AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ತಮ್ಮ ನೆಚ್ಚಿನ ನಟ ಪುನೀತ್ ರಾಜ್​ಕುಮಾರ್​ಗೆ ಅಭಿಮಾನಿಗಳಿಂದ ವಿಭಿನ್ನ ನಮನ

ಅಭಿಮಾನಿಗಳ ಪ್ರೀತಿಯ ಅಪ್ಪು.. ಸೂಪರ್‌ಸ್ಟಾರ್‌ ಕಿರೀಟ ತಲೆ ಮೇಲಿದ್ರು ಸರಳತೆಯಿಂದಲೇ ಜನರೊಂದಿಗೆ ಬೆರೆಯುತ್ತಿದ್ದ ನಟ ಸಾರ್ವಭೌಮ, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ರಿಗೆ ಅಭಿಮಾನಿಗಳು ಭಿನ್ನ ಭಿನ್ನವಾಗಿ ಅಂತಿಮ ನಮನ ಸಲ್ಲಿಸಿದ್ದಾರೆ.

TV9 Web
| Updated By: ಆಯೇಷಾ ಬಾನು

Updated on:Oct 30, 2021 | 3:29 PM

ಕನ್ನಡ ನಾಡಿನ ಯುವರತ್ನ, ಚಿತ್ರರಂಗದ ನಟಸಾರ್ವಭೌಮ, ನಮ್ಮೆಲ್ಲರ ಪ್ರೀತಿಯ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಗಲಿಕೆ ನಾಡಿಗೆ ನಿಜಕ್ಕೂ ತುಂಬಲಾರದ ನಷ್ಟ. ಕೋಟ್ಯಂತರ ಅಭಿಮಾನಿಗಳ ಅಪ್ಪು ಸದಾ ಕಾಲ ಅರಸನಾಗಿ ಮೆರೆಯಲಿ. ಅಕಾಲಿಕ ಮರಣಕ್ಕೆ ತುತ್ತಾದ ದೊಡ್ಮನೆ ಹುಡುಗನನ್ನು ಸ್ಮರಿಸಲು ಫಿಡಿಲಿಟಸ್ ಗ್ಯಾಲರಿಯ ಪ್ರಮುಖ ಚಿತ್ರಕಾರ ಕೋಟೆಗದ್ದೆ ರವಿ ತಮ್ಮ ಕುಂಚದಿಂದ ಸ್ಪೀಡ್ ಪೇಂಟಿಂಗ್ ಮೂಲಕ ದಿವಂಗತರಿಗೆ ಗೌರವ ಮತ್ತು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

power star puneeth rajkumar fans tribute

1 / 7
ನಟ ಪುನೀತ್ ನಿಧನ ಸುದ್ದಿ ಕೇಳಿ ಅಭಿಮಾನಿ ವಿಶೇಷ ಅಭಿಮಾನ ತೋರಿದ್ದಾರೆ. ನಟ ಪುನೀತ್ ಅಭಿಮಾನಿ ರಾಯಚೂರಿನ ಸಿಂಧನೂರಿನ ಲಿಂಗರಾಜ್ ತನ್ನ ಎದೆಯ ಮೇಲೆ ಪುನೀತ್ ಚಿತ್ರದ ಟ್ಯಾಟೂ ಹಾಕಿಸಿಕೊಂಡು ಅಂತಿಮ ವಿದಾಯ ಹೇಳಿದ್ದಾರೆ.

