AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೂ ಮುನ್ನ ಮಸಣ ಸೇರಿದ ಜೋಡಿ: ಅಪಘಾತಕ್ಕೂ ಮೊದಲು ನಡೆದಿತ್ತು ಫೋಟೋ ಶೂಟ್​

ಭೀಕರ ಅಪಘಾತದಲ್ಲಿ ಹಸೆಮಣೆ ಏರಬೇಕಿದ್ದ ಜೋಡಿಯೊಂದು ದಾರುಣವಾಗಿ ಮೃತಪಟ್ಟಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಪ್ರಿ ವೆಡ್ಡಿಂಗ್​​ ಫೋಟೋ ಶೂಟ್​ ಮುಗಿಸುಕೊಂಡು ಬರುವ ವೇಳೆ ನಡೆದ ಬೈಕ್​​ ಅಪಘಾತದಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಯುವಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಪ್ರಾಣಬಿಟ್ಟಿದ್ದಾನೆ. ಹೀಗಾಗಿ ಮದುವೆ ಸಂಭ್ರಮದಲ್ಲಿದ್ದ ಮನೆಗೆ ಭರಸಿಡಿಲು ಬಡಿದಂತಾಗಿದೆ.

ಶಿವಕುಮಾರ್ ಪತ್ತಾರ್
| Edited By: |

Updated on:Dec 08, 2025 | 4:14 PM

Share
ಅವರಿಬ್ಬರೂ ಬದುಕಿನ ಬಗ್ಗೆ ನೂರಾರು ಕನಸು ಕಟ್ಟಿಕೊಂಡಿದ್ದರು. ಜೊತೆಯಾಗಿ ಸಂತೋಷದಿಂದ ಬದುಕಿ ಬಾಳಬೇಕೆಂದು ಅಂದುಕೊಂಡಿದ್ದ ಅವರು, ಇನ್ನೊಂದು 12 ದಿನಗಳು ಕಳೆದರೆ ಸಪ್ತಪದಿಯನ್ನೂ ತುಳಿಯುತ್ತಿದ್ದರು. ಆದರೆ ಅಷ್ಟರಲ್ಲಾಗಲೇ ವಿಧಿ ಅವರ ಬಾಳಲ್ಲಿ ಚೆಲ್ಲಾಟ ಆಡಿದೆ. ಹಸೆಮಣೆ ಏರಬೇಕಿದ್ದ ಜೋಡಿ ಒಟ್ಟಿಗೆ ಪ್ರಾಣ ಬಿಟ್ಟಿದೆ.

ಅವರಿಬ್ಬರೂ ಬದುಕಿನ ಬಗ್ಗೆ ನೂರಾರು ಕನಸು ಕಟ್ಟಿಕೊಂಡಿದ್ದರು. ಜೊತೆಯಾಗಿ ಸಂತೋಷದಿಂದ ಬದುಕಿ ಬಾಳಬೇಕೆಂದು ಅಂದುಕೊಂಡಿದ್ದ ಅವರು, ಇನ್ನೊಂದು 12 ದಿನಗಳು ಕಳೆದರೆ ಸಪ್ತಪದಿಯನ್ನೂ ತುಳಿಯುತ್ತಿದ್ದರು. ಆದರೆ ಅಷ್ಟರಲ್ಲಾಗಲೇ ವಿಧಿ ಅವರ ಬಾಳಲ್ಲಿ ಚೆಲ್ಲಾಟ ಆಡಿದೆ. ಹಸೆಮಣೆ ಏರಬೇಕಿದ್ದ ಜೋಡಿ ಒಟ್ಟಿಗೆ ಪ್ರಾಣ ಬಿಟ್ಟಿದೆ.

1 / 5
ಪ್ರಿ ವೆಡ್ಡಿಂಗ್ ಫೋಟೋ​​ ಶೂಟ್​ ಮುಗಿಸುಕೊಂಡು ಬರುತ್ತಿದ್ದ ಜೋಡಿಯೊಂದು ಭೀಕರ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್ ಗ್ರಾಮದ ಬಳಿ ನಡೆದಿದೆ. ಎದುರಿನಿಂದ ಬರ್ತಿದ್ದ ಲಾರಿಗೆ ಬೈಕ್​​ ಗುದ್ದಿದ ಪರಿಣಾಮ ಕರಿಯಪ್ಪ ಮಡಿವಾಳ (26) ಮತ್ತು ಕವಿತಾ (19) ಮೃತಪಟ್ಟಿದ್ದಾರೆ.

