Gandhi Jayanti 2023: ಮಹಾತ್ಮ ಗಾಂಧೀಜಿ ಸಮಾಧಿಗೆ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯರಿಂದ ಗೌರವ

Updated on: Oct 02, 2023 | 10:22 AM

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜನ್ಮದಿನದ ಪ್ರಯುಕ್ತ ರಾಜ್​ಘಾಟ್​ನಲ್ಲಿ ಅವರು ಸಮಾಧಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್​ ಧನಕರ್, ಲೋಕಸಭೆ ಸ್ಪೀಕರ್​ ಓಂ ಬಿರ್ಲಾ, ದೆಹಲಿ ಲೆಫ್ಟಿನೆಂಟ್​ ಗವರ್​ನರ್​ ವಿ.ಕೆ. ಸಕ್ಸೇನಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು.

1 / 7
ಇಂದು ರಾಜ್​ಘಾಟ್​ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜನ್ಮದಿನದ ಪ್ರಯುಕ್ತ ಅವರ ಸಮಾಧಿಗೆ ರಾಷ್ಟ್ರಪತಿ, ಪ್ರಧಾನ ಮಂತ್ರಿ ಸೇರಿದಂತೆ ಅನೇಕ ಗಣ್ಯರು ಗೌರವ  ಸಲ್ಲಿಸಿದ್ದಾರೆ.

ಇಂದು ರಾಜ್​ಘಾಟ್​ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜನ್ಮದಿನದ ಪ್ರಯುಕ್ತ ಅವರ ಸಮಾಧಿಗೆ ರಾಷ್ಟ್ರಪತಿ, ಪ್ರಧಾನ ಮಂತ್ರಿ ಸೇರಿದಂತೆ ಅನೇಕ ಗಣ್ಯರು ಗೌರವ ಸಲ್ಲಿಸಿದ್ದಾರೆ.

2 / 7

ರಾಷ್ಟ್ರಪತಿ ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಗಾಂಧೀಜಿಯವರ ಸಮಾಧಿಗೆ ಪುಷ್ಪರ್ಚಣೆಯನ್ನು ಮಾಡಿದರು.

3 / 7

ಪುಷ್ಪನಮನ ಸಲ್ಲಿಸಿದ ನಂತರ ಪ್ರಧಾನಿ ಮೋದಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ ಅವರ ಪಾತ್ರ ದೊಡ್ಡದ್ದು ಎಂದು ಬಣ್ಣಿಸಿದರು.

4 / 7

ಉಪರಾಷ್ಟ್ರಪತಿ ಜಗದೀಪ್​ ಧನಕರ್ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಗಾಂಧಿ ಸಮಾಧಿ ನಮಿಸಿದರು.

5 / 7

ಲೋಕಸಭೆ ಸ್ವೀಕರ್​​​ ಓಂ ಬಿರ್ಲಾ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಾಂಧೀಜಿಯವರ ಸಮಾಧಿಗೆ ಪುಷ್ಪರ್ಚಣೆ ಮಾಡಿದರು.

6 / 7

ಇನ್ನು ದೆಹಲಿಯ ಲೆಫ್ಟಿನೆಂಟ್​ ಗವರ್​ನರ್​ ವಿ.ಕೆ. ಸಕ್ಸೇನಾ ಕೂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದು, ಗಾಂಧೀಜಿ ಸಮಾಧಿಗೆ ಗೌರವ ಸಲ್ಲಿಸಿದರು.

7 / 7

ಲೋಕಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಗಾಂಧಿ ಸಮಾಧಿಗೆ ಕೈಮುಗಿದು ಗೌರವ ಸೂಚಿಸಿದರು.

Loading...
Unable to load recommendations.
Follow Us