AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಖಾತೆಗಳ ಅಧಿಕಾರ ಸ್ವೀಕರಿಸಿದ ಜೋಶಿ, ಶೋಭಾ, ಎಚ್​ಡಿಕೆ, ಸೋಮಣ್ಣ: ಇಲ್ಲಿದೆ ದಿಲ್ಲಿ ರೌಂಡ್ಸ್

ಲೋಕಸಭೆ ಚುನಾವಣೆ 2024ರ ಫಲಿತಾಂಶ ಪ್ರಕಟವಾಗಿದ್ದು, ಎನ್‌ಡಿಎ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದ ನಾಲ್ವರು ಸಚಿವರಾಗಿದ್ದು, ಇಂದು(ಮಂಗಳವಾರ) ಅಧಿಕಾರ ವಹಿಸಿಕೊಂಡರು. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಕಿರಣ್ ಹನುಮಂತ್​ ಮಾದಾರ್
|

Updated on: Jun 11, 2024 | 8:35 PM

Share
ಇಂದು(ಜೂ.11) ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದ ಜೋಶಿ, ಶೋಭಾ, ಎಚ್​ಡಿಕೆ, ಸೋಮಣ್ಣ ಸೇರಿ ನಾಲ್ವರು ಇಂದು(ಮಂಗಳವಾರ) ಅಧಿಕಾರ ವಹಿಸಿಕೊಂಡರು.

ಇಂದು(ಜೂ.11) ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದ ಜೋಶಿ, ಶೋಭಾ, ಎಚ್​ಡಿಕೆ, ಸೋಮಣ್ಣ ಸೇರಿ ನಾಲ್ವರು ಇಂದು(ಮಂಗಳವಾರ) ಅಧಿಕಾರ ವಹಿಸಿಕೊಂಡರು.

1 / 5
ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವರಾಗಿ ಕರ್ನಾಟಕದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ಅಧಿಕಾರ ಸ್ವೀಕರಿಸಿದರು. ಜೊತೆಗೆ ‘ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರಕಾರದ ಸಂಪುಟದಲ್ಲಿ ಮಾನ್ಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು ನನಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ್ದು, ಅವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು ಎಂದರು.

ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವರಾಗಿ ಕರ್ನಾಟಕದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ಅಧಿಕಾರ ಸ್ವೀಕರಿಸಿದರು. ಜೊತೆಗೆ ‘ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರಕಾರದ ಸಂಪುಟದಲ್ಲಿ ಮಾನ್ಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು ನನಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ್ದು, ಅವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು ಎಂದರು.

2 / 5
ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ರಾಜ್ಯಖಾತೆ ಸಚಿವೆಯಾಗಿ ನೇಮಕವಾದ ಶೋಭಾ ಕರಂದ್ಲಾಜೆ ಅವರು ಇಂದು ದೆಹಲಿಯ ಕಛೇರಿಯಲ್ಲಿ ಕೇಂದ್ರ ಸಚಿವರಾದ ಶ್ರೀ ಮಾನ್ಸುಖ್ ಮಾಂಡವಿಯ ಅವರ ಸಮ್ಮುಖದಲ್ಲಿ ಅಧಿಕಾರದ ಜವಾಬ್ದಾರಿ ಸ್ವೀಕರಿಸಿದರು. ಕೇಂದ್ರದ ಅತಿಸಣ್ಣ, ಸಣ್ಣ, ಮಧ್ಯಮ ಕೈಗಾರಿಕಾ ರಾಜ್ಯಖಾತೆ ಸಚಿವೆಯಾಗಿ ಅವರನ್ನು ನೇಮಕವಾದ ಮಾಡಲಾಗಿದ್ದು, ಇಂದು ದೆಹಲಿಯ ಕಛೇರಿಯಲ್ಲಿ ಕೇಂದ್ರ ಸಚಿವರಾದ ಶ್ರೀ ಜಿತನ್ ರಾಂ ಮಾಂಝಿ ಅವರ ಸಮ್ಮುಖದಲ್ಲಿ ಅಧಿಕಾರದ ಜವಾಬ್ದಾರಿ ಸ್ವೀಕರಿಸಿದ್ದಾರೆ.

ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ರಾಜ್ಯಖಾತೆ ಸಚಿವೆಯಾಗಿ ನೇಮಕವಾದ ಶೋಭಾ ಕರಂದ್ಲಾಜೆ ಅವರು ಇಂದು ದೆಹಲಿಯ ಕಛೇರಿಯಲ್ಲಿ ಕೇಂದ್ರ ಸಚಿವರಾದ ಶ್ರೀ ಮಾನ್ಸುಖ್ ಮಾಂಡವಿಯ ಅವರ ಸಮ್ಮುಖದಲ್ಲಿ ಅಧಿಕಾರದ ಜವಾಬ್ದಾರಿ ಸ್ವೀಕರಿಸಿದರು. ಕೇಂದ್ರದ ಅತಿಸಣ್ಣ, ಸಣ್ಣ, ಮಧ್ಯಮ ಕೈಗಾರಿಕಾ ರಾಜ್ಯಖಾತೆ ಸಚಿವೆಯಾಗಿ ಅವರನ್ನು ನೇಮಕವಾದ ಮಾಡಲಾಗಿದ್ದು, ಇಂದು ದೆಹಲಿಯ ಕಛೇರಿಯಲ್ಲಿ ಕೇಂದ್ರ ಸಚಿವರಾದ ಶ್ರೀ ಜಿತನ್ ರಾಂ ಮಾಂಝಿ ಅವರ ಸಮ್ಮುಖದಲ್ಲಿ ಅಧಿಕಾರದ ಜವಾಬ್ದಾರಿ ಸ್ವೀಕರಿಸಿದ್ದಾರೆ.

3 / 5
ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವನಾಗಿ  ಪ್ರಹ್ಲಾದ್​ ಜೋಶಿ ಅವರು ಅಧಿಕಾರ ವಹಿಸಿಕೊಂಡರು. ಈ ವೇಳೆ ಮಾತನಾಡಿ, ‘ 2047 ರ ವೇಳೆಗೆ ಭಾರತದ ಇಂಧನ ಸ್ವಾತಂತ್ರ್ಯ ಸಾಧಿಸುವುದು ನಮ್ಮ ಸಂಕಲ್ಪವಾಗಿದೆ. ನವೀಕರಿಸಬಹುದಾದ ಇಂಧನದಲ್ಲಿ ಭಾರತವನ್ನು  ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡುವ ದೃಷ್ಟಿಯೊಂದಿಗೆ ನಾವು ಮುಂದುವರಿಯುತ್ತೇವೆ ಎಂದರು.

ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವನಾಗಿ ಪ್ರಹ್ಲಾದ್​ ಜೋಶಿ ಅವರು ಅಧಿಕಾರ ವಹಿಸಿಕೊಂಡರು. ಈ ವೇಳೆ ಮಾತನಾಡಿ, ‘ 2047 ರ ವೇಳೆಗೆ ಭಾರತದ ಇಂಧನ ಸ್ವಾತಂತ್ರ್ಯ ಸಾಧಿಸುವುದು ನಮ್ಮ ಸಂಕಲ್ಪವಾಗಿದೆ. ನವೀಕರಿಸಬಹುದಾದ ಇಂಧನದಲ್ಲಿ ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡುವ ದೃಷ್ಟಿಯೊಂದಿಗೆ ನಾವು ಮುಂದುವರಿಯುತ್ತೇವೆ ಎಂದರು.

4 / 5
ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾಗಿ ನೇಮಕವಾದ ವಿ.ಸೋಮಣ್ಣ ಅವರು ಇಂದು(ಜೂ.11) ದೆಹಲಿಯ ರೈಲ್ವೆ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಅಧಿಕಾರದ ಜವಾಬ್ದಾರಿ ವಹಿಸಿಕೊಂಡರು. ಈ ಸಂದರ್ಭದಲ್ಲಿ, ಮಾಜಿ ಸಂಸದರಾದ ಶ್ರೀ ಜಿ.ಎಸ್‌ ಬಸವರಾಜು ಅವರು, ಶ್ರೀ ಉಮೇಶ್‌ ಜಾದವ್‌ ಅವರು, ಬಾಗಲಕೋಟೆಯ ಸಂಸದರಾದ ಶ್ರೀ ಪಿ.ಸಿ ಗದ್ದಿಗೌಡ ಅವರು ಹಾಗೂ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾಗಿ ನೇಮಕವಾದ ವಿ.ಸೋಮಣ್ಣ ಅವರು ಇಂದು(ಜೂ.11) ದೆಹಲಿಯ ರೈಲ್ವೆ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಅಧಿಕಾರದ ಜವಾಬ್ದಾರಿ ವಹಿಸಿಕೊಂಡರು. ಈ ಸಂದರ್ಭದಲ್ಲಿ, ಮಾಜಿ ಸಂಸದರಾದ ಶ್ರೀ ಜಿ.ಎಸ್‌ ಬಸವರಾಜು ಅವರು, ಶ್ರೀ ಉಮೇಶ್‌ ಜಾದವ್‌ ಅವರು, ಬಾಗಲಕೋಟೆಯ ಸಂಸದರಾದ ಶ್ರೀ ಪಿ.ಸಿ ಗದ್ದಿಗೌಡ ಅವರು ಹಾಗೂ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

5 / 5
Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