power star puneeth rajkumar fans tribute

2 / 7
ಧಾರವಾಡದ ಕೆಲಗೇರಿ ಬಡಾವಣೆಯ ಮಂಜುನಾಥ ಹಿರೇಮಠ ಎಂಬ ಕಲಾವಿದ ಅಪ್ಪು ಕಲಾಕೃತಿ ತಯಾರಿಸಿ ವಿಭಿನ್ನವಾಗಿ ಪುನೀತ್ ರಾಜ್ಕುಮಾರ್ರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಅಪ್ಪು ಮತ್ತೆ ಕನ್ನಡ ಮಣ್ಣಲ್ಲೇ ಹುಟ್ಟಿ ಬರಲೆಂಬ ಆಶಯ ವ್ಯಕ್ತಪಡಿಸಿದ್ದಾರೆ. ಮಣ್ಣಲ್ಲೇ 5 ಗಂಟೆಗಳಲ್ಲಿ 2 ಅಡಿಯ ಅಪ್ಪು ಕಲಾಕೃತಿ ನಿರ್ಮಾಣ ಮಾಡಿದ್ದಾರೆ.

ಧಾರವಾಡದ ಕೆಲಗೇರಿ ಬಡಾವಣೆಯ ಮಂಜುನಾಥ ಹಿರೇಮಠ ಎಂಬ ಕಲಾವಿದ ಅಪ್ಪು ಕಲಾಕೃತಿ ತಯಾರಿಸಿ ವಿಭಿನ್ನವಾಗಿ ಪುನೀತ್ ರಾಜ್ಕುಮಾರ್ರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಅಪ್ಪು ಮತ್ತೆ ಕನ್ನಡ ಮಣ್ಣಲ್ಲೇ ಹುಟ್ಟಿ ಬರಲೆಂಬ ಆಶಯ ವ್ಯಕ್ತಪಡಿಸಿದ್ದಾರೆ. ಮಣ್ಣಲ್ಲೇ 5 ಗಂಟೆಗಳಲ್ಲಿ 2 ಅಡಿಯ ಅಪ್ಪು ಕಲಾಕೃತಿ ನಿರ್ಮಾಣ ಮಾಡಿದ್ದಾರೆ.

3 / 7
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್(46) ವಿಧಿವಶವಾದ ಹಿನ್ನೆಲೆ ದಾವಣಗೆರೆ ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಅಭಿಮಾನಿಗಳು ಇಡೀ ರಾತ್ರಿ ಭಜನೆ ಮಾಡಿ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಕೋರಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್(46) ವಿಧಿವಶವಾದ ಹಿನ್ನೆಲೆ ದಾವಣಗೆರೆ ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಅಭಿಮಾನಿಗಳು ಇಡೀ ರಾತ್ರಿ ಭಜನೆ ಮಾಡಿ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಕೋರಿದ್ದಾರೆ.

4 / 7
ನಟ ಪುನೀತ್ ರಾಜಕುಮಾರ್(46) ವಿಧಿವಶ ಹಿನ್ನೆಲೆ ಚಿತ್ರದುರ್ಗದ ರಾಜಬೀದಿಯಲ್ಲಿ ಪುನೀತ್ ಭಾವಚಿತ್ರ ಮೆರವಣಿಗೆ ಮಾಡಲಾಗಿದೆ. ಶಾರದಾ ಬ್ರಾಸ್ ಬ್ಯಾಂಡ್ ನಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನೆರವೇರಿದೆ.

ನಟ ಪುನೀತ್ ರಾಜಕುಮಾರ್(46) ವಿಧಿವಶ ಹಿನ್ನೆಲೆ ಚಿತ್ರದುರ್ಗದ ರಾಜಬೀದಿಯಲ್ಲಿ ಪುನೀತ್ ಭಾವಚಿತ್ರ ಮೆರವಣಿಗೆ ಮಾಡಲಾಗಿದೆ. ಶಾರದಾ ಬ್ರಾಸ್ ಬ್ಯಾಂಡ್ ನಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನೆರವೇರಿದೆ.

5 / 7
ಯಾವ ವಿಷಯವೂ ತಿಳಿಯದೆ ಮಲಗಿದ್ದ ಬಾಲಕಿಯನ್ನು ಎಬ್ಬಿಸಿದ ತಾಯಿ ಮೊಬೈಲ್ನಲ್ಲಿ ತನ್ನ ನೆಚ್ಚಿನ ನಟ ಪುನೀತ್ ರಾಜ್ಕುಮಾರ್ ಅಗಲಿದ ಸಂಗತಿ ತೋರಿಸುತ್ತಿದ್ದಂತೆ ಪುಟ್ಟ ಅಭಿಮಾನಿ ಬಿಕ್ಕಿ ಬಿಕ್ಕಿ ಅತ್ತ ವಿಡಿಯೋ ವೈರಲ್ ಆಗಿದೆ. ತನ್ನ ಅಪ್ಪನನ್ನು ತಬ್ಬಿ ಪುಟ್ಟ ಬಾಲಕಿ ಕಣ್ಣೀರು ಹಾಕಿದ್ದಾಳೆ.

ಯಾವ ವಿಷಯವೂ ತಿಳಿಯದೆ ಮಲಗಿದ್ದ ಬಾಲಕಿಯನ್ನು ಎಬ್ಬಿಸಿದ ತಾಯಿ ಮೊಬೈಲ್ನಲ್ಲಿ ತನ್ನ ನೆಚ್ಚಿನ ನಟ ಪುನೀತ್ ರಾಜ್ಕುಮಾರ್ ಅಗಲಿದ ಸಂಗತಿ ತೋರಿಸುತ್ತಿದ್ದಂತೆ ಪುಟ್ಟ ಅಭಿಮಾನಿ ಬಿಕ್ಕಿ ಬಿಕ್ಕಿ ಅತ್ತ ವಿಡಿಯೋ ವೈರಲ್ ಆಗಿದೆ. ತನ್ನ ಅಪ್ಪನನ್ನು ತಬ್ಬಿ ಪುಟ್ಟ ಬಾಲಕಿ ಕಣ್ಣೀರು ಹಾಕಿದ್ದಾಳೆ.

6 / 7
ನಟ ಪುನೀತ್ರ ಫ್ಲೆಕ್ಸ್ಗೆ ಹಾರ ಹಾಕಿ ಅಭಿಮಾನಿಗಳು ಪೂಜೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದ ಘಟನೆ ಹಾಸನದಲ್ಲಿ ಕಂಡು ಬಂದಿದೆ. ಅನೇಕ ಅಭಿಮಾನಿಗಳು ಅಪ್ಪ ಸರ್ ಹಾಸಕ್ಕೆ ಬಂದಾಗ ನಮ್ಮ ಜೊತೆ ತುಂಬಾ ಚನ್ನಾಗಿ ಮಾತಾಡುತ್ತಿದ್ದರು. ಅವರು ಇಲ್ಲ ಎಂಬುವುದು ನಂಬಲು ಕಷ್ಟವಾಗುತ್ತಿದೆ ಎಂದು ಕಣ್ಣೀರು ಹಾಕಿದ್ದಾರೆ.

ನಟ ಪುನೀತ್ರ ಫ್ಲೆಕ್ಸ್ಗೆ ಹಾರ ಹಾಕಿ ಅಭಿಮಾನಿಗಳು ಪೂಜೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದ ಘಟನೆ ಹಾಸನದಲ್ಲಿ ಕಂಡು ಬಂದಿದೆ. ಅನೇಕ ಅಭಿಮಾನಿಗಳು ಅಪ್ಪ ಸರ್ ಹಾಸಕ್ಕೆ ಬಂದಾಗ ನಮ್ಮ ಜೊತೆ ತುಂಬಾ ಚನ್ನಾಗಿ ಮಾತಾಡುತ್ತಿದ್ದರು. ಅವರು ಇಲ್ಲ ಎಂಬುವುದು ನಂಬಲು ಕಷ್ಟವಾಗುತ್ತಿದೆ ಎಂದು ಕಣ್ಣೀರು ಹಾಕಿದ್ದಾರೆ.

7 / 7

Published On - 3:27 pm, Sat, 30 October 21

Follow us
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್