ಅಯೋಧ್ಯೆ ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ನಂತರ ‘ರಾಮ ಜ್ಯೋತಿ’ ಬೆಳಗಿದ ಮೋದಿ

ರಶ್ಮಿ ಕಲ್ಲಕಟ್ಟ

Updated on: Jan 22, 2024 | 8:16 PM

ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾನ ವಿಗ್ರಹದ 'ಪ್ರಾಣ ಪ್ರತಿಷ್ಠಾ' ಸಮಾರಂಭದ ನಂತರ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ 'ರಾಮ ಜ್ಯೋತಿ' ಬೆಳಗಿಸಿದ್ದು,ಈ ಶುಭ ಸಂದರ್ಭದಲ್ಲಿ ‘ರಾಮ ಜ್ಯೋತಿ’ಯನ್ನು ಬೆಳಗಿಸಲು ಮತ್ತು ರಾಮಲಲ್ಲಾನನ್ನು ಸ್ವಾಗತಿಸಲು ದೇಶದ ಜನರಿಗೆ ಒತ್ತಾಯಿಸಿದ್ದಾರೆ.

1 / 8
 ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ರಾಮ ಲಲ್ಲಾನ ವಿಗ್ರಹದ 'ಪ್ರಾಣ ಪ್ರತಿಷ್ಠಾ' ಸಮಾರಂಭದ ನಂತರ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ 'ರಾಮ ಜ್ಯೋತಿ' ಬೆಳಗಿಸಿದರು

ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ರಾಮ ಲಲ್ಲಾನ ವಿಗ್ರಹದ 'ಪ್ರಾಣ ಪ್ರತಿಷ್ಠಾ' ಸಮಾರಂಭದ ನಂತರ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ 'ರಾಮ ಜ್ಯೋತಿ' ಬೆಳಗಿಸಿದರು

2 / 8

ಈ ಶುಭ ಸಂದರ್ಭದಲ್ಲಿ ‘ರಾಮ ಜ್ಯೋತಿ’ಯನ್ನು ಬೆಳಗಿಸಲು ಮತ್ತು ರಾಮಲಲ್ಲಾನನ್ನು ಸ್ವಾಗತಿಸಲು ಪ್ರಧಾನಿ ಮೋದಿ ನಾಗರಿಕರನ್ನು ಒತ್ತಾಯಿಸಿದ್ದಾರೆ.

3 / 8

ಎಲ್ಲಾ ದೇಶವಾಸಿಗಳು ರಾಮ ಜ್ಯೋತಿಯನ್ನು ಬೆಳಗಿಸಲು ಮತ್ತು ಅವರ ಮನೆಗಳಲ್ಲಿ ಭಗವಾನ್ ರಾಮನನ್ನು ಸ್ವಾಗತಿಸಲು ನಾನು ವಿನಂತಿಸುತ್ತೇನೆ. ಜೈ ಸಿಯಾ ರಾಮ್! ಎಂದು ಮೋದಿ ಎಕ್ಸ್ ನಲ್ಲಿ ಬರೆದಿದ್ದಾರೆ.

4 / 8

ರಾಮಲಲ್ಲಾ ಪ್ರತಿಷ್ಠಾಪನೆಯ ಸಮಾರಂಭದ ನಂತರ, ಅಯೋಧ್ಯಾ ನಗರವು 10 ಲಕ್ಷ ದೀಪಗಳ ಪ್ರಕಾಶದಿಂದ ಅಲಂಕರಿಸಲ್ಪಟ್ಟಿದ್ದು ಅದ್ಭುತವಾಗಿ ಕಾಣಿಸುತ್ತಿದೆ

5 / 8

ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕರೆಗೆ ಅಂಗಡಿಗಳು, ಧಾರ್ಮಿಕ ಸ್ಥಳಗಳು ಮತ್ತು ಐತಿಹಾಸಿಕ ಸ್ಥಳಗಳಲ್ಲಿ ‘ರಾಮ ಜ್ಯೋತಿ’ಯನ್ನು ಬೆಳಗಿಸಲಾಗುತ್ತದೆ

6 / 8

ರಾಮಜ್ಯೋತಿ ಬೆಳಗುವುದು ಅಯೋಧ್ಯೆಯಲ್ಲಿ ಭಗವಾನ್ ರಾಮನ ದೈವಿಕ ಉಪಸ್ಥಿತಿಯನ್ನು ಸಂಕೇತಿಸುವ ಮೋಡಿಮಾಡುವ ವಾತಾವರಣವನ್ನು ಸೃಷ್ಟಿಸುತ್ತದೆ.

7 / 8

ಇದಕ್ಕೂ ಮೊದಲು, ಪ್ರಾದೇಶಿಕ ಪ್ರವಾಸೋದ್ಯಮ ಅಧಿಕಾರಿ ಆರ್‌ಪಿ ಯಾದವ್ ಅವರು ಜನವರಿ 22 ರ ಸಂಜೆ, 100 ಪ್ರಮುಖ ದೇವಾಲಯಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ದೀಪಗಳನ್ನು ಬೆಳಗಿಸಲಾಗುತ್ತದೆ ಎಂದು ಹೇಳಿದ್ದರು

8 / 8

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರದ ಗರ್ಭಗುಡಿಯೊಳಗಿನ ರಾಮಲಲ್ಲಾ ವಿಗ್ರಹದ 'ಪ್ರಾಣ ಪ್ರತಿಷ್ಠಾ' ಸಮಾರಂಭದ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ವಹಿಸಿದ್ದರು.

Loading...
Unable to load recommendations.
Follow Us