ಪ್ರಿ ವೆಡ್ಡಿಂಗ್ ಫೋಟೋ​​ ಶೂಟ್​ ಮುಗಿಸುಕೊಂಡು ಬರುತ್ತಿದ್ದ ಜೋಡಿಯೊಂದು ಭೀಕರ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್ ಗ್ರಾಮದ ಬಳಿ ನಡೆದಿದೆ. ಎದುರಿನಿಂದ ಬರ್ತಿದ್ದ ಲಾರಿಗೆ ಬೈಕ್​​ ಗುದ್ದಿದ ಪರಿಣಾಮ ಕರಿಯಪ್ಪ ಮಡಿವಾಳ (26) ಮತ್ತು ಕವಿತಾ (19) ಮೃತಪಟ್ಟಿದ್ದಾರೆ.

2 / 5
ಕೊಪ್ಪಳ ತಾಲೂಕಿನ ಹನುಮನಹಟ್ಟಿ ಗ್ರಾಮದ ಕರಿಯಪ್ಪ ಮಡಿವಾಳರ ಜೊತೆ ಕಾರಟಗಿ ತಾಲೂಕಿನ ಮುಷ್ಟೂರು ಗ್ರಾಮದ ಕವಿತಾ  ಮದುವೆ ಇದೇ ತಿಂಗಳ 20ರಂದು ನಿಶ್ಚಯವಾಗಿತ್ತು. ಈ ಹಿನ್ನಲೆಯಲ್ಲಿ ನಿನ್ನೆ ಬೆಳಿಗ್ಗೆ ಪ್ರಿ ವೆಡ್ಡಿಂಗ್ ಫೋಟೋ ಶೂಟ್​ ಮುಗಿಸಿಕೊಂಡು ಬರ್ತಿದ್ದ ವೇಳೆ ಇವರ ಬೈಕ್​​ ಎದುರಿನಿಂದ ಬರ್ತಿದ್ದ ಲಾರಿಗೆ ಡಿಕ್ಕಿಯಾಗಿದೆ.

ಕೊಪ್ಪಳ ತಾಲೂಕಿನ ಹನುಮನಹಟ್ಟಿ ಗ್ರಾಮದ ಕರಿಯಪ್ಪ ಮಡಿವಾಳರ ಜೊತೆ ಕಾರಟಗಿ ತಾಲೂಕಿನ ಮುಷ್ಟೂರು ಗ್ರಾಮದ ಕವಿತಾ ಮದುವೆ ಇದೇ ತಿಂಗಳ 20ರಂದು ನಿಶ್ಚಯವಾಗಿತ್ತು. ಈ ಹಿನ್ನಲೆಯಲ್ಲಿ ನಿನ್ನೆ ಬೆಳಿಗ್ಗೆ ಪ್ರಿ ವೆಡ್ಡಿಂಗ್ ಫೋಟೋ ಶೂಟ್​ ಮುಗಿಸಿಕೊಂಡು ಬರ್ತಿದ್ದ ವೇಳೆ ಇವರ ಬೈಕ್​​ ಎದುರಿನಿಂದ ಬರ್ತಿದ್ದ ಲಾರಿಗೆ ಡಿಕ್ಕಿಯಾಗಿದೆ.

3 / 5
ಪಂಚರ್ ಆಗಿ ನಿಂತಿದ್ದ ಲಾರಿಯನ್ನು ಓವರ್​​ಟೇಕ್​ ಮಾಡುವ ವೇಳೆ ಎದುರಿನಿಂದ ಬಂದ ಲಾರಿಗೆ ಬೈಕ್ ಡಿಕ್ಕಿಹೊಡೆದ ಪರಿಣಾಮ ಕವಿತಾ ಸ್ಥಳದಲ್ಲಿಯೇ ಮೃತಪಟ್ಟರೆ, ಕರಿಯಪ್ಪ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಪ್ರಾಣಬಿಟ್ಟಿದ್ದಾರೆ. ಹೀಗಾಗಿ ಮದುವೆ ಸಂಭ್ರಮದಲ್ಲಿದ್ದ ಉಭಯ ಕುಟುಂಬಗಳು ಶೋಕ ಸಾಗರದಲ್ಲಿ ಮುಳುಗಿವೆ.

