- Kannada News Photo gallery pralhad joshi honored Padma Shri awardee Venkappa Ambaji Sugatekar, Karnataka news in kannada
ಪದ್ಮಶ್ರೀ ಪುರಸ್ಕೃತರಾದ ವೆಂಕಪ್ಪ ಅಂಬಾಜಿ ಸುಗತೇಕರ್ನ್ನು ಸನ್ಮಾನಿಸಿದ ಪ್ರಲ್ಹಾದ್ ಜೋಶಿ
76ನೇ ಗಣರಾಜ್ಯೋತ್ಸವದಂದು ಕರ್ನಾಟಕದ ಮೂವರು ಗಣ್ಯರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಇದರಲ್ಲಿ ಬಾಗಲಕೋಟೆಯ ಜಾನಪದ ಗಾಯಕ ವೆಂಕಪ್ಪ ಅಂಬಾಜಿ ಸುಗತೇಕರ್ ಒಬ್ಬರು. 71 ವರ್ಷಗಳ ಕಲಾಸೇವೆಗೆ ಈ ಪ್ರಶಸ್ತಿ ಲಭಿಸಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ವೆಂಕಪ್ಪ ಅವರನ್ನು ಅಭಿನಂದಿಸಿದ್ದಾರೆ.
Updated on:Jan 26, 2025 | 8:02 PM

76ನೇ ಗಣರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ನಿನ್ನೆ ಘೋಷಣೆ ಮಾಡಿದ್ದು, ಇದರಲ್ಲಿ ಕರ್ನಾಟಕದ ವಿವಿಧ ಕ್ಷೇತ್ರಗಳ ಸಾಧನೆ ಮಾಡಿದ ಮೂವರಿಗೆ ಪದ್ಮಶ್ರೀ ದೊರಕಿದ್ದು ಹೆಮ್ಮೆಯ ವಿಷಯ. ಮೂವರ ಪೈಕಿ ಬಾಗಲಕೋಟೆ ಜಿಲ್ಲೆಯ ಜಾನಪದ ಗಾಯಕ ವೆಂಕಪ್ಪ ಅಂಬಾಜಿ ಸುಗತೇಕರ್ನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸನ್ಮಾನ ಮಾಡಿದ್ದಾರೆ.

ದೆಹಲಿ ನನ್ನ ನಿವಾಸದಲ್ಲಿ 2025ರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ನಮ್ಮ ರಾಜ್ಯದ ಬಾಗಲಕೋಟೆ ಜಿಲ್ಲೆಯ ಜಾನಪದ ಗಾಯಕ, ಗೊಂದಳಿ ಕಲಾವಿದ ವೆಂಕಪ್ಪ ಅಂಬಾಜಿ ಸುಗತೇಕರ್ ಅವರನ್ನು ಭೇಟಿಯಾಗುವ ಅವಕಾಶ ದೊರೆಯಿತು ಎಂದು ಪ್ರಲ್ಹಾದ್ ಜೋಶಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ವೆಂಕಪ್ಪ ಅವರು ಸಹಸ್ರಾರು ಹಾಡುಗಳನ್ನು ಜ್ಞಾಪಕ ಶಕ್ತಿಯಿಂದಲೇ, ಬಾಯಿಪಾಠದ ಮೂಲಕವೇ ಹಾಡಿ ಅಪಾರ ಜನಪ್ರಿಯತೆ ಹೊಂದಿದ್ದಾರೆ. ಅವರಿಗೆ ಇಂದು ಆತ್ಮೀಯತೆಯಿಂದ ಅಭಿನಂದಿಸಿ ಪುಟ್ಟ ಗೌರವ ನಮನವನ್ನು ಸಲ್ಲಿಸುವ ಸದಾವಕಾಶ ಒದಗಿ ಬಂದಿದ್ದು ನನಗೆ ಅತ್ಯಂತ ಸಂತೋಷ ತಂದಿದೆ ಎಂದು ಬರೆದುಕೊಂಡಿದ್ದಾರೆ.

ಗೊಂದಳಿ ಹಾಡಿನ ಮೂಲಕ ಸುದೀರ್ಘ ಕಲಾಸೇವೆ ಮಾಡಿಕೊಂಡಿರುವ ವೆಂಕಪ್ಪ, 71 ವರ್ಷಗಳಿಂದ ಗೊಂದಳಿ ಪದಗಳನ್ನು ಹಾಡುತ್ತಿದ್ದು, ಜನಪದ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದಿದ್ದಾರೆ. ಈ ಹಿಂದೆ ಪ್ರಧಾನಿ ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದಲ್ಲೂ ಅವರನ್ನು ಕೊಂಡಾಡಿದ್ದರು.

ವೆಂಕಪ್ಪ ಅಂಬಾಜಿ ಸುಗಟೇಕರ್ ಅವರೊಂದಿಗೆ ಕೊಪ್ಪಳ ಮೂಲದ ತೊಗಲುಗೊಂಬೆಯಾಟದ ಹಿರಿಯ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತ, ಕಲಬುರಗಿ ಮೂಲದವರಾಗಿರುವ ದೇಶದ ಹೆಸರಾಂತ ಕ್ಯಾನ್ಸರ್ ತಜ್ಞೆ ಡಾ.ವಿಜಯಲಕ್ಷ್ಮೀ ದೇಶಮಾನೆ ಅವರಿಗೂ ಪ್ರಲ್ಹಾದ್ ಜೋಶಿ ಶುಭಕೋರಿದ್ದಾರೆ. ನಿಮ್ಮ ಸಾಧನೆ ನಮ್ಮೆಲ್ಲರಿಗೂ ಅತ್ಯಂತ ಸ್ಪೂರ್ತಿದಾಯಕ, ನಿಮ್ಮ ಸಾಧನೆ ಸತತವಾಗಿ ಮುಂದುವರಿಯಲಿ ಮತ್ತು ರಾಷ್ಟ್ರಕ್ಕೆ ಪ್ರೇರಣಾದಾಯಕವಾಗಲಿ ಎಂದಿದ್ದಾರೆ.
Published On - 7:59 pm, Sun, 26 January 25
























