updated on: Jan 25, 2024 | 8:43 PM

Share
ರಾಜಸ್ಥಾನದ ಜೈಪುರಕ್ಕೆ ಗುರುವಾರ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಆಗಮಿಸಿದ್ದು, ಅವರಿಗೆ ಅದ್ದೂರಿ ಸ್ವಾಗತ ಕೋರಲಾಗಿದೆ

ರಾಜಸ್ಥಾನದ ಜೈಪುರಕ್ಕೆ ಗುರುವಾರ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಆಗಮಿಸಿದ್ದು, ಅವರಿಗೆ ಅದ್ದೂರಿ ಸ್ವಾಗತ ಕೋರಲಾಗಿದೆ

1 / 8
ಈ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುವ ಮ್ಯಾಕ್ರನ್ ಗುರುವಾರ  ಮಧ್ಯಾಹ್ನ 2.10 ರ ಸುಮಾರಿಗೆ ಜೈಪುರಕ್ಕೆ ಬಂದಿದ್ದು, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ರಾಜಸ್ಥಾನದ ರಾಜ್ಯಪಾಲ ಕಲ್ರಾಜ್ ಮಿಶ್ರಾ ಮತ್ತು ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರನ್ನು ಬರಮಾಡಿಕೊಂಡರು.

ಈ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುವ ಮ್ಯಾಕ್ರನ್ ಗುರುವಾರ ಮಧ್ಯಾಹ್ನ 2.10 ರ ಸುಮಾರಿಗೆ ಜೈಪುರಕ್ಕೆ ಬಂದಿದ್ದು, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ರಾಜಸ್ಥಾನದ ರಾಜ್ಯಪಾಲ ಕಲ್ರಾಜ್ ಮಿಶ್ರಾ ಮತ್ತು ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರನ್ನು ಬರಮಾಡಿಕೊಂಡರು.

2 / 8
ವಿಮಾನ ನಿಲ್ದಾಣದಿಂದ ಮ್ಯಾಕ್ರನ್ ನೇರವಾಗಿ ಅಂಬರ್ ಕೋಟೆಗೆ ಹೋದರು. ಅಲ್ಲಿ ಅವರು ಎರಡು  ಗಂಟೆಗಳ ಕಾಲ ಕಳೆದಿದ್ದಾರೆ

ವಿಮಾನ ನಿಲ್ದಾಣದಿಂದ ಮ್ಯಾಕ್ರನ್ ನೇರವಾಗಿ ಅಂಬರ್ ಕೋಟೆಗೆ ಹೋದರು. ಅಲ್ಲಿ ಅವರು ಎರಡು ಗಂಟೆಗಳ ಕಾಲ ಕಳೆದಿದ್ದಾರೆ

3 / 8
ಅಂಬರ್ ಕೋಟೆಯಲ್ಲಿ ಫ್ರೆಂಚ್ ಅಧ್ಯಕ್ಷರನ್ನು ರಾಜಸ್ಥಾನದ ಉಪಮುಖ್ಯಮಂತ್ರಿ ದಿಯಾ ಕುಮಾರಿ ಸ್ವಾಗತಿಸಿದರು.ಮ್ಯಾಕ್ರನ್ ಅಲ್ಲಿ ಶಾಲಾ  ಮಕ್ಕಳ ಜತೆ ಸಂವಾದ ನಡೆಸಿದ್ದು, ಮಕ್ಕಳು ಫ್ರಾನ್ಸ್ ಅಧ್ಯಕ್ಷರೊಂದಿಗೆ ಸೆಲ್ಫಿ ತೆಗೆದುಕೊಂಡರು.

ಅಂಬರ್ ಕೋಟೆಯಲ್ಲಿ ಫ್ರೆಂಚ್ ಅಧ್ಯಕ್ಷರನ್ನು ರಾಜಸ್ಥಾನದ ಉಪಮುಖ್ಯಮಂತ್ರಿ ದಿಯಾ ಕುಮಾರಿ ಸ್ವಾಗತಿಸಿದರು.ಮ್ಯಾಕ್ರನ್ ಅಲ್ಲಿ ಶಾಲಾ ಮಕ್ಕಳ ಜತೆ ಸಂವಾದ ನಡೆಸಿದ್ದು, ಮಕ್ಕಳು ಫ್ರಾನ್ಸ್ ಅಧ್ಯಕ್ಷರೊಂದಿಗೆ ಸೆಲ್ಫಿ ತೆಗೆದುಕೊಂಡರು.