ಪಂಚರ್ ಆಗಿ ನಿಂತಿದ್ದ ಲಾರಿಯನ್ನು ಓವರ್​​ಟೇಕ್​ ಮಾಡುವ ವೇಳೆ ಎದುರಿನಿಂದ ಬಂದ ಲಾರಿಗೆ ಬೈಕ್ ಡಿಕ್ಕಿಹೊಡೆದ ಪರಿಣಾಮ ಕವಿತಾ ಸ್ಥಳದಲ್ಲಿಯೇ ಮೃತಪಟ್ಟರೆ, ಕರಿಯಪ್ಪ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಪ್ರಾಣಬಿಟ್ಟಿದ್ದಾರೆ. ಹೀಗಾಗಿ ಮದುವೆ ಸಂಭ್ರಮದಲ್ಲಿದ್ದ ಉಭಯ ಕುಟುಂಬಗಳು ಶೋಕ ಸಾಗರದಲ್ಲಿ ಮುಳುಗಿವೆ.

4 / 5
ಇನ್ನು ಕರಿಯಪ್ಪನ ಜೊತೆಗೆ ಆತನ ಅಣ್ಣ ರಮೇಶ್​​ರದ್ದು ಕೂಡವಿವಾಹ ನಿಶ್ಚಿತವಾಗಿತ್ತು.ಚಿಕ್ಕವರಿದ್ದಾಗಲೇ ಕರಿಯಪ್ಪ ತಂದೆ ತಾಯಿ ತೀರಿಕೊಂಡಿದ್ದ ಹಿನ್ನಲೆ ಸಂಬಂಧಿಕರು ಇವರನ್ನು ಸಾಕಿದ್ದರು. ಸ್ವಗ್ರಾಮ ಹನುಮನ ಹಟ್ಟಿಯಲ್ಲಿ ಡಿಸೆಂಬರ್ 20ರಂದು ನಡೆಯಲಿರೋ ಸಾಮೂಹಿಕ ಮದುವೆಯಲ್ಲಿ ಇವರಿಬ್ಬರ ವಿವಾಹ ನಿಶ್ವಯವಾಗಿತ್ತು. ಕಳೆದ ನಾಲ್ಕೈದು ತಿಂಗಳ ಹಿಂದೆ ಇಬ್ಬರದ್ದೂ ನಿಶ್ವಿತಾರ್ಥ ನಡೆದಿತ್ತು.

ಇನ್ನು ಕರಿಯಪ್ಪನ ಜೊತೆಗೆ ಆತನ ಅಣ್ಣ ರಮೇಶ್​​ರದ್ದು ಕೂಡವಿವಾಹ ನಿಶ್ಚಿತವಾಗಿತ್ತು.ಚಿಕ್ಕವರಿದ್ದಾಗಲೇ ಕರಿಯಪ್ಪ ತಂದೆ ತಾಯಿ ತೀರಿಕೊಂಡಿದ್ದ ಹಿನ್ನಲೆ ಸಂಬಂಧಿಕರು ಇವರನ್ನು ಸಾಕಿದ್ದರು. ಸ್ವಗ್ರಾಮ ಹನುಮನ ಹಟ್ಟಿಯಲ್ಲಿ ಡಿಸೆಂಬರ್ 20ರಂದು ನಡೆಯಲಿರೋ ಸಾಮೂಹಿಕ ಮದುವೆಯಲ್ಲಿ ಇವರಿಬ್ಬರ ವಿವಾಹ ನಿಶ್ವಯವಾಗಿತ್ತು. ಕಳೆದ ನಾಲ್ಕೈದು ತಿಂಗಳ ಹಿಂದೆ ಇಬ್ಬರದ್ದೂ ನಿಶ್ವಿತಾರ್ಥ ನಡೆದಿತ್ತು.

5 / 5

Published On - 4:06 pm, Mon, 8 December 25

ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!