4 / 8
ಮೋದಿ ಸಂಜೆ 4.30 ಕ್ಕೆ  ಜೈಪುರ ತಲುಪಿದ್ದುಉಭಯ ನಾಯಕರು ತೆರೆದ ಜೀಪ್‌ನಲ್ಲಿ ಟ್ರಿಪೋಲಿಯಾ ಗೇಟ್‌ನಿಂದ ಬಡೀ ಚೌಪಾದ್‌ಗೆ ತಮ್ಮ ರೋಡ್‌ಶೋ ಅನ್ನು ಪ್ರಾರಂಭಿಸಿದರು

ಮೋದಿ ಸಂಜೆ 4.30 ಕ್ಕೆ ಜೈಪುರ ತಲುಪಿದ್ದುಉಭಯ ನಾಯಕರು ತೆರೆದ ಜೀಪ್‌ನಲ್ಲಿ ಟ್ರಿಪೋಲಿಯಾ ಗೇಟ್‌ನಿಂದ ಬಡೀ ಚೌಪಾದ್‌ಗೆ ತಮ್ಮ ರೋಡ್‌ಶೋ ಅನ್ನು ಪ್ರಾರಂಭಿಸಿದರು

5 / 8
1799 ರಲ್ಲಿ ಸವಾಯಿ ಪ್ರತಾಪ್ ಸಿಂಗ್ ನಿರ್ಮಿಸಿದ ಜಗತ್ಪ್ರಸಿದ್ಧ ಹವಾ ಮಹಲ್‌ನಲ್ಲಿ, ಜೈಪುರದ ಪ್ರಸಿದ್ಧ ಸಾಹು ಟೀ ಸ್ಟಾಲ್‌ನಲ್ಲಿ ಮೋದಿ ಮತ್ತು ಮ್ಯಾಕ್ರನ್ ಮಸಾಲಾ ಚಹಾವನ್ನು ಸೇವಿಸಿದರು.

1799 ರಲ್ಲಿ ಸವಾಯಿ ಪ್ರತಾಪ್ ಸಿಂಗ್ ನಿರ್ಮಿಸಿದ ಜಗತ್ಪ್ರಸಿದ್ಧ ಹವಾ ಮಹಲ್‌ನಲ್ಲಿ, ಜೈಪುರದ ಪ್ರಸಿದ್ಧ ಸಾಹು ಟೀ ಸ್ಟಾಲ್‌ನಲ್ಲಿ ಮೋದಿ ಮತ್ತು ಮ್ಯಾಕ್ರನ್ ಮಸಾಲಾ ಚಹಾವನ್ನು ಸೇವಿಸಿದರು.

6 / 8
ಹವಾ ಮಹಲ್‌ನಿಂದ, ನಾಯಕರು ಆಲ್ಬರ್ಟ್ ಹಾಲ್ ವಸ್ತುಸಂಗ್ರಹಾಲಯಕ್ಕೆ ತೆರಳಿದರು.ಅಲ್ಲಿ ಅವರು 1887 ರಲ್ಲಿ ಬ್ರಿಟಿಷ್ ಸೇನಾ ಅಧಿಕಾರಿ ಮತ್ತು ಇಂಜಿನಿಯರ್ ಸ್ಯಾಮ್ಯುಯೆಲ್ ಸ್ವಿಂಟನ್ ಜಾಕೋಬ್ ನಿರ್ಮಿಸಿದ ವಸ್ತುಸಂಗ್ರಹಾಲಯವನ್ನು ವೀಕ್ಷಿಸಿದರು.

ಹವಾ ಮಹಲ್‌ನಿಂದ, ನಾಯಕರು ಆಲ್ಬರ್ಟ್ ಹಾಲ್ ವಸ್ತುಸಂಗ್ರಹಾಲಯಕ್ಕೆ ತೆರಳಿದರು.ಅಲ್ಲಿ ಅವರು 1887 ರಲ್ಲಿ ಬ್ರಿಟಿಷ್ ಸೇನಾ ಅಧಿಕಾರಿ ಮತ್ತು ಇಂಜಿನಿಯರ್ ಸ್ಯಾಮ್ಯುಯೆಲ್ ಸ್ವಿಂಟನ್ ಜಾಕೋಬ್ ನಿರ್ಮಿಸಿದ ವಸ್ತುಸಂಗ್ರಹಾಲಯವನ್ನು ವೀಕ್ಷಿಸಿದರು.

7 / 8
ನರೇಂದ್ರ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್  ಅವರಿಗೆ ರಾಮಮಂದಿರದ ಕಲಾಕೃತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ

ನರೇಂದ್ರ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ರಾಮಮಂದಿರದ ಕಲಾಕೃತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ

8 / 8
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್